ಕಾಂಗ್ರೆಸ್ಸಿಗರೇ ನಿಮಗೆ ಬಂಗಾರ ಮುಖ್ಯವೋ ದೇಶ ಮುಖ್ಯವೋ? ರಾಘವ್ ಅಣ್ಣಿಗೇರಿ ಪ್ರಶ್ನೆ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 12:ಶೇ. 88ರಷ್ಟು ಕಚ್ಚಾ ತೈಲನ್ನು ಭಾರತ ಗಲ್ಫ್ ರಾಷ್ಟ್ರಗಳಿಂದ ಆಮದು ಮಾಡಿಕೊಳ್ಳುತ್ತಿದೆ. ಅಮೆರಿಕ- ಇರಾನ್ ನಡುವಿನ ಯುದ್ಧ, ಭಾರತಕ್ಕಷ್ಟೇ ಅಲ್ಲ, ಇಡೀ ವಿಶ್ವಕ್ಕೆ ಎಚ್ಚರಿಕೆಯ ಸಂದೇಶ ನೀಡಿದೆ ಎಂದು ಸ್ವಾಮಿ ವಿವೇಕಾನಂದ ಸೇನೆ ರಾಜ್ಯಾಧ್ಯಕ್ಷ ರಾಘವ ಅಣ್ಣಿಗೇರಿ ಹೇಳಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಈಗಾಗಲೇ ಯುದ್ಧದ ಪರಿಣಾಮದಿಂದ ಅನೇಕ ದೇಶಗಳು ಅವಸಾನದ ಅಂಚಿಗೆ ಹೋಗಿವೆ. ಯುದ್ಧ ಪ್ರಾರಂಭವಾಗಿ ಎರಡು ತಿಂಗಳು ಕಳೆದರೂ ಕೂಡ ಇಲ್ಲಿಯವರೆಗೆ ಭಾರತಕ್ಕೆ ಯಾವುದೇ ತೊಂದರೆ…

Read More

ನವಜಾತ ಶಿಶು ಪುನರುಜ್ಜೀವನ ತರಬೇತಿ ಅತ್ಯಂತ ಅಗತ್ಯ: ಡಾ. ಇನಾಮದಾರ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 11:ನವಜಾತ ಶಿಶುಗಳ ಜೀವಿತಾವಧಿ ಹೆಚ್ಚಿಸಲು ಮತ್ತು ಗುಣಮಟ್ಟದ ಆರೋಗ್ಯ ಸೇವೆಯನ್ನು ಮತ್ತಷ್ಟು ಬಲಪಡಿಸಲು ಸಂರಚಿತ ನವಜಾತ ಶಿಶು ಪುನರುಜ್ಜೀವನ ತರಬೇತಿ ಅತ್ಯಂತ ಅಗತ್ಯವಾಗಿದೆ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಕುಲಪತಿ ಡಾ.‌ಅರುಣ ಚಂ. ಇಮಾಮದಾರ ಹೇಳಿದ್ದಾರೆ.ರವಿವಾರ ನಗರದ ಬಿ.ಎಲ್‌.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ‌ ನಡೆದ ರಾಷ್ಟ್ರವ್ಯಾಪಿ ನವಜಾತ ಶಿಶು ಪುನರುಜ್ಜೀವನ ತರಬೇತಿ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಮಕ್ಕಳಶಾಸ್ತ್ರ ವಿಭಾಗದ ಸೇವಾ ಮನೋಭಾವ ಮತ್ತು ಶೈಕ್ಷಣಿಕ ಕಾರ್ಯಚಟುವಟಿಕೆಗಳು‌ ಈ ನಿಟ್ಟಿನಲ್ಲಿ ಪ್ರಮುಖವಾಗಿವೆ ಎಂದು ಅವರು…

Read More

ಬೂದಿಹಾಳ- ಪೀರಾಪೂರ ಏತ ನೀರಾವರಿ ಯೋಜನೆ ನೆನೆಗುದಿಗೆ: ರೈತ ಸಂಘ ಆಕ್ರೋಶ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 11 : ಬೂದಿಹಾಳ : ಪೀರಾಪೂರ ಏತ ನೀರಾವರಿ ಯೋಜನೆಯ ಬಾಕಿ ಉಳಿದ ಕಾಮಗಾರಿ ನೆನೆಗುದಿಗೆ ಬಿದ್ದಿದ್ದು ಧರಣಿ ಸಂದರ್ಭದಲ್ಲಿ ನೀಡಿದ ಭರವಸೆ ಕೇವಲ ಮೂಗಿಗೆ ತುಪ್ಪ ಸವರಿ ಹೋದಂತಾಗಿದೆ. ಅವರು ಕೊಟ್ಟ ಮಾತು ಉಳಿಸಿಕೊಳ್ಳಲು ವಿಫಲರಾಗಿದ್ದಾರೆ. ಇವರು ಕೇವಲ ಭರವಸೆ ನೀಡುತ್ತಾ ರೈತರಿಗೆ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಹಾಗೂ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಗುರುರಾಜ ಪಡಶೆಟ್ಟಿ ಸಚಿವರ ವಿರುದ್ಧ…

Read More

ಹೊಸ ಬೀಟ್ ವ್ಯವಸ್ಥೆ ಜಾರಿ : ಮನೆ ಸುರಕ್ಷತೆಗೆ `ಆರಕ್ಷಕರ ಹೊಸ ಸೂತ್ರ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 11 :ಬೇಸಿಗೆ ರಜೆ, ಮದುವೆ ಮೊದಲಾದ ಶುಭ ಸಮಾರಂಭ, ಪ್ರವಾಸ ಹೀಗೆ ಅನೇಕ ಸಂದರ್ಭಗಳಲ್ಲಿ ಮನೆಗಳಿಗೆ ಕೀಲಿ ಹಾಕಿ ಹೋಗಬೇಕಾದ ಪ್ರಸಂಗ ಬರುತ್ತದೆ. ಇದನ್ನು ಬಳಸಿ ಕಳ್ಳರು ತಮ್ಮ ಕೈಚಳಕ ಪ್ರದರ್ಶಿಸುವುದುಂಟು. ಆದರೆ ಈಗ ಹೆದರಬೇಕಿಲ್ಲ. ಈ ಸಂದರ್ಭದಲ್ಲಿ ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಆರಕ್ಷಕ ಇಲಾಖೆ ಹೊಸ ಸೂತ್ರ ಅನುಸರಿಸಿದ್ದು, ಲಾಕ್ಡ್ ಹೌಸ್ ಬೀಟ್ ಸಿಸ್ಟಂ ಎನ್ನುವ ಹೊಸ ಯೋಜನೆಯನ್ನು ರೂಪಿಸಿದೆ.ಈ ನೂತನ ಯೋಜನೆ ಮೂಲಕ ವಿಶೇಷ ಸಹಾಯವಾಣಿ ಸಂಖ್ಯೆಯಾದ 8277970747 ಸಂಖ್ಯೆಗೆ…

Read More

ಐಟಿಐ ಪ್ರವೇಶಾತಿಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ.11:ಜಿಲ್ಲೆಯ 10 ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ಎನ್‌ಸಿವಿಟಿ ಸಂಯೋಜನೆ ಹೊಂದಿರುವ ವೃತ್ತಿಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.ಮೆರಿಟ್ ಮತ್ತು ಮೀಸಲಾತಿ ಆಧಾರದ ಮೇಲೆ ಆಗಸ್ಟ್-2026ನೇ ಸಾಲಿನ ಪ್ರವೇಶ ಪಡೆಯಲು 10ನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳು www..cite.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಮೇ 15 ಕೊನೆ ದಿನವಾಗಿದೆ. ಮಹಿಳಾ ಅಭ್ಯರ್ಥಿಗಳಿಗೆ ಪ್ರವೇಶ ಶುಲ್ಕವಿಲ್ಲ. ಜಿಲ್ಲಾ ನೋಡಲ್ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ವಿಜಯಪುರದಲ್ಲಿ 08 ಸಾಂಪ್ರದಾಯಿಕ ವೃತ್ತಿಗಳಲ್ಲಿ ಮತ್ತು 06 ಇಂಡಸ್ಟ್ರೀಸ್-4.0…

Read More

ಸರ್ಕಾರಿ ನೌಕರರ ಪ್ರತಿಭಾವಂತ ಮಕ್ಕಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 11:ಕರ್ನಾಟಕ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ರಾಜ್ಯ ಸರ್ಕಾರಿ ನೌಕರರ ಪ್ರತಿಭಾನ್ವಿತ ಮಕ್ಕಳನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರತಿ ವರ್ಷ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಸುಮಾರು ಹತ್ತು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ‘ಪ್ರತಿಭಾ ಪುರಸ್ಕಾರ’ ನೀಡಿ ಗೌರವಿಸಲಾಗುತ್ತಿದೆ. ಆದರಂತೆ 2026ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆಗಳಲ್ಲಿ ಶೇ. 90 ಕ್ಕಿಂತ ಹೆಚ್ಚು ಅಂಕ ಗಳಿಸಿರುವ ರಾಜ್ಯ ಸರ್ಕಾರಿ ನೌಕರರ ಪ್ರತಿಭಾನ್ವಿತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಶೇ. 90…

Read More

ಹೇಮರೆಡ್ಡಿ ಮಲ್ಲಮ್ಮಳ ಬದುಕು ಮನುಕುಲಕ್ಕೆ ಆದರ್ಶ-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ,ಇಂಡಿ, ಮೇ. 10: ಸುಖ-ದುಃಖ, ಅಂಬಲಿ-ಅಮೃತ, ಶತ್ರು-ಮಿತ್ರ, ಸ್ತುತಿ-ನಿಂದನೆ ಎಲ್ಲವನ್ನು ಸಮಚಿತ್ತದಿಂದ ಸ್ವೀಕರಿಸಿದ ಹೇಮರೆಡ್ಡಿ ಮಲ್ಲಮ್ಮಳ ಬದುಕು ಇಂದಿಗೂ ಅನುಕರಣೀಯ ಹಾಗೂ ಮನುಕುಲಕ್ಕೆ ಆದರ್ಶ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ರವಿವಾರ ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮಳ ಜಯಂತಿ ಆಚರಣೆಯನ್ನು ಉದ್ಧೇಶಿಸಿ ಅವರು ಮಾತನಾಡಿದರು.ಶಿವಶರಣೆ ಮಲ್ಲಮ್ಮಳ ಜೀವನದ ಮೌಲ್ಯಗಳು ಸ್ತ್ರೀಕುಲಕ್ಕೆ ಅಮೂಲ್ಯ ಕಾಣಿಕೆಯಾಗಿವೆ. ಸಮಾಜದ ಪ್ರತಿಯೊಬ್ಬರೂ ಮಹಾಸಾದ್ವಿ ಮಲ್ಲಮ್ಮಳ ಆದರ್ಶ ಅರಿತು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಅವಳ ದೈವಭಕ್ತಿ, ತಪಸ್ಸು,…

Read More

ಜಿಲ್ಲಾಡಳಿತದಿಂದ ಶಿವಶರಣೆ ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ.10:ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿಶಿವಶರಣೆ ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿ ಆಚರಿಸಲಾಯಿತು.ಜಯಂತಿ ಕಾರ್ಯಕ್ರಮದ ಅಂಗವಾಗಿ ಶಿವಶರಣೆ ಮಹಾ ಸಾಧ್ವಿ ಹೇಮರೆಡ್ಡಿ ಮಲ್ಲಮ್ಮ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಾಜಶೇಖರ್ ಡಂಬಳ, ನಿರ್ಮಿತಿ ಕೇಂದ್ರದ ಯೋಜನೆ ನಿರ್ದೇಶಕ ಆಕಾಶ ತಿಮಶೆಟ್ಟಿ,ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ…

Read More

ಜೀವನದ ಕಷ್ಟಗಳಿಗೆ ಬೆನ್ನೆಲುಬಾದ ತಾಯಿ ಅಕ್ಷಯ ಪಾತ್ರೆ ಇದ್ದಂತೆ-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 10:ತಾಯಿ ಮಕ್ಕಳಿಗೆ ಒಂದು ನೈತಿಕ ಶಕ್ತಿ. ಇಂದಿನ ಆಧುನಿಕ ಯುಗದಲ್ಲಿ ಮಕ್ಕಳು ದಾರಿ ತಪ್ಪದಂತೆ, ಸಂಸ್ಕೃತಿ ಮತ್ತು ಆಧುನಿಕತೆಯ ನಡುವೆ ಸಮತೋಲನ ಕಾಪಾಡಲು ತಾಯಿ ಪಾತ್ರ ಅನನ್ಯವಾಗಿದ್ದು, ಅವಳು ಜೀವನದ ಕಷ್ಟಗಳಲ್ಲಿ ಬೆನ್ನೆಲುಬಾಗಿ ನಿಲ್ಲುವ ಅಕ್ಷಯ ಪಾತ್ರೆ ಇದ್ದಂತೆ ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.ರವಿವಾರ ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡ ವಿಶ್ವ ತಾಯಂದಿರ ದಿನದ ಕಾರ್ಯಕ್ರಮದಲ್ಲಿ ‘ಆಧುನಿಕ ಜಗತ್ತಿನಲ್ಲಿ…

Read More

ಓದುವ ಸಂಸ್ಕೃತಿ ಬೆಳೆಸಿಕೊಳ್ಳಬೇಕು: ಕುಶಾಲ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 10 :ಪುಸ್ತಕಗಳಿಂದ ಮನೆ ಶೃಂಗಾರಗೊಂಡರೆˌ ಮಕ್ಕಳ ಮನಸ್ಸು ಜ್ಞಾನದಿಂದ ಶೃಂಗಾರವಾಗುತ್ತದೆ ಎಂದು ಕನ್ನಡ ಪುಸ್ತಕಪ್ರಾಧಿಕಾರದ ಜಿಲ್ಲಾ ಜಾಗೃತ ಸಮಿತಿ ಸದಸ್ಯ ಡಾ. ಕುಶಾಲ ಬರಗೂರ ಹೇಳಿದರು.ನಗರದ ಸ್ವಾತಂತ್ರ‍್ಯಯೋಧರ ಕಾಲನಿಯ ಸಾಹಿತಿ ಸಂಗಮೇಶ ಬದಾಮಿ ಅವರನಿವಾಸದಲ್ಲಿ ಹಮ್ಮಿಕೊಂಡ ಮನೆಗೊಂದು ಗ್ರಂಥಾಲಯ ಅನುಷ್ಠಾನ ಕಾರ್ಯಕ್ರಮಉದ್ಘಾಟಿಸಿ ಅವರು ಮಾತನಾಡಿದರು.ದೇವರ ಮನೆಯಲ್ಲಿ ದೇವರು ಕಾಣುವ ಹಾಗೆ ಮನೆ ಪ್ರವೇಶಿಸಿದೊಡನೆ ಗ್ರಂಥಗಳು ಕಾಣಬೇಕು. ಅಂದಾಗ ಓದುವ ಸಂಸ್ಕೃತಿ ಬೆಳೆಯುತ್ತದೆ. ಮೊಬೈಲ್ ಗೀಳುಕಡಿಮೆಯಾಗಿˌ ಓದುವ ಆಸಕ್ತಿ ಹೆಚ್ಚುತ್ತದೆ ಎಂದರು.ಅತಿಥಿ ಶಂಕರ ಬೈಚಬಾಳ…

Read More