ಸಂದೇಶ್ ನಾಗರಾಜ್ ಯಾವುದೇ ಕ್ಷೇತ್ರದಲ್ಲಿದ್ದರೂ ಯಶಸ್ಸು ಸಾಧಿಸುತ್ತಾರೆ: ಸಿ.ಎಂ.ಸಿದ್ದರಾಮಯ್ಯ

ಸಪ್ತಸಾಗರ ವಾರ್ತೆ, ಬೆಂಗಳೂರು, ಆ. 31: ಸಂದೇಶ್ ನಾಗರಾಜ್ ಸ್ನೇಹಮಯಿ ವ್ಯಕ್ತಿತ್ವದವರಾಗಿದ್ದು ಯಾವುದೇ ಕ್ಷೇತ್ರದಲ್ಲಿದ್ದರೂ ಯಶಸ್ಸು ಅವರಿಗೆ ಸಿಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.ವಸ್ತು ಪ್ರದರ್ಶನ ಮೈದಾನದಲ್ಲಿ ನಡೆದ ವಿಧಾನ‌ ಪರಿಷತ್ ಮಾಜಿ ಸದಸ್ಯರಾದ ಚಿತ್ರ‌ ನಿರ್ಮಾಪಕ ಸಂದೇಶ್ ನಾಗರಾಜ್ ಅವರ 80ನೇ ವರ್ಷದ ಜನ್ಮ ದಿನ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.80 ವರ್ಷ ಪೂರೈಸಿ ಉತ್ತಮ ಆರೋಗ್ಯ ಕಾಪಾಡಿಕೊಂಡಿದ್ದಾರೆ. ಇವರು ಶತಾಯುಷಿ ಮಾತ್ರವಲ್ಲ, ಅದಕ್ಕಿಂತ ಹೆಚ್ಚು ಕಾಲ ಆರೋಗ್ಯಕರವಾಗಿ ಜೀವಿಸಲಿ ಎಂದು ಹಾರೈಸಿದರು.ರಾಜಕೀಯವಾಗಿ ಇಬ್ಬರೂ ಬೇರೆ ಬೇರೆ…

Read More

ಪಿಪಿಪಿ ಮಾದರಿ ವೈದ್ಯಕೀಯ ಕಾಲೇಜು ಪ್ರಸ್ತಾವನೆ ಕೈಬಿಡಿ: ಹೋರಾಟ ಸಮಿತಿ ಒತ್ತಾಯ

ಸಪ್ತ ಸಾಗರ ವಾರ್ತೆ, ವಿಜಯಪುರ,ಆ. 31:ವಿಜಯಪುರದಲ್ಲಿ ಪಿಪಿಪಿ ಮಾದರಿ ವೈದ್ಯಕೀಯ ಕಾಲೇಜು ಸ್ಥಾಪನೆ ಕೈ ಬಿಟ್ಟು ಸಂಪೂರ್ಣವಾಗಿ ಸರ್ಕಾರವೇ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡಬೇಕು ಎಂದು ಹೋರಾಟ ಸಮಿತಿ ನಿಯೋಗ ಭಾನುವಾರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಅವರಿಗೆ ಮನವಿ ಸಲ್ಲಿಸಿತು.ಹೋರಾಟ ಸಮಿತಿ ಪದಾಧಿಕಾರಿಗಳ ನಿಯೋಗ ಜಿಲ್ಲಾ ಉಸ್ತುವಾರಿ ಸಚಿವ ಎಮ್.ಬಿ. ಪಾಟೀಲ ಅವರ ಬಳಿ ತೆರಳಿ ಪಿಪಿಪಿ ಮಾದರಿ ವೈದ್ಯಕೀಯ ಕಾಲೇಜು ಬೇಡ. ಸರ್ಕಾರಿ ವೈದ್ಯಕಿ ಕಾಲೇಜ್ ಸ್ಥಾಪಿಸಬೇಕು ಎಂದು ಕೇಳಿಕೊಳ್ಳಲಾಯಿತು.ಸರಕಾರಿ ವೈದ್ಯಕೀಯ ಕಾಲೇಜು…

Read More

ಓದುವ ಅಭಿಯಾನದಲ್ಲಿ ಒಂದು ಕೋಮಿನ ಹಬ್ಬಗಳ ಪರಿಚಯ ತೆಗೆದು ಹಾಕಿ: ಶಾಸಕ ಯತ್ನಾಳ ಒತ್ತಾಯ

ಸಪ್ತಸಾಗರ ವಾರ್ತೆ ವಿಜಯಪುರ, ಆ. 31: 21 ದಿನಗಳ ಓದುವ ಅಭಿಯಾನದ ಚಟುವಟಿಕೆಗಳ ಮಾರ್ಗದರ್ಶಿಯಲ್ಲಿರುವ ಒಂದು ಕೋಮಿನ ಹಬ್ಬದ ತಿಳಿವಳಿಕೆ ವಿಷಯವನ್ನು ಕೂಡಲೇ ತೆಗೆದು ಹಾಕಬೇಕು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಒತ್ತಾಯಿಸಿದ್ದಾರೆ.21 ದಿನಗಳ ಓದುವ ಅಭಿಯಾನದ ಚಟುವಟಿಕೆಗಳ ಮಾರ್ಗದರ್ಶಿಯಲ್ಲಿ ಒಂದು ಕೋಮಿನ ಹಬ್ಬವನ್ನು ತಿಳಿದುಕೊಳ್ಳಲು ನಿರ್ದೇಶಿಸಲಾಗಿದೆ. ಓದುವ ಅಭಿಯಾನವನ್ನು ಸರ್ಕಾರ ಪರಿಚಯಿಸಿದ್ದರೆ ಅದರಲ್ಲಿ ಪ್ರಚಲಿತ ವಿದ್ಯಮಾನ, ಕನ್ನಡ ಸಾಹಿತ್ಯ, ವಿಜ್ಞಾನ, ನಮ್ಮ ಸಂಸ್ಕೃತಿ, ಇತಿಹಾಸವನ್ನು ಓದಲು ಉತ್ತೇಜಿಸಬೇಕೇ ಹೊರತು ಯಾವುದೋ ಒಂದು ಕೋಮಿನ…

Read More

ನನಗೂ ಪಿಪಿಪಿ ಮಾದರಿ ಸರ್ಕಾರಿ ಮೆಡಿಕಲ್ ಕಾಲೇಜ್ ಬೇಡ: ಸಚಿವ ಎಂ.ಬಿ. ಪಾಟೀಲ

ಸಪ್ತಸಾಗರ ವಾರ್ತೆ ವಿಜಯಪುರ, ಆ. 31:ವಿಜಯಪುರ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜ್ ಬೇಕು ಎನ್ನುವ ಇರಾದೆ ನನ್ನದೂ ಇದೆ. ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜ್ ಬರುವುದನ್ನು ನಾನು ವಿರೋಧಿಸುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಸ್ಪಷ್ಟಪಡಿಸಿದರು.ಭಾನುವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ವಿಜಯಪುರ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜ್ ಬರುವುದಕ್ಕೆ ನಾನು ವಿರೋಧಿಯಾಗಿದ್ದೇನೆ ಎಂಬ ಅರ್ಥ ಬರುವಂತೆ ಕೆಲವರು ಬಿಂಬಿಸುತ್ತಿದ್ದಾರೆ. ಆದರೆ ಇದರಲ್ಲಿ ನನ್ನ ಯಾವುದೇ ಪಾತ್ರ ಇಲ್ಲ. ನಾನು ಕೂಡಾ ವಿಜಯಪುರ ಜಿಲ್ಲೆಗೆ…

Read More

ವಿಜಯಪುರ ತಾಲೂಕು ರೈತ ಸಂಘದ ನೂತನ ಪದಾಧಿಕಾರಿಗಳ ನೇಮಕ

ಸಪ್ತಸಾಗರ ವಾರ್ತೆ ವಿಜಯಪುರ, ಆ. 30: ತಾಲೂಕಿನ ಕರ್ನಾಟಕ ರಾಜ್ಯ ರೈತ ಸಂಘದ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.ಮಹಾದೇವಪ್ಪ ತೇಲಿ (ಅಧ್ಯಕ್ಷ), ಜಯಸಿಂಗ್ ರಜಪೂತ ( ಪ್ರಧಾನ ಕಾರ್ಯದರ್ಶಿ) ಪ್ರಭುಲಿಂಗ ಕಾರಜೋಳ ( ಯುವ ಘಟಕ ಅಧ್ಯಕ್ಷ) ಅವರನ್ನು ಬೆಳಗಾವಿ ವಿಭಾಗದ ಉಪಾಧ್ಯಕ್ಷ ಬಸನಗೌಡ ಧರ್ಮಗೊಂಡ ಹಾಗೂ ರಾಜ್ಯ ಯುವ ಘಟಕದ ಸಂಚಾಲಕ ಸಿದ್ಧನಗೌಡ ಪಾಟೀಲ ಅವರು ಎಲ್ಲ ಪದಾಧಿಕಾರಿಗಳ ಸಮಕ್ಷಮದಲ್ಲಿ ಒಮ್ಮತದಿಂದ ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Read More

ಆಯುಷ್ ಆಸ್ಪತ್ರೆಗಳಲ್ಲಿನ ಆರೋಗ್ಯ ಸೇವೆಯ ಗುಣಮಟ್ಟವನ್ನು ಹೆಚ್ಚಿಸಿ: ವೇಣುಗೋಪಾಲ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 30: ಆಯುಷ್ ಆಸ್ಪತ್ರೆಗಳಲ್ಲಿನ ಆರೋಗ್ಯ ಸೇವೆಯ ಗುಣಮಟ್ಟವನ್ನು ಹೆಚ್ಚಿಸಿ, ರಾಷ್ಟ್ರೀಯ ಗುಣಮಟ್ಟದ ಮಾನದಂಡಗಳಿಗೆ ಅನುಗುಣವಾಗಿ ಕಾರ್ಯ ನಿರ್ವಹಿಸಲು ಕ್ವಾಲಿಟಿ ಕೌನ್ಸಿಲ್ ಆಫ್ ಇಂಡಿಯಾ(QCI) ಮಾರ್ಗದರ್ಶನ ಮಾಡುತ್ತಿದೆ ಎಂದು ಕ್ಯೂಸಿಐ ದಕ್ಷಿಣ ಭಾರತ ಮುಖ್ಯಸ್ಥ ವೇಣುಗೋಪಾಲ ಸಿ ತಿಳಿಸಿದ್ದಾರೆ.ಶುಕ್ರವಾರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದಲ್ಲಿ ಕ್ಯೂಸಿಐ ಮತ್ತು ನ್ಯಾಷನಲ್ ಅಕ್ರಡಿಟೇಶನ್ ಬೋರ್ಡ್ ಫಾರ್ ಹಾಸ್ಪಿಟಲ್ಸ್ ಅಂಡ್ ಹೆಲ್ತ್ಕೇರ್ ಪ್ರೊವೈಡರ್ಸ್ (NABH) ಸಹಯೋಗದಲ್ಲಿ ಆಯೋಜಿಸಲಾಗಿದ್ದ ಗುಣವತ್ತಾ ಯಾತ್ರೆ…

Read More

ಸೆ.3ರಿಂದ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 30: 2025-26ನೇ ಸಾಲಿನ ವಿಜಯಪುರ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟದ ಪುರುಷ ಮತ್ತು ಮಹಿಳಾ ವಿಭಾಗದ ಸ್ಪರ್ಧೆಗಳನ್ನು ಸೆ.3 ಹಾಗೂ 4 ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.ಕ್ರೀಡಾಕೂಟದಲ್ಲಿ ಅಥ್ಲೆಟಿಕ್, ವಾಲಿಬಾಲ್, ಫುಟಬಾಲ್, ಖೋಖೋ, ಕಬಡ್ಡಿ, ಬಾಸ್ಕೆಟ್‍ಬಾಲ್, ಕುಸ್ತಿ, ಬ್ಯಾಡ್ಮಿಂಟನ್, ಹಾಕಿ, ಹ್ಯಾಂಡ್‍ಬಾಲ್, ಟೇಬಲ್ ಟೆನ್ನಿಸ್, ಥ್ರೋಬಾಲ್, ಬಾಲ್ ಬ್ಯಾಡ್ಮಿಂಟನ್ ಯೋಗಾಸನ ಕ್ರೀಡೆಗಳನ್ನು ಸಂಘಟಿಸಲಾಗುವುದು.ತಾಲೂಕಾ ಮಟ್ಟದ ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ-ದ್ವಿತೀಯ ಸ್ಥಾನ ಪಡೆದ ಕ್ರೀಡಾಪಟುಗಳು ಹಾಗೂ ಗುಂಪು ಕ್ರೀಡೆಗಳಲ್ಲಿ ಪ್ರಥಮ ಸ್ಥಾನ ಪಡೆದ…

Read More

ರೈತರಿಗೆ ಕುರಿ, ಆಡು ಹಾಗೂ ಕೋಳಿ ಸಾಕಾಣಿಕೆ ತರಬೇತಿ

ಸಪ್ತಸಾಗರ ವಾರ್ತೆ ವಿಜಯಪುರ, ಆ. 30: ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ ಜಿಲ್ಲೆಯ ರೈತ-ರೈತ ಮಹಿಳೆಯರಿಗೆ ಸೆ.8ರಿಂದ 13ರವರೆಗೆ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಕುರಿ-ಆಡು ಹಾಗೂ ಕೋಳಿ ಸಾಕಾಣಿಕ ತರಬೇತಿ ಆಯೋಜಿಸಲಾಗಿದೆ.6 ದಿನಗಳ ಕಾಲ ನಡೆಯುವ ಈ ತರಬೇತಿಯಲ್ಲಿ ಭಾಗವಹಿಸುವ ಆಸಕ್ತ ರೈತರು ಸೆ. 6ರೊಳಗೆ ನೋಂದಾಯಿಸಿಕೊಳ್ಳಬೇಕು. ನೋಂದಣಿ ಹಾಗೂ ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಕೃಷಿ ಅಧಿಕಾರಿ ಗೀತಾ ಭಜಂತ್ರಿ ಮೊ: 9986054750 ಅವರನ್ನು ಸಂಪರ್ಕಿಸುವಂತೆ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಉಪ…

Read More

ಕುರಿಗಾರರ ಮೇಲಿನ ದೌರ್ಜನ್ಯ ತಡೆಗೆ ಆಗ್ರಹ

ಸಪ್ತಸಾಗರ ವಾರ್ತೆ ವಿಜಯಪುರ, ಆ. 30:ಅರಣ್ಯ ಇಲಾಖೆಯಿಂದ ಕುರಿಗಾರರ ಮೇಲೆ ಆಗುತ್ತಿರುವ ಕಿರುಕುಳ, ದೌರ್ಜನ್ಯ ತಡೆಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಕುರಿಗಾರರ ಸಂಘದ ಅಧ್ಯಕ್ಷ ಬೀರಪ್ಪ ಜುಮನಾಳ ಜಿಲ್ಲಾಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.ಕೆಲವು ಕಡೆ ಅರಣ್ಯ ಪ್ರದೇಶಗಳಲ್ಲಿ ವಿನಾಕಾರಣ ಕುರಿಗಾರರ ಮೇಲೆ ದಬ್ಬಾಳಿಕೆ, ಬಲತ್ಕಾರ ನಡೆದಿರುವುದು ಕಂಡುಬರುತ್ತದೆ. ಆದ್ದರಿಂದ ಸಂಬಂಧ ಪಟ್ಟ ಅಧಿಕಾರಿಗಳು ತಮ್ಮ ಸಿಬ್ಬಂದಿಗಳಿಗೆ ಸರ್ಕಾರದ ನೀತಿ ನಿಯಮಗಳ ಹೊರತುಪಡಿಸಿ ನಮ್ಮ ಕುರಿಗಾರರೊಂದಿಗೆ ಸಂಘರ್ಷಕ್ಕೆ ಇಳಿಯಬಾರದು ಎಂದು ಸೂಕ್ತ ತಿಳುವಳಿಕೆ ನೀಡಬೇಕೆಂದು ಅವರು ಕೇಳಿಕೊಂಡಿದ್ದಾರೆ.ಕುರಿಗಾರರು ಅನಕ್ಷರಸ್ಥರು, ಮುಗ್ಧರು…

Read More

ಜಿಲ್ಲಾ ಗ್ರಂಥಾಲಯಗಳಿಗೆ ಪಠ್ಯಪುಸ್ತಕ ಒದಗಿಸಲು ಮನವಿ

ಸಪ್ತಸಾಗರ ವಾರ್ತೆ ವಿಜಯಪುರ,ಆ. 30:ನಗರ ಕೇಂದ್ರ ಗ್ರಂಥಾಲಯಕ್ಕೆ ತ್ವರಿತ ಗತಿಯಲ್ಲಿ ಪಠ್ಯಪುಸ್ತಕಗಳನ್ನು ಒದಗಿಸಬೇಕು ಎಂದು ಕರ್ನಾಟಕ ನವ ನಿರ್ಮಾಣ ವೇದಿಕೆ ಘಟಕ ಹಾಗೂ ವಿಜಯಪುರ ಜಿಲ್ಲಾ ಘಟಕ ಇವುಗಳ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಧಿಕಾರಿಗಳಿಗೆ ಶನಿವಾರ ಮನವಿ ಸಲ್ಲಿಸಲಾಯಿತು.ವೇದಿಕೆಯ ರಾಜ್ಯಾಧ್ಯಕ್ಷ ಶೇಷರಾವ ಮಾನೆ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕೆ. ಆನಂದ ಅವರಿಗೆ ಮನವಿ ಸಲ್ಲಿಸಲಾಯಿತು.ಗೌರವ ಅಧ್ಯಕ್ಷ, ನ್ಯಾಯವಾದಿ ಎಂ.ಎಂ. ಖಲಾಸಿ ಮಾತನಾಡಿ, ಪ್ರಸಕ್ತ ಸಾಲಿಗಾಗಿ ಕರ್ನಾಟಕ ಸರಕಾರವು ಪುಸ್ತಕ ಖರೀದಿಗಾಗಿ ಬಿಡುಗಡೆ ಮಾಡಿದ ಅನುದಾನ ಸದ್ಭಳಕೆಯಾಗದೆ ಜಿಲ್ಲೆಯ ಸಮಸ್ತ…

Read More