ಲಿಫ್ಟ್ ಆಪರೇಟರ್ ಹುದ್ದೆಗಳಿಗೆ ಅಂಗವಿಕಲರ ನೇಮಕಕ್ಕೆ ವಿಡಿಎ ಅನುಮೋದನೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 20 :ಲಿಫ್ಟ್ ಆಪರೇಟರ್ ಹುದ್ದೆಗಳಿಗೆ ಕಡ್ಡಾಯವಾಗಿ ಅಂಗವಿಕಲರನ್ನು ನೇಮಿಸಬೇಕು ಎಂದು ವಿಧಾನ ಪರಿಷತ್ ಶಾಸಕ ಸುನೀಲಗೌಡ ಮಾಡಿದ ಪ್ರಸ್ತಾವಕ್ಕೆ ನಗರಾಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಯಿತು.ಸೋಮವಾರ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಸುನೀಲಗೌಡ ಪಾಟೀಲ, ಮುಂಬರುವ ವಿಧಾನ ಪರಿಷತ ಅಧಿವೇಶನದಲ್ಲಿಯೂ ಈ ಕುರಿತು ಸರಕಾರಕ್ಕೆ ಮನವಿ ಮಾಡುವುದಾಗಿ ತಿಳಿಸಿದರು.ವಸತಿ ಸಮುಚ್ಛಯಗಳು, ವಾಣಿಜ್ಯ ಸಂಕೀರ್ಣಗಳು, ಆಸ್ಪತ್ರೆಗಳು, ಮಾಲ್ ಗಳು ಸೇರಿದಂತೆ ಬಹುಮಹಡಿ ಕಟ್ಟಡಗಳಲ್ಲಿ ಲಿಫ್ಟ್ ಬಳಸಲಾಗುತ್ತದೆ. ಈ ಲಿಪ್ಟ್ ಆಪರೇಟರ್ ಹುದ್ದೆಗಳಿಗೆ ಕಡ್ಡಾಯವಾಗಿ…

Read More

ಹಿಂದುಳಿದ ತಾಲೂಕುಗಳ ಸಮಗ್ರ ಅಭಿವೃದ್ಧಿಗೆ ಆದ್ಯತೆ: ನಿಖರ ದತ್ತಾಂಶ ಸಲ್ಲಿಕೆಗೆ ಸಿಇಒ ರಿಷಿ ಆನಂದ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು.20:ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಮಾನವ ಅಭಿವೃದ್ಧಿ ಸೂಚ್ಯಂಕಗಳು (HDI) ಪ್ರಮುಖ ಮಾನದಂಡಗಳಾಗಿದ್ದು, ಅಭಿವೃದ್ಧಿಯಲ್ಲಿ ಹಿಂದುಳಿದ ತಾಲೂಕುಗಳ ಕುರಿತು ಸಂಗ್ರಹಿಸಲಾಗುವ ದತ್ತಾಂಶ ನಿಖರ ಹಾಗೂ ವಿಶ್ವಾಸಾರ್ಹವಾಗಿರಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಸೂಚಿಸಿದರು.ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಮಾನವ ಅಭಿವೃದ್ಧಿ ವರದಿ–2025 ಹಾಗೂ ಸಮಗ್ರ ಮತ್ತು ಸುಸ್ಥಿರ ಅಭಿವೃದ್ಧಿ ಯೋಜನೆ–2031 ವರದಿಗಳ ತಯಾರಿಕೆಗೆ ಸಂಬಂಧಿಸಿದ ದತ್ತಾಂಶ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ…

Read More

ಸಂಘಟಿತ ಸಮಾಜ ನಿರ್ಮಾಣಕ್ಕೆ ಶಿಕ್ಷಣ, ಸಂಸ್ಕಾರ ಅಗತ್ಯ: ಶಂಕರ ಬಿದರಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು.20:ಸಮಾಜದ ಪ್ರಗತಿಗೆ ಶಿಕ್ಷಣ, ಸಂಸ್ಕಾರ, ಸಂಘಟನೆ ಮತ್ತು ಸಾಮಾಜಿಕ ಬದ್ಧತೆ ನಾಲ್ಕು ಪ್ರಮುಖ ಆಧಾರಸ್ತಂಭಗಳಾಗಿದ್ದು, ಇವುಗಳನ್ನು ಬಲಪಡಿಸಿದಾಗ ಮಾತ್ರ ಸದೃಢ ಸಮಾಜ ನಿರ್ಮಾಣ ಸಾಧ್ಯ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷ ಶಂಕರ ಬಿದರಿ ಹೇಳಿದರು.ನಗರದ ವೀರಶೈವ ಲಿಂಗಾಯತ ಸಮಾಜ ಭವನದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕರ್ನಾಟಕ ರಾಜ್ಯ ಘಟಕ ಹಾಗೂ ವಿಜಯಪುರ ಜಿಲ್ಲಾ ಘಟಕದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಕಾರ್ಯಾಗಾರದಲ್ಲಿ…

Read More

ಚನ್ನಮ್ಮ ದೇವೇಗೌಡರಿಗೆ ಜೆಡಿಎಸ್ ಜಿಲ್ಲಾ ಘಟಕದಿಂದ ಭಾವಪೂರ್ಣ ಶ್ರದ್ಧಾಂಜಲಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು.19:ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ದಿವಂಗತ ಚನ್ನಮ್ಮ ದೇವೇಗೌಡ ಅವರಿಗೆ ವಿಜಯಪುರ ಜೆಡಿಎಸ್ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ ಕಾರ್ಯಾಲಯದಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಮೌನಾಚರಣೆ ನಡೆಸಿ, ದಿವಂಗತರ ಆತ್ಮಕ್ಕೆ ಶಾಂತಿ ಕೋರಿದರು.ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದ ಹಿರಿಯ ಮುಖಂಡ ಪಂಚಪ್ಪ ಕಲಬುರ್ಗಿ, ಚನ್ನಮ್ಮ ದೇವೇಗೌಡ ಅವರು ಸರಳತೆ, ಸೌಜನ್ಯ ಹಾಗೂ ಕುಟುಂಬ ಮೌಲ್ಯಗಳ ಪ್ರತೀಕವಾಗಿದ್ದರು ಎಂದು ಸ್ಮರಿಸಿದರು. ದೇವೇಗೌಡರ ರಾಜಕೀಯ…

Read More

ಪತ್ರಿಕಾ ದಿನಾಚರಣೆ: ಪತ್ರಿಕೋದ್ಯಮ ಸತ್ಯ, ನ್ಯಾಯದ ಪರವಾಗಿರಲಿ – ಯತ್ನಾಳ

ಸಂಘಕ್ಕೆ ₹5 ಲಕ್ಷ ದೇಣಿಗೆ ಘೋಷಿಸಿದ ಶಾಸಕ ಕಟಕದೊಂಡ ಸಪ್ತಸಾಗರ ವಾರ್ತೆ,ವಿಜಯಪುರ, ಜು.19:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕಾನಿಪ) ವಿಜಯಪುರ ಜಿಲ್ಲಾ ಘಟಕದ ವತಿಯಿಂದ ಭಾನುವಾರ ನಗರದ ಕಂದಗಲ್ಲ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಪತ್ರಿಕಾ ದಿನಾಚರಣೆ-2026 ಅಂಗವಾಗಿ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರ, ವಾರ್ಷಿಕ ಪ್ರಶಸ್ತಿ ಪ್ರದಾನ ಹಾಗೂ ಅಭಿನಂದನಾ ಸಮಾರಂಭ ವಿಜೃಂಭಣೆಯಿಂದ ನಡೆಯಿತು.ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಪತ್ರಿಕೋದ್ಯಮವು ಸಮಾಜದ ಸತ್ಯವನ್ನು ಅನಾವರಣಗೊಳಿಸುವ ಶಕ್ತಿಯಾಗಿದ್ದು, ಪತ್ರಕರ್ತರು ಸದಾ ಸತ್ಯ,…

Read More

ಕೂದಲು, ಚರ್ಮ ರೋಗಗಳ ಉಚಿತ ತಪಾಸಣೆ ಶಿಬಿರ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 19: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವ್ಹಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಅಗದತಂತ್ರ ವಿಭಾಗದ ವತಿಯಿಂದ ಚರ್ಮ ಮತ್ತು ಕೂದಲಿಗೆ ಸಂಬಂಧಿಸಿದ ರೋಗಗಳಿಗಾಗಿ ಉಚಿತ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ಶಿಬಿರದಲ್ಲಿ ತಪಾಸಣೆ ಮಾಡಲಾಗುವ ಸಮಸ್ಯೆಗಳು: ಕೂದಲು ಉದುರುವಿಕೆ, ಕೂದಲು ಗಡಸುತನ, ಅಕಾಲಿಕವಾಗಿ ಕೂದಲು ಬೆಳ್ಳಗಾಗುವುದು, ಅಲ್ಲಲ್ಲಿ ವರ್ತುಲಾಕಾರದಲ್ಲಿ ಕೂದಲು ಉದುರುವಿಕೆ (Alopecia) ಮತ್ತು ತಲೆಹೊಟ್ಟು.ಭಂಗು (Pigmentation), ದೀರ್ಘಕಾಲದ ಮೊಡವೆ ಮತ್ತು ಕಲೆಗಳು, ಚರ್ಮ ಸುಕ್ಕುಗಟ್ಟುವಿಕೆ ಹಾಗೂ ಅಕಾಲಿಕ ನೆರಿಗೆಗಳು.ಈ ಶಿಬಿರವು…

Read More

ಯಾರೂ ಮತದಾನದ ಹಕ್ಕಿನಿಂದ ವಂಚಿತರಾಗದಿರಲಿ; ಸಮಾಜದ ಪ್ರಮುಖರು ಜಾಗೃತಿ ಮೂಡಿಸಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 19:ಪ್ರತಿಯೊಬ್ಬರಿಗೂ ಮತದಾನದ ಹಕ್ಕು ಅಮೂಲ್ಯವಾಗಿದ್ದು, ಹಿಂದೂ ಸಮಾಜದ ಸಣ್ಣ ಪುಟ್ಟ ಜಾತಿ-ಉಪಜಾತಿಗಳ ಬಾಂಧವರು ತಮ್ಮ ಮತ್ತು ತಮ್ಮ ಕುಟುಂಬದ ಎಲ್ಲ ಸದಸ್ಯರ ಹೆಸರುಗಳನ್ನು ಮತದಾರರ ಪಟ್ಟಿಯಲ್ಲಿ ಉಳಿಸಿಕೊಳ್ಳಲು, ತಪ್ಪದೆ ಎಸ್.ಐ.ಆರ್ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು. ಸಮಾಜದ ಪ್ರಮುಖರು ತಮ್ಮ ಕುಲಬಾಂಧವರಿಗೆ ಎಸ್.ಐ.ಆರ್ ಮಹತ್ವದ ಬಗ್ಗೆ ಜಾಗೃತಿ ಮೂಡಿಸಬೇಕು.ಹಿಂದೂ ಸಮಾಜದ ಕಲಾಲ್/ಖಾಟಿಕ್, ಮಡಿವಾಳ (ಅಗಸ), ಹಂದಿಗೊಲ್ಲ/ಹಂದಿಜೋಗಿ, ಭೋವಿ, ಬಂಜಾರಾ, ಗೊಂಧಳಿ, ಕೊರಮ, ಕೊರಚ, ಅಲೆಮಾರಿ ಬುಡಕಟ್ಟು ಜಾತಿಗಳು ಸೇರಿದಂತೆ ವಿವಿಧ ಜಾತಿ ಮತ್ತು ಉಪ ಜಾತಿಗಳ…

Read More

ಬರ ಪರಿಸ್ಥಿತಿ: ಸಚಿವರು, ಜಿಲ್ಲಾಧಿಕಾರಿಗಳು ಹಾಗೂ ಪೊಲೀಸರು 24 ಗಂಟೆಗಳ ಕಾಲ ಕೆಲಸ ಮಾಡಬೇಕು- ಸಿಎಂ ಡಿಕೆಶಿ

ಸಪ್ತಸಾಗರ ವಾರ್ತೆ,ಬೆಂಗಳೂರು, ಜುಲೈ 19:ಎಲ್ಲಾ ಯುವಕರ ಇಚ್ಛೆ ಹಾಗೂ ಮನವಿಯಂತೆ ಇಂದು ನಡೆಯಲಿರುವ ಫಿಫಾ ವಿಶ್ವಕಪ್ ಅಂತಿಮ ಪಂದ್ಯ ವೀಕ್ಷಣೆಗೆ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಿಗೆ ಬೆಳಗಿನ ಜಾವ 3.30 ರವರೆಗೆ ಕಾರ್ಯನಿರ್ವಹಿಸಲು ವಿಶೇಷ ಅನುಮತಿ ನೀಡಲಾಗಿದೆ. ಅಭಿಮಾನಿಗಳು ಫುಟ್ಬಾಲ್ ಅಭಿಮಾನಿಗಳು ಶಾಂತಿಯುತವಾಗಿ ವರ್ತಿಸಬೇಕು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಮನವಿ ಮಾಡಿದ್ದಾರೆ.ವಿಧಾನಸೌಧದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.ಪೋಲಿಸರು ಎಲ್ಲೆಡೆ ಕ್ಯಾಮರಾಗಳನ್ನು ಅಳವಡಿಸಿದ್ದಾರೆ. ಯಾರೇ ಗೆಲ್ಲಲಿ, ಯುವಜನರು ತಾಳ್ಮೆಯನ್ನು ಕಳೆದುಕೊಳ್ಳದೆ ಪುಟ್ಬಾಲ್ ಆಟವನ್ನು ವೀಕ್ಷಿಸಬೇಕು ಎಂದು…

Read More

ಮಗಳ ಜನ್ಮದಿನದಂದು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ ಬುಕ್-ಪೆನ್ ವಿತರಿಸಿದ ಎಸ್‌ಡಿಎಂಸಿ ಅಧ್ಯಕ್ಷ

ಸಪ್ತಸಾಗರ ವಾರ್ತೆ,ತಿಕೋಟಾ, ಜು.19: ಜನ್ಮದಿನವನ್ನು ಅದ್ಧೂರಿಯಾಗಿ ಆಚರಿಸುವ ಬದಲು ಸಮಾಜಮುಖಿ ಕಾರ್ಯದ ಮೂಲಕ ಅರ್ಥಪೂರ್ಣವಾಗಿ ಆಚರಿಸಿದ ಎಲ್.ಟಿ. 01 ಸರ್ಕಾರಿ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಸಿದ್ದಪ್ಪ ಬಾರಿಗಿಡದ ದಂಪತಿಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.ತಾಲ್ಲೂಕಿನ ಘೋಣಸಗಿ ಎಲ್.ಟಿ. 01 ಸರ್ಕಾರಿ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಸಿದ್ದಪ್ಪ ಬಾರಿಗಿಡದ ಹಾಗೂ ಅವರ ಪತ್ನಿ ಪವಿತ್ರಾ ಬಾರಿಗಿಡದ ತಮ್ಮ ಮಗಳು ಸಾನ್ವಿಯ ಜನ್ಮದಿನದ ಅಂಗವಾಗಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ನೋಟ್ ಬುಕ್ ಹಾಗೂ ಪೆನ್‌ಗಳನ್ನು ವಿತರಿಸಿದರು.ಇದೇ ಶಾಲೆಯ 2ನೇ ತರಗತಿಯಲ್ಲಿ ವ್ಯಾಸಂಗ…

Read More

ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಮಡಿವಾಳಯ್ಯ ಬಂಧನಕ್ಕೆ ಜಿಲ್ಲಾಧಿಕಾರಿ ಆದೇಶ

ಸಪ್ತಸಾಗರ ವಾರ್ತೆ ವಿಜಯಪುರ, ಜು.18:ಸಾರ್ವಜನಿಕ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವ ಚಟುವಟಿಕೆಗಳಲ್ಲಿ ನಿರಂತರವಾಗಿ ತೊಡಗಿದ್ದಾನೆ ಎಂಬ ಆರೋಪದ ಹಿನ್ನೆಲೆಯಲ್ಲಿ ವಿಜಯಪುರದ ಕುಖ್ಯಾತ ರೌಡಿ ಮಡಿವಾಳಯ್ಯ ಪಂಚಯ್ಯ ಹಿರೇಮಠ (38) ವಿರುದ್ಧ ಕರ್ನಾಟಕ ಗೂಂಡಾ ಕಾಯ್ದೆ ಅಡಿ ಬಂಧನ ಆದೇಶ ಹೊರಡಿಸಲಾಗಿದೆ.ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಆನಂದ್ ಕೆ. ಅವರು ಈ ಸಂಬಂಧ ಆದೇಶ ಹೊರಡಿಸಿದ್ದು, ವಿಜಯಪುರ ನಗರದ ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಇಂಡಿ ರಸ್ತೆ, ಬಂಬಳ ಅಗಸಿ, ಹಳೆ ಶಿವಶಕ್ತಿ ನಗರ…

Read More