ಬಜೆಟ್: ವಿಜಯಪುರ ಮಹಾನಗರ ನಿರ್ಲಕ್ಷ್ಯ-ಎಂಎಲ್ಸಿ ಕೇಶವ ಪ್ರಸಾದ
ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 6: ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ವಿಜಯಪುರ ಮಹಾನಗರವನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಲಾಗಿದೆ. ಬಹುನಿರೀಕ್ಷಿತ ವಿಮಾನ ನಿಲ್ದಾಣವನ್ನು ಯಾವಾಗ ಪ್ರಾರಂಭಮಾಡಲಾಗುತ್ತದೆ ಎಂಬುದರ ಬಗ್ಗೆ ಖಚಿತತೆ ಇಲ್ಲ ಎಂದು ವಿಧಾನ ಪರಿಷತ್ ಶಾಸಕ ಕೇಶವ ಪ್ರಸಾದ ಎಸ್. ಹೇಳಿದ್ದಾರೆ.ವಿಶೇಷವಾಗಿ ಕೃಷ್ಣಾ ಮೇಲ್ದಂಡೆ ಯೋಜನೆಗಳಿಗೆ ನಿರ್ದಿಷ್ಟವಾದ ಅನುದಾನವನ್ನು ಒದಗಿಸಿಲ್ಲ.•ಕಳೆದ ಬಜೆಟ್ ನಲ್ಲಿ ಘೋಷಿಸಲಾದ ಫುಡ್ಪಾರ್ಕ್ ಹಾಗೂ ದ್ರಾಕ್ಷಿ ಬೆಳೆಗಾರರ ಕೋಲ್ಡ್ ಸ್ಟೋರೇಜ್ ಪ್ರಗತಿಯಾಗಿಲ್ಲ, ಈ ಬಜೆಟ್ ನಲ್ಲಿ ಯಾವುದೇ ಪ್ರಸ್ತಾಪವಿಲ್ಲ.ಉತ್ತರ ಕರ್ನಾಟಕ ಭಾಗದ ಕ್ರೀಡೆಯ ಪ್ರೋತ್ಸಾಹಕ್ಕೆ…


