11 ಗಂಟೆಯಲ್ಲಿ 20 ಎಕರೆ ಜಮೀನು ಹರಗಿದ ಎತ್ತುಗಳು

ಸಪ್ತಸಾಗರ ವಾರ್ತೆ, ವಿಜಯಪುರ, ಜು. 31:11 ಗಂಟೆಗಳಲ್ಲಿ ನಿರಂತರವಾಗಿ 20 ಎಕರೆ ಹೊಲವನ್ನು ಹರಗಿ ಎತ್ತುಗಳು ಸಾಧನೆ ಮಾಡಿದ ಅಪರೂಪದ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಕುದುರಿ ಸಾಲವಾಡಗಿ ಗ್ರಾಮದಲ್ಲಿ ನಡೆದಿದೆ.ಕುದುರಿ ಸಾಲವಾಡಗಿ ಗ್ರಾಮದ ಗುರುಸ್ವಾಮಿ ಚಿಕ್ಕಮಠ ಅವರ ಎತ್ತುಗಳು ಜಾಗೀರದಾರ ಅವರ ಹೊಲದಲ್ಲಿ ಬೆಳಿಗ್ಗೆ 6 ಗಂಟೆಯಿಂದ 4 ಗಂಟೆಯವರೆಗೆಬಿಡದೆ 20 ಎಕರೆ ಜಮೀನು ಹರಗಿ ಸಾಧನೆ ಮಾಡಿವೆ.ಸಾಧನೆ ಮಾಡಿದ ಎತ್ತುಗಳನ್ನು ರೈತರು ಗ್ರಾಮದಲ್ಲಿ ಮೆರವಣಿಗೆ ಮಾಡಿ ಸಂತೋಷ ಹಂಚಿಕೊಂಡರು.ಈ ಸಂದರ್ಭದಲ್ಲಿ ಎತ್ತುಗಳ…

Read More

ವಿಜಯಪುರ ಜಿಲ್ಲೆ ಸಚಿವರು, ಶಾಸಕರ ಜೊತೆಗೆ ಸಿಎಂ ಚರ್ಚೆ

ಸಪ್ತಸಾಗರ ವಾರ್ತೆ, ಬೆಂಗಳೂರು, ಜು. 31:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಜಯಪುರ ಜಿಲ್ಲೆ ಸಚಿವರು, ಶಾಸಕರ ಜೊತೆಗೆ ವಿವಿಧ ಅಭಿವೃದ್ಧಿ ಯೋಜನೆ ಹಾಗೂ ಕಾರ್ಯಕ್ರಮಗಳ ಬಗ್ಗೆ ಗುರುವಾರ ಬೆಂಗಳೂರಿನಲ್ಲಿ ಚರ್ಚಿಸಿದರು.ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ, ಸಕ್ಕರೆ ಸಚಿವ ಶಿವಾನಂದ ಪಾಟೀಲ, ಶಾಸಕರಾದ ವಿಠ್ಠಲ ಕಟಕದೊಂಡ, ಅಶೋಕ ಮನಗೂಳಿ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.

Read More

ಮತಗಳ್ಳತನ: ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಪ್ತಸಾಗರ ವಾರ್ತೆ, ಬೆಂಗಳೂರು, ಜು. 31 :ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮಹದೇವಪುರ ಮತ್ತು ರಾಜಾಜಿನಗರದಲ್ಲಿ ಮತಗಳ್ಳತನ ಆಗಿರುವ ಬಗ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಬೆಂಗಳೂರಿನ ಹಿಲ್ಟನ್ ಹೋಟೆಲಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಅವರು ಈ ವಿಷಯ ತಿಳಿಸಿದರು.ಹಾಗಾಗಿ ಅವರು ಆಗಸ್ಟ್ 4 ರಂದು ಪ್ರತಿಭಟನೆ ಹಮ್ಮಿಕೊಂಡು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳನ್ನು ಭೇಟಿಯಾಗಲಿದ್ದಾರೆ ಎಂದರು.

Read More

ವಿಜಯಪುರ: ಪಾಲಿಕೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಸಪ್ತಸಾಗರ ವಾರ್ತೆ, ಜು. 31:ಇಲ್ಲಿನ ಮಹಾನಗರ ಪಾಲಿಕೆಯ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ಗುರುವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ.ಪಾಲಿಕೆ ಕಚೇರಿಯ ಮೂರು ವಲಯಗಳಲ್ಲಿ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿ ಕಡತಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.ಮಹಾನಗರ ಪಾಲಿಕೆಯ ನಿರ್ಲಕ್ಷ್ಯ , ಭ್ರಷ್ಟಾಚಾರದ ಸಾರ್ವಜನಿಕ ದೂರುಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.ಲೋಕಾಯುಕ್ತ ಎಸ್ಪಿ ಟಿ. ಮಲ್ಲೇಶ ಅವರ ನೇತೃತ್ವದಲ್ಲಿ ದಾಳಿ ನಡೆದಿದೆ.

Read More

ಮಧುರಚೆನ್ನರ ಸಾಹಿತ್ಯಿಕ ಕಾರ್ಯ ಅನುಪಮವಾದುದು- ಸಂತೋಷ ಬಂಡೆ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 31:ಕನ್ನಡ ನವೋದಯದ ಪ್ರಾರಂಭಿಕ ಕಾಲದಲ್ಲಿನ ಮಹತ್ವದ ಬರಹಗಾರರಾದ ಮಧುರಚೆನ್ನರ ಸಾಹಿತ್ಯಿಕ ಕಾರ್ಯ ಅನುಪಮವಾದುದು. ಅವರು ಶಾಸನಗಳು, ಜನಪದ ಸಾಹಿತ್ಯದ ಸಂಶೋಧನೆ ಮಾಡುತ್ತಾ, ಆಧ್ಯಾತ್ಮಿಕ ಸಾಹಿತ್ಯದಲ್ಲಿ ವಿಶೇಷ ಆಸಕ್ತಿ ಹೊಂದಿದ್ದರು ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.ಗುರುವಾರ ತಾಲೂಕಿನ ನಾಗಠಾಣ ಗ್ರಾಮದ ಅರಿವು ಕೇಂದ್ರದಲ್ಲಿ ಹಮ್ಮಿಕೊಂಡ ಮಧುರಚೆನ್ನರ 122 ನೇ ಜನ್ಮ ದಿನಾಚರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.ಗ್ರಾಮೀಣ ಪ್ರದೇಶದಲ್ಲಿದ್ದು ಮಧುರಚೆನ್ನರು ಕಾವ್ಯ, ಆತ್ಮಕಥನ, ಸಂಶೋಧನೆ, ಜನಪದ ಸಾಹಿತ್ಯದಂತಹ ಪ್ರಕಾರಗಳಲ್ಲಿ ಮಾಡಿದ…

Read More

ಅವಮಾನ ಎನ್ನದೆ ನಿರಂತರವಾಗಿ ಸಮಾಜಮುಖಿ ಕೆಲಸ ಮಾಡಿ: ಡಾ. ಪ್ರಾಣೇಶ ಜಹಾಗೀರದಾರ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 30:ಸಮಾಜ ಸೇವೆಯಲ್ಲಿ ತೊಡಗಿಕೊಂಡವರನ್ನು ಜನ ಮೊದಲು ಅನುಮಾನದಿಂದ ನೋಡುತ್ತಾರೆ. ಆನಂತರ ಅಸೊಯೆಯಿಂದ ಅವಮಾನಿಸುತ್ತಾರೆ, ಇವೆರಡನ್ನು ಮೆಟ್ಟಿ ಮೇಲೇರಿದಾಗ ಸನ್ಮಾನಿಸುತ್ತಾರೆ. ಈ ರೀತಿ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸಾಮಾಜಿಕ ಕಾರ್ಯ ಮಾಡಬೇಕೆಂದು ಅಂತರಾಷ್ಟಿಯ ರೋಟರಿ ಜಿಲ್ಲೆ 3170ರ ಮಾಜಿ ಜಿಲ್ಲಾ ಪ್ರಾಂತಪಾಲರಾದ ಡಾ.ಪ್ರಾಣೇಶ ಜಹಾಗೀರದಾರ ಅವರು ಹೇಳಿದರು.ರೋಟರಿ ಪ್ರೋಬಸ್ ಕ್ಲಬ್ ವಿಜಯಪುರ ಉತ್ತರದ ಹೊಸ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು.ಇದೇ ಸಂದರ್ಭದಲ್ಲಿ ಕ್ಲಬ್ 25 ವರ್ಷ ಪೂರೈಸಿದ ನೆನಪಿಗಾಗಿ ಹೊರತಂದ ಬೆಳ್ಳಿಮಹೋತ್ಸವ…

Read More

ತೋಟದ ಮನೆ ನಿರ್ಮಾಣಕ್ಕೆ, ಹೈನೋದ್ಯಮಕ್ಕೆ ವಿಡಿಸಿಸಿ ಬ್ಯಾಂಕ್ ಸಾಲ: ಸಚಿವ ಶಿವಾನಂದ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 30:ಜಿಲ್ಲೆಯ ರೈತರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮೂಲಕ ನೀಡುವ ಶೂನ್ಯ ಬಡ್ಡಿ ದರದ ಸಾಲದ ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸದೃಢರಾಗಬೇಕು. ಅದರಿಂದ ರೈತರೇ ಸಾಲ ನೀಡುವಂತೆ ಅಂದರೆ ಜಿಲ್ಲಾ ಕೇಂದ್ರ ಬ್ಯಾಂಕ್ ನಲ್ಲಿ ಲಕ್ಷಾಂತರ ರೂ. ಠೇವಣಿ ಇಡುವಂತೆ ಆರ್ಥಿಕ ಉನ್ನತಿ ಸಾಧಿಸಬೇಕು ಎಂದು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರೂ ಆಗಿರುವ ಜವಳಿ, ಕೃಷಿ ಮಾರುಕಟ್ಟೆ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ ರೈತರಿಗೆ ಕಿವಿ…

Read More

ಶುಲ್ಕ ಮರುಪಾವತಿ ಯೋಜನೆ : ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ,ವಿಜಯಪುರ,ಜು. 30:ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿನ ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಹಾಗೂ ಅಲೆಮಾರಿ, ಅರೆಅಲೆಮಾರಿ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ ಹಾಗೂ ವಿದ್ಯಾಸಿರಿ- ಊಟ ಮತ್ತು ವಸತಿ ಸಹಾಯ ಯೋಜನೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅರ್ಹ ವಿದ್ಯಾರ್ಥಿಗಳು https://ssp.postmatric.karnataka.gov.in ವೆಬ್‌ಸೈಟ್ ನಲ್ಲಿ ಸೆಪ್ಟೆಂಬರ್ 30ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ https://bcwd.karnataka.gov.in ಹಾಗೂ 8050770005 ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತರು…

Read More

ಮಕ್ಕಳಿಗೆ ಶಿಕ್ಷಕರ ಮಾರ್ಗದರ್ಶನ ಅತ್ಯಗತ್ಯ : ಸಂಗಮೇಶ ಬಬಲೇಶ್ವರ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 30: ಶಾಲೆಗಳಲ್ಲಿ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ನೀಡಿ ಮಕ್ಕಳಿಗೆ ಸರಿಯಾದ ಮಾರ್ಗದರ್ಶನ ಮಾಡಬೇಕು ಎಂದು ಬಾಲವಿಕಾಸ ಅಕಾಡೆಮಿ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಕಿವಿಮಾತು ಹೇಳಿದರು.ಕೊಲ್ಹಾರ ಪಟ್ಟಣದ ರಾಣಿ ಚೆನ್ನಮ್ಮ ವಸತಿ ಶಾಲೆಗೆ ಭೇಟಿ ನೀಡಿ, ಮಕ್ಕಳಿಗೆ ಕಲ್ಪಿಸಲಾಗಿರುವ ಅಗತ್ಯ ಮೂಲಭೂತ ಸೌಲಭ್ಯಗಳು ಸೇರಿದಂತೆ ವಸತಿ ಶಾಲೆಯಲ್ಲಿನ ವ್ಯವಸ್ಥೆ ಕುರಿತು ಪರಿಶೀಲನೆ ನಡೆಸಿದ ಅವರು, ಮಕ್ಕಳಿಗೆ ಸ್ವತ: ತಾವೇ ಊಟ ಬಡಿಸಿ ಮಕ್ಕಳೊಂದಿಗೆ ಮಧ್ಯಾಹ್ನದ ಬಿಸಿಯೂಟ ಸವಿದ ನಂತರ, ಮಕ್ಕಳೊಂದಿಗೆ…

Read More

ಮಕ್ಕಳ ಉಜ್ವಲ ಭವಿಷ್ಯ ಸಾಕಾರಕ್ಕೆ ಅಧಿಕಾರಿಗಳು ಸ್ವಯಂಪ್ರೇರಿತರಾಗಿ ವಾರಕ್ಕೊಂದು ಸಲ ಹಾಸ್ಟೆಲ್‍ಗಳಿಗೆ ಭೇಟಿ ನೀಡಿ- ಅಧಿಕಾರಿಗಳಿಗೆ ಡಿಸಿ ಸಲಹೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು.30:ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯ ಜಿಲ್ಲೆಯಲ್ಲಿರುವ ಬಾಲಕ ಹಾಗೂ ಬಾಲಕಿಯರ ವಸತಿ ನಿಲಯ ಹಾಗೂ ವಸತಿ ಶಾಲೆಗಳಲ್ಲಿರುವ ವಿದ್ಯಾರ್ಥಿಗಳ ಭವಿಷ್ಯ ಹಾಗೂ ಅವರ ಜೀವನ ಸುಂದರಗೊಳಿಸಿಕೊಳ್ಳಲು ಸರ್ಕಾರ ಒದಗಿಸಿರುವ ಸೌಲಭ್ಯಗಳು ಸಮರ್ಪಕವಾಗಿ ದೊರಕುತ್ತಿರುವ ಕುರಿತು ಅಧಿಕಾರಿಗಳು ಸ್ವಯಂಪ್ರೇರಿತವಾಗಿ ವಾರಕ್ಕೊಂದು ಸಲ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಜಿಲ್ಲಾಧಿಕಾರಿ ಡಾ. ಆನಂದ ಕೆ.ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸಲಹೆ ನೀಡಿದರು. ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ…

Read More