ಭಾಷೆಯು ಬದುಕಿನ ಅನುಭವದ ಜೀವಾಳ : ಚಿಂತಕ ಲಕ್ಷ್ಮೀಶ ತೋಳ್ಪಾಡಿ

ಸಪ್ತಸಾಗರ ವಾರ್ತೆ,ಬೆಳಗಾವಿ, ಮೇ. 7: ಭಾಷೆ ಎನ್ನುವುದು ಒಂದು ಜೀವಂತ ಪದಾರ್ಥ. ಅದು ನಮ್ಮ ಜೀವನದ ಪ್ರತಿ ಅನುಭವದ ಜೀವಾಳ, ಅದನ್ನು ಬಹಳ ಮುತುವರ್ಜಿಯಿಂದ ಮನಸ್ಸಿನಿಂದ ಬಳಸಬೇಕು. ತಾಂತ್ರಿಕವಾಗಿ ಭಾಷೆಯನ್ನು ಬಳಸುವುದರಿಂದ ಸೃಜನಶೀಲತೆ ಅರಳುವುದಿಲ್ಲ ಎಂದು ಸಂಸ್ಕೃತಿ ಚಿಂತಕ ಲಕ್ಷ್ಮೀಶ ತೋಳ್ಪಾಡಿ ಹೇಳಿದರು.ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕನ್ನಡ ಸಂಘ, ಕುವೆಂಪು ಸಭಾಭವನದಲ್ಲಿ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.“ಕನ್ನಡ ಸಾಹಿತ್ಯ: ಮೌಲ್ಯ” ವಿಷಯದ ಮೇಲೆ ಉಪನ್ಯಾಸ ನೀಡಿದ ಅವರು ಸಾಹಿತ್ಯ ಮತ್ತು ತತ್ವಜ್ಞಾನಕ್ಕೆ ಸಮಾನವಾದ ಸ್ಥಾನವಿದೆ….

Read More

ಮಕ್ಕಳು ದೇಶದ ಆಸ್ತಿ, ಅವರನ್ನು ಪ್ರೀತಿಯಿಂದ ಬೆಳೆಸಿ-ಮೇಜರ್ ಎಸ್.ಸಿ. ಆನಂದ

ಸಪ್ತಸಾಗರ ವಾರ್ತೆ ವಿಜಯಪುರ,ಮೇ. 7 : “ಮಕ್ಕಳನ್ನು ಕೇವಲ ಒಳ್ಳೆಯ ಶಾಲೆಗೆ ಸೇರಿಸಿದರೆ ಪಾಲಕರ ಜವಾಬ್ದಾರಿ ಮುಗಿಯುವುದಿಲ್ಲ. ಅವರ ದೈನಂದಿನ ಚಟುವಟಿಕೆಗಳನ್ನು ಗಮನಿಸಿ, ಅವರಲ್ಲಿ ನಾಗರಿಕ ಪ್ರಜ್ಞೆ ಹಾಗೂ ಸಂಸ್ಕಾರ ಬೆಳೆಸುವುದು ತಂದೆ-ತಾಯಂದಿರ ಆದ್ಯ ಕರ್ತವ್ಯವಾಗಿದೆ,” ಎಂದು ಮೇಜರ್ ಎಸ್ ಸಿ ಆನಂದ ಅಭಿಪ್ರಾಯಪಟ್ಟರು. ವಿಜಯಪುರ ಜಿಲ್ಲೆಯ ಕನ್ನೂರಿನ ಶಾಂತಿ ಕುಟೀರ ಆಶ್ರಮದಲ್ಲಿ, ಶಾಂತಿ ಕುಟೀರ ಟ್ರಸ್ಟ್ ಹಾಗೂ ಶ್ರೀಶೈಲೇಶ್ವರ ವಿದ್ಯಾಕೇಂದ್ರ ಸಂಡೂರು ಮತ್ತು ಭಾರತೀಯ ಸುರಾಜ್ಯ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಉಚಿತ ಶೈಕ್ಷಣಿಕ…

Read More

ರಾಜ್ಯದಲ್ಲಿ ಹೋರಾಟಕ್ಕೆ ಇನ್ನೊಂದು ಹೆಸರು ಯಡಿಯೂರಪ್ಪ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 6:ರಾಜ್ಯದಲ್ಲಿ ಹೋರಾಟಕ್ಕೆ ಇನ್ನೊಂದು ಹೆಸರು ಯಡಿಯೂರಪ್ಪ ಎಂದು ಜಮಖಂಡಿ ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ ಅವರು ಮಾತನಾಡಿದರು.ಇಲ್ಲಿನ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.ರಾಜ್ಯದಲ್ಲಿ ಬಿಜೆಪಿಯನ್ನು ತಳಮಟ್ಟದಿಂದ ಕಟ್ಟಿದಂಥ ಹುಟ್ಟು ಹೋರಾಟಗಾರ ಬಿ.ಎಸ್.ಯಡಿಯೂರಪ್ಪನವರ 50 ವರ್ಷದ ತಪಸ್ಸು ಹಾಗೂ ಪರಿಶ್ರಮಕ್ಕಾಗಿ ಚಿತ್ರದುರ್ಗದಲ್ಲಿ ಮೇ 9ರಂದು ನಡೆಯುವ ಅಭಿನಂದನಾ ಸಮಾರಂಭ ಶ್ಲಾಘನೀಯ. ಅವರು ನಮ್ಮಂಥ ನೂರಾರು ಕಾರ್ಯಕರ್ತರನ್ನು ಬೆಳೆಸಿದ್ದು. ಬಿಜೆಪಿ ಒಂದು ರಾಜಕೀಯ ಶಕ್ತಿಯಾಗಿ ಬೆಳೆಯಲು ಅವರು ಕಾರಣೀಭೂತರೆಂದು ಅವರು ಬಣ್ಣಿಸಿದರು.ಅಖಂಡ…

Read More

ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದಲ್ಲಿ ಬಬಲೇಶ್ವರ ಮತಕ್ಷೇತ್ರ ರಾಜ್ಯದಲ್ಲಿಯೇ ಮೊದಲ ಸ್ಥಾನ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 6 : ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದಲ್ಲಿ ಬಬಲೇಶ್ವರ ಮತಕ್ಷೇತ್ರ ರಾಜ್ಯದಲ್ಲಿಯೇ ಮೊದಲ ಸ್ಥಾನದಲ್ಲಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.‌ ಬಿ. ಪಾಟೀಲ ಹೇಳಿದ್ದಾರೆ.ಬುಧವಾರ ತಿಕೋಟಾ ತಾಲೂಕಿನ ಮಲಕನದೇವರಹಟ್ಟಿ‌ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ರೂ. 100 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಸೋಮದೇವರಹಟ್ಟಿ- ಮಲಕನದೇವರಹಟ್ಟಿ ವರೆಗೆ ಮೂಲಸೌಕರ್ಯ ಅಭಿವೃದ್ಧಿ ಅನುದಾನದಲ್ಲಿ ಜಿಲ್ಲಾ ಮುಖ್ಯ ರಸ್ತೆ ಸುಧಾರಣೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.ಸರಕಾರದ ಯೋಜನೆಗಳನ್ನು…

Read More

ವಿಶ್ವ ನಗು ದಿನ ಆಚರಿಸಿದ ಬಂಡೆ ಸಹೋದರಿಯರು

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 5:ವಿಶ್ವ ನಗು ದಿನವನ್ನು ಪ್ರತಿ ವರ್ಷ ಮೇ ತಿಂಗಳ ಮೊದಲ ಭಾನುವಾರದಂದು ಆಚರಿಸಲಾಗುತ್ತದೆ. ಈ ನಿಮಿತ್ತ ತಾಲೂಕಿನ ನಾಗಠಾಣ ಗ್ರಾಮದ ಅವಳಿ ಸಹೋದರಿಯರಾದ ಅನುಶ್ರೀ-ಶ್ರೀನಿಧಿ ಬಂಡೆ ಅವರು ವಿಶ್ವ ನಗು ದಿನವನ್ನು ಆಚರಿಸಿದರು.ನಗುವಿನ ಆರೋಗ್ಯಕರ ಲಾಭಗಳು ಮತ್ತು ವಿಶ್ವ ಶಾಂತಿಯನ್ನು ಉತ್ತೇಜಿಸುವ ಉದ್ದೇಶದಿಂದ, 1998 ರಲ್ಲಿ ಡಾ. ಮದನ್ ಕಟಾರಿಯಾ ಅವರು ಈ ದಿನವನ್ನು ಪ್ರಾರಂಭಿಸಿದರು. ನಗು ಒತ್ತಡ ಕಡಿಮೆ ಮಾಡಿ, ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಸುಧಾರಿಸುತ್ತದೆ. ನಗು ರೋಗನಿರೋಧಕ ಶಕ್ತಿಯನ್ನು…

Read More

ಮಹಾತ್ಮ ಗಾಂಧಿ ನರೇಗಾ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಜಿಪಂ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಸೂಚನೆ

ಸಪ್ತಸಾಗರ ವಾರ್ತೆ ವಿಜಯಪುರ ಮೇ. 5 ಗ್ರಾಮೀಣ ಬಡಜನರಿಗೆ ಉದ್ಯೋಗ ಭದ್ರತೆ ಒದಗಿಸುವ ಮಹಾತ್ಮಾ ಗಾಂಧಿ‌ ನರೇಗಾ ಮಹತ್ವದ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಬೇಕು ಎಂದು ಜಿಲ್ಲಾ‌ ಪಂಚಾಯಿತಿ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು (ಗ್ರಾ.ಉ) ತಾಂತ್ರಿಕ ಸಂಯೋಜಕರು, ತಾಲೂಕು ಎಮ್.ಐ.ಎಸ್ ಸಂಯೋಜಕರು, ಐ.ಇ.ಸಿ ಸಂಯೋಜಕರು, ಆಡಳಿತ ಸಹಾಯಕರು ಹಾಗೂ ತಾಂತ್ರಿಕ ಸಹಾಯಕರೊಂದಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ…

Read More

ಮುಂಬಯಿ ರೈಲ್ವೆಯನ್ನು ಇಂಡಿ ನಿಲ್ದಾಣದಲ್ಲಿ ನಿಲ್ಲಿಸಲು ಜಿಗಜಿಣಗಿ ಪತ್ರ

ಸಪ್ತಸಾಗರ ವಾರ್ತೇ,ವಿಜಯಪುರ, ಮೇ 5:ಗದಗದಿಂದ ಮುಂಬಯಿಗೆ ಸಂಚರಿಸುವ ರೈಲ್ವೆಗೆ ಇಂಡಿ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ ಸೌಲಭ್ಯ ಕಲ್ಪಿಸಬೇಕು ಎಂದು ಸಂಸದ ರಮೇಶ ಜಿಗಜಿಣಗಿ ಒತ್ತಾಯಿಸಿದ್ದಾರೆ.‌ನಿಂಬೆ ಬೆಳೆಯ ಜಾಗತಿಕ ಟ್ಯಾಗ್ ಪಡೆದಿರುವ ದೇಶದ ಎಲ್ಲ ಕಡೆ ನಿಂಬೆ ಹಣ್ಣು ಸರಬರಾಜು ಮಾಡುವ ಕರ್ನಾಟಕ ಮಹಾರಾಷ್ಟ್ರದ ಗಡಿ ಭಾಗವಾಗಿರುವ‌ ಇಂಡಿ ಸಾಕಷ್ಟು ವ್ಯಾಪಾರ ವಹಿವಾಟಿನಲ್ಲಿ ಮುಂಚೂಣಿಯಲ್ಲಿದೆ. ಜೊತೆಗೆ ಅತ್ಯುತ್ತಮ ಗುಣಮಟ್ಟದ ದ್ರಾಕ್ಷಿ, ದಾಳಿಂಬೆ ಹಾಗೂ ಇತರೆ ವಾಣಿಜ್ಯ ಬೆಳೆಗಳನ್ನು ಹೆಚ್ಚಿನ ಪ್ರಮಾಣದಲ್ಲಿ ರಫ್ತು ಮಾಡುತ್ತಿದ್ದು, ಜವಳಿ ವ್ಯಾಪಾರದ ಕೇಂದ್ರವಾಗಿರುವ ಇಂಡಿ…

Read More

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆಲವು: ಕಾರ್ಯಕರ್ತರ ಶಕ್ತಿ ಇಮ್ಮಡಿ-ಜಿಗಜಿಣಗಿ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 4:ಪಶ್ಚಿಮ ಬಂಗಾಳದ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದ್ದು, ದೇಶದ ಇತಿಹಾಸದಲ್ಲಿಯೇ ಇದೊಂದು ಐತಿಹಾಸಿಕ ಮೈಲಿಗಲ್ಲು. ದೇಶದೆಲ್ಲೆಡೆ ಹೊಸ ಸಂಚಲನ ಸೃಷ್ಠಿಯಾಗಿದ್ದು, ಕಾರ್ಯಕರ್ತರಲ್ಲಿ ಆತ್ಮ ವಿಶ್ವಾಸ ಇಮ್ಮಡಿಸಿದೆ ಎಂದು ಸಂಸದ ರಮೇಶ ಜಿಗಜಿಣಗಿ ಪ್ರತಿಕ್ರಿಯಿಸಿದ್ದಾರೆ.ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಹೊರಬೀಳುತ್ತಿದ್ದಂತೆ ಪಶ್ಚಿಮ ಬಂಗಾಳದ ಫಲಿತಾಂಶ ಕುರಿತು ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಅವರು, ದಶಕಗಳ ಹೋರಾಟದ ಫಲವಾಗಿ ಪಶ್ಚಿಮ ಬಂಗಾಳದಲ್ಲಿ ಕೇಸರಿ ಬಾವುಟ ಹಾರಾಡುತ್ತಿದೆ. ಇದು ಶಾಮ್‌ಪ್ರಸಾದ್ ಮುಖರ್ಜಿ ಅವರ ದೂರದೃಷ್ಠಿಯ ಫಲ…

Read More

ಅಪ್ರಾಪ್ತ ಬಾಲಕ ದ್ವಿ ಚಕ್ರ ವಾಹನ ಚಾಲನೆ: ಪೋಷಕರಿಗೆ 25,000 ದಂಡ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 4:ಅಪ್ರಾಪ್ತ ಬಾಲಕ ದ್ವಿಚಕ್ರ ವಾಹನ ಚಾಲನೆ ಮಾಡಿದ ಅಪರಾಧಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕನ ಪೋಷಕರಿಗೆ ನ್ಯಾಯಾಲಯ 25,000 ರೂ. ದಂಡ ವಿಧಿಸಿ ತೀರ್ಪು ನೀಡಿದೆ.ವಿಜಯಪುರ ನಗರದ ಪಾಟೀಲ್ ಪ್ಲಾನೆಟ್ ಬಳಿ ಒಬ್ಬ ಬಾಲಕ ದ್ವಿಚಕ್ರ ನಡೆಸುವ ವೇಳೆ ವಿಜಯಪುರ ಸಂಚಾರಿ ಪೊಲೀಸರು ಗಮನಿಸಿ ಬಾಲಕನನ್ನು ತಡೆದು ಪರಿಶೀಲಿಸಿದಾಗ ಆ ಬಾಲಕ ಅಪ್ರಾಪ್ತ ಎಂಬುವುದು ಪೊಲೀಸರಿಗೆ ಖಚಿತಪಟ್ಟಿದೆ. ಆಗ ಸಂಚಾರಿ ಪೊಲೀಸರು ಬಾಲಕನ ಪೋಷಕರ ವಿರುದ್ದ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ…

Read More

ಕ್ಯಾಲಿಫೋರ್ನಿಯಾ ದ್ರಾಕ್ಷಿ ಬೆಳೆದು ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳಿಗೆ ಸಮರ್ಪಿಸಿದ ತಿಕೋಟಾ ರೈತರು

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 4:ಬರಗಾಲದ ಜಿಲ್ಲೆ ಬ್ರಿಟೀಷರ ಕಾಲದಿಂದಲೂ ಹಿಂದಿನ 100 ವರ್ಷ ಮಳೆಪ್ರಮಾಣವನ್ನು ಅಭ್ಯಸಿಸಿದಾಗ ಅತೀ ಕಡೀಮೆ ಮಳೆ ಬೀಳುವ ಪ್ರದೇಶವಾಗಿದೆ. ಇದೇ ನೆಲದಿಂದ ಬಂದ ಶ್ರೇಷ್ಠ ಸಂತ ಜ್ಞಾನಯೋಗಿ, ಜಗತ್ತಿನ ಪ್ರಮುಖ ದಾರ್ಶನಿಕರಲ್ಲೊಬ್ಬರಾದ ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳವರು ಈ ಪ್ರದೇಶ ಅಭಿವೃದ್ಧಿ ಸದಾ ಚಿಂತಿಸಿದವರು.ಪಂಚ ನದಿಗಳ ಹರಿದು ದಕ್ಷಿಣದ ಪಂಜಾಬ ಎನಿಸಿಕೊಂಡರೂ ಬರಗಾಲದಿಂದ ಇಲ್ಲಿನ ಜನರು ಸದಾ ಗುಳೆ ಹೋಗುತ್ತಿದ್ದರು. ಇದಕ್ಕೆ ಏನಾದರೂ ಇತಿಶ್ರೀ ಹಾಡಬೇಕು. ಸಹ್ಯಾದ್ರಿ ಪರ್ವತ ಶ್ರೇಣಿಗಳಲ್ಲಿ ಮಳೆಯಾದರೂ…

Read More