ಸಾರವಾಡ ಗ್ರಾಮಕ್ಕೆ ನೂತನ ಎರಡು ಬಸ್ಸುಗಳ ಕಾರ್ಯಾರಂಭ

ಸಪ್ತಸಾಗರ ವಾರ್ತೆ ವಿಜಯಪುರ, ಆ. 27: ಬಬಲೇಶ್ವರ- ವಿಜಯಪುರ ಮತ್ತು ವಿಜಯಪುರ- ಬಬಲೇಶ್ವರ ಮಧ್ಯೆ ಸಾಮಾನ್ಯ ಸಾರಿಗೆ ಎರಡು ಬಸ್ಸುಗಳ ಸೇವೆ ಮಂಗಳವಾರದಿಂದ ಪ್ರಾರಂಭವಾಗಿದೆ.ಸಾರವಾಡ ಗ್ರಾಮಸ್ಥರ ಬೇಡಿಕೆ ಹಿನ್ನೆಲೆಯಲ್ಲಿ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೀ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ‌ ಅವರು ಈ ಬಸ್ ಸೇವೆ ಪ್ರಾರಂಭಿಸುವಂತೆ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ‌ ಈ ಬಸ್ ಸೇವೆ ಪ್ರಾರಂಭಿಸಿದೆ.ಮಂಗಳವಾರ ಬಬಲೇಶ್ವರ ಬಸ್ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಾಳೆ…

Read More

ವಿಜಯಪುರದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಎಐಡಿಎಸ್ಒ ವಿರೋಧ

ಸಪ್ತಸಾಗರ ವಾರ್ತೆ ವಿಜಯಪುರ,ಆ. 26:ನಗರದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ವೈದ್ಯಕೀಯ ಕಾಲೇಜು ಪಾಪನಿಗೆ ಸರ್ಕಾರ ನಿರ್ಧರಿಸಿರುವುದನ್ನು ಎಐಡಿಎಸ್ಓ ತೀವ್ರವಾಗಿ ಖಂಡಿಸುತ್ತದೆ.ಕಳೆದ 15 ವರ್ಷಗಳಿಂದ AIDSO ವಿದ್ಯಾರ್ಥಿ ಸಂಘಟನೆ ವತಿಯಿಂದ ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಯಾಗಬೇಕೆಂದು ಹೋರಾಟ ನಡೆಸಿಕೊಂಡು ಬಂದಿದೆ., ಜನರ ಹೋರಾಟದ ಫಲವಾಗಿ ಇಂದು ಜಿಲ್ಲೆಯ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡಲು ಸರ್ಕಾರ ನಿರ್ಧರಿಸಿದ್ದು ಸ್ವಾಗತಾರ್ಹ. ಆದರೆ ಇದರಲ್ಲಿ ಖಾಸಗಿ ಸಹಭಾಗಿತ್ವ AIDSO ಸಂಘಟನೆಯು ಒಪ್ಪುವುದಿಲ್ಲ. ಈಗಾಗಲೇ ಜಿಲ್ಲೆಯಲ್ಲಿ ಖಾಸಗಿ ಮೆಡಿಕಲ್ ಕಾಲೇಜುಗಳಿದ್ದು,…

Read More

ನಶಾ ಮುಕ್ತ ಭಾರತ ಅಭಿಯಾನ: ಬಂಡೀಪುರದಿಂದ ಬೀದರ್ ವರೆಗೆ 3 ದಿನಗಳ ಬೈಕ್ ಜಾಥಾ

ಸಪ್ತ ಸಾಗರ ವಾರ್ತೆ, ಬೆಂಗಳೂರು, ಆ. 26:ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯವು ಆಚರಿಸುತ್ತಿರುವ ನಶಾ ಮುಕ್ತ ಭಾರತ ಅಭಿಯಾನದ ಅಂಗವಾಗಿ, 2025ರ ಆಗಸ್ಟ್ 29 ರಿಂದ 31ರವರೆಗೆ ಬಂಡೀಪುರದಿಂದ ಬೀದರ ವರೆಗೆ 3 ದಿನಗಳ ಬೈಕ್ ಜಾಥಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮದ್ಯಪಾನ ಮತ್ತು ಮಾದಕ ವಸ್ತುಗಳ ದುರುಪಯೋಗದ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಪ್ರೇರಣೆ ನೀಡುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ರಾಜ್ಯ ಸರ್ಕಾರದ ಯುವಸಬಲೀಕರಣ…

Read More

ಗಣೇಶ ಚತುರ್ಥಿ: ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಆನಂದ ಕೆ ಆದೇಶ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 26:ಗೌರಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ಕಾಲಕ್ಕೆ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಎಲ್ಲ ತರಹದ ಮದ್ಯ ಮಾರಾಟ, ಸಂಗ್ರಹಣೆ ಹಾಗೂ ಹಂಚಿಕೆಯನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ.ಆನಂದ ಕೆ ಅವರು ಆದೇಶ ಹೊರಡಿಸಿದ್ದಾರೆ.ಗಣೇಶ ಮೂರ್ತಿ ಪ್ರತಿಷ್ಠಾಪನೆ ದಿನವಾದ ಆಗಸ್ಟ್ 27ರ ಬೆಳಿಗ್ಗೆ 6 ರಿಂದ ಆಗಸ್ಟ್ 28ರ ಬೆಳಿಗ್ಗೆ 6 ಗಂಟೆವರೆಗೆ ಹಾಗೂ 5ನೇ ದಿನದ ಗಣೇಶ ಮೂರ್ತಿ ವಿಸರ್ಜನೆ ಪ್ರಯುಕ್ತ ಆಗಸ್ಟ್ 31ರ ಬೆಳಿಗ್ಗೆ…

Read More

ಗುರುವೆಂದರೆ ಜ್ಞಾನದ ಆತ್ಮನಿದ್ದಂತೆ-ಉಪಮನ್ಯು ಶಿವಾಚಾರ್ಯ ಶ್ರೀಗಳು

ಸಪ್ತಸಾಗರ ವಾರ್ತೆ, ವಿಜಯಪುರ, ಆ. 26:ಅನಾದಿ ಕಾಲದಿಂದಲೂ ಗುರುವನ್ನು ಗೌರವಿಸುವ ಶ್ರೇಷ್ಠ ಸಂಸ್ಕೃತಿ, ಪರಂಪರೆ ಭಾರತದಲ್ಲಿದೆ.ಗುರುವೆಂದರೆ ಜ್ಞಾನದ ಆತ್ಮನಿದ್ದಂತೆ ಎಂದು ಬೀದರ ಜಿಲ್ಲೆಯ ಐನಾಪುರ ಹಿರೇಮಠದ ಷ ಬ್ರ ಉಪಮನ್ಯು ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.ಸೋಮವಾರದಂದು ತಾಲೂಕಿನ ನಾಗಠಾಣ ಗ್ರಾಮದ ಉದಯಲಿಂಗೇಶ್ವರ ಮಠದಲ್ಲಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮಳ ಪುರಾಣ ಮಹಾಮಂಗಲ ಹಾಗೂ ಧರ್ಮಸಭೆಯನ್ನು ಉದ್ಧೇಶಿಸಿ ಅವರು ಮಾತನಾಡಿದರು.ಗುರು ಪರಂಪರೆಗೆ ನಮ್ಮ ನಾಡಿನಲ್ಲಿ ದೊಡ್ಡ ಇತಿಹಾಸವೇ ಇದೆ. ಗುರು ಎಂದರೆ ಜನರನ್ನು ಕತ್ತಲೆಯಿಂದ ಬೆಳಕಿನೆಡೆಗೆ ಕರೆದೊಯ್ಯುವ ರಾಜಮಾರ್ಗ ಎಂದು ಹೇಳಿದರು.ಅಗರಖೇಡ…

Read More

ಬೆಳೆಹಾನಿ ಸಮೀಕ್ಷೆಯಲ್ಲಿ ಅರ್ಹ ರೈತರು ಬಿಟ್ಟುಹೋಗದಂತೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 26:ಮಳೆಯಿಂದ ಹಾನಿಗೊಳಗಾದ ಬೆಳೆ ಹಾನಿಯ ಜಂಟಿ ಸಮೀಕ್ಷೆ ಈಗಾಗಲೇ ಕೈಗೊಳ್ಳಲಾಗಿದ್ದು, ಎರಡು ದಿನಗಳಲ್ಲಿ ಬೆಳೆ ಹಾನಿಯ ಬಗ್ಗೆ ಪೂರ್ಣ ಪ್ರಮಾಣದ ಸಮಗ್ರ ಸಮೀಕ್ಷೆ ವರದಿಯನ್ನು ಸಲ್ಲಿಸುವಂತೆಯೂ. ಈ ಸಮೀಕ್ಷೆಯಲ್ಲಿ ಯಾವೊಬ್ಬ ಅರ್ಹ ರೈತರು ಹೊರ ಉಳಿಯದಂತೆ ಕಾಳಜಿವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಮಂಗಳವಾರ ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯ ಕೇಸ್ವಾನ್ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಕುರಿತ ಸಭೆ ನಡೆಸಿ, ಮಾತನಾಡಿದ ಅವರು, ಬೆಳೆ…

Read More

ಆ. 29ರಂದು ಮಧುಮೇಹ ಜಾಗೃತಿ ಜಾಥಾ

ಸಪ್ತಸಾಗರ ವಾರ್ತೆ ವಿಜಯಪುರ, ಆ. 26: ನಗರದ ಪ್ರತಿಷ್ಠಿತ ಬಿ.ಎಲ್.ಡಿ.‌ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ್ ಪಬ್ಲಿಕ್ ಶಾಲೆಯ ವತಿಯಿಂದ ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ ಆ. 29 ರಂದು ಶುಕ್ರವಾರ ಮಧುಮೇಹ ಜಾಗೃತಿ ಜಾಥಾ ನಡೆಯಲಿದೆ.ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಸಹಯೋಗದಲ್ಲಿ ಈ ಜಾಗೃತಿ ಜಾಥಾ ನಡೆಯಲಿದೆ. ಸಕ್ಕರೆ ಕಾಯಿಲೆ ಹಲವು ರೋಗಗಳ ತವರಾಗಿದ್ದು, ಚಿಕ್ಕ ವಯಸ್ಸಿನಲ್ಲಿ ಅನೇಕ ಜನ ಹೃದಯಾಘಾತದಿಂದ ಸಾವನ್ನಪ್ಪುತ್ತಿದ್ದಾರೆ. ಅವರೆಲ್ಲರಲ್ಲಿ ಆರೋಗ್ಯದ ಜಾಗೃತಿಯನ್ನು ಉಂಟು ಮಾಡಲು ಈ…

Read More

ಕನಕ ಪಬ್ಲಿಕ್ ಶಾಲೆಯಲ್ಲಿ “ಮಾತೃ ಸಂಗಮ” ಕಾರ್ಯಕ್ರಮ

ಸಪ್ತಸಾಗರ ವಾರ್ತೆ ವಿಜಯಪುರ, ಆ. 26:ತಾನು ಕಷ್ಟಪಟ್ಟು ತನ್ನ ಮಕ್ಕಳು ಸುಖವಾಗಿ ಬಾಳಲಿ ಎಂದು ಮಕ್ಕಳಿಗೋಸ್ಕರ ಜೀವನವನ್ನು ಮುಡುಪಾಗಿಟ್ಟ ಈ ಜಗತ್ತಿನ ಶ್ರೇಷ್ಠ ತ್ಯಾಗ ಜೀವಿ ಅವ್ವ, ಅವ್ವನ ವ್ಯಕ್ತಿತ್ವವನ್ನು ವರ್ಣಿಸಲು ಪದಗಳೇ ಸಾಲದು, ನಮ್ಮ ಕಣ್ಣು ಮುಂದೆ ಕಾಣುವ ನಿಜವಾದ ದೇವತೆ ತಾಯಿ ಎಂದು ವಾಗ್ಮಿ ಸಾಹಿತಿ, ಅಶೋಕ ಹಂಚಲಿ ಹೇಳಿದರು.ಇಂದು ನಗರದ ಕರ್ನಾಟಕ ಕನಕದಾಸ ಶಿಕ್ಷಣ ಸಂಸ್ಥೆಯ ಕನಕ ಪೂರ್ವ ಪ್ರಾಥಮಿಕ ಪಬ್ಲಿಕ್ ಶಾಲೆ ಹಾಗೂ ಕನಕ ನವೋದಯ ಕೋಚಿಂಗ್ ಸೆಂಟರ್ ನಲ್ಲಿ ಹಮ್ಮಿಕೊಂಡ…

Read More

ಜೀವನದಲ್ಲಿ ಗುರಿ ಮುಖ್ಯ: ಸಾಧನೆಗೆ ಪರಿಶ್ರಮ ಅಗತ್ಯ-ಶಂಕರಗೌಡ ಸೋಮನಾಳ

ಸಪ್ತಸಾಗರ ವಾರ್ತೆ, ವಿಜಯಪುರ,ಆ.25:ಜೀವನದಲ್ಲಿ ಗುರಿ ಮುಖ್ಯ. ನಿಗದಿಪಡಿಸಿಕೊಂಡ ಗುರಿಯೊಂದಿಗೆ ತಮ್ಮ ಕನಸನ್ನು ನನಸಾಗಿಸಿಕೊಳ್ಳಲು ಪರಿಶ್ರಮ ಅಗತ್ಯ ಎಂದು ಮಹಿಳಾ ವಿಶ್ವ ವಿದ್ಯಾಲಯದ ರಜಿಸ್ಟ್ರಾರ್ ಶಂಕರಗೌಡ ಸೋಮನಾಳ ಅವರು ಹೇಳಿದರು.ಸೋಮವಾರ ಪರ್ಲ್ಸ್ ಕ್ಯಾಂಪಸ್‌ನಲ್ಲಿರುವಸರಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಇವರ ಸಹಯೋಗದೊಂದಿಗೆ ಪರಿಶಿಷ್ಟ ಪಂಗಡ ಉಪಯೋಜನೆಯಡಿಶಾಲಾ ವಿದ್ಯಾರ್ಥಿನಿಯರಿಗೆ ಆರು ತಿಂಗಳ ಕಾಲ ನೃತ್ಯಕಲಾ ತರಬೇತಿ ಶಿಬಿರದ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು.ಎಲ್ಲರಲ್ಲೂ ಅಗಾಧವಾದ…

Read More

ಮನೆ ಮನೆಗೂ ಶ್ರೀನಿವಾಸ ಕಲ್ಯಾಣ ಕಾರ್ಯಕ್ರಮಕ್ಕೆ ಚಾಲನೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ.25:ನಗರದ ಪ್ರಸಿದ್ಧ ಕಾಮಿತಾರ್ಥಪ್ರದ ಶ್ರೀನಿವಾಸ ದೇವಸ್ಥಾನದ ಆವರಣದಲ್ಲಿ ನಡೆಯುವ ಭವ್ಯ ಶ್ರೀನಿವಾಸ ಕಲ್ಯಾಣ ಕಾರ್ಯಕ್ರಮ ಮತ್ತು ಮನೆ ಮನೆಗೂ ಶ್ರೀನಿವಾಸ ಕಾರ್ಯಕ್ರಮಕ್ಕೆ ಗುರುಗಳು ಚಾಲನೆ ನೀಡಿದರು.ಶ್ರೀಪಂ. ಸಂಜೀವ ಆಚಾರ ಮಧಬಾವಿ ಅವರ ನೇತೃತ್ವದಲ್ಲಿ ಮತ್ತು ಸಂಜೀವ ದೇಸಾಯಿ ಅವರ ಮಾರ್ಗದರ್ಶನದಿಂದ ಕಾರ್ಯಕ್ರಮ ಜರುಗುವುದು.ಗುರುಗಳ ಮಂತ್ರಾಕ್ಷತೆ ಅನುಗ್ರಹದಿಂದ ಬರುವ ಗುರುವಾರದಿಂದ ಕಾರ್ಯಕ್ರಮ ನಡೆಯುತ್ತಿದೆ. ಭಾಗ್ಯನಗರಕೆ ನಮ್ಮ ತಂಡದವರು ಆಗಮಿಸಿದ್ದರು. ಸಂಚಾಲಕ ಸಂಜೀವ ದೇಸಾಯಿ ಹಾಗೂ ಸದ್ಯಸರಾದ ಕೃಷ್ಣಾಜೀ ಕುಲಕರ್ಣಿ, ಗೋವಿಂದರಾಜ ದೇಶಪಾಂಡೆ, ಆನಂದ ಕುಲಕರ್ಣಿ, ಗುರುರಾಜ…

Read More