ಹಲಸಂಗಿ ಗೆಳೆಯರ ಪ್ರತಿಷ್ಠಾನದ ಪ್ರಶಸ್ತಿ ಪ್ರಕಟ
ಮೂವರಿಗೆ ವಾರ್ಷಿಕ ಗೌರವ, ಮೂವರಿಗೆ ಯುವ ಪ್ರಶಸ್ತಿ ಸಪ್ತಸಾಗರ ವಾರ್ತೆ,ವಿಜಯಪುರ, ಜು.16:ಹಲಸಂಗಿ ಗೆಳೆಯರ ಪ್ರತಿಷ್ಠಾನದ 2022, 2023 ಹಾಗೂ 2024ನೇ ಸಾಲಿನ ವಾರ್ಷಿಕ ಗೌರವ ಮತ್ತು ಯುವ ಪ್ರಶಸ್ತಿಗಳನ್ನು ಪ್ರತಿಷ್ಠಾನದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ. ಆನಂದ ಕೆ. ಪ್ರಕಟಿಸಿದ್ದಾರೆ.ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಪ್ರತಿಷ್ಠಾನದ ಸಭೆಯಲ್ಲಿ ಆಯ್ಕೆ ಸಮಿತಿಯ ಶಿಫಾರಸಿನ ಮೇರೆಗೆ ಅರ್ಹ ಸಾಹಿತಿಗಳು ಹಾಗೂ ಯುವ ಬರಹಗಾರರನ್ನು ಅಂತಿಮವಾಗಿ ಆಯ್ಕೆ ಮಾಡಲಾಗಿದೆ.ಜಾನಪದ, ಸಮಗ್ರ ಸಾಹಿತ್ಯ ಹಾಗೂ ಸಂಶೋಧನೆ-ವಿಮರ್ಶೆ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಹಿತಿಗಳಿಗೆ ವಾರ್ಷಿಕ…


