ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 16:
ಜಿಲ್ಲೆಯ ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದ ಸಂಗಾಪುರ ಕ್ರಾಸ್ ಬಳಿ ಸೋಮವಾರ ಮಧ್ಯಾಹ್ನ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾಳೆ.
ಅಡವಿ ಸಂಗಾಪುರ ಗ್ರಾಮದ ನಿವಾಸಿ ಬಾಳವ್ವ ದಳವಾಯಿ (50) ಮೃತಪಟ್ಟಿದ್ದಾಳೆ.
ಬಾಳವ್ವ ಅವರು ತಮ್ಮ ಸಂಬಂಧಿಕರೊಂದಿಗೆ ಬೈಕ್ನಲ್ಲಿ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದ್ದು, ಆಗ ತೀವ್ರವಾಗಿ ಗಾಯಗೊಂಡ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬೈಕ್ ಸವಾರನಿಗೂ ಗಂಭೀರ ಸ್ವರೂಪದ ಗಾಯಗಳಾಗಿದ್ದು ತಕ್ಷಣವೇ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಗೊತ್ತಾಗಿದೆ.
ಲಾರಿ- ಬೈಕ್ ಡಿಕ್ಕಿ: ಮಹಿಳೆ ಸಾವು


