ವಿಜಯಪುರ ಜಿಲ್ಲೆಯಲ್ಲಿ ಜೋಡಿ ಕೊಲೆ

ಸಪ್ತಸಾಗರ ವಾರ್ತೆ ವಿಜಯಪುರ, ಅ. 13:ವಿಜಯಪುರ ತಾಲೂಕಿನ ಕನ್ನೂರು ಗ್ರಾಮದಲ್ಲಿ ಹಳೆಯ ವೈಷಮ್ಯ ಹಿನ್ನೆಲೆ ಬರ್ಬರವಾಗಿ ಕೊಲೆ ನಡೆದಿದೆ.ಸಾಗರ ಬೆಳುಂಡಗಿ (25), ಇಸಾಕ್ ಖರೇಷಿ (24) ಕೊಲೆಗಿಡಾದ ವ್ಯಕ್ತಿಗಳು.ಕಳೆದ ಎರಡು ವರ್ಷಗಳ ಹಿಂದೆ ಕೊಲೆಗೀಡಾದ ವ್ಯಕ್ತಿಗಳು ಅದೇ ಊರಿನ ಈರನಗೌಡ ಎಂಬಾತನ ಮೇಲೆ ಹಲ್ಲೆ ನಡೆಸಿದ್ದರು. ಈರನಗೌಡ ಆಸ್ಪತ್ರೆಯಲ್ಲಿ ಕೆಲದಿನ ದಾಖಲಾಗಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದ. ಈ ದ್ವೇಷದ ಕಾರಣ ಈ ಇಬ್ಬರ ಕೊಲೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.ಘಟನಾ ಸ್ಥಳಕ್ಕೆ ಹಿರಿಯ ಪೋಲಿಸ್ ಅಧಿಕಾರಿಗಳು ಭೇಟಿ…

Read More

ನಿವೃತ್ತ ಸರಕಾರಿ ನೌಕರರ ಸೇವೆಗಾಗಿ ಸದಾಸಿದ್ದ – ಅಬ್ದುಲ್ ರಹಿಮ್ ಖಾಜಿ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 12:ನಿವೃತ್ತ ಸರ್ಕಾರಿ ನೌಕರರ ಸೇವೆಗೆ ನಾನು ಸದಾ ಬದ್ಧನಾಗಿರುವೆ ಎಂದು ರಾಜ್ಯ ಸರಕಾರಿ ನಿವೃತ್ತ ಮುಸ್ಲಿಂ ಕ್ಷೇಮಾಭಿವೃದ್ದಿ ಸಂಘದ ರಾಜ್ಯಾಧ್ಯಕ್ಷ ಅಬ್ದುಲರಹಿಮ್ ಖಾಜಿ ಹೇಳಿದರು.ನಗರದ ಯಾಸೀನ್ ಮಸೀದ್ ಹಿಂದುಗಡೆ ಇರುವ ನ್ಯೂ ಲೈಫ್ ಪ್ರೀ ಪ್ರೈಮರಿ ಶಾಲೆಯಲ್ಲಿ ಆಯೋಜಿಸಲಾಗಿದ್ದ ನಿವೃತ್ತ ಸರ್ಕಾರಿ ನೌಕರರ ಸಭೆಯಲ್ಲಿ ಅವರು ಮಾತನಾಡಿದರು.ನಿವೃತ್ತ ಸರಕಾರಿ ನೌಕರರ ಸಮಸ್ಯೆಗಳ ಕುರಿತು ವಿಶೇಷವಾಗಿ ಚರ್ಚಿಸಿ ವಿಜಯಪುರ ಜಿಲ್ಲೆಯ ನಿವೃತ್ತ ನೌಕರರ ಸೇವೆಗಾಗಿ ನಾನು ಸದಾ ಸಿದ್ದ. ಆನ್‌ಲೈನ್ ಯುಗದಲ್ಲಿ ಪ್ರತಿ…

Read More

ಅ. 14ರಂದು ಧಮ್ಮ ಚಕ್ರ ಪರಿವರ್ತನ ದಿನ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 12 : ಶಾಂತಿ, ಸದ್ಭಾವನೆಯನ್ನು ಅರಳಿಸುವುದೇ ಬೌದ್ಧ ಧರ್ಮದ ದಿವ್ಯ ಸಂದೇಶ ಹಾಗೂ ಉದ್ದೇಶವಾಗಿದೆ. ಈ ಕಾರ್ಯವನ್ನಿರಿಸಿಕೊಂಡು ಅ.೧೪ ರಂದು ಸಾರಿಪುತ್ರ-ಬೋಧಿಧಮ್ಮ ಬುದ್ಧವಿಹಾರದಲ್ಲಿ ಧಮ್ಮಚಕ್ರ ಪರಿವರ್ತನ ದಿನ ಹಾಗೂ ವರ್ಷಾವಾಸ ಸಮಾರೋಪ ಕಾರ್ಯಕ್ರಮ, ಧಮ್ಮ ರಥಯಾತ್ರೆ ನಡೆಯಲಿದೆ ಎಂದು ಬೌದ್ಧ ವಿಹಾರ ನಿರ್ಮಾಣ ಸಮಿತಿ ಗೌರವಾಧ್ಯಕ್ಷ, ಝೆನ್ ಮಾಸ್ಟರ್ ಡಾ. ಶಾಕು ಬೋಧಿಧಮ್ಮ ಹೇಳಿದರು.ಸುದ್ದಿಗೋಷ್ಠಿಯಲ್ಲಿ ವಿವರಣೆ ನೀಡಿದ ಅವರು, ಭಗವಾನ ಬುದ್ಧರು ಸಾರಾನಾಥದಲ್ಲಿ ಧರ್ಮೋಪದೇಶ ಮಾಡುವ ಮೂಲಕ ಧಮ್ಮಚಕ್ರವನ್ನು ಸ್ಥಾಪಿಸಿದರು, ಸಾಮ್ರಾಟ…

Read More

ಫಲಾನುಭವಿಗಳಿಗೆ ವಾಹನ ವಿತರಿಸಿದ ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 12 : ತಮ್ಮ ತವರು ಕ್ಷೇತ್ರ ಬಸವನಬಾಗೇವಾಡಿ ವಿಧಾನಸಭೆ ವ್ಯಾಪ್ತಿಯ ವಿವಿಧ ಫಲಾನುಭವಿಗಳಿಗೆ ವಿವಿಧ ಇಲಾಖೆಗಳ ಯೋಜನೆ ಅಡಿಯಲ್ಲಿ ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ವಾಹನಗಳನ್ನು ವಿತರಿಸಿದರು.ನಗರದಲ್ಲಿರುವ ಗೃಹ ಕಛೇರಿಯಲ್ಲಿ ಭಾನುವಾರ ಮೀನುಗಾರಿಕೆ ಇಲಾಖೆಯಿಂದ ನಿಡಗುಂದಿ ತಾಲೂಕಿನ ಅರಳದಿನ್ನಿ ಗ್ರಾಮದ ಮಹಾಂತೇಶ ವಿಠ್ಠಲ ಧನವೆ ಇವರಿಗೆ ಮಾರುಕಟ್ಟೆಗೆ ಮೀನು ಸಾಗಾಟಕ್ಕೆ ಸಚಿವರಾದ ಶಿವಾನಂದ ಪಾಟೀಲ ವಾಹನ ವಿತರಿಸಿದರು.2025-26 ನೇ ಸಾಲಿನಲ್ಲಿ ಮೀನು ಮಾರುಕಟ್ಟೆ…

Read More

ವಿಜಯಪುರ ಜಿಲ್ಲೆಯಲ್ಲಿ ಹಲವೆಡೆ ಭೂಕಂಪನ

ಸಪ್ತಸಾಗರ ವಾರ್ತೆ ,ವಿಜಯಪುರ,ಅ.ll:ಜಿಲ್ಲೆಯ ತಿಕೋಟ ಹಾಗೂ ವಿಜಯಪುರ ತಾಲೂಕಿನ ಹಲವೆಡೆ ಜನರಿಗೆ ಭೂಕಂಪನದ ಅನುಭವವಾಗಿದ್ದು, ಜನರು ಆತಂಕಕ್ಕೀಡಾಗಿದ್ದಾರೆ.ಹೊನ್ನುಟಗಿ, ಕವಲಗಿ, ಕಗ್ಗೋಡ, ಮಧಬಾವಿ, ದ್ಯಾಬೇರಿ ಭಾಗಗಳು ಸೇರಿದಂತೆ, ತಿಕೋಟ ತಾಲೂಕಿನ ಹಲವೆಡೆ ಭೂಮಿ ಕಂಪಿಸಿದೆ.ಶುಕ್ರವಾರ ರಾತ್ರಿ 10:01 ಕ್ಕೆ ಭೂಕಂಪನ ಅನುಭವ ಆಗಿದೆ.ಭಾರೀ ಸದ್ದಿನೊಂದಿಗೆ ಭೂಮಿ ಕಂಪಿಸಿದ ಅನುಭವ ಆಗಿದ್ದು, ವಿಜಯಪುರ ಗ್ರಾಮೀಣ ಭಾಗದ 12 ಕಿ.ಮೀ ಸುತ್ತಮುತ್ತ ಭೂಕಂಪನದ ಅನುಭವ ಆಗಿದೆ. ಭೂಕಂಪನ ಆಪ್‌ಗಳಲ್ಲೂ ಭೂಕಂಪನ ತೀವ್ರತೆ ದಾಖಲಾಗಿದೆ. 2.8 ರಷ್ಟು ಭೂಕಂಪನದ ತೀವ್ರತೆ ದಾಖಲಾಗಿದ್ದು, ಮೇಲಿಂದ…

Read More

ಆರೋಗ್ಯ ಸಮಸ್ಯೆಗಳ ಪರಿಹಾರಕ್ಕಾಗಿ ಒಟ್ಟಾಗಿ ಕೆಲಸ ಮಾಡಬೇಕು-ಮಚಾಡೋ

ಸಪ್ತಸಾಗರ ವಾರ್ತೆ,ವಿಜಯಪುರ, ಅ. 11: ಸಮುದಾಯಗಳನ್ನು ಪೀಡಿಸುವ ಆರೋಗ್ಯ ಸಮಸ್ಯೆಗಳ ಪರಿಹಾರಕ್ಕಾಗಿ ಒಟ್ಟಾಗಿ ಕೆಲಸ ಮಾಡಬೇಕು ಎಂದು ಬ್ರೆಜಿಲ್ ನ ಸಾ ಪೌಲೊ ವಿಶ್ವವಿದ್ಯಾಲಯದ ಶರೀರ ಕ್ರಿಯಾ ಶಾಸ್ತ್ರ ವಿಭಾಗದ ಸಲಹೆಗಾರ ಪ್ರೊ. ಬೆನೆಡಿಟೊ ಎಚ್. ಮಚಾಡೊ ಹೇಳಿದ್ದಾರೆ.ಗುರುವಾರ ತಮ್ಮ ಪತ್ನಿ ಮತ್ತು ತಮ್ಮದೇ ವಿವಿಯ ಔಷಧ ರಸಾಯನಶಾಸ್ತ್ರ ವಿಭಾಗದ ನಿಕಟಪೂರ್ವ ಪ್ರಾಧ್ಯಾಪಕಿ ಪ್ರೊ. ಲೂಸಿಯಾನ್ ಎಂ. ಬೆನಧ್ಯಾಕ್ ಅವರ ಜೊತೆ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ನಗರದ ಬಿ.ಎಲ್.ಡಿ.ಇ ಸಂಸ್ಶೆಯ ಶ್ರೀ ಸಂಗನಬಸವ ಮಹಾಸ್ವಾಮೀಜಿ ಕಾಲೇಜ್ ಆಫ್…

Read More

ಜನಕಲ್ಯಾಣ ಸೇವೆಗಳು ಅರ್ಹರನ್ನು ತಲುಪಲಿ: ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ,ಬಸವನಬಾಗೇವಾಡಿ, ಅ. 11:ಪ್ರಸಕ್ತ ಸಂದರ್ಭದಲ್ಲಿ ಬಡ ಜನರ ಕಲ್ಯಾಣಕ್ಕೆ ಸರ್ಕಾರ ಅನೇಕ ಸೇವೆಗಳನ್ನು ಒದಗಿಸುತ್ತಿದ್ದು, ಅರ್ಹರಿಗೆ ತಲುಪಬೇಕಿದೆ. ಇದರ ಭಾಗವಾಗಿ ಜನರ ಆರೋಗ್ಯ ಸೇವೆಗಾಗಿ ಇ-ಶ್ರಮ ಕಾರ್ಡ್ ಹಾಗೂ ಆಯುಷ್ಮಾನ್ ಭಾರತ ಕಾರ್ಡ್ ವಿತರಣೆ ಶಿಬಿರ ಹಾಗೂ ಉಚಿತ ನೋಂದಣಿ ಕಾರ್ಯ ನಡೆಯುತ್ತಿದೆ. ಅರ್ಹರಿಗೆ ಸರ್ಕಾರಿ ಸೌಲಭ್ಯ ತಲುಪಿಸುವ ಕೆಲಸವನ್ನು ರಾಷ್ಟ್ರೀಯ ಬಸವ ಸೈನ್ಯ ಮಾಡುತ್ತಿರುವುದು ಶ್ಲಾಘನೀಯ ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.ಶನಿವಾರ ಪಟ್ಟಣದ ಇಂಗಳೇಶ್ವರ…

Read More

ಋತುಚಕ್ರ ರಜೆಯ ಸೌಲಭ್ಯ ಒದಗಿಸಲು ಸರ್ಕಾರದ ನಿರ್ಧಾರ: ಸ್ವಾಗತ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 11: ಮಹಿಳಾ ನೌಕರರಿಗೆ ವರ್ಷಕ್ಕೆ 12 ಋತುಚಕ್ರ ರಜೆಯ ಸೌಲಭ್ಯವನ್ನು ಒದಗಿಸಲು ಸರಕಾರ ನಿರ್ಧಾರ ಮಾಡಿದ್ದನ್ನು ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ರಾಜ್ಯಾಧ್ಯಕ್ಷೆ ಲತಾ ಬಿರಾದಾರ ಅವರು ಸ್ವಾಗತಿಸಿದ್ದಾರೆ. ಈ ನಿರ್ಧಾರದಿಂದ ಮಹಿಳೆಯರ ಸಾಂವಿಧಾನಿಕ ಸ್ಥಾನಮಾನ ಎತ್ತಿ ಹಿಡಿದಂತಾಗಿದೆ. ಏಕೆಂದರೆ ಇದು ಸಂವಿಧಾನದ 21 ನೇ ವಿಧಿಗನುಗುಣವಾಗಿ ಮಹಿಳೆಯರಿಗೆ ಘನತೆಯಿಂದ ಬದುಕುವ ಹಕ್ಕನ್ನು ಒದಗಿಸಿಕೊಟ್ಟಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕರ್ನಾಟಕ ಘನ ಸರ್ಕಾರವು ಈ ಐತಿಹಾಸಿಕ ಮಹತ್ವದ…

Read More

ನಾಗಠಾಣದಲ್ಲಿ ಅಂತಾರಾಷ್ಟ್ರೀಯ ಹೆಣ್ಣು ಮಗುವಿನ ದಿನ ಆಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 11: ಇಂದು ಅಂತಾರಾಷ್ಟ್ರೀಯ ಹೆಣ್ಣು ಮಗುವಿನ ದಿನ. ಈ ನಿಮಿತ್ತ ತಾಲೂಕಿನ ನಾಗಠಾಣ ಗ್ರಾಮದ ಹೆಣ್ಣು ಮಕ್ಕಳಾದ ಅನುಶ್ರೀ- ಶ್ರೀನಿಧಿ ಬಂಡೆ, ಸಮೃದ್ಧಿ-ದೀಪಾ,ಭಾಗ್ಯ-ಸನ್ನಿಧಿ ಅವರು ಪರಸ್ಪರ ಸಿಹಿ ಹಂಚಿಕೊಂಡು ಅಂತಾರಾಷ್ಟ್ರೀಯ ಹೆಣ್ಣು ಮಗುವಿನ ದಿನವನ್ನು ಆಚರಿಸಿದರು.ಹೆಣ್ಣು ಎಂದರೆ ಮನೆಯ ಬೆಳಕು. ಹುಟ್ಟಿನಿಂದ ಸಾಯುವ ತನಕ ವಿವಿಧ ಪಾತ್ರಗಳನ್ನು ಸಮರ್ಥವಾಗಿ ನಿಭಾಯಿಸಿಕೊಂಡು ಹೋಗುವವಳು. ಜಗದ ಸೃಷ್ಟಿಕರ್ತೆಯೇ ಅವಳಾಗಿರುವಾಗ ಆಕೆ ಇಲ್ಲದೆ ಜೀವಿಸುವುದು ಕಷ್ಟದಾಯಕ. ಇಂದಿನ ದಿನಗಳಲ್ಲಿ ಹೆಣ್ಣು ಮಕ್ಕಳು ವಿವಿಧ ಕ್ಷೇತ್ರದಲ್ಲಿ ಸಾಧನೆಗೈದು…

Read More

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

ಸಪ್ತಸಾಗರ ವಾರ್ತೆ, ಬೆಂಗಳೂರು, ಅ.11:“ರಸ್ತೆ ಕಾಮಗಾರಿಗಳ ವೇಳೆ ವೆಟ್ ಮಿಕ್ಸಿಂಗ್ ವಿಧಾನ ಬಳಸಿಕೊಳ್ಳಲಾಗಿದೆ. ಕೆಲವೊಂದು ತುರ್ತು ಸಂದರ್ಭದಲ್ಲಿ ಮಳೆಯಲ್ಲೂ ಡಾಂಬರು ಹಾಕುವುದಕ್ಕೆ ಈ ವಿಧಾನ ಬಳಕೆ ಮಾಡಲಾಗುತ್ತದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.ಸದಾಶಿವನಗರದ ನಿವಾಸದ ಬಳಿ ಶನಿವಾರ ಮುಂಜಾನೆ ಮಾಧ್ಯಮಗಳ ಪ್ರಶ್ನೆಗಳಿಗೆ ಡಿಸಿಎಂ ಅವರು ಪ್ರತಿಕ್ರಿಯಿಸಿದರು.ಮಾರತ್ ಹಳ್ಳಿ ಬಳಿ ಮಳೆಯಲ್ಲೇ ಡಾಂಬರು ಹಾಕುತ್ತಿದ್ದ ಬಗ್ಗೆ ಕೇಳಿದಾಗ, “ನಗರದಾದ್ಯಂತ ರಾತ್ರಿಯೆಲ್ಲಾ ಜೋರಾಗಿ ಮಳೆ ಸುರಿದಿದೆ. ನಮ್ಮ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡಿದ್ದಾರೆ, ಮಾಡುತ್ತಿದ್ದಾರೆ. ಎಲ್ಲಿಯೂ ಅವಘಡಗಳು ನಡೆದ…

Read More