ಸಪ್ತಸಾಗರ ವಾರ್ತೆ,ವಿಜಯಪುರ, ಅ. 14: ತಾಲೂಕಿನ ಕನ್ನೂರು ಗ್ರಾಮದಲ್ಲಿ ಡಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಪೊಲೀಸರ ಮೇಲೆ ಬೈಕ್ ಹಾಯಿಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.
ಸಾಗರ ಬೆಳ್ಳುಂಡಗಿ ಹಾಗೂ ಇಸಾಕ್ ಖರೇಷಿ ಕೊಲೆ ಮಾಡಿದ ಆರೋಪಿಗಳ ಪೈಕಿ ಒಟ್ಟು ಐದು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದ್ದಾರೆ.
ಆರೋಪಿ ಅಕ್ಷಯ ಶಿವಾನಂದ ಜುಲಜುಲೆ ಪೊಲೀಸರ ಮೇಲೆ ಬೈಕ್ ಹಾಯಿಸಿ ಪರಾರಿಯಾಗಲು ಯತ್ನ ನಡೆಸಿದ.
ಆಗ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯ ಇನ್ಸಪೆಕ್ಟರ್ ರಾಯಗೊಂಡ ಜನಾರ ಅವರು ಆರೋಪಿ ಅಕ್ಷಯ ಶಿವಾನಂದ ಜುಲಜುಲೆ ಎಂಬುವನ ಮೇಲೆ ಪೈರಿಂಗ್ ಮಾಡಿದ್ದಾರೆ. ಇದಕ್ಕೂ ಮುಂಚೆ
ಎಚ್ಚರಿಕೆ ನೀಡಲು ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ ಇನ್ಸಪೆಕ್ಟರ್
ನಂತರ ಆರೋಪಿ ಬಂಧನಕ್ಕೆ ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆದಾಗ್ಯೂ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಮತ್ತೆ ಇನ್ಸಪೆಕ್ಟರ್ ಜನಾರ ಅವರು ಗುಂಡು ಹಾರಿಸಿದ್ದಾರೆ.
ಆಗ ಆರೋಪಿ ಅಕ್ಷಯ ಜುಲಜುಲೆ ಬಲ ಮೊಳಕಾಲು ಕೆಳಗೆ ಗುಂಡು ತಾಗಿದ್ದು, ತಕ್ಷಣ ಆತನನ್ನು
ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇತರೆ ನಾಲ್ವರು ಆರೋಪಿಗಳಾದ
ಭರತ, ಸಂಜಯ್, ಸಂತೋಷ, ಮಲ್ಲನಗೌಡ ಅವರನ್ನು ಬಂಧಿಸಲಾಗಿದೆ.
ಕಳೆದ 2023 ರಲ್ಲಿ ಈರನಗೌಡ ಪಾಟೀಲ ಮೇಲೆ ಹಲ್ಲೆ ಮಾಡಿದ್ದ ಆರೋಪಿಗಳಾದ ಸಾಗರ ಬೆಳ್ಳುಂಡಗಿ ಹಾಗೂ ಇಸಾಕ್ ಖರೇಷಿ ಹಲ್ಲೆ ಮಾಡಿದ್ದರು. ಆಗ
ಈರನಗೌಡ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಎಂಟು ತಿಂಗಳ ಬಳಿಕ ಚಿಕಿತ್ಸೆ ಫಲಕಾರಿಯಾಗದೇ ಈರನಗೌಡ ಮೃತಪಟ್ಟಿದ್ದರು.
ಇದಕ್ಕೆ ಪ್ರತೀಕಾರವಾಗಿ ಈರನಗೌಡ ಸಹೋದರ ಮಲ್ಲನಗೌಡ, ಆತನ ಮಕ್ಕಳು ಸಾಗರ ಹಾಗೂ ಇಸಾಕ್ ಇಬ್ಬರನ್ನು ಕೊಲೆ ಮಾಡಿದ್ದಾರೆ.
ಕಳೆದ ಅಕ್ಟೋಬರ್ 12 ರ ರಾತ್ರಿ ಕನ್ನೂರು ಗ್ರಾಮದಲ್ಲಿ ಕೊಲೆ ಮಾಡಿದ್ದರು.
ಸಾಗರ ಹಾಗೂ ಇಸಾಕ್ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದರು.
ನಾಲ್ವರು ಆರೋಪಿಗಳ ವಿಚಾರಣೆ ಬಳಿಕ ಪೊಲೀಸರು ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ. ಪೊಲೀಸರು ಮುಂದಿನ ತನಿಖೆಯನ್ನು ಕೈಗೊಂಡಿದ್ದು,
ತನಿಖೆ ಬಳಿಕ ಮತ್ತಷ್ಟು ಸತ್ಯಾಂಶ ಹೊರಬೀಳುವ ಸಾಧ್ಯತೆ ಇದೆ.
ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕನ್ನೂರ ಜೋಡಿ ಕೊಲೆ ಪ್ರಕರಣ: ಐವರು ಆರೋಪಿಗಳ ಬಂಧನ, ಪರಾರಿಯಾಗಲು ಯತ್ನಿಸಿದ ಓರ್ವ ಆರೋಪಿ ಮೇಲೆ ಫೈರಿಂಗ್


