ಕಡಲೆ ಬೆಳೆಯಲ್ಲಿ ತಾಂತ್ರಿಕತೆ ಅಳವಡಿಸಿಕೊಳ್ಳಿ: ಡಾ. ಬೆಳ್ಳಿ
ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 22 :ರೈತರು ಕಡಲೆಯಲ್ಲಿ ಅಧಿಕ ಇಳುವರಿ ಪಡೆಯಲು ಆಧುನಿಕ ಕೃಷಿ ತಾಂತ್ರಿಕತೆಗಳನ್ನು ಅಳವಡಿಸಿಕೊಳ್ಳಬೇಕೆಂದು ನಿವೃತ್ತ ಸಹ ವಿಸ್ತರಣಾ ನಿರ್ದೇಶಕ ಡಾ. ರವೀಂದ್ರ ಬೆಳ್ಳಿ ಹೇಳಿದರು.ಭಾನುವಾರ ವಿಜಯಪುರ ತಾಲೂಕಿನ ಹಿಟ್ಟಿನಹಳ್ಳಿ ಗ್ರಾಮದ ಪ್ರಗತಿಪರ ರೈತ ಸಾರವಾಡ ಇವರ ಕ್ಷೇತ್ರದಲ್ಲಿ ಕೃಷಿ ಇಲಾಖೆಯಿಂದ 2025- 26 ನೇ ಸಾಲಿನ ರಾಷ್ಟ್ರೀಯ ಆಹಾರ ಭದ್ರತಾ ಯೋಜನೆ ಅಡಿಯಲ್ಲಿ ಹಿಂಗಾರು ಹಂಗಾಮಿನಲ್ಲಿ ಬೆಳೆದ ಕಡಲೆ ಬೆಳೆಯ ಕ್ಷೇತ್ರೋತ್ಸವ ಉದ್ಘಾಟಿಸಿ ಮಾತನಾಡಿದರು.ರೈತರು ಕಡಲೆ ಬೆಳೆಗೆ ಅಧಿಕ ಇಳುವರಿ ಪಡೆಯಲು…


