ವೃಕ್ಷಥಾನ್ ಹೆರಿಟೇಜ್ ರನ್: ವಿದ್ಯಾರ್ಥಿಗಳಿಗೆ ನಿಬಂಧ ಸ್ಪರ್ಧೆ
ಸಪ್ತಸಾಗರ ವಾರ್ತೆ, ವಿಜಯಪುರ, ನ. 23: ಡಿಸೆಂಬರ್ 7 ರಂದು ನಗರದಲ್ಲಿ ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್-2025 ಅಂಗವಾಗಿ ಆಯೋಜಿಸಲಾಗಿದ್ದ ನಿಬಂಧ ಸ್ಪರ್ಧೆಗೆ ವಿದ್ಯಾರ್ಥಿಗಳಿಂದ ಭಾರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇಂದು ರವಿವಾರ ಬೆಳಿಗ್ಗೆ ಗಗನ್ ಮಹಲ್ದಲ್ಲಿ ನಿಬಂಧ ಸ್ಪರ್ಧೆಯಲ್ಲಿ 350ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೋಂಡು ಗಮನ ಸೆಳೆದಿದ್ದಾರೆ. ಕಳೆದ ವಾರ ನಗರದ ಪ್ರಾಚೀನ ಸ್ಮಾರಕಗಳನ್ನು ಕುಂಚದ ಮೂಲಕ ಬಿಡಿಸಿದ್ದ ಮಕ್ಕಳು ಇಂದು ಕಳೆದ ಒಂದು ದಶಕದಲ್ಲಿ ಬಸವನಾಡಿನ ಪರಿಸರದಲ್ಲಿ ಆಗಿರುವ ಅಮೂಲಾಗ್ರ ಬದಲಾವಣೆಯ ಕುರಿತು ನಿಬಂಧ ಬರೆಯುವ…


