ಇಬ್ರಾಹಿಂಪುರ ಶಾಲೆಯ ಮಕ್ಕಳಿಗೆ ಉಚಿತವಾಗಿ ಸ್ಮಾರ್ಟ್ ಬೋರ್ಡ್, ನೋಟ್ ಬುಕ್ ವಿತರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 5:
ಮುಂಬೈನ ತಾಪಿದಾಸ ತುಳಸಿದಾಸ ವ್ರಜದಾಸ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಗರದ ಇಬ್ರಾಹಿಂಪುರ ಬಡಾವಣೆಯ ನಮ್ಮ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ನಂಬರ್ 6 ಮಕ್ಕಳಿಗೆ ಶೈಕ್ಷಣಿಕ ಅಭಿವೃದ್ಧಿಗಾಗಿ ಸ್ಮಾರ್ಟ್ ಬೋರ್ಡ ಹಾಗೂ ನೋಟು ಪುಸ್ತಕಗಳನ್ನು ವಿತರಿಸಲಾಯಿತು.
ಚಾರಿಟೇಬಲ್ ಟ್ರಸ್ಟ್ ಸಂಯೋಜಕ ವಿಶ್ವನಾಥ ಸಿಂದಗಿ ಅವರು ಸ್ಮಾರ್ಟ್ ಬೋರ್ಡ್ ಹಾಗೂ ನೋಟ್ ಬುಕ್ ಗಳನ್ನು ಉಚಿತವಾಗಿ ವಿತರಿಸಿದರು.
ಮಹಾನಗರ ಪಾಲಿಕೆ ಸದಸ್ಯ ಮಲ್ಲಿಕಾರ್ಜುನ ಗಡಗಿ, ಎಸ್. ಎನ್. ಸಿನ್ನೂರ್, ಎಸ್.ಎಂ. ಬ್ಯಾಹಟ್ಟಿ, ಎಸ್‌ಡಿಎಂಸಿ ಅಧ್ಯಕ್ಷ ಲಕ್ಷ್ಮಣ ಶಿಳ್ಳಿನ, ಶಾಲೆಯ ಮುಖ್ಯೋಪಾಧ್ಯಾಯ ಆರ್.ಎಸ್. ಪಾದಗಟ್ಟಿ ಹಾಗೂ ಶಾಲೆಯ ಗುರುವೃಂದ, ಮಕ್ಕಳು ಹಾಗೂ ಪಾಲಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Share this