ಡೋಣಿ ನದಿಗೆ ಜಿಲ್ಲಾಧಿಕಾರಿ ಭೇಟಿ, ಪ್ರವಾಹ ತಡೆಗೆ ಕ್ರಮಗಳ ಕುರಿತು ಪರಿಶೀಲನೆ

ಸಪ್ತಸಾಗರ ವಾರ್ತೆ ವಿಜಯಪುರ, ಆ. 30ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಶನಿವಾರ ಜಿಲ್ಲೆಯ ಸಾರವಾಡ ಬಳಿ ಡೋಣಿ ನದಿಗೆ ಭೇಟಿ ನೀಡಿ ಪರಿಶೀಲಿಸಿದರು.ಡೋಣಿ ನದಿಯ ಪ್ರವಾಹ ತಡೆಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಡಾ. ಆನಂದ ಅವರು ಜಿಲ್ಲಾ ಪಂಚಾಯತಿಯ‌ ಮುಖ್ಯ‌ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಅವರೊಂದಿಗೆ ಜಂಟಿಯಾಗಿ ಜಿಲ್ಲೆಯ ಸಾರವಾಡದ ಹತ್ತಿರದ ಡೋಣಿ ನದಿಯ ಸೇತುವೆಯ ಪ್ರದೇಶಕ್ಕೆ ಶನಿವಾರ ಭೇಟಿ ನೀಡಿ ಪ್ರವಾಹ ತಡೆಗೆ ಅನುಸರಿಸಬೇಕಾದ ಕ್ರಮಗಳ…

Read More

ಅವೈಜ್ಞಾನಿಕ ಮೀಸಲಾತಿ ಕೈಬಿಡಿ, ಎಲ್ಲರಿಗೂ ಸಮಾನ ಮೀಸಲಾತಿ ನೀಡಿ

ಸಪ್ತಸಾಗರ ವಾರ್ತೆ ವಿಜಯಪುರ, ಆ. 30 :ಒಳಮೀಸಲಾತಿ ವರ್ಗೀಕರಣ ಅವೈಜ್ಞಾನಿಕವಾಗಿದೆ. ಅವೈಜ್ಞಾನಿಕ ಒಳಮೀಸಲಾತಿ ರದ್ದುಗೊಳಿಸಿ, ಕಲ್ಪಿಸುವುದಾದರೆ ಎಲ್ಲರಿಗೂ ಸಮಾನವಾಗಿ ಮೀಸಲಾತಿ ನೀಡಿ ಎಂದು ಬಂಜಾರಾ, ಕೊರಚ, ಕೊರಮ, ಭೋವಿ ಸಮುದಾಯದ ಮುಖಂಡರು ಸರ್ಕಾರಕ್ಕೆ ಒತ್ತಾಯಿಸಿದರು.ವಿವಿಧ ಸಮಾಜ ಮುಖಂಡರು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಸರ್ಕಾರಕ್ಕೆ ಒತ್ತಾಯಿಸಿದರು.ಈ ಎಲ್ಲ ಸಂದೇಶವನ್ನು ಸರ್ಕಾರಕ್ಕೆ ತಲುಪಿಸುವ ನಿಟ್ಟಿನಲ್ಲಿ ಸೆಪ್ಟೆಂಬರ್ ೧೦ ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್ ಹೋರಾಟ ನಡೆಸಲು ನಿರ್ಧರಿಸಲಾಗಿದೆ ಎಂಬ ಮಾಹಿತಿಯನ್ನು ತಿಳಿಸಿದರು.ಮಾಜಿ ಶಾಸಕ ಮನೋಹರ ಐನಾಪೂರ, ಸ್ಪೃಶ್ಯ, ಅಸ್ಪೃಶ್ಯ ಎಂಬ…

Read More

ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜ್ ಸ್ಥಾಪಿಸಲು ಸಚಿವ ಶಿವಾನಂದ ಪಾಟೀಲರಿಗೆ ಮನವಿ ಸಲ್ಲಿಕೆ

ಸಪ್ತಸಾಗರ ವಾರ್ತೆ ವಿಜಯಪುರ, ಆ. 30:ವಿಜಯಪುರ ನಗರದಲ್ಲಿ ಪಿಪಿಪಿ ಮಾದರಿ ವೈದ್ಯಕೀಯ ಕಾಲೇಜು ಬೇಡ. ಸರ್ಕಾರಿ ವೈದ್ಯಕೀಯ ಕಾಲೇಜ್ ಸ್ಥಾಪಿಸಬೇಕು ಎಂದು ಹೋರಾಟ ಸಮಿತಿ ಪದಾಧಿಕಾರಿಗಳು ಶನಿವಾರ ಜವಳಿ, ಕಬ್ಬು, ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರಿಗೆ ಮನವಿ ಸಲ್ಲಿಸಿದರು.ಸರಕಾರದಿಂದ ಉದ್ದೇಶಿತ ಪಿಪಿಪಿ ಮಾದರಿಯಡಿ ಖಾಸಗಿ ಸಹಭಾಗಿತ್ವದಡಿ ವೈದ್ಯಕೀಯ ಕಾಲೇಜು ಆರಂಭಿಸುವ ಹುನ್ನಾರವನ್ನು ಕೈ ಬಿಡಬೇಕು ಎಂದು ಮನವಿ ಸಲ್ಲಿಸಲಾಯಿತು. ಜೊತೆಗೆ ಸರಕಾರಿ ವೈದ್ಯಕೀಯ ಕಾಲೇಜು ಆರಂಭಿಸಲು ಮುಖ್ಯಂತ್ರಿ ಮೇಲೆ…

Read More

ಶೀಘ್ರದಲ್ಲೇ ಹುಬ್ಬಳ್ಳಿಯಲ್ಲಿರಾಜ್ಯ ಮಟ್ಟದ ಅಹಿಂದ ವಿಚಾರ ಸಂಕಿರಣ:ಸೆ. 2ರಂದು ಪೂರ್ವಭಾವಿ ಸಭೆ

ಸಪ್ತಸಾಗರ ವಾರ್ತೆ ವಿಜಯಪುರ, ಆ. 30: ಶೀಘ್ರದಲ್ಲೇ ಹುಬ್ಬಳ್ಳಿಯಲ್ಲಿ. ನಡೆಯಲಿರುವ ರಾಜ್ಯ ಮಟ್ಟದ ವಿಚಾರ ಸಂಕಿರಣದ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯ ಪೂರ್ವಭಾವಿ ಸಭೆ ಸೆ. 2ರಂದು ಬೆಳಗ್ಗೆ 11 ಗಂಟೆಗೆ ಆಲಮಟ್ಟಿ ಸರ್ಕ್ಯೂಟ್ ಹೌಸ್ ನಲ್ಲಿ ನಡೆಯಲಿದೆ.ಅಹಿಂದ ಶುರುವಿನಲ್ಲಿ ದುಡಿದವರು, ಜೊತೆಗೆ ನಡೆದವರು ಮತ್ತು ಈಗ ಅದರ ಆಶಯಗಳನ್ನು ಹೊತ್ತು ಸಾಗುತ್ತಿರುವವರು ಈ ಸಭೆಯಲ್ಲಿ ತಪ್ಪದೇ ಭಾಗವಹಿಸಬೇಕು ಎಂದು ಅಹಿಂದ ಮುಖಂಡ ಸೋಮನಾಥ ಕಳ್ಳಿಮನಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಕುರಿತು ವ್ಯವಸ್ಥಿತವಾಗಿ ಸಮೀಕ್ಷೆ ಕಾರ್ಯ ಕೈಗೊಳ್ಳಲು ಜಿಲ್ಲಾಧಿಕಾರಿ ಡಾ.ಆನಂದ ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ.29:ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಕುರಿತು ಸಮೀಕ್ಷೆ ಕೈಗೊಳ್ಳಲು ಈಗಾಗಲೇ ಜಿಲ್ಲೆಯಲ್ಲಿ ಮೊದಲನೆ ಹಂತವಾಗಿ ಜಿಯೋ ಟ್ಯಾಗಿಂಗ್ ಕಾರ್ಯ ಪ್ರಗತಿಯಲ್ಲಿದ್ದು, ಎರಡನೇ ಹಂತದಲ್ಲಿ ಸೆಪ್ಟಂಬರ್ 20 ರಿಂದ ಅಕ್ಟೋಬರ್ 7 ರವರೆಗೆ ಸಮೀಕ್ಷಾ ಕಾರ್ಯ ನಡೆಯಲಿದೆ. ಸಂಬಂಧಿಸಿದ ಅಧಿಕಾರಿಗಳು ಸರ್ವೇ ಕಾರ್ಯಕ್ಕೆ ಗಣತಿದಾರರನ್ನು ನೇಮಿಸಿ ಪಟ್ಟಿಯನ್ನು ಅಂತಿಮಗೊಳಿಸುವಂತೆ ಜಿಲ್ಲಾಧಿಕಾರಿ ಡಾ. ಆನಂದ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ವಿವಿಧ ಅಧಿಕಾರಿಗಳೊಂದಿಗೆ…

Read More

ಹಾಕಿ ಮಾಂತ್ರಿಕ ಮೇಜರ್ ಧ್ಯಾನಚಂದ ಅವರ ಕ್ರೀಡಾ ಸಾಧನೆ ಎಲ್ಲರಿಗೂ ಸ್ಪೂರ್ತಿ:ಕೋರಿ

ಸಪ್ತಸಾಗರ ವಾರ್ತೆ ವಿಜಯಪುರ, ಆ. 29: ಹಾಕಿ ಮಾಂತ್ರಿಕ ಮೇಜರ್ ಧ್ಯಾನಚಂದ ಅವರ ಕ್ರೀಡಾ ಸಾಧನೆ ಎಲ್ಲರಿಗೂ ಸ್ಪೂರ್ತಿಯಾಗಿದೆ ಎಂದು ಬಿ.ಎಲ್.ಡಿ.ಇ. ಸಂಸ್ಥೆಯ ಕ್ರೀಡಾ ವಿಭಾಗದ ನಿರ್ದೇಶಕ ಎಸ್.ಎಸ್. ಕೋರಿ ಹೇಳಿದ್ದಾರೆ.ಶುಕ್ರವಾರ ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ ಬಿ.ಎಲ್.ಡಿ.ಇ. ಸಂಸ್ಥೆಯ ಶ್ರೀ. ಬಿ. ಎಂ. ಪಾಟೀಲ ಪಬ್ಲಿಕ್ ಸಿ.ಬಿ.ಎಸ್.ಇ ಶಾಲೆಯ ವತಿಯಿಂದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜಿನ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಮಧುಮೇಹ ಜಾಗೃತಿ ಜಾಥಾದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಕ್ರೀಡೆ ಮತ್ತು ಆರೋಗ್ಯ ಒಂದಕ್ಕೊಂದು ಪೂರಕವಾಗಿವೆ….

Read More

ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಕ್ರೀಡೆಗಳು ಪೂರಕ:ಜಯರಾಜ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 29: ಕ್ರೀಡೆಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಮತ್ತು ಶೈಕ್ಷಣಿಕ ಜೀವನದ ಸಮೃದ್ಧಿಗೆ ಪೂರಕವಾಗಿವೆ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಹೇಳಿದ್ದಾರೆ. ಶುಕ್ರವಾರ ಡೀಮ್ಡ್ ವಿಶ್ವವಿದ್ಯಾಲಯದ ಒಳಾಂಗಣ ಕ್ರೀಡಾಂಗಣದಲ್ಲಿ ವಿಶ್ವಪ್ರಸಿದ್ಧ ಹಾಕಿ ಕ್ರೀಡಾಪಟು ಮೇಜರ್ ಧ್ಯಾನಚಂದ ಅವರ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆಯಲ್ಲಿ ಮಾತನಾಡಿದರು.ಇದೇ ವೇಳೆ ವಿದ್ಯಾರ್ಥಿಗಳಿಗಾಗಿ ಬ್ಯಾಸ್ಕೆಟ್‌ಬಾಲ್ ಮತ್ತು ಚೆಸ್ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಸುಭಗಾ ಅವರು ಫಿಟ್ ಇಂಡಿಯಾ…

Read More

ಏಕರೂಪ ಮಾಸಾಶನ ಪದ್ಧತಿ ಜಾರಿಗೆ ಆಗ್ರಹಿಸಿ ಹಿರಿಯ ಪತ್ರಕರ್ತರ ಸಮಾವೇಶ ಕೇಂದ್ರ ಸರ್ಕಾರಕ್ಕೆ ಒತ್ತಾಯ

ಸಪ್ತಸಾಗರ ವಾರ್ತೆ ತಿರುವನಂತಪುರಂ, ಆ. 29:ದೇಶದ ಎಲ್ಲಾ ರಾಜ್ಯಗಳ ಹಿರಿಯ ನಿವೃತ್ತ ಪತ್ರಕರ್ತರಿಗೆ ಏಕರೂಪದ ಮಾಸಾಶನ ಪದ್ಧತಿಯನ್ನು ರೂಪಿಸಬೇಕೆಂದು ಕೇಂದ್ರ ಸರ್ಕಾರವನ್ನು ರಾಷ್ಟ್ರೀಯ ಹಿರಿಯ ಪತ್ರಕರ್ತರ ಒಕ್ಕೂಟವು ಸಮ್ಮೇಳನದಲ್ಲಿ ಒತ್ತಾಯಿಸಿತು.ಆಗಸ್ಟ್ 19, 20 ಹಾಗೂ 21ರಂದು ಕೇರಳ ರಾಜಧಾನಿ ತಿರುವನಂತನಪುರಂ ವಿ ಪ್ರತಾಪ ಚಂದ್ರನ್ ನಗರದಲ್ಲಿ ನಡೆದ ಹಿರಿಯ ಪತ್ರಕರ್ತರ ಪ್ರಪ್ರಥಮ ರಾಷ್ಟ್ರೀಯ ಸಮ್ಮೇಳನದಲ್ಲಿ ಒಕ್ಕೊರಲಿನ ನಿರ್ಣಯ ಅಂಗೀಕರಿಸಲಾಯಿತು.ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಕೇರಳ ಮುಖ್ಯಮಂತ್ರಿ ಪೀಣರಾಯಿ ವಿಜಯನ್, ಅತಿ ಹೆಚ್ಚು ಹಿರಿಯ ಪತ್ರಕರ್ತರಿಗೆ ಮಾಶಾಸನ ನೀಡುತ್ತಿರುವ ರಾಜ್ಯ…

Read More

ಶ್ರೀ ಕ್ಷೇತ್ರ ಧರ್ಮಸ್ಥಳ ವಿವಾದ: ಸಿಎಂ ಕ್ಷಮೆಯಾಚನೆಗೆ ಆಗ್ರಹ

ಸಪ್ತ ಸಾಗರ ವಾರ್ತೆ ವಿಜಯಪುರ, ಆ. 29:ಶ್ರೀ ಕ್ಷೇತ್ರ ಧರ್ಮಸ್ಥಳದ ಘನತೆ ಗೌರವಕ್ಕೆ ಮಸಿ ಬಳಿಯುವ ಮೂಲಕ ಹಿಂದೂ ಸಮಾಜಕ್ಕೆ ಅವಮಾನ ಮಾಡುವ ಕಿಡಿಗೇಡಿಗಳ ಷಡ್ಯಂತ್ರವನ್ನು ತಡೆಗಟ್ಟುವಲ್ಲಿ ರಾಜ್ಯ ಸರ್ಕಾರ ವಿಫಲವಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ಸಾರ್ವಜನಿಕರ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ನಗರ ಅಧ್ಯಕ್ಷ ಸಂದೀಪ ಪಾಟೀಲ ಒತ್ತಾಯಿಸಿದ್ದಾರೆ.ಶ್ರೀ ಕ್ಷೇತ್ರ ಧರ್ಮಸ್ಥಳವು ಕೇವಲ ಕರ್ನಾಟಕವಲ್ಲದೇ ದೇಶಾದ್ಯಂತ ಕೋಟ್ಯಂತರ ಭಕ್ತಾಧಿಗಳನ್ನು ಹೊಂದಿರುತ್ತದೆ. ಈ ಕ್ಷೇತ್ರಕ್ಕೆ ದಿನನಿತ್ಯ ಲಕ್ಷಾಂತರ ಮಂದಿ ಭಕ್ತಾಧಿಗಳು ಆಗಮಿಸುತ್ತಾರೆ. ಹಿಂದೂಗಳಿಗೆ ಇದು ಪ್ರಮುಖ…

Read More

ಧರ್ಮಸ್ಥಳ ವಿವಾದ :ಹಿಂದೂಗಳ ಭಾವನೆ ಕೆರಳಿಸುವ ಕೆಲಸ: ಬಸನಗೌಡ ಟೀಕೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 29 :ಸುಕ್ಷೇತ್ರ ಧರ್ಮಸ್ಥಳ ವಿಷಯದಲ್ಲಿ ವಿನಾಕಾರಣ ಗೊಂದಲ ಸೃಷ್ಟಿಸಿ ಹಿಂದೂಗಳ ಭಾವನೆಯನ್ನು ಕಾಂಗ್ರೆಸ್ ಸರ್ಕಾರ ಕೆರಳಿಸುವ ಕೆಲಸ ಮಾಡಿದೆ. ಇದೊಂದು ಅನೈತಿಕ ಸರ್ಕಾರ. ಈ ಸರ್ಕಾರ ಕಿತ್ತೊಗೆಯಲು ಜನರಲ್ಲಿ ಜಾಗೃತಿ ಮೂಡಿಸಲು ಸಂಘಟಿತ ಹೋರಾಟ ನಡೆಸಲಾಗುವುದು. ಸುಕ್ಷೇತ್ರ ಧರ್ಮಸ್ಥಳ ವಿಷಯದಲ್ಲಿ ಕೈ ಹಾಕಿರುವ ಕಾಂಗ್ರೆಸ್ ಉಳಿಗಾಲ ಇಲ್ಲ ಎಂದು ಜೆ.ಡಿ.ಎಸ್. ಜಿಲ್ಲಾಧ್ಯಕ್ಷ ಬಸನಗೌಡ ಮಾಡಗಿ (ತುಂಬಗಿ) ಹೇಳಿದರು.ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಾಲಯ ಹಾಗೂ ಭಕ್ತಿ ಸ್ಥಳದ ಮೇಲೆ ರಾಜಕಾರಣ ಸಲ್ಲ. ಜೆಡಿಎಸ್…

Read More