ಸಪ್ತಸಾಗರ ವಾರ್ತೆ, ಬಸವನ ಬಾಗೇವಾಡಿ, ಆ. 31:
ಬಸವಜನ್ಮಭೂಮಿ ಬಸವನ ಬಾಗೇವಾಡಿ ಪಟ್ಟಣದಿಂದ ಚಾಲನೆ ಪಡೆಯಲಿರುವ ಬಸವ ಸಂಸ್ಕೃತಿ ಅಭಿಯಾನಕ್ಕೆ ಕ್ಷಣ ಗಣನೆ ಆರಂಭಗೊಂಡಿದೆ. ಸೋಮವಾರ ಸೆ.1ರಂದು ಅಭಿಯಾನಕ್ಕೆ ಚಾಲನೆ ಪಡೆಯಲಿರುವ ಹಿನ್ನೆಲೆಯಲ್ಲಿ ಕ್ಷೇತ್ರದ ಶಾಸಕರೂ ಆಗಿರುವ ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ಅಂತಿಮ ಸಿದ್ಧತೆ ಪರಿಶೀಲಿಸಿದರು.
ಭಾನುವಾರ ಮಧ್ಯಾಹ್ನ ಪಟ್ಟಣದ ಸಿಬಿಎಸ್ ಶಾಲಾ ಆವರಣದಲ್ಲಿ ಅಭಿಯಾನ ವೇದಿಕೆ ಹಾಗೂ ಪ್ರಸಾದ ವ್ಯವಸ್ಥೆಯ ಅಂತಿಮ ಸಿದ್ಧತೆ ಪರಿಶೀಲಿಸಿದ ಸಚಿವರು, ಸಲಹೆ, ಸೂಚನೆ ನೀಡಿದರು.
ಬೈಲೂರಿನ ನಿಜಗುಣಾಂದ ಶ್ರೀಗಳು,
ಬಸವವನ ಬಾಗೇವಾಡಿ ವಿರಕ್ತಮಠದ ಸಿದ್ಧಲಿಂಗ ಶ್ರೀಗಳು, ರಾಷ್ಟ್ರೀಯ ಬಸವ ಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ, ಮುಖಂಡರಾದ ಲೋಕನಾಥ ಅಗರವಾಲ, ಈರಣ್ಣ ಪಟ್ಟಣಶೆಟ್ಟಿ ಅಭಿಯಾನದ ವಿವಿಧ ಸಮಿತಿಗಳ ಪ್ರಮುಖರು ಉಪಸ್ಥಿತರಿದ್ದರು.
ಬಸವ ಸಂಸ್ಕೃತಿ ಅಭಿಯಾನಕ್ಕೆ ಕ್ಷಣ ಗಣನೆ: ಅಂತಿಮ ಸಿದ್ಧತೆ ಪರಿಶೀಲಿಸಿದ ಸಚಿವ ಶಿವಾನಂದ ಪಾಟೀಲ
