ಗ್ರಾಮೀಣ ಭಾಗದಲ್ಲಿ ನೀರಾವರಿ ಜೊತೆಗೆ ಗುಣಮಟ್ಟದ ವಿದ್ಯುತ್ ಹಾಗೂ ಶಿಕ್ಷಣ ಒದಗಿಸಲು ಬದ್ಧ: ಎಂ. ಬಿ. ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಏ. 19:ಗ್ರಾಮೀಣ ಭಾಗದಲ್ಲಿ ನೀರಾವರಿ ಜೊತೆಗೆ ಗುಣಮಟ್ಟದ ವಿದ್ಯುತ್ ಹಾಗೂ ಶಿಕ್ಷಣ ಒದಗಿಸಲು ಕಾರ್ಯೋನ್ಮುಖನಾಗಿದ್ದೇನೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ರವಿವಾರ ಬಬಲೇಶ್ವರ ತಾಲೂಕಿನ ಹೆಬ್ಬಾಳಟ್ಟಿಯಲ್ಲಿ ಚಂದ್ರಗಿರಿ ಸಿದ್ರಾಮೇಶ್ವರ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ನೂರಾರು ವರ್ಷಗಳ ಇತಿಹಾಸ ಹೊಂದಿರುವ ಈ ಜಾತ್ರೆಗೆ ನಮ್ಮ ತಂದೆಯವರ ಕಾಲದಿಂದಲೂ ಬರುತ್ತಿದ್ದೇವೆ. ದೇವರು, ಶ್ರೀಗಳು ಮತ್ತು ಗ್ರಾಮಸ್ಥರ ಆಶೀರ್ವಾದದಿಂದ ಜಲಸಂಪನ್ಮೂಲ‌ ಸಚಿವನಾಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳ…

Read More

ಯುಕೆಪಿ ಸಂತ್ರಸ್ತರ ನೆರವಿಗೆ ಲೋಕ ಅದಾಲತ್

ಸಪ್ತಸಾಗರ ವಾರ್ತೆ,ವಿಜಯಪುರ, ಏ. 19: ಕೃಷ್ಣ ಮೇಲ್ದಂಡೆ ಯೋಜನೆ ಭೂ ಸ್ವಾಧೀನಕ್ಕೆ ಒಳಪಡುವ ಸಂತ್ರಸ್ತರಿಗೆ ನೆರವಾಗಲು ಏಪ್ರಿಲ್ ನಿಂದ ಜುಲೈ 2026ರ ವರೆಗೆ ಲೋಕ ಅದಾಲತ್ ನಡೆದಲಾಗುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಜಿಲ್ಲಾ ಕಾನೂನು‌ ಸೇವಾ ಪ್ರಾಧಿಕಾರ ಈ ಲೋಕ ಅದಾಲತ ಆಯೋಜಿಸಿದೆ. ಭೂಸ್ವಾಧೀನ ಪ್ರಕ್ರಿಯೆ ಪ್ರಶ್ನಿಸಿ ಮತ್ತು ಹೆಚ್ಚಿನ ಪರಿಹಾರಕ್ಕಾಗಿ ನ್ಯಾಯಾಲಯದ…

Read More

ಸುಸೂತ್ರ ಪರೀಕ್ಷೆ ನಡೆಸಲು ಎಡಿಸಿ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 18: 2026ನೇ ಸಾಲಿನ ಸಿಇಟಿ ಪ್ರವೇಶ ಪರೀಕ್ಷೆಗಳು ಏ. 22 ರಿಂದ 24 ರವರೆಗೆ ಜಿಲ್ಲೆಯ 30 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷಾ ಕಾರ್ಯಗಳಲ್ಲಿ ಯಾವುದೇ ಲೋಪವಾಗದಂತೆ ಸುಸೂತ್ರವಾಗಿ ನಡೆಸುವಂತೆ ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಅವರು ಸೂಚಿಸಿದರು.ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶನಿವಾರ ಸಿಇಟಿ ಪರೀಕ್ಷೆಗೆ ಸಂಬಂಧಿಸಿದ ಪರೀಕ್ಷಾ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಪರೀಕ್ಷೆಯು ಎರಡು ಅವಧಿಯಲ್ಲಿ ನಡೆಯಲಿದ್ದು, ಜಿಲ್ಲೆಯ ಒಟ್ಟು 30 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದ್ದು,13,359 ಅಭ್ಯರ್ಥಿಗಳು ಪರೀಕ್ಷೆಗೆ…

Read More

ಜಿಲ್ಲಾಧಿಕಾರಿ ಕಚೇರಿ ಎಸ್. ಡಿ. ಎ., ಕಂಪ್ಯೂಟರ್ ಆಪರೇಟರ್ ಲೋಕಾಯುಕ್ತ ಬಲೆಗೆ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 17:ಜಿಲ್ಲಾಧಿಕಾರಿ ಕಚೇರಿ ಎಸ್. ಡಿ. ಎ., ಕಂಪ್ಯೂಟರ್ ಆಪರೇಟರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಇಬ್ಬರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಪೆಟ್ರೋಲ್ ಬಂಕ್ ಜಾಗದ ನಕಾಶೆ ಆನ್ ಲೈನ್ ನಲ್ಲಿ ಅಪ್ಲೋಡ್ ಮಾಡಲು ಲಂಚ ಸ್ವೀಕರಿಸುತ್ತಿದ್ದ ಜಿಲ್ಲಾಡಳಿತ ಕಚೇರಿಯಎಸ್ ಡಿ ಎ ಅರವಿಂದ ಪವಾರಗುತ್ತಿಗೆ ಆಧಾರದಲ್ಲಿ ಸೇವೆ ಮಾಡುವಕಂಪ್ಯೂಟರ್ ಆಪರೇಟರ್ಅಯ್ಯಬ್ ತೊನಶ್ಯಾಳ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.15,000 ನಗದು ಸ್ವೀಕಾರ ಮಾಡುವ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಎಸ್ ಡಿ ಎ…

Read More

19ರಂದು ಬಸವಜ್ಯೋತಿ ಪಾದಯಾತ್ರೆ

ಸಪ್ತಸಾಗರ ವಾರ್ತೆ, ವಿಜಯಪುರ, ಏ. 17:ಸಮಾನತೆಯ ಹರಿಕಾರ, ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸಣ್ಣನವರ ಜಯಂತಿ ನಿಮಿತ್ತ ಜನ್ಮಸ್ಥಳ ಬಾಗೇವಾಡಿಯಿಂದ ವಿಜಯಪುರದವರೆಗೆ ವಿಜಯಪುರ ಸೈಕ್ಲಿಂಗ್ ಗ್ರುಪ್ ಸಹಯೋಗದಲ್ಲಿ ಬಸವಜ್ಯೋತಿ ಪಾದಯಾತ್ರೆ ದಿ.19 ರವಿವಾರ ರಾ.7ಗಂ. ಆರಂಭಿಸಲಾಗುವುದು ಎಂದು ಆಯೋಜಕ ಬಿ.ಬಿ.ಪಾಟೀಲ ತಿಳಿಸಿದರು.ವಿಜಯಪುರದಲ್ಲಿ ಬಸವಜ್ಯೋತಿ ಪಾದಯಾತ್ರೆ ನಿಮಿತ್ತ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಈ ಬಾರಿ ವಿಶಿಷ್ಟ ರೀತಿಯಲ್ಲಿ ಬಸವ ಜಯಂತಿ ಆಚರಿಸಲಾಗುವುದು. ಬಸವಣ್ಣನವರ ಜನ್ಮಸ್ಥಳ ಬಸವನ ಬಾಗೇವಾಡಿಯಲ್ಲಿ ಪಾದಯಾತ್ರಿಗಳು ಸಂ.6ಗಂ. ಹಾಜರಿರುವುದು. ಸಂ.6.30ಗಂ. ಪೂಜೆ ಸಲ್ಲಿಸಿದ ನಂತರ ರಾ.7ಗಂ….

Read More

ಬಿ. ಟಿ. ಚವ್ಹಾಣ ನಿಧನ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 17: ನಿವೃತ್ತ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಿ. ಟಿ. ಚವ್ಹಾಣ(74) ಗುರುವಾರ ರಾತ್ರಿ ನಿಧನರಾಗಿದ್ದಾರೆ.ವಿಜಯಪುರ ನಗರದ ಚಾಲುಕ್ಯ ನಗರದ ನಿವಾಸಿಯಾಗಿದ್ದ ಅವರು, ಪಿ.ಎಸ್.ಐ, ಸಿಪಿಐ, ಡಿವೈಎಸ್ಪಿ ಸೇರಿದಂತೆ ಹೆಚ್ಚುವರಿ ಎಸ್ಪಿಯಾಗಿ ಸೇವೆ ಸಲ್ಲಿಸಿದ್ದರು. ಬೆಂಗಳೂರು, ಹುಬ್ಬಳ್ಳಿ, ರೋಣ, ಅಥಣಿ, ಹೊಸಪೇಟೆ, ಬಾದಾಮಿ, ವಿಜಯಪುರ ನಗರ, ಗದಗ, ಮೈಸೂರು, ಹಾಸನ ಹಾಗೂ ದಾವಣಗೆರೆಯಲ್ಲಿ ಸೇವೆ ಸಲ್ಲಿಸಿದ್ದ ಅವರು, ಗುರುವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು-…

Read More

ಡಾ.ರಾಜಕುಮಾರ್ ಜನ್ಮದಿನಾಚರಣೆ ಪೂರ್ವಭಾವಿ ಸಭೆ

ಸಪ್ತಸಾಗರ ವಾರ್ತೆ,ವಿಜಯಪುರ,ಏ.17:ಡಾ. ರಾಜ್‌ಕುಮಾರ್ ಅವರ ಜನ್ಮದಿನಾಚರಣೆಯನ್ನು ಏಪ್ರಿಲ್ 24ರಂದು ಜಿಲ್ಲಾಡಳಿತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಹಯೋಗದಲ್ಲಿ ಆಚರಿಸುವ ಹಿನ್ನೆಲೆಯಲ್ಲಿ ಪೂರ್ವಭಾವಿ ಸಿದ್ದತಾ ಸಭೆಯನ್ನು ಅಪರ ಜಿಲ್ಲಾಧಿಕಾರಿಗಳು,ವಿಜಯಪುರ ಇವರ ಅಧ್ಯಕ್ಷತೆಯಲ್ಲಿ ಏ.18ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಒಂದನೇ ಮಹಡಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.ಈ ಸಭೆಗೆ ಅಧಿಕಾರಿಗಳು, ಮುಖಂಡರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಆಗಮಿಸುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ‌ ಇಲಾಖೆಯ ಪ್ರಕಟಣೆ ತಿಳಿಸಿದೆ.

Read More

ವಿದ್ಯುತ್ ಕುಂದುಕೊರತೆಗಳ ಆಲಿಕೆಗೆ ಏ.18ರಂದು ಗ್ರಾಹಕರ ಸಂವಾದ ಸಭೆ

ಸಪ್ತಸಾಗರ ವಾರ್ತೆವಿಜಯಪುರ,ಏ.16:ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದ ವಿಜಯಪುರ ತಾಲೂಕಿನ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗಕ್ಕೆ ಸಂಬಂಧಿಸಿದಂತೆ ಏ.18ರಂದು ಮಧ್ಯಾಹ್ನ 3.30ಗಂಟೆಗೆ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗದ ಕಛೇರಿಯಲ್ಲಿ ರೈತರು ಹಾಗೂ ಗ್ರಾಹಕರೊಂದಿಗೆ ವಿದ್ಯುತ್ ಸಮಸ್ಯೆಗಳ ಪರಿಹಾರಕ್ಕೆ ಗ್ರಾಹಕರ ಸಂವಾದ ಸಭೆ ಆಯೋಜಿಸಲಾಗಿದೆ.ಹೆಸ್ಕಾಂ ಗ್ರಾಮೀಣ ಉಪ ವಿಭಾಗದ ಕಛೇರಿಗೆ ಒಳಪಡುವ ಗ್ರಾಮಗಳ ಗ್ರಾಹಕರು ಹಾಗೂ ಸಾರ್ವಜನಿಕರು ಸಂವಾದ ಸಭೆಯಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ವಿಜಯಪುರ ಗ್ರಾಮೀಣ ಉಪ ವಿಭಾಗದ ಹೆಸ್ಕಾಂನ…

Read More

ಏ. 23 ರಿಂದ ಜಾನುವಾರುಗಳ ಕಾಲು ಬಾಯಿ ಜ್ವರದ ವಿರುದ್ದ ಉಚಿತ ಲಸಿಕಾ ಅಭಿಯಾನ

ಸಪ್ತಸಾಗರ ವಾರ್ತೆ,ವಿಜಯಪುರ,ಏ.16: ಏ.23 ರಿಂದ ಮೇ.22 ರವರೆಗೆ ಜಿಲ್ಲೆಯಲ್ಲಿ 9ನೇ ಸುತ್ತಿನ ಕಾಲು ಬಾಯಿ ರೋಗದ ಉಚಿತ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ತಿಳಿಸಿದ್ದಾರೆ.ಗುರುವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ 2025-26ನೇ ಸಾಲಿನ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮ ಯೋಜನೆಯಡಿ 9ನೇ ಸುತ್ತಿನ ಕಾಲುಬಾಯಿ ಜ್ವರ ರೋಗದ ಲಸಿಕಾ ಕಾರ್ಯಕ್ರಮದ ಜಿಲ್ಲಾ ರ್ನಿಹಣಾ ಸಮಿತಿ ಸಭೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ…

Read More

ಶಿವಗಂಗಾಗೆ ಪಿಎಚ್ ಡಿ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 16: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ಶಿವಗಂಗಾ ಅವರು ಸಲ್ಲಿಸಿದ್ದ “ಅಸೆಸ್‌ಮೆಂಟ್ ಆಫ್ ಲೈಬ್ರರಿ ಆ್ಯಂಕ್ಸೆಟಿ ಅಮಂಗ್ ಡಿಫರಂಟ್ ಕೆಟಗರೀಸ್ ಆಫ್ ಯುಸರ್ಸ: ಎ ಕಂಪ್ಯಾರೇಟಿವ್ ಅನಾಲಿಸಸ್ ಆಫ್ ಸೆಲೆಕ್ಟಡ್ ಯುನಿವರ್ಸಿಟಿ ಇನ್ ಕರ್ನಾಟಕ ಸ್ಟೇಟ್” ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಪಿಎಚ್‌ಡಿ ಪದವಿ ನೀಡಿದೆ.ಶಿವಗಂಗಾ ಅವರು ಗ್ರಂಥಾಲಯ ಮತ್ತು ಮಾಹಿತಿ ತಂತ್ರಜ್ಞಾನ ವಿಭಾಗದ ಪ್ರೊ. ಪಿ.ಜಿ ತಡಸದ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು. ಡಾಕ್ಟರೇಟ್ ಪದವಿ ಪಡೆದಿರುವ ಶಿವಗಂಗಾ ಅವರನ್ನು ಕುಲಪತಿ…

Read More