ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ ಸಹಾಯವಾಣಿ ಸ್ಥಾಪನೆ : ಜಿಪಂ ಸಿಇಒ ರಿಷಿ ಆನಂದ

ಸಪ್ತಸಾಗರ ವಾರ್ತೆ,ವಿಜಯಪುರ, ಏ.9: ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ನಿಗದಿತ ಸಮಯದಲ್ಲಿ ಪರಿಹರಿಸಲು ಜಿಲ್ಲಾ ಪಂಚಾಯತ ಕಚೇರಿ, ಕಾರ್ಯನಿರ್ವಾಹಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ವಿಭಾಗದ ಕಚೇರಿ ಮತ್ತು ಜಿಲ್ಲೆಯ ಎಲ್ಲಾ ತಾಲೂಕಾ ಪಂಚಾಯತಿಗಳಲ್ಲಿ ಸಹಾಯವಾಣಿ ಕೇಂದ್ರಗಳನ್ನು ಆರಂಭಿಸಲಾಗಿದೆ ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಿಷಿ ಆನಂದ ಅವರು ತಿಳಿಸಿದ್ದಾರೆ.
ಜಿಲ್ಲಾ ಪಂಚಾಯತ ಕಚೇರಿಯ ಸಹಾಯವಾಣಿ ಸಂಖ್ಯೆ ; 08352-277293, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಚೇರಿಯ ದೂ. ಸಂಖ್ಯೆ : 08352-244971, ಮದ್ದೇಬಿಹಾಳ 08356-200606, ತಾಳಿಕೋಟಿ 08356-200103, ಸಿಂದಗಿ 08488 221772, ದೇವರ ಹಿಪ್ಪರಗಿ 08424-200114, ಆಲಮೇಲ 08488-298900, ವಿಜಯಪುರ 08352-242423, ಬಬಲೇಶ್ವರ 08355-200005, ತಿಕೋಟಾ 08352-294506. ಇಂಡಿ 08359-200026, ಚಡಚಣ 9480831718, ಬ.ಬಾಗೇವಾಡಿ 08358-245236, ನಿಡಗುಂದಿ 08426-200163, ಕೊಲ್ಹಾರ 08426-200103 ಈ ಸಹಾಯ ಸಂಖ್ಯೆಗೆ ಕರೆ ಮಾಡಬಹುದಾಗಿದೆ ಎಂದು ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ.

Share this