ಸಪ್ತಸಾಗರ ವಾರ್ತೆ, ವಿಜಯಪುರ, ಜ. 16:
ಕಬ್ಬಿನ ಗದ್ದೆಗೆ ಬಿದ್ದ ಬೆಂಕಿ ನಂದಿಸಲು ಹೋದ ವ್ಯಕ್ತಿಯೊಬ್ಬ ಸಜೀವ ದಹನಗೊಂಡಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ಬನಹಟ್ಟಿ ಪಿಎ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಇಲ್ಲಿನ ಮಲ್ಲನಗೌಡ ಬಿರಾದಾರ ಉರ್ಫ್ ಮೇಲಿನಮನಿ ಸಜೀವ ದಹನಗೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ.
ಮಲ್ಲನಗೌಡ ಬಿರಾದಾರ ಅವರಿಗೆ ಸೇರಿದ ಹೊಲದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಬೆಂಕಿಯ ಕೆನ್ನಾಲಿಗೆ ಇಡೀ ಕಬ್ಬಿನ ಪಡಕ್ಕೆ ವ್ಯಾಪಿಸಿದೆ. ಆಗ ಇದನ್ನು ಕಂಡ ಮಲ್ಲನಗೌಡ ಅವರು ಬೆಂಕಿ ನಂದಿಸಲು ಹೋದ ವೇಳೆ ಅವರಿಗೆ ಬೆಂಕಿ ತಗುಲಿ ಸಜೀವವಾಗಿ ದಹನಗೊಂಡಿದ್ದಾನೆ. ಕಬ್ಬು ಬೆಳೆ ಸುಟ್ಟು ಭಸ್ಮವಾಗಿ ಅಪಾರ ಹಾನಿಯಾಗಿದೆ.
ಈ ಬಗ್ಗೆ ಸುದ್ದಿ ತಿಳಿದ ತಕ್ಷಣ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ದೇವರಹಿಪ್ಪರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಬ್ಬಿನ ಪಡಕ್ಕೆ ಬೆಂಕಿ:ಓರ್ವ ವ್ಯಕ್ತಿ ಸಜೀವ ದಹನ


