ಜಿಲ್ಲಾಧಿಕಾರಿ ಡಾ.ಆನಂದ ಅವರಿಂದ ಸರ್ಕಾರಿ ಕಚೇರಿಗಳು, ಆಸ್ಪತ್ರೆಗೆ ಭೇಟಿ ಪರಿಶೀಲನೆ
ಸಪ್ತಸಾಗರ ವಾರ್ತೆ,ವಿಜಯಪುರ, ಜು. 24:ವಿಜಯಪುರ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಗುರುವಾರ ವಿಜಯಪುರ ನಗರದ ವಿವಿಧ ಸರ್ಕಾರಿ ಕಚೇರಿಗಳಿಗೆ ಹಾಗೂ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು.ನಗರದ ತಹಶೀಲ್ದಾರ ಕಚೇರಿಗೆ ಭೇಟಿ ನೀಡಿ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲೊಂದಾದ ಭೂ ಸುರಕ್ಷಾ ಯೋಜನೆಯ ದಾಖಲೆಗಳ ಡಿಜಿಟಲೀಕರಣ ಕಾರ್ಯ ಪರಿಶೀಲನೆ ನಡೆಸಿದರು.ಆಧುನಿಕ ಅಭಿಲೇಖಾಲಯ ಕೊಠಡಿಗೆ ಭೇಟಿ ನೀಡಿ ಗಣಕೀಕರಣ ಕಾರ್ಯ ಪರಿಶೀಲಿಸಿದ ಅವರು, ಕಂದಾಯ ಇಲಾಖೆಯ ಎಲ್ಲ ದಾಖಲೆಗಳನ್ನು ಗಣಕೀಕೃತಗೊಳಿಸುವುದರಿಂದ ರೈತರಿಗೆ-ಸಾರ್ವಜನಿಕರಿಗೆ ಆನ್ಲೈನ್ ಮೂಲಕ ದಾಖಲೆಗಳು ಸುಲಭವಾಗಿ ದೊರೆಯಲಿರುವುದರಿಂದ ಸಮಯ…


