ಜು. 28ರಂದು ಹುಚ್ಚು ನಾಯಿ ರೋಗ ನಿರೋಧಕ ಉಚಿತ ಲಸಿಕೆ ಕಾರ್ಯಕ್ರಮ

Bಸಪ್ತಸಾಗರ ವಾರ್ತೆ, ವಿಜಯಪುರ, ಜು. 23:ಹುಚ್ಚು ನಾಯಿ ರೋಗ ನಿರೋಧಕ ಉಚಿತ ಲಸಿಕಾ ಕಾರ್ಯಕ್ರಮ ಜು. 28ರಂದು ನಗರದ ರಾಘವೇಂದ್ರ ಕಾಲೋನಿ ಯಲ್ಲಿರುವ ಶ್ರೀರಕ್ಷಾ ಮುದ್ದು ಪ್ರಾಣಿಗಳ ಚಿಕಿತ್ಸಾ ಹಾಗೂ ಸಲಹಾ ಕೇಂದ್ರದಲ್ಲಿ ಬೆಳಿಗ್ಗೆ 9.30ರಿಂದ ಸಂಜೆ 5.30ರವರೆಗೆ ನಡೆಯಲಿದೆ.ರೋಟರಿ ಸಂಸ್ಥೆ ವಿಜಯಪುರ ಉತ್ತರ ಹಾಗೂ ಶ್ರೀ ರಕ್ಷಾ ಮುದ್ದು ನಾಯಿಗಳ ಚಿಕಿತ್ಸಾ ಕೇಂದ್ರ ಇವರ ಸಹಯೋಗದಲ್ಲಿ ನಾಯಿಗಳಿಗೆ ಮಾರಕವಾದ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರಣ ಎಲ್ಲ ಮುದ್ದು ನಾಯಿ ಮಾಲೀಕರು…

Read More

ಪ್ರೊ. ಕೊಳಮಲಿಯವರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 22:ನಗರದ ಚೇತನಾ ಶಿಕ್ಷಣ ಸಂಸ್ಥೆಯ ಚೇತನಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಸಾಹಿತಿ, ಕನ್ನಡದ ಪ್ರಾಧ್ಯಾಪಕ ಪ್ರೊ, ಎ. ಎಚ್. ಕೊಳಮಲಿಯವರಿಗೆ ಭಾರತೀಯ ಶಿಕ್ಷಣ ಮಂಡಲ ಉತ್ತರ ಪ್ರಾಂತ ವಿಜಯಪುರ ಜಿಲ್ಲೆ ಇವರು ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಇತ್ತೀಚೆಗೆ ನಡೆದ ಗುರು ನಮನ ಕಾರ್ಯಕ್ರಮದಲ್ಲಿ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದ್ದಾರೆ.ಕೊಳಮಲಿಯವರ ಶಿಕ್ಷಣ ಕ್ಷೇತ್ರದ ಸಾಧನೆ ಮತ್ತು ಸಾಹಿತ್ಯ ಕ್ಷೇತ್ರದ ಅಮೋಘ ಸಾಧನೆಯ ಪರಿಗಣಿಸಿ ಪ್ರಶಸ್ತಿಯನ್ನು ನೀಡಲಾಗಿದೆ.ಬಹುಮುಖ ಪ್ರತಿಭಾ ಸಂಪನ್ನರಾದ ಪ್ರೊ….

Read More

ಸಚಿವ ಸತೀಶ ಜಾರಕಿಹೊಳಿ ಸ್ವಪ್ನ ಕಿವುಡ ಮತ್ತು ಮೂಕ ಮಕ್ಕಳ ವಸತಿ ಶಾಲೆಗೆ ಭೇಟಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 22:ನಗರದ ಆಶ್ರಮ ರಸ್ತೆಯಲ್ಲಿರುವ ಸ್ವಪ್ನ ಕಿವುಡ ಮತ್ತು ಮೂಕ ಮಕ್ಕಳ ವಸತಿ ಶಾಲೆಗೆ ಮಂಗಳವಾರ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಭೇಟಿ ನೀಡಿ ಮಕ್ಕಳ ಕಲಿಕಾ ಪರಿಸ್ಥಿತಿಗಳ ಬಗ್ಗೆ ವಿಚಾರಿಸಿದರು.ತರಗತಿ ಕೊಠಡಿ, ಲ್ಯಾಬ್, ಗ್ರಂಥಾಲಯ ಸೇರಿದಂತೆ ವಿವಿಧ ಸೌಲಭ್ಯಗಳ ಬಗ್ಗೆ ಪರಿಶೀಲನೆ ನಡೆಸಿದ ಅವರು, ಅಧ್ಯಾಪಕರು ಹಾಗೂ ಸಿಬ್ಬಂದಿಗಳಿಂದ ಮಾಹಿತಿ ಪಡೆದರು.ವಿದ್ಯಾರ್ಥಿಗಳ ಅಭಿಪ್ರಾಯ, ಅಗತ್ಯವಿರುವ ಸೌಲಭ್ಯ ಹಾಗೂ ಸಮಸ್ಯೆಗಳ ಬಗ್ಗೆ ಆಲಿಸಿದರು. ವಿದ್ಯಾರ್ಥಿಗಳು ತಮ್ಮ ಶಿಕ್ಷಣ, ಕನಸುಗಳ ಬಗ್ಗೆ ಹಂಚಿಕೊಂಡಾಗ ವಿದ್ಯಾರ್ಥಿಗಳ…

Read More

ಅರ್ಜುಣಗಿಯಲ್ಲಿ ರೈತ ಆತ್ಮಹತ್ಯೆ

ಸಪ್ತ ಸಾಗರ ವಾರ್ತೆ, ವಿಜಯಪುರ, ಜು. 22:ಸಾಲಬಾಧೆಯಿಂದ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದಲ್ಲಿ ನಡೆದಿದೆ.ಶಿವಾಜಿ ಘೋಲಫ (56) ನೇಣಿಗೆ ಶರಣಾದ ರೈತ.ಕೆಬಿಜಿ ಬ್ಯಾಂಕ್ ನಲ್ಲಿ 3 ಲಕ್ಷ ಸಾಲ,ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿಯೂ ಸಾಲ ಮಾಡಿದ್ದ. ಖಾಸಗಿಯವರ ಕಡೆಗೂ ರೈತ ಶಿವಾಜಿ ಸಾಲ ಮಾಡಿದ್ದ.ರೈತ ಶಿವಾಜಿ ತನ್ನ ಜಮೀನಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಸಹಕಾರ ಭಾರತಿ ಜಿಲ್ಲಾಧ್ಯಕ್ಷರಾಗಿ ಶ್ರೀಹರ್ಷಗೌಡ ಪಾಟೀಲ, ಸಂಘಟನಾ ಕಾರ್ಯದರ್ಶಿ ದೀಪಕ ಶಿಂತ್ರೆ, ಪ್ರಧಾನ ಕಾರ್ಯದರ್ಶಿ ಪರಶುರಾಮ ಚಿಂಚಲಿ ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 22:ಸಹಕಾರ ಭಾರತಿ ಕರ್ನಾಟಕ ನೂತನ ವಿಜಯಪುರ ಜಿಲ್ಲಾಧ್ಯಕ್ಷ ಶ್ರೀಹರ್ಷಗೌಡ ಪಾಟೀಲ, ಸಂಘಟನಾ ಕಾರ್ಯದರ್ಶಿ ದೀಪಕ ಶಿಂತ್ರೆ, ಪ್ರಧಾನ ಕಾರ್ಯದರ್ಶಿ ಪರಶುರಾಮ ಚಿಂಚಲಿ ಆಯ್ಕೆಯಾಗಿದ್ದು, ಜು. ೨೫ ರಂದು ನಗರದ ಭಾವಸರ ಸಾಂಸ್ಕೃತಿಕ ಭವನದಲ್ಲಿ ರಾಜ್ಯಾಧ್ಯಕ್ಷರಿಂದ ಪದಗ್ರಹಣ ಕಾರ್ಯಕ್ರಮ ನೆರವೇರುವುದು.ಆಯ್ಕೆಗೊಂಡ ನೂತನ ಜಿಲ್ಲಾಧ್ಯಕ್ಷರಿಂದ ಜಿಲ್ಲಾ ಕಾರ್ಯಕಾರಿ ಸದಸ್ಯರು, ತಾಲೂಕು ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಮಹಿಳಾ ಮುಖ್ಯಸ್ಥರು ಮತ್ತು ವಿವಿಧ ಪ್ರಕೋಷ್ಟ ಅಧಿಕಾರಿಗಳ ಪದಗ್ರಹಣ ನೆರವೇರುವುದು.ಈ ಸಮಾರಂಭವನ್ನು ಸಂಸದ ರಮೇಶ ಜಿಗಜಿಣಗಿ ಅವರು ಉದ್ಘಾಟಿಸಲಿದ್ದು,…

Read More

ನಾನು ಯಾವತ್ತೂ ಸಿಎಂ ಹುದ್ದೆ ಕ್ಲೇಮ್ ಮಾಡಿಯೇ ಇಲ್ಲ : ಸಚಿವ ಸತೀಶ ಜಾರಕಿಹೊಳಿ

ಸಪ್ತ ಸಾಗರ ವಾರ್ತೆ ವಿಜಯಪುರ, ಜು.22:ರಾಜ್ಯದ ಮುಖ್ಯಮಂತ್ರಿ ಬದಲಾವಣೆ ವಿಚಾರ ಪಕ್ಷದ ವರಿಷ್ಠರಿಗೆ ಬಿಟ್ಟ ವಿಚಾರ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.ಮಂಗಳವಾರ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಈ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡಬೇಕು ಎಂದರು.ಸಿಎಂ ಈಗಾಗಲೇ ನಾನೇ 5 ವರ್ಷ ಇರ್ತಿನಿ ಎಂದಿದ್ದಾರೆ. ಸಿಎಂ ಜಾಗ ಖಾಲಿ ಇಲ್ಲ‌ ಎಂದು ಸ್ವತಃ ಡಿಸಿಎಂ ಹೇಳಿದ್ದಾರೆ.ಅವರೇ ಹೊಂದಾಣಿಕೆ ಆಗಿದ್ದಾರೆ. ನಾವು ಹೇಳುವುದು ಏನು ಇಲ್ಲ ಎಂದು ತಿಳಿಸಿದರು.ಸತೀಶ ಅಭಿಮಾನಿಗಳಿಂದ ಸಿಎಂ ಘೋಷಣೆ ವಿಚಾರವಾಗಿ…

Read More

ವೇದಗಳು ಪ್ರಾಚೀನ ಭಾರತದ ಜ್ಞಾನದ ಮೂಲ-ವಿನಾಯಕ ಭಟ್

ಸಪ್ತಸಾಗರ ವಾರ್ತೆ ವಿಜಯಪುರ, ಜು. 21:ಪಂಚಮುಖಿ ಶಿಕ್ಷಣವು ಐದು ಮುಖಗಳನ್ನು ಹೊಂದಿರುವ ಶಿಕ್ಷಣ ವ್ಯವಸ್ಥೆ. ಇದು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಯನ್ನು ಗುರಿಯಾಗಿಸಿಕೊಂಡಿದೆ ಎಂದು ಗದಗ ಧಾರವಾಡದ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದ ಸಂಸ್ಕೃತ ಅಧ್ಯಾಪಕ ವಿನಾಯಕ ಭಟ್ ಶೇಡಿಮನೆ ಹೇಳಿದರು.ರವಿವಾರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಭಾರತೀಯ ಶಿಕ್ಷಣ ಮಂಡಲ ಕರ್ನಾಟಕ ಉತ್ತರ ಪ್ರಾಂತ ವಿಜಯಪುರ ಜಿಲ್ಲಾ ಘಟಕದಿಂದ ಜರುಗಿದ ಗುರು ನಮನ ಹಾಗೂ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭದ ಗೋಷ್ಠಿ-2 ರಲ್ಲಿಪಂಚಮುಖಿ ಶಿಕ್ಷಣ-ವಿಷಯದ ಕುರಿತು ಉಪನ್ಯಾಸ ನೀಡಿ…

Read More

ಶಾಸಕ ಕಾಶಪ್ಪನವರಿಗೆ ಅಂತ್ಯಕಾಲ ಬಂದಿದೆ- ಯತ್ನಾಳ ಕಿಡಿ

ಸಪ್ತಸಾಗರ ವಾರ್ತೆ ವಿಜಯಪುರ, ಜು.21:ಶಾಸಕ ವಿಜಯಾನಂದ ಕಾಶಪ್ಪನವರಿಗೆ ಅಂತ್ಯ ಕಾಲ ಬಂದಿದೆ. ಆರುವ ಮುನ್ನ ದೀಪ ಉರಿಯುತ್ತದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಕಿಡಿ ಕಾರಿದ್ದಾರೆ.ವಿಜಯಾನಂದ ಕಾಶಪ್ಪನವರ ಕೂಡಲಸಂಗಮ ಪಂಚಮಸಾಲಿ ಪೀಠಕ್ಕೆ ಬೀಗ ಹಾಕಿರುವ ವಿಚಾರವಾಗಿ ಸೋಮವಾರ ಸುದ್ದಿಗಾರರ ಜೊತೆಗೆ ಮೇಲಿನಂತೆ ಪ್ರತಿಕ್ರಿಯೆ ನೀಡಿ ಕಾಶಪ್ಪನವರ ವಿರುದ್ಧ ಯತ್ನಾಳ್ ವಾಗ್ದಾಳಿ ನಡೆಸಿದರು.ಇಡೀ ಸಮಾಜ ಕಾಶಪ್ಪನವರ ಬೆನ್ನಿಗಿಲ್ಲ. ಕಾಶಪ್ಪನವರ ಪೂಜ್ಯರ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ ಎಂದರು.ಕೂಡಲಸಂಗಮ ಸ್ವಾಮೀಜಿ ಸಮಾಜದ ಪರ ಹಾಗೂ 2ಎ ಮೀಸಲಾತಿಗಾಗಿ…

Read More

ಖರ್ಗೆ ಪ್ರಧಾನಿಗೆ ಕ್ಷಮೆ ಯಾಚಿಸಬೇಕು: ಸಂಸದ ಜಿಗಜಿಣಗಿ ಒತ್ತಾಯ

ಸಪ್ತಸಾಗರ ವಾರ್ತೆ, ಜು. 21:ಪ್ರಧಾನಿ ನರೇಂದ್ರ ಮೋದಿ ಅವರಿಗೆ ಏಕವಚನ ಪದ ಬಳಕೆ ಮಾಡಿರುವುದು ಅತ್ಯಂತ ಖಂಡನೀಯ. ಕೂಡಲೆ ಖರ್ಗೆಯವರು ಪ್ರಧಾನಿ ಕ್ಷಮೆ ಕೇಳಬೇಕೆಂದು ಸಂಸದ ರಮೇಶ ಜಿಗಜಿಣಗಿ ಅವರು ಒತ್ತಾಯಿಸಿದ್ದಾರೆ.ಇಡೀ ವಿಶ್ವದ ನಾಯಕರೇ ಅತ್ಯಂತ ಗೌರವ ತೋರುವ ಶ್ರೇಷ್ಠ ವ್ಯಕ್ತಿತ್ವ ಹೊಂದಿರುವ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಏಕ ವಚನ ಪದ ಪ್ರಯೋಗಿಸಿ ಟೀಕೆ ಮಾಡುತ್ತಿರುವುದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ‌ಖರ್ಗೆ ಅವರಿಗೆ ಶೋಭೆ ತರುವುದಿಲ್ಲ ಎಂದು ಸಂಸದ ರಮೇಶ ಜಿಗಜಿಣಗಿ ಪತ್ರಿಕಾ ಹೇಳಿಕೆಯಲ್ಲಿ…

Read More

ಆಗಸ್ಟ್ 6,7ರಂದು ರಾಜ್ಯ ಮಟ್ಟದ ಜೂಡೋ ತರಬೇತಿ ಮತ್ತು ಪರೀಕ್ಷೆ

ಸಪ್ತಸಾಗರ ವಾರ್ತೆ, ವಿಜಯಪುರ,ಜು.21:ಆ. 6 ಹಾಗೂ 7 ರಂದು ಕರ್ನಾಟಕ ರಾಜ್ಯ ಜೂಡೋ ಸಂಸ್ಥೆಯ ವತಿಯಿಂದ ರಾಮದುರ್ಗ ತಾಲೂಕಿನ ಚಂದ್ರಗಿರಿಯ ಎಸ್.ಎಂ. ಕಲೂತಿ ಕ್ರೀಡಾ ವಸತಿ ಶಾಲೆಯಲ್ಲಿ ಚಂದರಗಿ 2 ದಿನದ ತರಬೇತಿ ಮತ್ತು ಬ್ರೌನ್ ಬೆಲ್ಟ್ ಪರೀಕ್ಷೆ, ನಡೆಯಲಿದೆ.ವಿಜಯಪುರ ಜಿಲ್ಲೆಯ ಜೂಡೋ ಕ್ರೀಡಾಪಟುಗಳು, ಭಾಗವಹಿಸುವವರು ಮೊ.9901944390 ಗೆ ತಿಳಿಸಬೇಕೆಂದು ವಿಜಯಪುರ ಜಿಲ್ಲಾ ಜೂಡೋ ಸಂಸ್ಥೆಯ ಸಂಸ್ಥಾಪಕ ಪ್ರಧಾನ ಕಾರ್ಯದರ್ಶಿ ಬಸವರಾಜ ಬಾಗೇವಾಡಿ ಉತ್ನಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More