ಮೂರು ದಿನಗಳ ಆಶಾಗಳ ಹೋರಾಟ ಅಂತ್ಯ

ಸಪ್ತಸಾಗರ ವಾರ್ತೆ, ವಿಜಯಪುರ,ಆ.14:ಗೌರವಧನ ಹೆಚ್ಚಳಕ್ಕೆ ಆಗ್ರಹಿಸಿ ಕಳೆದ ಮೂರು ದಿನಗಳಿಂದ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಕೈಗೊಂಡಿದ್ದ ಅಹೋರಾತ್ರಿ ಧರಣಿ ಸತ್ಯಾಗ್ರಹ ಗುರುವಾರ ಮುಕ್ತಾಯಗೊಂಡಿತು.ವಿದ್ಯಾರ್ಥಿ,ಯುವಜನ, ದಲಿತ ಸಂಘಟನೆ, ಸರ್ಕಾರಿ ನಿವೃತ್ತಿ ಅಧಿಕಾರಿಗಳ ಸಂಘಟನೆ, ಕರ್ನಾಟಕ ರಾಜ್ಯ ಸಂಯುಕ್ತ ಅಂಗನವಾಡಿ ಕಾರ್ಯಕರ್ತೆಯರ ಸಂಘಟನೆ, ಸಿಐಟಿಯು ಕಾರ್ಮಿಕ ಸಂಘಟನೆ ಹಾಗೂ ಜಿಲ್ಲೆಯ ಹಿರಿಯ ಸಾಹಿತಿಗಳಿಂದ ಹೋರಾಟಕ್ಕೆ ಬೆಂಬಲ ವ್ಯಕ್ತವಾಯಿತು.ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ನಿವೃತ್ತ ಅಧಿಕಾರಿ ಸುರೇಶ ಜೆ.ಬಿ ಮಾತನಾಡಿ, ಕನಿಷ್ಠ ಜೀವನ ನಡೆಸಲು ೧೫೦೦೦ ಸಂಬಳ…

Read More

ವಿಜಯಪುರದಲ್ಲಿ 300 ಮೀಟರ್ ಉದ್ದದ ತಿರಂಗಾ ಯಾತ್ರೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 14: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಗರದಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ 300 ಮೀ ಉದ್ದದ ಬೃಹತ್ ತಿರಂಗಾ ಯಾತ್ರೆಯನ್ನು ಗುರುವಾರ ಏರ್ಪಡಿಸಿತ್ತು.ಯಾತ್ರೆಯಲ್ಲಿ ನೂರಾರು ವಿದ್ಯಾರ್ಥಿಗಳು “ಭಾರತ್ ಮಾತಾ ಕೀ ಜೈ” “ವಂದೇ ಮಾತರಂ” ದೇಶ ಮೊದಲು ಎನ್ನುವ ಘೋಷಣೆಗಳನ್ನು ಕೂಗುತ್ತಾ ತಿರಂಗವನ್ನು ಹಿಡಿದು ನಗರದ ಶಿವಾಜಿ ವೃತ್ತದಿಂದ ಬಸವೇಶ್ವರ ವೃತ್ತದ ಮೂಲಕ ಸಿದ್ದೇಶ್ವರ ದೇವಸ್ಥಾನದವರೆಗೆ ತಿರಂಗಾ ಯಾತ್ರೆಯಲ್ಲಿ ಭಾಗವಹಿಸಿದ್ದರು.ಈ ಸಂದರ್ಭದಲ್ಲಿ ಎಬಿವಿಪಿಯ ರಾಜ್ಯ ಕಾರ್ಯದರ್ಶಿ ಸಚಿನ ಕುಳಗೇರಿ…

Read More

ವಿದೇಶದಲ್ಲಿ ಅಧ್ಯಯನ ಮಾಡಲು ಬಯಸುವವರಿಗೆ ಅವಕಾಶ

ಸಪ್ತಸಾಗರ ವಾರ್ತೆ,ಬೆಂಗಳೂರು, ಆ. 14: ಕರ್ನಾಟಕ ವೃತ್ತಿಪರ ತರಬೇತಿ ಹಾಗೂ ಕೌಶಲ್ಯ ನಿಗಮ ವತಿಯಿಂದ ಆ. 17ರಂದು ಬೆಂಗಳೂರಿನ ಹೋಟೆಲ್ ಲಲಿತ್ ಅಶೋಕ್‌ನಲ್ಲಿ 2025 ನೇ ಸಾಲಿನ ವಿದೇಶಗಳಲ್ಲಿ ಅಧ್ಯಯನ ಮೇಳ ಆಯೋಜಿಸಿದೆ ಎಂದು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ( ಶಿವಕಾಂತಮ್ಮ) ನಾಯಕ ತಿಳಿಸಿದ್ದಾರೆ.ಎಕ್ಸ್‌ಪೋದಲ್ಲಿ 60 ಕ್ಕೂ ಹೆಚ್ಚು ಪ್ರಮುಖ ಜಾಗತಿಕ ವಿಶ್ವವಿದ್ಯಾಲಯಗಳು ಭಾಗವಹಿಸುವ ನಿರೀಕ್ಷೆ ಇದ್ದು, ವಿಶ್ವವಿದ್ಯಾಲಯದ ಪ್ರತಿನಿಧಿಗಳೊಂದಿಗೆ ಒನ್-ಆನ್-ಒನ್ ಸೆಷನ್, ಸ್ಪಾಟ್ ವಿದ್ಯಾರ್ಥಿ ವೇತನಗಳು ಮತ್ತು ಅರ್ಹತಾ ಮೌಲ್ಯಮಾಪನಗಳು, ವೀಸಾ…

Read More

ಸೆ. 13 ರಂದು ಜಿಲ್ಲೆಯಾದ್ಯಂತ ರಾಷ್ಟ್ರೀಯ ಲೋಕ ಅದಾಲತ್:ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಕ್ಕೆ ಅವಕಾಶ-ಜಿಲ್ಲಾ ನ್ಯಾಯಾಧೀಶ ಹರೀಶ್

ಸಪ್ತಸಾಗರ ವಾರ್ತೆ ವಿಜಯಪುರ, ಆ. 14: ಜಿಲ್ಲಾ ಕೇಂದ್ರವೂ ಸೇರಿದಂತೆ ಜಿಲ್ಲೆಯಾದ್ಯಂತ ಇರುವ ಎಲ್ಲ ಅಧೀನ ನ್ಯಾಯಾಲಯಗಳಲ್ಲಿ ಸೆಪ್ಟೆಂಬರ್ 13ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದ್ದು, ಈ ಅದಾಲತ್‌ನಲ್ಲಿ ಕಕ್ಷಿದಾರರು ಭಾಗವಹಿಸಿ ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಕ್ಕೆ ಅವಕಾಶವಿರುವುದರಿಂದ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹರೀಶ. ಎ ಅವರು ತಿಳಿಸಿದರು.ಗುರುವಾರ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಎಡಿಆರ್ ಕಟ್ಟಡದಲ್ಲಿ…

Read More

ಶಾಸಕ ಯತ್ನಾಳ್ ವಿರುದ್ಧ ದೂರು ದಾಖಲು

ಸಪ್ತಸಾಗರ ವಾರ್ತೆ, ವಿಜಯಪುರ,ಆ. 13:ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಗಾಂಧಿ ಚೌಕ ಪೊಲೀಸ್ ಠಾಣೆಯಲ್ಲಿ ಬುಧವಾರ ದೂರು ದಾಖಲಾಗಿದೆ.ಇತ್ತೀಚೆಗೆ ಕೊಪ್ಪಳದಲ್ಲಿ ನಡೆದ ಗವಿಸಿದ್ದಪ್ಪ ನಾಯಕ್ ಎಂಬ ಯುವಕನ ಕೊಲೆ ಹಿನ್ನೆಲೆಯಲ್ಲಿ ಕುಟುಂಬಸ್ಥರಿಗೆ ಸಾಂತ್ವನ ಹೇಳಲು ಹೋದ ಸಂದರ್ಭದಲ್ಲಿ ಮುಸ್ಲಿಂ ಯುವತಿಯರನ್ನು ಮದುವೆಯಾಗುವ ಹಿಂದೂ ಯುವಕರಿಗೆ 5 ಲಕ್ಷ ರೂ. ನಗದು ಬಹುಮಾನ ನೀಡುವುದಾಗಿ ಶಾಸಕ ಯತ್ನಾಳ್ ಹೇಳಿಕೆ ನೀಡಿದ್ದರು. ಈ ಹೇಳಿಕೆಯಿಂದ ಸಮಾಜದಲ್ಲಿ ಶಾಂತಿ ಸೌಹಾರ್ದತೆ ಕದಡುವಂತಿದೆ. ಹಾಗಾಗಿ ಶಾಸಕರ ವಿರುದ್ಧ ಕಾನೂನು…

Read More

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುಧ್ಧ ಷಡ್ಯಂತ್ರ ರೂಪಿಸಿದವರನ್ನು ಶಿಕ್ಷೆಗೆ ಗುರಿಪಡಿಸುವಂತೆ ಆಗ್ರಹ

ಸಪ್ತಸಾಗರ, ವಾರ್ತೆ, ವಿಜಯಪುರ, ಆ. 13 :ಪವಿತ್ರ ಪುಣ್ಯ ಕ್ಷೇತ್ರ ಧರ್ಮಸ್ಥಳ ವಿರುಧ್ಧ ಷಡ್ಯಂತ್ರ ರೂಪಿಸಿದವರನ್ನು ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿ ವಿವಿಧ ಹಿಂದೂ ಸಂಘಟನೆ ಮುಖಂಡರು ಹಾಗೂ ಧರ್ಮಸ್ಥಳದ ಭಕ್ತಾದಿಗಳು ಬುಧವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.ನಗರದ ಸಿದ್ಧೇಶ್ವರ ದೇವಸ್ಥಾನದಿಂದ ಪ್ರಮುಖ ಬೀದಿಗಳಲ್ಲಿ ಬೃಹತ್ ಪ್ರತಿಭಟನೆ ಮೆರವಣಿಗೆ ನಡೆಯಿತು. ಅಂಬೇಡ್ಕರ್ ವೃತ್ತಕ್ಕೆ ಆಗಮಿಸಿದ ಮೆರವಣಿಗೆ ನಂತರ ಬೃಹತ್ ಪ್ರತಿಭಟನೆ ನಡೆಸಲಾಯಿತು.ನಿಂಬೆ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಅಶೋಕ ಅಲ್ಲಾಪುರ, ಪ್ರಮುಖರಾದ ಶಿವಾನಂದ ದೇಸಾಯಿ, ಅಪ್ಪುಗೌಡ ಪಾಟೀಲ್(ಮನಗೂಳಿ),…

Read More

ನಾಳೆಯಿಂದ ಸಾರವಾಡದಲ್ಲಿಈಶ್ವರ ಹಾಗೂ ಮಾರುತಿ ದೇವರ ಜಾತ್ರೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ.13 :ಜಿಲ್ಲೆಯ ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದಲ್ಲಿ ಶ್ರೀ ಈಶ್ವರ ಹಾಗೂ ಶ್ರೀ ಮಾರುತಿ ದೇವರ ಜಾತ್ರಾ ಮಹೋತ್ಸವವು ಇದೇ ದಿ.೧೪ ರಿಂದ ಐದು ದಿನಗಳವರೆಗೆ ವಿಜೃಂಭಣೆಯಿಂದ ಜರುಗಲಿದೆ.ಜಾತ್ರೆಯ ಅಂಗವಾಗಿ ವಿವಿಧ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.ದಿ.14 ರಂದು ವಿವಿಧ ವಾದ್ಯ ಮೇಳ ಜಾಗೂ ಪಲ್ಲಕ್ಕಿ ಉತ್ಸವದೊಂದಿಗೆ ಕುಲಕರ್ಣಿ ಅವರ ಮನೆಯಿಂದ ಮಾರುತಿ ದೇವರ ಉತ್ಸವ ಮೂರ್ತಿಯನ್ನು ಮಾರುತಿ ದೇವಸ್ಥಾನಕ್ಕೆ ತಂದು ಬಳಿಕ ಓಕಳಿ ಕಂಬ ನಿಲ್ಲಿಸುವುದರೊಂದಿಗೆ ಜಾತ್ರೆಗೆ ವಿದ್ಯುಕ್ತವಾಗಿ ಚಾಲನೆ…

Read More

ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರಿಗೆ ಮೂಲಭೂತ ಸೌಕರ್ಯ, ನೂತನ ಕಟ್ಟಡ ಮಂಜೂರಿಗೆ ಆಗ್ರಹಿಸಿ ಡಿ.ವಿ.ಪಿ ಮನವಿ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 13: ನಗರದ ಗಾಂಧಿ ಚೌಕ್ ನಲ್ಲಿರುವ ಶಿಕ್ಷಣ ಇಲಾಖೆಯ ಮಹಿಳಾ ಶಾಲಾ ಕಾಲೇಜು ಕ್ಯಾಂಪಸ್ ನಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರಿಗೆ ಮೂಲಭೂತ ಸೌಕರ್ಯ ಮತ್ತು ನೂತನ ಕಟ್ಟಡ ಮಂಜೂರು ಮಾಡಬೇಕೆಂದು ದಲಿತ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಸಂಚಾಲಕ ಅಕ್ಷಯಕುಮಾರ ಅಜಮನಿ ಅವರು ಮಾತನಾಡಿ, ಗಾಂಧಿ ಚೌಕ್ ಕ್ಯಾಂಪಸ್ ನಲ್ಲಿ ಇರುವ ಮಹಿಳಾ ಶಾಲಾ ಕಾಲೇಜು ಐತಿಹಾಸಿಕ ಹಿನ್ನಲೆವುಳ್ಳದ್ದಾಗಿದೆ. ಬ್ರಿಟಿಷರ ಕಾಲದಿಂದಲ್ಲಿ ಪ್ರಾರಂಭವಾದ ಈ ಕಾಲೇಜು ಇದು…

Read More

ಸಾಹಿತಿ ಪ್ರೊ. ದೊಡ್ಡಣ್ಣ ಭಜಂತ್ರಿಯವರಿಗೆಸಾಹಿತ್ಯ ಭೂಷಣ ಪ್ರಶಸ್ತಿ ಪ್ರದಾನ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 13:ಸಾಹಿತಿ ಪ್ರೊ. ದೊಡ್ಡಣ್ಣ ಭಜಂತ್ರಿ ಅವರಿಗೆ ಸಾಹಿತ್ಯ ಭೂಷಣ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.ಬಬಲೇಶ್ವರ ತಾಲೂಕಿನ ವಿಜಯಪುರ ಜಿಲ್ಲೆಯ ನಿಡೋಣಿ ಗ್ರಾಮದಲ್ಲಿ ಜರುಗಿದ 918ನೇ ಚಂದಯ್ಯ ಶರಣರ ಜಯಂತಿಯ ಆಚರಣೆಯ ಕಾರ್ಯಕ್ರಮದಲ್ಲಿ ನಿಡೋಣಿಯ ಕಾಯಕಯೋಗಿ ಶರಣ ನುಲಿಯ ಚಂದಯ್ಯ ಭಜಂತ್ರಿ ಅಭಿವೃದ್ಧಿ ಸಂಘದವರು ಖ್ಯಾತ ಬಂಡಾಯ ಸಾಹಿತಿ ಪ್ರೊ.ದೊಡ್ಡಣ್ಣ ಬಜಂತ್ರಿ ಅವರಿಗೆ “ಸಾಹಿತ್ಯ ಭೂಷಣ”ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.ಪ್ರೊ. ದೊಡ್ಡಣ್ಣ ಭಜಂತ್ರಿಯವರು ಕಾಲ ಕೆಟ್ಟತ ತಂಗಿ, ಲಚ್ಚ, ತುಂತುರು, ತಲ್ಲಣದ ಹಕ್ಕಿಹಾಡು,…

Read More

ರಂಭಾಪುರದಲ್ಲಿ ಜೋಡು ಕುದುರೆ ಓಟದ ಸ್ಪರ್ಧೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 13: ತಾಲೂಕಿನ ರಂಭಾಪುರ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ ಉತ್ಸವದ ಪೂರ್ವಭಾವಿಯಾಗಿ ರೈತರಿಗಾಗಿ ಜೋಡು ಕುದುರೆ ಓಟದ ಸ್ಪರ್ಧೆ ಏರ್ಪಡಿಸಲಾಗಿತ್ತು.ಸ್ಪರ್ಧೆಯಲ್ಲಿ ವಿಜೇತರಾದ ರೈತರಿಗೆ ಊರಿನ ಹಿರಿಯರು, ಯುವಕರು ಬಹುಮಾನಗಳನ್ನು ವಿತರಿಸಿದರು.ಸಂಗನಗೌಡ ಪಾಟೀಲ, ಈರನಗೌಡ ಪಾಟೀಲ, ಧರೆಪ್ಪ ಪೂಜಾರಿ, ಶರಣು ಪೂಜಾರಿ, ಶ್ರೀಶೈಲ ಲೋಗಾವಿ, ಕೆಂಚಪ್ಪ ಲೋಗಾವಿ, ಸಂತೋಷ ಮೆಂಡೆಗಾರ, ರಾಮನಗೌಡ ಪಾಟೀಲ ಮುಂತಾದವರು ಉಪಸ್ಥಿತರಿದ್ದರು.

Read More