ಗೊಳಸಾರದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಯಶಸ್ವಿ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 13: ಸದ್ಗುರು ಶ್ರೀ ಚಿನ್ಮಯಮೂರ್ತಿ ತ್ರಿಮೂರ್ತಿ ಮಹಾಶಿವಯೋಗಿಗಳ 32ನೇ ಪುಣ್ಯಾರಾಧನೆ ಮಹೋತ್ಸವದ ಅಂಗವಾಗಿ ಇಂಡಿ ತಾಲೂಕಿನ ಗೊಳಸಾರದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಆಸ್ಪತ್ರೆಯ ವತಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರ ಚಿಕ್ಕಬೇನೂರ ಮತ್ತು ಅಗರಖೇಡ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಮತ್ತು ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಸೋಮವಾರ ನಡೆಯಿತು.ಶ್ರೀ ತ್ರಿಮೂರ್ತಿ ಮಹಾಶಿವಯೋಗಿಗಳ ಭಾವಚಿತ್ರಕ್ಕೆ ಪೂಜಿಸುವ ಮತ್ತು ಸಸಿಗೆ ನೀರುಣಿಸುವ ಮೂಲಕ ಅಭಿನವ…

Read More

ಜ.29 ರಿಂದ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ

ಸಪ್ತಸಾಗರ ವಾರ್ತೆ, ವಿಜಯಪುರ ಜ.13: ವಿಜಯಪುರ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಜನವರಿ 29 ರಿಂದ 31ರವರೆಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.ಪುರುಷ ಹಾಗೂ ಮಹಿಳಾ ವಿಭಾಗದಲ್ಲಿ 45 ವರ್ಷ ಮೇಲ್ಪಟ್ಟ ಹಾಗೂ ಒಳಗಿನವರಿಗೆ ಫುಟ್‌ಬಾಲ್, ವಾಲಿಬಾಲ್, ಹಾಕಿ, ಕಬಡ್ಡಿ, ಟೇಬಲ ಟೆನ್ನಿಸ್ (ಸಿಂಗಲ್ಸ್-ಡಬಲ್ಸ್) ಟೆನ್ನಿಸ್, ಶೆಟಲ್ ಬ್ಯಾಡ್ಮಿಂಟನ್, ಬಾಲ್ ಬ್ಯಾಡ್ಮಿಂಟನ್, ಕೇರಂ, ಕ್ರಿಕೆಟ್, ಬಾಸ್ಕೆಟ್‌ಬಾಲ್, ಚೆಸ್, ಟೆನಿಕ್ವಾಯಿಟ್, ಯೋಗ,ಥ್ರೋಬಾಲ್ ಆಟೋಟಗಳು, ಈಜು, ಭಾರ ಎತ್ತುವ ಸ್ಪರ್ಧೆ ಏರ್ಪಡಿಸಲಾಗಿದೆ.ಸಾಂಸ್ಕೃತಿಕ ಕಾರ್ಯಕ್ರಮಗಳಾದ…

Read More

ಪ್ರಯಾಣಿಕರು ಬಸ್ ನಿಲ್ದಾಣಗಳಲ್ಲಿ ಸ್ವಚ್ಚತೆ ಕಾಪಾಡಿ- ಕುರುಬರ

ಸಪ್ತಸಾಗರ ವಾರ್ತೆ, ವಿಜಯಪುರ,ಜ.13: ಜಿಲ್ಲಾ ಕೇಂದ್ರ ಬಸ್ ನಿಲ್ದಾಣ ಹಾಗೂ ಸ್ಯಾಟಲೈಟ್ ಬಸ್ ನಿಲ್ದಾಣ ಸೇರಿದಂತೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ವಿಭಾಗದ ವ್ಯಾಪ್ತಿಗೆ ಒಟ್ಟು 26 ಬಸ್ ನಿಲ್ದಾಣಗಳು ಒಳಪಡುತ್ತಿವೆ.ವಿಭಾಗದ ಬಸ್ ನಿಲ್ದಾಣಗಳ ಸ್ವಚ್ಚತೆ ಹಾಗೂ ನಿಲ್ದಾಣದಲ್ಲಿ ಕುಡಿಯುವ ನೀರು, ಶೌಚಾಲಯಗಳ ಸಮರ್ಪಕ ನಿರ್ವಹಣೆಗೆ ಕ್ರಮ ತೆಗದುಕೊಳ್ಳಲಾಗಿದ್ದು,ಪ್ರಯಾಣಿಕರು ಬಸ್ ನಿಲ್ದಾಣಗಳಲ್ಲಿ ಸ್ವಚ್ಛತೆ ಕಾಪಾಡುವಂತೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ಅವರು ಮನವಿ ಮಾಡಿದ್ದಾರೆ.ಈ ಕುರಿತು ಪ್ರಕಟಣೆ…

Read More

ಇಂದಿನ ಒತ್ತಡ ಜೀವನದಲ್ಲಿ ಉತ್ತಮ ಆರೋಗ್ಯ ಕಾಯ್ದುಕೊಳ್ಳುವುದು ಹೆಚ್ಚುವರಿ ಸಂಪತ್ತು:ಸುನೀಲಗೌಡ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 12:ಇಂದಿನ ಒತ್ತಡದ ಜೀವನದಲ್ಲಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದು ಹೆಚ್ಚುವರಿ ಸಂಪತ್ತು ಗಳಿಸಿದಂತೆ ಎಂದು ಬಿ.ಎಲ್.ಡಿ.ಇ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಹೇಳಿದ್ದಾರೆ.ಸೋಮವಾರ ನಗರದಲ್ಲಿ ಬಿ.ಎಲ್.ಡಿ.ಇ ಟ್ರಾಮಾ ಸೆಂಟರ ಮಿನಿ ಆಡಿಟೋರಿಯಂ ನಲ್ಲಿ ಬಾಗಲಕೋಟೆ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ಬಿ.ಎಲ್.ಡಿ.ಇ ಆರೋಗ್ಯ ಯೋಜನೆ ಕುಟುಂಬ ಆರೋಗ್ಯ ಹೆಲ್ತ್ ಕಾರ್ಡ ವಿತರಿಸಿ ಅವರು ಮಾತನಾಡಿದರು.ಆರೋಗ್ಯವೇ ಭಾಗ್ಯ ಎಂಬುದು ಹಳೆಯ ಮಾತು. ಈಗ ಉತ್ತಮ ಮತ್ತು ಸದೃಢ…

Read More

ಸಿದ್ದರಾಮಯ್ಯ ಕೇವಲ ಕಾಂಗ್ರೆಸ್ ಸಿಎಂ ಅಲ್ಲ, ಕರ್ನಾಟಕದ ಸಿಎಂ: ಯತ್ನಾಳ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 12:ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಅಲ್ಲ, ರಾಜ್ಯದ ಸಿಎಂ ಆಗಿದ್ದಾರೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗಿನ ವೇದಿಕೆ ಹಂಚಿಕೆ ಹಾಗೂ ಅವರನ್ನು ಹೊಗಳಿದ ವಿಚಾರವಾಗಿ ಕೇಳಿಬಂದ ಟೀಕೆಗಳಿಗೆ,ಸಿದ್ದರಾಮಯ್ಯ ಅವರು ಕೇವಲ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿಯಲ್ಲ. ಅವರು ಇಡೀ ರಾಜ್ಯದ ಮುಖ್ಯಮಂತ್ರಿ. ನಮ್ಮ ಕ್ಷೇತ್ರಕ್ಕೆ ಬಂದಾಗ ಅವರಿಗೆ ಗೌರವ ನೀಡುವುದು ಶಿಷ್ಟಾಚಾರ ಮತ್ತು ನನ್ನ ಕರ್ತವ್ಯ. ನಾನು ಗೌರವ…

Read More

ಕೇಂದ್ರ ತಂಡದಿಂದ ಜಿಲ್ಲೆಯ ನೈಸರ್ಗಿಕ ವಿಕೋಪ- ಬೆಳೆಹಾನಿ ಸಮೀಕ್ಷೆ

ಸಪ್ತಸಾಗರ ವಾರ್ತೆ, ವಿಜಯಪುರ, ಜ.12: ಕೇಂದ್ರ ಸರ್ಕಾರದ ಹಣಕಾಸು ಇಲಾಖೆಯ ಜಂಟಿ ನಿರ್ದೇಶಕ ಮಹೇಶಕುಮಾರ, ಇಸ್ರೋ ಬಾಹ್ಯಾಕಾಶ ಇಲಾಖೆಯ ಆಕಾಶ ಮೋಹನ್, ಬೆಂಗಳೂರಿನ ಕರ್ನಾಟಕ ನೈಸರ್ಗಿಕ ವಿಕೋಪ ಕೇಂದ್ರದ ಹೊನ್ನಂಬ ಅವರನ್ನೊಳಗೊಂಡ ತಂಡ ವಿಜಯಪುರ ಜಿಲ್ಲೆಗೆ ಆಗಮಿಸಿ ಮುಂಗಾರು ಹಂಗಾಮಿನ ಬೆಳೆ ಹಾನಿ ಹಾಗೂ ಪ್ರವಾಹ-ನೈಸರ್ಗಿಕ ವಿಕೋಪದಿಂದ ಜನ-ಜಾನುವಾರು ಹಾನಿಗಳ ಕುರಿತು ಪರಿಶೀಲನೆ ನಡೆಸಿತು.ಸೋಮವಾರ ವಿಜಯಪುರಕ್ಕೆ ಭೇಟಿ ನೀಡಿದ ತಂಡ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದ ತಂಡ, ಜಿಲ್ಲೆಯಲ್ಲಿ ಮುಂಗಾರಿನಲ್ಲಿ 3,14,578 ಹೆಕ್ಟೇರ್ ಕೃಷಿ…

Read More

ಮಕ್ಕಳು ಪ್ರಶ್ನೆ ಮಾಡುವ ಮನೋಭಾವ ಹೊಂದಬೇಕು-ಶಶಿಧರ ಕೋಸಂಭೆ

ಸಪ್ತಸಾಗರ ವಾರ್ತೆ, ವಿಜಯಪುರ, ಜ.12: ಮಕ್ಕಳು ಶಾಲಾ ಹಂತದಲ್ಲಿಯೇ ವಿಷಯ ಗ್ರಹಿಕೆಗೆ ಪ್ರತಿಯೊಂದನ್ನು ಪ್ರಶ್ನಿಸುವ ಮುಕ್ತ ಅವಕಾಶ ಇರುವುದರಿಂದ ಎಲ್ಲ ಅರಿಯಬೇಕೆಂಬ ಎಂಬ ಕುತೂಹಲಿಗಳಾಗಿರಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಕೋಸಂಭೆ ಅವರು ಹೇಳಿದರು.ಸೋಮವಾರ ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ…

Read More

ವಿಸ್ಡಮ್ ಕರಿಯರ್ ಅಕಾಡೆಮಿ ವತಿಯಿಂದ ಸ್ವಾಮಿ ವಿವೇಕಾನಂದ ಜಯಂತಿ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 12 : ಸ್ವಾಮಿ ವಿವೇಕಾನಂದರ ಜಯಂತ್ಯುತ್ಸವ ಪ್ರಯುಕ್ತ ಎಸ್.ಬಿ. ವಿಸ್ಡಮ್ ಕೆರಿಯರ್ ಅಕಾಡೆಮಿ ಹಾಗೂ ಯುವ ಭಾರತ ಸಹಯೋಗದಲ್ಲಿ `ವಿವೇಕ ನಡೆ ಉತ್ಸಾಹ ಭರಿತವಾಗಿ ನಡೆಯಿತು. ಸ್ವಾಮಿ ವಿವೇಕಾನಂದರ ದಿವ್ಯ ಉಕ್ತಿಗಳನ್ನು ಮೊಳಗಿಸುತ್ತಾ, ಹಳದಿ ವರ್ಣದ ಟೀ-ಶರ್ಟ್ ತೊಟ್ಟ ಸಾವಿರಾರು ಯುವಕರು ಉತ್ಸಾಹದಿಂದ ಹೆಜ್ಜೆ ಹಾಕಿದರು.ವಿಜಯಪುರದ ಶ್ರೀ ಸಿದ್ದೇಶ್ವರ ದೇವಾಲಯದಿಂದ ಆರಂಭಗೊಂಡ ಈ ನಡೆ ಗಾಂಧಿವೃತ್ತ, ಶಿವಾಜಿ ವೃತ್ತ, ವಾಟರ್ ಟ್ಯಾಂಕ್ ಸೇರಿದಂತೆ ವಿವಿಧ ಪ್ರಮುಖ ಮಾರ್ಗಗಳಲ್ಲಿ ಸಂಚರಿಸಿ ಅಥಣಿ ರಸ್ತೆಯಲ್ಲಿರುವ…

Read More

ವೇದ ಅಕಾಡೆಮಿ ವತಿಯಿಂದ ಸ್ವಾಮಿ ವಿವೇಕಾನಂದರ ಜಯಂತಿ ಆಚರಣೆ

ಸಪ್ತಸಾಗರ ವಾರ್ತೆ, ವಿಜಯಪ, ಜ. 12: ನಗರದ ವೇದ ಅಕಾಡೆಮಿಯಲ್ಲಿ ಅರ್ಥಪೂರ್ಣವಾಗಿ ಸ್ವಾಮಿ ವಿವೇಕಾನಂದರ ಜಯಂತಿಯನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ ಭಾರತದ ಶ್ರೇಷ್ಠ ಸನ್ಯಾಸಿ ಸ್ವಾಮಿ ವಿವೇಕಾನಂದರ ವ್ಯಕ್ತಿತ್ವ ಹಾಗೂ ಭಾರತೀಯ ಅಧ್ಯಾತ್ಮಿಕ ಪ್ರಪಂಚಕ್ಕೆ ಅವರು ನೀಡಿದ ಕೊಡುಗೆಗಳನ್ನು ಸ್ಮರಿಸಲಾಯಿತು.ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪ್ರಾಚಾರ್ಯ ಮಧ್ವಪ್ರಸಾದ ಜಿ.ಕೆ ಅವರು ವಿದ್ಯಾರ್ಥಿಗಳಿಗೆ ಸ್ವಾಮಿ ವಿವೇಕಾನಂದರ ಜೀವನ ಹಾಗೂ ಸಂದೇಶವನ್ನು ತಿಳಿಸಿದರು.ಅಲ್ಲದೆ ಮಗುವಿನ ಬೆಳವಣಿಗೆಯಲ್ಲಿ ತಾಯಿಯ ಪಾತ್ರವನ್ನು ಕುರಿತು ವಿವೇಕಾನಂದರು ಬಾಲ್ಯದಲ್ಲಿ ಏನಾಗಬೇಕೆಂದು ಬಯಸಿದಾಗ ಅವರ ತಾಯಿ ರಥದಲ್ಲಿ…

Read More

ಸ್ವಾಮಿ ವಿವೇಕಾನಂದ ಜಯಂತಿ: ಪುತ್ಥಳಿಗೆ ಯತ್ನಾಳ ಮಾಲಾರ್ಪಣೆ, ಗೌರವ ನಮನ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 12: ಭಾರತದ ಆಧ್ಯಾತ್ಮಿಕ ಶಕ್ತಿ ಜಗತ್ತಿಗೆ ಪಸರಿಸಿದ ಅದಮ್ಯ ಚೇತನ ವಿವೇಕಾನಂದವಿಜಯಪುರ: ಭಾರತದ ಆಧ್ಯಾತ್ಮಿಕ ಶಕ್ತಿಯನ್ನು ಜಗತ್ತಿಗೆ ಪಸರಿಸಿದ ಅದಮ್ಯ ಚೇತನ ಸ್ವಾಮಿ ವಿವೇಕಾನಂದರು ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಹೇಳಿದರು.ನಗರದ ಸ್ವಾಮಿ ವಿವೇಕಾನಂದ ವೃತ್ತದಲ್ಲಿ ಸೋಮವಾರ ಸ್ವಾಮಿ ವಿವೇಕಾನಂದರ ಜಯಂತಿ ಅಂಗವಾಗಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿ ಅವರು ಮಾತನಾಡಿದರು.ಭಾರತದ ಸಂಸ್ಕೃತಿ, ಪರಂಪರೆ ಹಾಗೂ ಆಧ್ಯಾತ್ಮಿಕ ಶಕ್ತಿಯನ್ನು ಜಗತ್ತಿಗೆ ಪಸರಿಸಿದ ಸ್ವಾವಿ ವಿವೇಕಾನಂದರು ಯುವ…

Read More