ಪರೀಕ್ಷೆಗಳಿಗೆ ಭಯ ಬೇಡ, ಸಿದ್ಧತೆ ಇರಲಿ-ಡಿಸಿ ಡಾ. ಆನಂದ

ಸಪ್ತಸಾಗರ ವಾರ್ತೆ, ವಿಜಯಪುರ, ಆ.25: ನಿರಂತರ ಓದಿನಲ್ಲಿ ಯಶಸ್ಸಿನ ಗುಟ್ಟು ಅಡಗಿದೆ. ವಿದ್ಯಾರ್ಥಿಗಳು ಏಕಾಗ್ರತೆಯಿಂದ ಓದುವ ಮೂಲಕ ಗುರಿ ಸಾಧನೆಯಡೆಗೆ ಸಾಗುವುದರೊಂದಿಗೆ ಸತತ ಅಧ್ಯಯನ ಪರಿಶ್ರಮದ‌ ಮೂಲಕ ಗುರಿ ತಲುಪಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಹೇಳಿದರು.ಭಾನುವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ದಲಿತ ವಿದ್ಯಾರ್ಥಿ ಪರಿಷತ್ ಇವರ ಸಹಯೋಗದೊಂದಿಗೆ ಹಮ್ಮಿಕೊಂಡ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ವಿಷಯದ ಕುರಿತಾಗು ನಡೆದ ಒಂದು ದಿನದ ಕಾರ್ಯಾಗಾರಕ್ಕೆ ಚಾಲನೆ ನೀಡಿ…

Read More

ಸಾರವಾಡಕ್ಕೆ ಎಲ್ಲ ಬಸ್‌ಗಳ ನಿಲುಗಡೆಗೆ ಕ್ರಮ: ಗ್ರಾಮಸ್ಥರಿಂದ ಹರ್ಷ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 25 : ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಸಾರಿಗೆ, ವಾಯವ್ಯ ಕರ್ನಾಟಕ ಸಾರಿಗೆ ಬಸ್‌ಗಳ ನಿಲುಗಡೆಗೆ ಆಗ್ರಹಿಸಿ ಸಾರ್ವಜನಿಕರಿಗೆ, ಶಾಲಾ ಮಕ್ಕಳಿಗೆ ಅನುಕೂಲ ಕಲ್ಪಿಸಲು ಕಳೆದ ಆಗಸ್ಟ್ 14 ರಂದು ಗ್ರಾಮಸ್ಥರು ಮೂರು ಗಂಟೆಗಳ ಕಾಲ ಸಾರವಾಡ ಗ್ರಾಮದಲ್ಲಿ ರಸ್ತೆ ತಡೆ ಮಾಡಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಬಸ್‌ ನಿಲುಗಡೆಗೆ ಸಾರಿಗೆ ಸಂಸ್ಥೆಯ ಅಧಿಕಾರಿಗಳು ಲಿಖಿತ ಭರವಸೆ ನೀಡಿದ್ದರು. ಭರವಸೆ ಈಡೇರಿಸಲು ವಿಫಲವಾದ ಹಿನ್ನೆಲೆಯಲ್ಲಿ ಆಗಷ್ಟೇ 26…

Read More

ಕಾಮಗಾರಿಗಳ ಸಮರ್ಪಕ ಅನುಷ್ಠಾನಕ್ಕೆ ಜಿಯೋ ಫೆನ್ಸಿಂಗ್ ಮೊಬೈಲ್ ಆ್ಯಪ್ ಕಡ್ಡಾಯ- ಡಾ.ವಿಜಯಕುಮಾರ ಆಜೂರ

ಸಪ್ತಸಾಗರ ವಾರ್ತೆ, ವಿಜಯಪುರ, ಆ.25: ಮನರೇಗಾ ಯೋಜನೆಯ ಕಾಮಗಾರಿಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಲು ಕೇಂದ್ರ ಸರ್ಕಾರವು ಹೊಸ ವಿಧಾನವಾಗಿ ಜಿಯೋ ಫೆನ್ಸಿಂಗ್ ಮೊಬೈಲ್ ಆ್ಯಪ್ ಮೂಲಕ ಜಿಪಿಎಸ್ ಅವಕಾಶ ಕಲ್ಪಿಸಿದೆ ಎಂದು ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿ ಡಾ. ವಿಜಯಕುಮಾರ ಆಜೂರ ಹೇಳಿದರು.ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಅನುಷ್ಠಾನಗೊಳ್ಳುವ ಕಾಮಗಾರಿಗಳಿಗೆ ಜಿಯೋ ಫೆನ್ಸಿಂಗ್ ಆ್ಯಪ್ ಮೂಲಕ ಅದರ ಪ್ರಕ್ರಿಯೆಗಳ ಬಗ್ಗೆ ಕರ್ತವ್ಯ ನಿರ್ವಹಿಸುವ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಏರ್ಪಡಿಸಿದ ಒಂದು ದಿನದ ತರಬೇತಿ…

Read More

ನಾಳೆ ವಿಜಯಪುರ- ಬಬಲೇಶ್ವರ ಎರಡು ಬಸ್ಸುಗಳ ಸೇವೆ ಆರಂಭ

ಸಪ್ತಸಾಗರ ವಾರ್ತೆ ವಿಜಯಪುರ, ಆ. 25: ನಾಳೆ ಮಂಗಳವಾರದಿಂದ ವಿಜಯಪುರ- ಬಬಲೇಶ್ವರ ಮತ್ತು ಬಬಲೇಶ್ವರ- ವಿಜಯಪುರ ಮಧ್ಯೆ ಸಾಮಾನ್ಯ ಸಾರಿಗೆ ಎರಡು ಬಸ್ಸುಗಳ ಸೇವೆ ಪ್ರಾರಂಭವಾಗಲಿದೆ.ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರ ಸೂಚನೆ ಮೇರೆಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಪ್ರತಿದಿನ‌ ಸಾರಿಗೆ ಎರಡು ಬಸ್ಸುಗಳನ್ನು ಈ ಮಾರ್ಗದಲ್ಲಿ ಓಡಿಸಲಿದೆ. ಒಂದು ಬಸ್ಸು ವಿಜಯಪುರ- ಖತಿಜಾಪುರ- ಸಾರವಾಡ ಮಾರ್ಗವಾಗಿ ಬಬಲೇಶ್ವರಕ್ಕೆ ಸಂಚರಿಸಿದರೆ ಮತ್ತೊಂದು ಬಸ್ಸು ಬಬಲೇಶ್ವರ- ಸಾರವಾಡ-…

Read More

ವಿಜಯಪುರ ಚಾ ಲಂಬೋದರನ ಭವ್ಯ ಮೆರವಣಿಗೆ ನಾಳೆ

ಸಪ್ತಸಾಗರ ವಾರ್ತೆ ವಿಜಯಪುರ, ಆ. 25:ಕೆ.ಎಸ್.ಆರ್.ಟಿ.ಸಿ, ದಾನೇಶ್ವರಿ ಹಾಗೂ ಮಹಾತ್ಮ ಗಾಂಧಿ ಕಾಲೊನಿಯ ವರದ ಹನುಮಾನ್ ಗಜಾನನ ತರುಣ ಮಂಡಳಿ ವತಿಯಿಂದ ನಾಳೆ ಆ.26 ರಂದು ನಗರದಲ್ಲಿ ವಿಜಯಪುರ ಚಾ ಲಂಬೋದರನ ಭವ್ಯ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.ಕೇಂದ್ರದ ಮಾಜಿ ಸಚಿವ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು, ಸಂಜೆ 4 ಕ್ಕೆ ಛತ್ರಪತಿ ಶಿವಾಜಿ ಮಹಾರಾಜ್ ವೃತ್ತದಲ್ಲಿ ಮೆರವಣಿಗೆಗೆ ಚಾಲನೆ ನೀಡಲಿದ್ದು, ನೇತಾಜಿ ಸುಭಾಸಚಂದ್ರ ಭೋಸ್ ರಸ್ತೆ ಮೂಲಕ ಶ್ರೀ ವರದ ಹನುಮಾನ್ ದೇವಸ್ಥಾನ ವರೆಗೆ ಸಾಗಲಿದೆ.ಕಾರಣ…

Read More

ಆರ್ಥಿಕ ಅಭಿವೃದ್ಧಿಯಲ್ಲಿ ರೈತರು ಮತ್ತು ಕೃಷಿಯ ಪಾತ್ರ ಮುಖ್ಯ: ಸುನೀಲಗೌಡ ಪಾಟೀಲ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 25: ಆರ್ಥಿಕ ಅಭಿವೃದ್ಧಿಯಲ್ಲಿ ರೈತರು ಮತ್ತು ಕೃಷಿಯ ಪಾತ್ರ ಮುಖ್ಯವಾಗಿದೆ ಎಂದು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಹೇಳಿದ್ದಾರೆ.ಸೋಮವಾರ ಬಬಲೇಶ್ವರ ತಾಲೂಕಿನ ಹೆಬ್ಬಾಳಟ್ಟಿ ಗ್ರಾಮದಲ್ಲಿ ನೂತನ ಶ್ರೀ ನಂದಿ ಬಸವೇಶ್ವರ ದೇವಸ್ಥಾನ ಉದ್ಘಾಟನೆ ಮತ್ತು ಕಳಸಾರೋಹಣದ ಅಂಗವಾಗಿ ಆಯೋಜಿಸಲಾಗಿದ್ದ ಕುಂಭಮೇಳ ಹಾಗೂ ಧರ್ಮಸಭೆ ಉದ್ಘಾಟಿಸಿ ಅವರು ಮಾತನಾಡಿದರು.ಸಚಿವ ಎಂ. ಬಿ. ಪಾಟೀಲ ಅವರು ಮಾಡಿರುವ ನೀರಾವರಿಯಿಂದಾಗಿ ಜಿಲ್ಲೆಯ ಚಿತ್ರಣ ಬದಲಾಗಿದೆ. ವಿಜಯಪುರ ರಾಜ್ಯದಲ್ಲಿ ಶ್ರೀಮಂತ ಜಿಲ್ಲೆಗಳಲ್ಲಿ ಒಂದಾಗುವ ಕಾಲ ಬಂದಿದೆ. ನೀರಾವರಿಯಿಂದಾಗಿ…

Read More

ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಕ್ರೀಡೆಗಳು ಸಹಕಾರಿ -ಅಶೋಕ ದಳವಾಯಿ

ಸಪ್ತಸಾಗರ ವಾರ್ತೆ ವಿಜಯಪುರ, ಆ. 25:ಅರಣ್ಯ ರಕ್ಷಣೆ ಮಾಡುವ ಮಹತ್ತರ ಜವಾಬ್ದಾರಿಯನ್ನು ನಿಭಾಯಿಸುವ ಅರಣ್ಯ ಇಲಾಖೆಯ ಅಧಿಕಾರಿ-ಸಿಬ್ಬಂದಿಗಳು ತಮ್ಮ ಕರ್ತವ್ಯದೊಂದಿಗೆ ಸಾಂಸ್ಕೃತಿಕ ಹಾಗೂ ಕ್ರೀಡೆಗಳಲ್ಲಿ ಭಾಗವಹಿಸುವುದು ಅಗತ್ಯವಾಗಿದೆ. ಎಲ್ಲರೂ ಆಟೋಟಗಳಲ್ಲಿ ಪಾಲ್ಗೊಳ್ಳುವ ಮೂಲಕ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಂಡು ಕ್ರೀಡಾ ಸ್ಪೂರ್ತಿ ಮೆರೆಯಬೇಕು. ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಕ್ರೀಡೆಗಳು ಸಹಕಾರಿಯಾಗಿವೆ ಎಂದು ನಿವೃತ್ತ ಐಎಎಸ್ ಅಧಿಕಾರಿ ಅಶೋಕ ದಳವಾಯಿ ಅವರು ಹೇಳಿದರು.ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಬೆಳಗಾವಿ ವೃತ್ತ ಮಟ್ಟದ ಅರಣ್ಯ ಕ್ರೀಡಾಕೂಟಕ್ಕೆ ಚಾಲನೆ…

Read More

ಆದ್ಯ ವಚನಕಾರ ದೇವರ ದಾಸಿಮಯ್ಯ ಜಾಡ ಕುಲತಿಲಕ – ಡಾ. ಎಂ.ಎಸ್. ದಡ್ಡೇನವರ

ಸಪ್ತ ಸಾಗರ ವಾರ್ತೆ,ವಿಜಯಪುರ, ಆ. 24:ದೇವರ ದಾಸಿಮಯ್ಯನವರು ಬಸವಪೂರ್ವ ಶರಣ, ಆದ್ಯ ವಚನಕಾರನಾಗಿ ಹನ್ನೆರಡನೇ ಶತಮಾನದ ಅನುಭವ ಮಂಟಪದ ಎಲ್ಲ ಶರಣರಿಗೆ ಮಾರ್ಗದರ್ಶಿ ವಚನಗಳನ್ನು ಮೊದಲ ಬಾರಿಗೆ ಸರಳವಾಗಿ ನೀಡಿದ ಮಹಾನುಭಾವರು. ಇಂದು ಅವರ ಹೆಸರಿನಲ್ಲಿ ಸಭಾಭವನ ಉದ್ಘಾಟನೆಗೊಳ್ಳುತ್ತಿರುವದು ಬಹಳ ಸಂತೋಷ. ದಾಸಿಮಯ್ಯನವರು ಜಾಡ ಕುಲತಿಲಕರಾಗಿದ್ದಾರೆ ಎಂದು ಡಾ. ಎಂ. ಎಸ್. ದಡ್ಡೆನವರ ಹೇಳಿದರು.ರವಿವಾರ ನಗರದ ವೇದಮಾತೆ ಗಾಯತ್ರಿ ಪ್ರತಿಷ್ಠಾನದ ಆವರಣದಲ್ಲಿ ಆದ್ಯವಚನಕಾರ ದೇವರ ದಾಸಿಮಯ್ಯ ಸಭಾಭವನ ಉದ್ಘಾಟಿಸಿ ಮಾತನಾಡಿದ ಅವರು, ನೇಕಾರ ಸಮಾಜದ ಆದ್ಯಗುರುವಾದ ದಾಸಿಮಯ್ಯನವರು…

Read More

ಗಣೇಶ ಮೂರ್ತಿ ವಿಸರ್ಜನೆ : ಪಾಲಿಕೆಯಿಂದ ವಾರ್ಡಗಳಲ್ಲಿ ಕೃತಕ ವಿಸರ್ಜನಾ ಹೊಂಡಗಳ ನಿರ್ಮಾಣ

ಸಪ್ತಸಾಗರ ವಾರ್ತೆ ವಿಜಯಪುರ, ಆ. 24: ಜಿಲ್ಲೆಯಲ್ಲಿ ಆಗಸ್ಟ್ ತಿಂಗಳಲ್ಲಿ ಆಚರಿಸಲಾಗುವ ಗಣೇಶ ಹಬ್ಬದ ಸಂದರ್ಭದಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗಳಾಗಿ ಮಹಾನಗರ ಪಾಲಿಕೆ ವತಿಯಿಂದ ನಗರದ ವಿವಿಧ ವಾರ್ಡಗಳಲ್ಲಿ ಕೃತಕ ವಿಸರ್ಜನಾ ಹೊಂಡಗಳನ್ನು ಹಾಗೂ ಸಂಚಾರಿ ಗಣೇಶ ವಿಸರ್ಜನಾ ವಾಹನಗಳ ನಿಯೋಜನೆ ಮಾಡಲಾಗಿದ್ದು, ಸಾರ್ವಜನಿಕರು ಕೃತಕ ಹೊಂಡಗಳಲ್ಲಿ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡುವ ಮೂಲಕ ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆ ಮಾಡಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತರು ಮನವಿ ಮಾಡಿಕೊಂಡಿದ್ದಾರೆ.ಗಣೇಶ ಹಬ್ಬದ ಸಂದರ್ಭದಲ್ಲಿ ಪ್ಲಾಸ್ಟರ್ ಆಪ್…

Read More

ಹಾಸ್ಟೆಲ್ ಮೆಂಟರ್ ಗಳ ನೇಮಿಸಿ ಡಿಸಿ ಆದೇಶ

ಸಪ್ತಸಾಗರ ವಾರ್ತೆ,ವಿಜಯಪುರ,ಆ. ೨೪:ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಜಿಲ್ಲೆಯಲ್ಲಿರುವ ಸರ್ಕಾರಿ ವಸತಿ ನಿಲಯಗಳ ನಿರ್ವಹಣೆ, ಮೂಲಸೌಕರ್ಯಗಳ ಸುಧಾರಣೆ ಹಾಗೂ ಇತರೆ ಚಟುವಟಿಕೆಗಳ ಕಾರ್ಯಕ್ರಮಗಳಿಗಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಹಾಸ್ಟೆಲ್ ಮೆಂಟರ್ ಗಳನ್ನಾಗಿ ಜಿಲ್ಲಾಧಿಕಾರಿಗಳು ನೇಮಕ ಮಾಡಿದ್ದಾರೆ.ಜಿಲ್ಲೆಯ ವಿನೂತನ ಅಭಿಯಾನ ಕಾರ್ಯಕ್ರಮಕ್ಕೆ ನೇಮಕವಾದ ಹಾಸ್ಟೆಲ್ ಮೆಂಟರ್ ಈಗಾಗಲೇ ಜಿಲ್ಲೆಯ ವಿವಿಧ ವಸತಿ ನಿಲಯಗಳಿಗೆ ಭೇಟಿ ನೀಡಿ, ವಿದ್ಯಾರ್ಥಿಗಳ ಶೈಕ್ಷಣಿಕ, ವೈಯಕ್ತಿಕ ಹಾಗೂ ಉಜ್ವಲ ಭವಿಷ್ಯದ ಬೆಳವಣಿಗೆಗಾಗಿ ಮಾರ್ಗದರ್ಶನ ನೀಡುವ…

Read More