ಶರಣರ ವಚನಗಳೇ ಮಾನವ ಹಕ್ಕುಗಳ ಮೂಲ – ಬಸನಗೌಡ ಪಾಟೀಲ ಹರನಾಳ ಅಭಿಮತ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 14: ಶರಣರ ವಚನಗಳೇ ಮಾನವ ಹಕ್ಕುಗಳ ಮೂಲ. ಆದರ್ಶ ಸಮಾಜದ ನಿರ್ಮಾಣದಲ್ಲಿ ಅವರು ನೀಡಿದ ಸಂದೇಶಗಳು ನಮ್ಮೆಲ್ಲರ ಜೀವನವನ್ನು ಬದಲಿಸುವ ದಿಕ್ಸೂಚಿಗಳಾಗಿವೆ ಎಂದು ವಿಜಯಪುರದ ಜಾಗತಿಕ ಲಿಂಗಾಯತ ಮಹಾಸಭೆಯ ಅಧ್ಯಕ್ಷ ಬಸನಗೌಡ ಪಾಟೀಲ ಹರನಾಳ ಅಭಿಪ್ರಾಯಪಟ್ಟರು. ರವಿವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಜರುಗಿದ ನೀಲಮ್ಮ ಮುತ್ತಪ್ಪ ಸಂಕಣ್ಣನವರ ದತ್ತಿ, ದಿ. ಪ್ರೊ.ತಿಪ್ಪಣ್ಣ ಕರೆಪ್ಪ ಕಲ್ಯಾಣಗೋಳ ದತ್ತಿ, ದಿ. ರಾಮಗೊಂಡಪ್ಪ ನಿಂಗಪ್ಪ ನಾಗಠಾಣ ದತ್ತಿ, ದಿ. ಗಂಗಾಧರ ಕೋರಳ್ಳಿ ದತ್ತಿ…

Read More

ಬೀದಿನಾಯಿಗಳ ಹಾವಳಿ: ಸಹಾಯವಾಣಿ ಸ್ಥಾಪನೆ

ಸಪ್ತಸಾಗರ ವಾರ್ತೆ,ವಿಜಯಪುರ, ಡಿ.12:ಮಹಾನಗರ ಪಾಲಿಕೆವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದಂತೆ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿನ ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆ, ಆಸ್ಪತ್ರೆ, ಕ್ರೀಡಾ ಸಂಕೀರ್ಣ ಬಸ್ ಹಾಗೂ ರೈಲು ನಿಲ್ದಾಣಗಳ ಆವರಣದಲ್ಲಿ ಬೀದಿ ನಾಯಿಗಳು ಕಂಡುಬಂದಲ್ಲಿ ಸಂಬಂಧಿಸಿದವರು ಮಹಾನಗರ ಪಾಲಿಕೆ ಕಚೇರಿಯ ಸಹಾಯವಾಣಿ ಸಂಖ್ಯೆ: 08352-222474 ಸಂಪರ್ಕಿಸಿ ಮಾಹಿತಿ ನೀಡಬಹುದಾಗಿದೆ ಎಂದು ಮಹಾನಗರಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ನಾಡಗೀತೆ ಕರ್ನಾಟಕದ ಶ್ರೇಷ್ಠತೆ,ಗೌರವದ ಸಂಕೇತ-ಶಿವಚಂದ್ರ ಕತ್ನಳ್ಳಿ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 12: ಕುವೆಂಪು ರಚಿಸಿದ ನಾಡಗೀತೆಯು ಕನ್ನಡಿಗರ ಹೃದಯದ ನಾದವಾಗಿದ್ದು, ನಾಡಿನ ಶ್ರೀಮಂತ ಸಂಸ್ಕೃತಿ, ಇತಿಹಾಸ, ಭೂಗೋಳ, ವೈವಿಧ್ಯತೆಯನ್ನು ಸಾರುವ ಒಂದು ಅಮರ ಗೀತೆಯಾಗಿದೆ ಎಂದು ಶಿಕ್ಷಣ ಇಲಾಖೆಯ ಅಧಿಕಾರಿ ಶಿವಚಂದ್ರ ಕತ್ನಳ್ಳಿ ಹೇಳಿದರು.ಶುಕ್ರವಾರ ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡ ‘ನಾಡಗೀತೆಯ ನೂರರ ಹಾಗೂ ವಂದೇ ಮಾತರಂ ಗೀತೆಯ ನೂರೈವತ್ತರ ಸಂಭ್ರಮ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ನಾಡಗೀತೆಯು ಕರ್ನಾಟಕದ ಸ್ವಾಭಿಮಾನ ಮತ್ತು ಘನತೆಯನ್ನು ಎತ್ತಿ…

Read More

ಚನ್ನಬಸವ ಶ್ರೀಗಳಿಂದ ಇಂಗಳೇಶ್ವರದಲ್ಲಿ ವಚನ ಗುಮ್ಮಟ ನಿರ್ಮಾಣ

ಸಪ್ತಸಾಗರ ವಾರ್ತೆ ಇಂಗಳೇಶ್ವರ, ಡಿ. 12 : ರಾಗ, ಧ್ವೇಷಗಳಿಲ್ಲದ ಮಂದಹಾಸದ ಇಂಗಳೇಶ್ವರ ವಿರಕ್ತ ಮಠದ ಚನ್ನಬಸವ ಶ್ರೀಗಳು ಆದಿಲ್ ಶಾಹಿ ಗೋಲಗುಂಬಜ ಕಟ್ಟಿದ ಮಾದರಿಯಲ್ಲಿ ವಚನ ಶಿಲಾ ಮಂಟಪ ನಿರ್ಮಿಸಿ ಸಮಾಜಕ್ಕೆ, ಮಠಾಧೀಶರಿಗೆ ಸಾರ್ವಕಾಲಿಕ ಮಾದರಿ ರೀತಿ ಬದುಕಿ ತೋರಿದ ಮಹಾನ್ ಚೇತನವಾಗಿದ್ದರು ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಬಣ್ಣಿಸಿದರು.ಶುಕ್ರವಾರ ಬಸವನಬಾಗೇವಾಡಿ ತಾಲೂಕಿನ ಇಂಗಳೇಶ್ವರ ಗ್ರಾಮದಲ್ಲಿ ಬಸವೈಕ್ಯರಾದ ಚನ್ನಬಸವ ಶ್ರೀಗಳ ಭಕ್ತಿ ಶ್ರದ್ಧಾಂಜಲಿ ಸಮಾರಂಭದಲ್ಲಿ ಪಾಲ್ಗೊಂಡು…

Read More

ತನುಶ್ರೀ ಇಜೇರಿ ಕರ್ನಾಟಕ ರಾಜ್ಯ ತಂಡಕ್ಕೆ ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 11: ಸಂತ ಜೋಸೆಫ್ ವಿದ್ಯಾರ್ಥಿನಿ ತನುಶ್ರೀ ಇಜೇರಿ ತೆಲಂಗಾಣದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕ್ರಿಕೆಟ್ ಪಂದ್ಯಾವಳಿಗೆ ೧೭ ವಯೋಮಿತಿಯ ಬಾಲಕಿಯರ ಕರ್ನಾಟಕ ತಂಡಕ್ಕೆ ಆಯ್ಕೆಯಾಗಿದ್ದಾರೆ.ಚಿನ್ನದ ನಾಡಿನಲ್ಲಿ ನಡೆದ ೨೦೨೫-೨೬ ನೇ ಸಾಲಿನ ೧೭ ವಯೋಮಿತಿಯ ಬಾಲಕಿಯರ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಯನ್ನು ಉಪನಿರ್ದೇಶಕರ ಕಾರ್ಯಾಲಯ ಶಾಲಾ ಶಿಕ್ಷಣ ಇಲಾಖೆ ಕೋಲಾರ ಜಿಲ್ಲೆ ಕೋಲಾರವರ ಆಶ್ರಯದಲ್ಲಿ ಜರುಗಿತು.ಈ ಪಂದ್ಯಾವಳಿಯಲ್ಲಿ ತನುಶ್ರೀ ಇಜೇರಿ ಭರ್ಜರಿ ಬ್ಯಾಟಿಂಗ್ ಹಾಗೂ ಮಾರಕ ಬೌಲಿಂಗ್ ನಿಂದ ಬೆಳಗಾವಿ ವಿಭಾಗದ ತಂಡ…

Read More

ವಿಜಯಪುರ-ಬೆಂಗಳೂರ ಕಲ್ಯಾಣ ರಥ ಸಾರಿಗೆಯ ಪ್ರಯಾಣ ದರದಲ್ಲಿ ರಿಯಾಯಿತಿ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ.11: ಪ್ರಯಾಣಿಕರ ಬೇಡಿಕೆಯಂತೆ, ವಿಜಯಪುರ-ಬೆಂಗಳೂರ ಮಾರ್ಗದ ಕಲ್ಯಾಣ ರಥ ವೊಲ್ಲೋ ಮಲ್ಟಿ ಎಕ್ಸಲ್ ಎಸಿ ಸ್ಲಿಪರ್ ಬಸ್ ಪ್ರಯಾಣ ದರದಲ್ಲಿ ರೂ.100 ಅಂದರೆ, ಶೇ 6% ರಷ್ಟು ರಿಯಾಯಿತಿ ನೀಡಲಾಗಿದೆ.ವಿಜಯಪುರ-ಬೆಂಗಳೂರ ಕಲ್ಯಾಣ ರಥ ಬಸ್ಸಿನ ದರ ರೂ. 1,399 ನಿಗದಿಪಡಿಸಲಾಗಿದ್ದು, ಪ್ರಯಾಣಿಕರು ಈ ರಿಯಾಯತಿ ದರದ ಉಪಯೋಗ ಪಡೆದುಕೊಳ್ಳುವಂತೆಕೆಕೆಆರ್ ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

Read More

ಸಶಸ್ತ್ರ ಪಡೆಗಳ ಧ್ವಜ ಖರೀದಿಸಿ-ಸೈನಿಕರಿಗೆ ಬೆಂಬಲಿಸಿ-ಜಿಲ್ಲಾಧಿಕಾರಿ ಡಾ. ಆನಂದ

ಸಪ್ತಸಾಗರ ವಾರ್ತೆ ವಿಜಯಪುರ ಡಿ.11:ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು, 2025-26ನೇ ಸಾಲಿನ ಸಶಸ್ತ್ರ ಪಡೆಗಳ ಧ್ವಜ ಸಾಂಕೇತಿಕವಾಗಿಬಿಡುಗಡೆಗೊಳಿಸಿ, ನಂತರ ಸಾಂಕೇತಿಕವಾಗಿ ಧ್ವಜ ಸ್ವೀಕರಿಸಿ, ದೇಣಿಗೆ ನೀಡುವುದರ ಮೂಲಕ ಸಾರ್ವಜನಿಕರಿಗೆ ಧ್ವಜಗಳನ್ನು ಮಾರಾಟ ಮಾಡಿ ನಿಧಿ ಸಂಗ್ರಹಿಸುವ ಕಾರ್ಯಕ್ಕೆ ಚಾಲನೆ ನೀಡಿದರು.ನಂತರ ಮಾತನಾಡಿದ ಅವರು, ಧ್ವಜ ನಿಧಿ ಸಂಗ್ರಹದ ಈ ನಿಧಿಯನ್ನು ಯುದ್ಧ ಸಂತ್ರಸ್ತರಿಗೆ,ಮಾಜಿ ಸೈನಿಕರು ಅವರ ಅವಲಂಬಿತರ ಸಲುವಾಗಿ ಹಮ್ಮಿಕೊಂಡ ವಿವಿಧ ಕಲ್ಯಾಣ ಮತ್ತು…

Read More

ರಾಷ್ಟ್ರಮಟ್ಟದ ಸೈಕ್ಲಿಂಗ್ ನಲ್ಲಿ ಪುನೀತ ಬಿರಾದಾರಗೆ ಬೆಳ್ಳಿ ಪದಕ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 10 : ಭಾರತೀಯ ಸೈಕ್ಲಿಂಗ್ ಫೆಡರೇಶನ್ ಹಾಗೂ ಸೈಕ್ಲಿಂಗ್ ಅಸೋಶಿಯೇಶನ್ ಆಫ್ ಓರಿಸ್ಸಾ ಸಹಯೋಗದಲ್ಲಿ ಸಂಬಾಲಪುರಲ್ಲಿ ನಡೆದ 30ನೇ ರಾಷ್ಟ್ರೀಯ ರೋಡ್ ಸೈಕ್ಲಿಂಗ್ ಚಾಂಪಿಯನ್‌ಶಿಪ್‌ ನಲ್ಲಿ ಬಿ. ಎಲ್. ಡಿ. ಇ ಸಂಸ್ಥೆಯ ಎಸ್. ಎಸ್. ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಪುನೀತ ಬಿರಾದಾರ 16 ವಯೋಮಾನದ ಬಾಲಕರ ವಿಭಾಗದ 30 ಕಿ.ಮೀ ಟೀಮ್ ಟೈಮ್ ಟ್ರಯಲ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.ವಿದ್ಯಾರ್ಥಿಯ ಸಾಧನೆಗೆ ಸಂಸ್ಥೆಯ ಅಧ್ಯಕ್ಷ…

Read More

ಲಿಂಗ ತಾರತಮ್ಯ ಮತ್ತು ಬಾಲ್ಯ ವಿವಾಹ ಪದ್ಧತಿ ಕಿತ್ತೊಗೆಯಬೇಕು : ನ್ಯಾಯಾಧೀಶ ಅರವಿಂದ ಎಸ್ ಹಾಗರಗಿ ಕರೆ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 10:ಹೆಣ್ಣು ಮತ್ತು ಗಂಡು ಮಕ್ಕಳ ನಡುವೆ ಇರುವ ತಾರತಮ್ಯವನ್ನು ಕಡಿಮೆ ಮಾಡುವುದಲ್ಲದೆ ಇದನ್ನು ಸಮಾಜದಿಂದ ಬೇರು ಸಮೇತ ಕಿತ್ತೊಗೆಯುವ ಕಾರ್ಯವನ್ನು ಮಾಡಬೇಕು ಎಂದು ವಿಜಯಪುರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮತ್ತು ಹಿರಿಯ ಸಿವ್ಹಿಲ್ ನ್ಯಾಯಾಧೀಶರಾದ ಅರವಿಂದ ಎಸ್ ಹಾಗರಗಿ ಅವರು ತಿಳಿಸಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಶಾಲಾ…

Read More

ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗೆ ಪಾಲಕರ ಸಹಕಾರ ಅವಶ್ಯ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ.9: ಮಕ್ಕಳಿಗೆ ಸಂವಹನ ಕಲೆಯನ್ನು, ಪ್ರಶಸ್ತಿ ಪಡೆದವರ ಸಾಧನೆಯನ್ನು ತಿಳಿಸುವುದು ಮತ್ತು ಅವರಿಗೆ ಶಿಕ್ಷಕರು ಪಾಲಕರು ಪ್ರೇರಣೆಯನ್ನು ನೀಡಿ ಸತ್ಪ್ರಜೆಗಳನ್ನಾಗಿ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಅವರು ಹೇಳಿದರು.ಎ.ಎಸ್.ಹಿಪ್ಪರಗಿ ಪ್ರತಿಷ್ಠಾನ ಮತ್ತು ಸಮನ್ವಯ ಆಂಗ್ಲ ಮಾಧ್ಯಮಿಕ ಶಾಲೆ ಬ ಇವುಗಳ ಸಹಯೋಗದಲ್ಲಿ ನಡೆದ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಕೃಷ್ಣಾಜಿ ದಂಪತಿ ಮತ್ತು ಶಂಭು ತುಪ್ಪದ ಕೊಡಮಾಡಿದ ದತ್ತಿ ದಾಸೋಹಿಗಳು ವಿದ್ಯಾರ್ಥಿಗಳಿಗೆ ಬಹುಮಾನ ನೀಡಲು ಇವರು…

Read More