ವಿಜಯಪುರಕ್ಕೆ ಪಿಪಿಪಿ ಮಾದರಿ ಸರ್ಕಾರಿ ವೈದ್ಯಕೀಯ ಕಾಲೇಜ್ ಬೇಡ : ಡಾ. ಬಾಬುರಾಜೇಂದ್ರ ನಾಯಿಕ

ಸಪ್ತಸಾಗರ ವಾರ್ತೆ ವಿಜಯಪುರ, ಆ. 24:ವಿಜಯಪುರ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಸೂಕ್ತವಾಗುತ್ತದೆ. ಪಿಪಿಪಿ ಮಾದರಿ ಕಾಲೇಜ್ ಬೇಡ ಎಂದು ಶ್ರೀ ತುಳಸಿಗಿರೀಶ್ ಫೌಂಡೇಶನ್ ಅಧ್ಯಕ್ಷ ಡಾ. ಬಾಬುರಾಜೇಂದ್ರ ನಾಯಿಕ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ಮುಂಗಾರು ಅಧಿವೇಶನದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರು ವಿಜಯಪುರ ಜಿಲ್ಲೆಗೆ ವೈದ್ಯಕೀಯ ಕಾಲೇಜನ್ನು ಖಾಸಗಿ ಮತ್ತು ಸಾರ್ವಜನಿಕ ಸಹಭಾಗಿತ್ವದಲ್ಲಿ ಸ್ಥಾಪನೆ ಮಾಡುವುದಾಗಿ ಘೋಷಣೆ ಮಾಡಿರುವುದು ದುರದೃಷ್ಟಕರ.ಇಡೀ ರಾಜ್ಯದಲ್ಲಿ ಅಚ್ಚುಕಟ್ಟಾಗಿ ರೋಗಿಗಳ ಸೇವೆಗೆ ಹೆಸರುವಾಸಿಯಾಗಿರುವ ನಮ್ಮ ವಿಜಯಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಖಾಸಗಿ…

Read More

ಸಾರವಾಡ ಗ್ರಾಮಕ್ಕೆ ಕಡ್ಡಾಯವಾಗಿ ಬಸ್ ನಿಲುಗಡೆಗೆ ಆದೇಶ

ಸಪ್ತ ಸಾಗರ ವಾರ್ತೆ ವಿಜಯಪುರ, ಆ. 24:ವಿಜಯಪುರ-ಬಬಲೇಶ್ವರ ಮಾರ್ಗದಲ್ಲಿ ಬರುವ ಸಾರವಾಡ ಗ್ರಾಮಕ್ಕೆ ಸಾಮಾನ್ಯ, ವೇಗದೂತ ಸಾರಿಗೆಗಳನ್ನು ಕಡ್ಡಾಯವಾಗಿ ನಿಲುಗಡೆ ನೀಡಿ ಕಾರ್ಯಾಚರಣೆ ಮಾಡುವ ಕುರಿತು ಮೇಲಾಧಿಕಾರಿಗಳು ಆದೇಶ ನೀಡಿದ್ದಾರೆ .ಸಾರವಾಡ ಗ್ರಾಮ ಪಂಚಾಯತಿ ಅಧ್ಯಕ್ಷರ ಮನವಿ ಪತ್ರದ ಮೂಲಕ ಸಾರವಾಡ ಗ್ರಾಮಕ್ಕೆ ಸಾಮಾನ್ಯ ಹಾಗೂ ವೇಗದೂತ ಬಸ್ ಗಳ ನಿಲುಗಡೆ ಮಾಡುವಂತೆ ಮೇಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.ಈಗಾಗಲೇ ಈ ಬಗ್ಗೆ ಮೇಲಾಧಿಕಾರಿಗಳು ಆದೇಶ ನೀಡಿದ್ದರೂ ಚಾಲಕರು ಹಾಗೂ ನಿರ್ವಾಹಕರು ಸಾರವಾಡ ಗ್ರಾಮಕ್ಕೆ ಬಸ್ ನಿಲುಗಡೆ ಮಾಡದೆ…

Read More

ಭಾನು ಮುಸ್ತಾಕ್ ಸ್ಪಷ್ಟನೆ ನೀಡಿ ದಸರಾ ಉದ್ಘಾಟಿಸಲಿ: ಯತ್ನಾಳ್

ಸಪ್ತ ಸಾಗರ ವಾರ್ತೆ, ವಿಜಯಪುರ, ಆ. 24:ಲೇಖಕಿ ಬಾನು ಮುಸ್ತಾಕ್ ಅವರು ನಾಡದೇವತೆ ಚಾಮುಂಡೇಶ್ವರಿ ದೇವಿ ದಸರಾ ಉತ್ಸವ ಉದ್ಘಾಟಿಸುವುದು ಸರಿಯಲ್ಲ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.ನಾನು ವೈಯಕ್ತಿಕವಾಗಿ ಶ್ರೀಮತಿ ಭಾನು ಮುಶ್ತಾಕ್ ಅವರನ್ನು ಲೇಖಕಿ ಹಾಗೂ ಹೋರಾಟಗಾರ್ತಿಯಾಗಿ ಗೌರವಿಸುತ್ತೇನೆ. ಆದರೆ, ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಸಲ್ಲಿಸಿ ದೀಪ ಬೆಳಗುವುದರ ಮೂಲಕ ದಸರಾವನ್ನು ಉದ್ಘಾಟಿಸುವುದು, ಅವರ ಸ್ವಂತ ಧಾರ್ಮಿಕ ನಂಬಿಕೆಗಳಿಗೆ ವಿರುದ್ಧವಾಗಿದೆ ಎಂದಿದ್ದಾರೆ.ಇಸ್ಲಾಂ ಮೂರ್ತಿ…

Read More

ಮಹಿಳೆಯರ ಮೇಲೆ ನಿಲ್ಲದ ದೌರ್ಜನ್ಯ: ಕುಲಪತಿ ವಿಜಯಾ ಕಳವಳ

ಸಪ್ತಸಾಗರ ವಾರ್ತೆ, ವಿಜಯಪುರ, ಆ23:“ಸ್ತ್ರೀಯರನ್ನು ದೇವಿಯೆಂದು ಪೂಜಿಸುವ ನಾಡಿನಲ್ಲಿ ಮಹಿಳೆಯರ ಮೇಲೆ ಪ್ರತಿದಿನವೂ ದೌರ್ಜನ್ಯ ನಡೆಯುತ್ತಿರುವುದು ದುರಂತ ಮತ್ತು ವಿಪರ‍್ಯಾಸ. ಕಾನೂನು ದೌರ್ಜನ್ಯವನ್ನು ಅಪರಾಧವೆಂದು ಘೋಷಿಸಿದರೂ, ಸಮಾಜದಲ್ಲಿ ಮಹಿಳೆಯ ಸುರಕ್ಷತೆ ಇನ್ನೂ ದೊಡ್ಡ ಪ್ರಶ್ನೆಯಾಗಿದೆ” ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ವಿಜಯಾ ಬಿ. ಕೋರಿಶೆಟ್ಟಿ ವಿಷಾದ ವ್ಯಕ್ತಪಡಿಸಿದರು.ಮಹಿಳಾ ವಿಶ್ವವಿದ್ಯಾನಿಲಯದ ಅಹಲ್ಯಾಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣಾ ಕೇಂದ್ರದ ವತಿಯಿಂದ ಮಹಿಳೆಯರ ಮೇಲಿನ ಹೆಚ್ಚುತ್ತಿರುವ ದೌರ್ಜನ್ಯವನ್ನು ಖಂಡಿಸಿ ವಿಶ್ವವಿದ್ಯಾಲಯ ಆವರಣದಲ್ಲಿ…

Read More

ದುಡಿಯುವ ಜನರ ಆರ್ಥಿಕ ಸ್ವಾತಂತ್ರ್ಯಕ್ಕಾಗಿ ನಡೆದದ್ದು ಸಹಕಾರ ಚಳವಳಿ: ಕೆ.ವಿ.ಪ್ರಭಾಕರ

ಸಪ್ತಸಾಗರ ವಾರ್ತೆ, ಬೆಂಗಳೂರು, ಆ 23: 2016 ರಲ್ಲಿ ನೋಟು ನಿಷೇಧ ಜಾರಿ ಆದಾಗ ದೇಶದ ನಗರ ಆರ್ಥಿಕತೆ ಪಾತಾಳ ಸೇರಿತು. ಆದರೆ, ಗ್ರಾಮೀಣ ಭಾರತದ ಆರ್ಥಿಕತೆ ಕುಸಿಯದಂತೆ ತಡೆದದ್ದು ಸಹಕಾರಿ ತತ್ವ ಮತ್ತು ಸಹಕಾರಿ ಚಳವಳಿಯ ಮೌಲ್ಯ ಎನ್ನುವುದನ್ನು ನಾವು ಮರೆಯಬಾರದು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.ಪತ್ರಕರ್ತರ ಸಹಕಾರಿ ಸಂಘಕ್ಕೆ 75 ವರ್ಷಗಳು ತುಂಬಿದ ಸಂದರ್ಭದಲ್ಲಿ ಆಯೋಜಿಸಿದ್ದ “ಅಮೃತ ಸಂಭ್ರಮ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ದೇಶದ ಸ್ವಾತಂತ್ರ್ಯ ಚಳವಳಿಕ ಜೊತೆ ಜೊತೆಗೇ ನಡೆದದ್ದು ನಮ್ಮ…

Read More

ನಂದಿ ಕೂಗು ಅಭಿಯಾನ: ವಿಜಯಪುರದಿಂದ ಬೆಂಗಳೂರಿಗೆ ಪಾದಯಾತ್ರೆ ಆರಂಭ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 23:ಬಸವ ತತ್ವದ ವೈಜ್ಞಾನಿಕ ಚಿಂತನೆಯ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ ನಂದಿ ಕೂಗು ಅಭಿಯಾನ ಆ. 23 ರಂದು ವಿಜಯಪುರದಿಂದ ಬೆಂಗಳೂರಿನವರೆಗೆ ಪಾದಯಾತ್ರೆ ಪ್ರಾರಂಭಿಸಿದರು. ಪಾದಯಾತ್ರೆಯ ನೇತೃತ್ವ ವಹಿಸಿದ ಬಸವರಾಜ ಬಿರಾದಾರ ಅವರು ಮಾತನಾಡಿ, ಗ್ರಾಮದಲ್ಲಿ ನಂದಿ ಸಂಪತ್ತು ಹೆಚ್ಚಾದರೆ ಬಸವ ತತ್ವ ಹಾಗೂ ಬಸವ ಸಂಸ್ಕೃತಿ ಉಳಿಯುತ್ತದೆ ಎಂದು ಅರ್ಥ. ಇಲ್ಲವಾದರೆ‌ ನಾಶವಾಗುತ್ತಿದೆ ಎಂದು ಅರ್ಥ. ಏಕೆಂದರೆ ಬಸವ ತತ್ವ ನಂದಿ ಸಂಪತ್ತಿನ ಜೀವಂತಿಕೆ ಮೇಲೆ ನಿಂತಿದೆ ಎಂಬುದನ್ನು ಇಂದಿನ…

Read More

ಆ.28ರಂದು ಖಾಯಂ ಜನತಾ ನ್ಯಾಯಾಲಯ ವಿಶೇಷ ಅಭಿಯಾನ

ಸಪ್ತಸಾಗರ ವಾರ್ತೆ, ವಿಜಯಪುರ,ಆ. 23: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ವಿಜಯಪುರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಲಬುರ್ಗಿಯ ಖಾಯಂ ಜನತಾ ನ್ಯಾಯಾಲಯ, ಜಿಲ್ಲಾ ನ್ಯಾಯಾಂಗ ಇಲಾಖೆ, ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ ಇವರ ಸಂಯುಕ್ತಾಶ್ರಯದಲ್ಲಿ ಆ.28ರಂದು ಖಾಯಂ ಜನತಾ ನ್ಯಾಯಾಲಯ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ.ಅಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಅಭಿಯಾನವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನೂ ಸೇವೆಗಳ…

Read More

ಕುಂಚಗನೂರ ಗ್ರಾಮದ ಬಳಿ ರೈತ ಮೊಸಳೆಗೆ ಹೇಗೆ ಬಲಿಯಾದ ಗೊತ್ತಾ?

ಸಪ್ತಸಾಗರ ವಾರ್ತೆ,ವಿಜಯಪುರ, ಆ. 23:ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕುಂಚಗನೂರ ಗ್ರಾಮದ ಬಳಿ ರೈತನೊಬ್ಬ ಕೃಷ್ಣಾ ನದಿಯಲ್ಲಿ ಮೊಸಳೆಗೆ ಬಲಿಯಾದ ಅವಘಡ ಶನಿವಾರ ಸಂಭವಿಸಿದೆ.ರೈತ ಮೊಸಳೆಗೆ ಹೇಗೆ ಬಲಿಯಾದ ಎಂಬ ಡಿಟೇಲ್ಸ್ ಇಲ್ಲಿದೆ ನೋಡಿ.ಮುದ್ದೇಬಿಹಾಳ ತಾಲೂಕಿನ ಕುಂಚಗನೂರ ಗ್ರಾಮದ ಬಳಿ ಕೃಷ್ಣಾ ನದಿಯಲ್ಲಿಎತ್ತುಗಳ ಮೈ ತೊಳೆಯಲು ಹೋಗಿದ್ದಖಾಸಪ್ಪ‌ ಕಂಬಳಿ (38) ಎಂಬುವನನ್ನು ಮೊಸಳೆ ಎಳೆದುಕೊಂಡು ಹೋಗಿದೆ.ರೈತ ಖಾಸಪ್ಪ ಎತ್ತುಗಳ ಮೈ ತೊಳೆಯುವಲ್ಲಿ ಮೈ ಮರೆತಿದ್ದ. ಇದೇ ವೇಳೆ ಹಸಿವಿನಿಂದ ಚಡಪಡಿಸುತ್ತಿದ್ದ ಮೊಸಳೆ ಬೇಟೆಗಾಗಿ ಹೊಂಚು ಹಾಕಿ ಕಾಯುತ್ತಿತ್ತು. ತಡ…

Read More

ಆ. 23‌ ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ- ಸಹಕಾರಕ್ಕೆ ಆಯೋಗದ ಅಧ್ಯಕ್ಷ ಮಧುಸೂಧನ್ ಆರ್ ನಾಯ್ಕ ಮನವಿ

ಸಪ್ತಸಾಗರ ವಾರ್ತೆ, ಬೆಂಗಳೂರು, ಆ.22:ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ನಾಳೆ ಆಗಸ್ಟ್ 23 ರಿಂದ ಪ್ರಾರಂಭಿಸುತ್ತಿದೆ. ವಿದ್ಯುತ್ ಮೀಟರ್ ರೀಡರ್ ಗಳು ಎಲ್ಲ ಮನೆಗಳನ್ನು ಜಿಯೋ ಟ್ಯಾಗಿಂಗ್ ಮಾಡುವ ಕಾರ್ಯ ಪ್ರಾರಂಭಿಸಲಿದ್ದಾರೆ. ಯಾವುದೇ ಮನೆಗಳು ತಪ್ಪಿ ಹೋಗದಂತೆ ಯಶಸ್ವಿಯಾಗಿ ಸಮೀಕ್ಷೆ ಕೈಗೊಳ್ಳಲು ರಾಜ್ಯದ ಜನತೆ ಸಹಕರಿಸಬೇಕು ಎಂದು ಆಯೋಗದ ಅಧ್ಯಕ್ಷ ಮಧುಸೂಧನ್ ಆರ್. ನಾಯ್ಕ ತಿಳಿಸಿದ್ದಾರೆ.ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ…

Read More

ಬಸವನಬಾಗೇವಾಡಿಯಲ್ಲಿಆ.30ರಂದು ಖಾಯಂ ಜನತಾ ನ್ಯಾಯಾಲಯ ವಿಶೇಷ ಅಭಿಯಾನ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 22: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವಿಜಯಪುರ ತಾಲೂಕಾ ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ, ತಾಲೂಕಾ ಆಡಳಿತ ಬಸವನಬಾಗೇವಾಡಿ ಇವರ ಸಂಯುಕ್ತಾಶ್ರಯದಲ್ಲಿ ಆ.30ರಂದು ಖಾಯಂ ಜನತಾ ನ್ಯಾಯಾಲಯ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ.ಅಂದು ಮಧ್ಯಾಹ್ನ 12 ಗಂಟೆಗೆ ಬಸವನಬಾಗೇವಾಡಿ ಪುರಸಭೆ ಕಾರ್ಯಾಲಯದ ಸಭಾ ಭವನದಲ್ಲಿ ಅಭಿಯಾನವನ್ನು ಜಿಲ್ಲಾ ನ್ಯಾಯಾಧೀಶರು ಹಾಗೂ ಕಲಬ್ಬುರ್ಗಿ ಖಾಯಂ ಜನತಾ ನ್ಯಾಯಾಲಯ ಅಧ್ಯಕ್ಷರಾದ ನ್ಯಾಯಾಧೀಶ ಎಸ್.ಎಲ್.ಚವ್ಹಾಣ ಉದ್ಘಾಟಿಸಲಿದ್ದಾರೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು…

Read More