ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಿಎಂ ಸಿದ್ದರಾಮಯ್ಯ ವಿಶೇಷ ಪ್ಯಾಕೇಜ್ ಘೋಷಿಸುವರೆ?

ರುದ್ರಪ್ಪ ಆಸಂಗಿಸಪ್ತಸಾಗರ ವಾರ್ತೆ, ವಿಜಯಪುರ, ಜ. 7:ನಾಡಿನ ದೊರೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕೇಂದ್ರ ಬಸ್ ನಿಲ್ದಾಣ ಆವರಣದಲ್ಲಿ ಕಿತ್ತೂರ ರಾಣಿ ಚೆನ್ನಮ್ಮ ಮೂರ್ತಿ ಅನಾವರಣ, ಕೇಂದ್ರ ಬಸ್ ನಿಲ್ದಾಣಕ್ಕೆ ರಾಣಿ ಚೆನ್ನಮ್ಮ ಹೆಸರು ನಾಮಕರಣ ಹಾಗೂ ಸೈಕ್ಲಿಂಗ್ ವೆಲೋಡ್ರೋಮ ಉದ್ಘಾಟನೆ, ಪ್ರಜಾ ಸೌಧಕ್ಕೆ ಶಂಕು ಸ್ಥಾಪನೆ ನೆರವೇರಿಸುವ ಸಲುವಾಗಿ ಜ. 9ರಂದು ವಿಜಯಪುರಕ್ಕೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿ ಜಿಲ್ಲೆಗೆ ಏನಾದರೂ ವಿಶೇಷ ಕೊಡುಗೆ ನೀಡುವರೆ? ಎಂದು ಸಿಎಂ ಬರುವಿಕೆಗಾಗಿ ಜನರು…

Read More

ಜ.9ರಂದು ಸಾರಿಗೆ ಸಂಚಾರದ ಮಾರ್ಗ ಬದಲಾವಣೆ : ಪರ್ಯಾಯ ವ್ಯವಸ್ಥೆ

ಸಪ್ತಸಾಗರ ವಾರ್ತೆ, ವಿಜಯಪುರ, ಜ.7: ಜ.9 ರಂದು ಮುಖ್ಯಮಂತ್ರಿಗಳು ನಗರಕ್ಕೆ ಆಗಮಿಸಿ, ನಗರದ ಕೇಂದ್ರ ಬಸ್ ನಿಲ್ದಾಣದ ಆವರಣದಲ್ಲಿ ಕಿತ್ತೂರ ರಾಣಿ ಚೆನ್ನಮ್ಮನ ಪ್ರತಿಮೆ ಅನಾವರಣ, ಬಸ್ ನಿಲ್ದಾಣ ನಾಮಕರಣ ಹಾಗೂ ಭೂತನಾಳ ತಾಂಡಾದ ಹತ್ತಿರವಿರುವ ಸೈಕ್ಲಿಂಗ್ ವೆಲೋಡ್ರೋಮ್ ಉದ್ಘಾಟನೆ ಹಾಗೂ ದರ್ಬಾರ ಹೈಸ್ಕೂಲ್ ಮೈದಾನದಲ್ಲಿ ನಡೆಯುವ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ ಸಾರ್ವಜನಿಕ ರಸ್ತೆ ಸಂಚಾರಕ್ಕೆ ಯಾವುದೇ ಅಡೆತಡೆ ಆಗದಂತೆ ಸಂಚಾರ ಮಾರ್ಗ ಬದಲಾಯಿಸಿ ಪರ್ಯಾಯ ಮಾರ್ಗ ಹಾಗೂ…

Read More

ಜ. 9ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜಿಲ್ಲಾ ಪ್ರವಾಸ

ಸಪ್ತಸಾಗರ ವಾರ್ತೆ,ವಿಜಯಪುರ: ಜ. 7: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ 9ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಬೆಳಿಗ್ಗೆ 10ಗಂಟೆಗೆ ಬೆಂಗಳೂರಿನ ಎಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೊರಟು,ತೋರಣಗಲ್ ಜಿಂದಾಲ್ ಏರಸ್ಕ್ರಿಪ್ಟ್ ಆಗಮಿಸಿ, ಅಲ್ಲಿಂದ 11 ಗಂಟೆಗೆ ಹೊರಟು, ಬೆಳಿಗ್ಗೆ 11:45 ಕ್ಕೆ ನಗರದ ಸೈನಿಕ ಶಾಲೆಯ ಆವರಣದ ಹೆಲಿಪ್ಯಾಡಿಗೆ ಆಗಮಿಸಲಿದ್ದಾರೆ.ಅಂದು ಮಧ್ಯಾಹ್ನ 12ಕ್ಕೆ ನಗರದ ಬಸ್ ನಿಲ್ದಾಣದಲ್ಲಿ ಕಿತ್ತೂರು ರಾಣಿ ಚನ್ನಮ್ಮ ಮೂರ್ತಿ ಅನಾವರಣಗೊಳಿಸುವರು. ಮಧ್ಯಾಹ್ನ 12-30ಕ್ಕೆ ಬೂತನಾಳ ಗ್ರಾಮದ ಹತ್ತಿರವಿರುವ ನೂತನವಾಗಿ ನಿರ್ಮಿಸಲಾದ ಸೈಕ್ಲಿಂಗ್ ವೇಲೋಡ್ರೋಮ್ ಉದ್ಘಾಟಿಸಿ,…

Read More

ಸುಸ್ಥಿರ ಕೃಷಿಯಲ್ಲಿ ಡಿಜಿಟಲ್ ತಂತ್ರಜ್ಞಾನ ಅತ್ಯವಶ್ಯಕ: ಹಾಸಿಂಪೀರ ವಾಲಿಕಾರ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 6 :ಸುಸ್ಥಿರ ಕೃಷಿಯಲ್ಲಿ ಆಧುನಿಕ ಡಿಜಿಟಲ್ ತಂತ್ರಜ್ಞಾನ ಅಳವಡಿಸಿ ಕೃಷಿ ಮಾಡುವುದರಿಂದ ನೀರು ಹಾಗು ಗೊಬ್ಬರ ಸದ್ಬಳಕೆಯಾಗುತ್ತದೆ. ಫಲವತ್ತಾದ ಭೂಮಿಯ ತನ್ನ ಪೋಷಕಾಂಶವನ್ನು ಉಳಿದುಕೊಳ್ಳುತ್ತದೆ. ಇದರೊಂದಿಗೆ ಕೃಷಿ ಕಾರ್ಮಿಕರ ಕೊರತೆ ಉಂಟಾಗುವುದಿಲ್ಲ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಅಭಿಪ್ರಾಯ ವ್ಯಕ್ತಪಡಿಸಿದರು.ಧಾರವಾಡ ಕೃಷಿ ವಿವಿ ಹಾಗೂ ವಿಜಯಪುರ ಕೃಷಿ ಮಹಾವಿದ್ಯಾಲಯ ಆಶ್ರಯದಲ್ಲಿ ನಡೆದ ಕೃಷಿಮೇಳದ ಮೂರನೇ ದಿನದ ಸುಸ್ಥಿರ ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನಗಳು ಕುರಿತು ಗೋಷ್ಠಿಯಲ್ಲಿ ಮಾತನಾಡಿ,…

Read More

ಶ್ರೀ ಉತ್ತರಾದಿ ಮಠ ಹಾಗೂ ಶ್ರೀ ರಾಯರ ಮಠದ ಮಧ್ಯದ ವ್ಯಾಜ್ಯಕ್ಕೆ ಇತಿಶ್ರೀ-ಕರ್ನಾಟಕ ರಾಜ್ಯ ಬ್ರಾಹ್ಮಣ ಕ್ಷೇಮಾಭಿವೃಧ್ಧಿ ಸಂಘ ಸ್ವಾಗತ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 6: ರಾಷ್ಟ್ರದ ಹಿತಕ್ಕಾಗಿ, ಸನಾತನ ಧರ್ಮದ ಮತ್ತು ಬ್ರಾಹ್ಮಣ ಸಮಾಜದ ಒಗ್ಗಟ್ಟು ಹಾಗೂ ಉನ್ನತಿಗಾಗಿ ಶ್ರೀ ಉತ್ತರಾದಿ ಮಠ ಹಾಗೂ ಶ್ರೀ ರಾಯರ ಮಠದ ಮಧ್ಯದಲ್ಲಿ ಸುಮಾರು ಐದು ದಶಕಗಳ ಅವಧಿಯ ಸುದೀರ್ಘ ಲೌಕಿಕ ವ್ಯಾಜ್ಯಕ್ಕೆ ಉಭಯ ಶ್ರೀಪಾದಂಗಳವರಾದ ಶ್ರೀ ಶ್ರೀ 1008 ಶ್ರೀ ಸತ್ಯಾತ್ಮತೀರ್ಥ ಶ್ರೀಪಾದಂಗಳವರು ಮತ್ತು ಶ್ರೀ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರು ಭಾನುವಾರ ಇತಿಶ್ರೀ ಹಾಡಿದ ಪ್ರಸಂಗ ಅತ್ಯಂತ ಸಂತಸದಾಯಕ ಮತ್ತು ಸಂಭ್ರಮಿಸತಕ್ಕ ವಿಷಯವಾಗಿದೆ ಎಂದು…

Read More

ಜಿಲ್ಲೆಯ ವಿವಿಧ ಅಭಿವೃದ್ದಿ ಕಾರ್ಯಗಳಿಗೆ ಜ.9ರಂದು ಮುಖ್ಯಮಂತ್ರಿಗಳಿಂದ ಉದ್ಘಾಟನೆ, ಶಂಕುಸ್ಥಾಪನೆ:ಸೂಸೂತ್ರವಾಗಿ ಕಾರ್ಯಕ್ರಮ ನಿರ್ವಹಿಸಿ -ಸಚಿವ ಎಂ.ಬಿ ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಜ.6: ಜನವರಿ 9ರಂದು ಮುಖ್ಯಮಂತ್ರಿ ಶ್ರೀ ಸಿದ್ಧರಾಮಯ್ಯ ಅವರು ಜಿಲ್ಲೆಗೆ ಆಗಮಿಸುತ್ತಿದ್ದು, ವೀರರಾಣಿ ಕಿತ್ತೂರ ಚೆನ್ನಮ್ಮ ಪ್ರತಿಮೆ ಅನಾವರಣ, ಬಸ್ ನಿಲ್ದಾಣಕ್ಕೆ ಕಿತ್ತೂರ ರಾಣಿ ಚೆನ್ನಮ್ಮ ನಾಮಕರಣ,ನಗರದಲ್ಲಿ ವೆಲೋಡ್ರೊಮ ಉದ್ಘಾಟನಾ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಚಾಲನೆ, ಉದ್ಘಾಟನೆ,ಶಿಲಾನ್ಯಾಸ ಕಾಮಗಾರಿಯ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಸುಸೂತ್ರವಾಗಿ ನಿರ್ವಹಿಸುವಂತೆ ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ. ಬಿ. ಪಾಟೀಲ ಹೇಳಿದರು.ಮುಖ್ಯಮಂತ್ರಿ ಅವರು ಜಿಲ್ಲೆಗೆ ಆಗಮಿಸುತ್ತಿರುವ…

Read More

ಅನುದಾನ ಲಭ್ಯತೆ ಆಧರಿಸಿ ವಿಜಯಪುರಕ್ಕೆ ಸರ್ಕಾರಿ ವೈದ್ಯಕೀಯ ಕಾಲೇಜ್: ಸಚಿವ ಎಂ.ಬಿ. ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 6 :ಅನುದಾನ ಲಭ್ಯತೆ ಆಧರಿಸಿ ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದ್ದಾರೆ.ಮಂಗಳವಾರ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು,ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜ್ ಸ್ಥಾಪಿಸಲಾಗುವುದು.ಪಿಪಿಪಿ ಮಾಡುವುದಿಲ್ಲ. ಅನುದಾನ ಲಭ್ಯತೆ ನೋಡಿಕೊಂಡು ಸರ್ಕಾರಿ ಮೆಡಿಕಲ್ ಕಾಲೇಜು ಮಾಡುತ್ತೇವೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಹೀಗಿದ್ದೂ ಈ ಕುರಿತು ಲಿಖಿತ ರೂಪದಲ್ಲಿ ಭರವಸೆ ಕೊಡಬೇಕು. ಕ್ಯಾಬಿನೆಟ್ ನಲ್ಲಿ ಘೋಷಿಸಬೇಕು ಎಂದು ಪಟ್ಟು ಹಿಡಿದು…

Read More

ರಸ್ತೆ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಅಪಘಾತಗಳ ನಿಯಂತ್ರಣಕ್ಕೆ ಕೈಜೋಡಿಸಿ- ಹರೀಶ

ಸಪ್ತಸಾಗರ ವಾರ್ತೆ, ವಿಜಯಪುರ, ಜ.6:ರಸ್ತೆ ಸುರಕ್ಷತಾ ನಿಯಮಗಳ ಕಟ್ಟುನಿಟ್ಟಿನ ಪಾಲನೆ ಮಾಡುವ ಮೂಲಕ ಅಪಘಾತಗಳ ನಿಯಂತ್ರಣಕ್ಕೆ ಕೈಜೋಡಿಸಿ, ನಿಯಮಗಳ ಅನುಸರಣೆಯಿಂದ ಅಪಘಾತ ತಡೆಯಲು ಏಕೈಕ ಮಾರ್ಗವಾಗಿದೆ ಎಂದು ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಾ ಅಧ್ಯಕ್ಷರು ಹರೀಶ ಎ ಅವರು ಅವರು ಹೇಳಿದರು.ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ ಇಲಾಖೆ,ಜಿಲ್ಲಾಡಳಿತ,ಜಿಲ್ಲಾ ನ್ಯಾಯವಾದಿಗಳ ಸಂಘ, ಸಾರಿಗೆ ಇಲಾಖೆ, ಪೊಲೀಸ ಇಲಾಖೆ,…

Read More

ಜ. 9ರಂದು ಸಿಎಂರಿಂದ ಚೆನ್ನಮ್ಮ ಮೂರ್ತಿ ಅನಾವರಣಕ್ಕೆ ನ್ಯಾಯವಾದಿ ಶ್ರೀಶೈಲ ಮುಳಜಿ ವಿರೋಧ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 5 :ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ. 9ರಂದು ವೀರ ರಾಣಿ ಚೆನ್ನಮ್ಮಳ ಮೂರ್ತಿ ಅನಾವರಣ ಮಾಡಬಾರದು ಎಂದು ಲಿಂಗಾಯತ ಪಂಚಮಸಾಲಿ ವಕೀಲ ಪರಿಷತ್ತಿನ ರಾಜ್ಯ ಸಂಚಾಲಕ ಹಾಗೂ ನ್ಯಾಯವಾದಿ ಶ್ರೀಶೈಲ ಮುಳಜಿ ಅವರು ಹೇಳಿದ್ದಾರೆ.ಸೋಮವಾರ ನಗರದ ಕಿತ್ತೂರರಾಣಿ ಚೆನ್ನಮ್ಮ ಸಮುದಾಯ ಭವನದಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು.ಜನೇವರಿ 9 ರಂದು ವಿಜಯಪುರ ನಗರದ ಕೇಂದ್ರ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಕಿತ್ತೂರರಾಣಿ ಚೆನ್ನಮ್ಮ ಅವರ ಮೂರ್ತಿ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚೆನ್ನಮ್ಮ…

Read More

ಆಮ್ ಆದ್ಮಿ ಜಿಲ್ಲಾಧ್ಯಕ್ಷ ಭೋಗೇಶ ಸೋಲಾಪೂರ ಸೇರಿ ಎಲ್ಲ ಹೋರಾಟಗಾರರ ಮೇಲಿನ ಪ್ರಕರಣ ಹಿಂಪಡೆದು ಬಿಡುಗಡೆಗೊಳಿಸಿ : ಎಎಪಿ ರಾಜ್ಯ ಕಾರ್ಯಾಧ್ಯಕ್ಷ ಸೀತಾರಾಮ ಗುಂಡಪ್ಪ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 5 : ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನಾ ಹೋರಾಟ ಸಮಿತಿ ಸದಸ್ಯ, ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಭೋಗೇಶ ಸೋಲಾಪುರ ಸೇರಿದಂತೆ ಆರು ಜನ ಹೋರಾಟಗಾರರನ್ನು ಕೂಡಲೇ ಬಿಡುಗಡೆಗೊಳಿಸಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಸೀತಾರಾಮ ಗುಂಡಪ್ಪ ಅವರು ಆಗ್ರಹಿಸಿದರು.ನಗರದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. ವಿಜಯಪುರ ನಗರದ ಡಾ. ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ 106 ದಿನಗಳ ಕಾಲ ಶಾಂತಿಯುತ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ನಡೆಸಿ…

Read More