ಮಕ್ಕಳ ಶ್ರೇಯೋಭಿವೃದ್ಧಿಗೆ ಶ್ರಮಿಸಿ-ಡಾ. ಆನಂದ
ಸಪ್ತಸಾಗರ ವಾರ್ತೆ, ವಿಜಯಪುರ, ಜ. 2: ಬಾಲಮಂದಿರದ ಆವರಣದಲ್ಲಿ ಕೈತೋಟ ಅಭಿವೃದ್ಧಿಪಡಿಸಬೇಕು ಹಾಗೂ ಮಕ್ಕಳು ವಿದ್ಯಾಭ್ಯಾಸದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳಬೇಕು ಯೋಜನಾಬದ್ಧವಾಗಿ ಮಕ್ಕಳ ಶ್ರೇಯೋಭಿವೃದ್ಧಿಗೆ ಶ್ರಮಿಸುವಂತೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಹೇಳಿದರು.ಜಿಲ್ಲಾಡಳಿತ,ಎಂ.ಬಿ.ಪಾಟೀಲ ಫೌಂಡೇಷನ್,ಅಮ್ಮನ ಮಡಿಲು ಚಾರಿಟೇಬಲ್ ಟ್ರಸ್ಟ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಜ. 1 ರಂದು ನಗರದ ಸರ್ಕಾರಿ ಬಾಲಕರ ಬಾಲಮಂದಿರ ವಿಜಯಪುರದಲ್ಲಿ ಹೊಸ ವರ್ಷಾಚರಣೆಯನ್ನು ಮಕ್ಕಳೊಂದಿಗೆ ಆಚರಿಸಿ ಅವರು ಮಾತನಾಡಿದರು.ಮಕ್ಕಳು ಭವಿಷ್ಯವನ್ನು ಉಜ್ವಲಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಮಕ್ಕಳಿಗಾಗಿ…


