ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅನುಮತಿ ಪ್ರಶ್ನೆ ಅನಗತ್ಯ: ರಾಜ್ಯ ಸರ್ಕಾರದ ವಿರುದ್ಧ ಶ್ರೀಹರ್ಷಗೌಡ ಪಾಟೀಲ ವಾಗ್ದಾಳಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 12:ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌)ದ ಪಥಸಂಚಲನವು ಶಿಸ್ತು, ಸೇವೆ ಹಾಗೂ ದೇಶಾಭಿಮಾನದ ಪ್ರತೀಕವಾಗಿದ್ದು, ಅದಕ್ಕೆ ಅನುಮತಿ ಹಾಗೂ ನೋಂದಣಿ ಕಡ್ಡಾಯಗೊಳಿಸುವ ಮೂಲಕ ರಾಜ್ಯ ಸರ್ಕಾರ ಬೇಜವಾಬ್ದಾರಿತನದಿಂದ ವರ್ತಿಸುತ್ತಿದೆ ಎಂದು ಸಹಕಾರ ಭಾರತಿ ವಿಜಯಪುರ ಜಿಲ್ಲಾಧ್ಯಕ್ಷ ಶ್ರೀಹರ್ಷಗೌಡ ಪಾಟೀಲ ಆರೋಪಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಆರ್‌ಎಸ್‌ಎಸ್‌ ಪಥಸಂಚಲನವು ಶಿಸ್ತುಬದ್ಧ ಮೆರವಣಿಗೆ, ದೇಶಭಕ್ತಿ ಮತ್ತು ರಾಷ್ಟ್ರಸೇವೆಯ ಮನೋಭಾವ ಬೆಳೆಸುವ ಕಾರ್ಯಕ್ರಮವಾಗಿದೆ. ಯುವಜನರನ್ನು ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಪ್ರೇರೇಪಿಸುವ ಇಂತಹ ಚಟುವಟಿಕೆಗಳಿಗೆ ಅನುಮತಿ…

Read More

ಐತಿಹಾಸಿಕ ಸ್ಮಾರಕಗಳಲ್ಲಿ ಸರ್ಕಾರಿ ಕಚೇರಿಗಳ ಠಿಕಾಣೆ! ವಿಜಯಪುರದ ಪರಂಪರೆಗೆ ಯಾರು ಕಾವಲು?

ರುದ್ರಪ್ಪ ಆಸಂಗಿಸಪ್ತಸಾಗರ ವಾರ್ತೆ ವಿಜಯಪುರ, ಜು. 12:ವಿಶ್ವದ ನಕ್ಷೆಯಲ್ಲಿ ತನ್ನದೇ ಆದ ಸ್ಥಾನ ಪಡೆದಿರುವ ಐತಿಹಾಸಿಕ ನಗರ ವಿಜಯಪುರದಲ್ಲಿ ಗೋಲ್ ಗುಂಬಜ್, ಇಬ್ರಾಹಿಂ ರೋಜಾ, ಬಾರಾಕಮಾನ್ ಸೇರಿದಂತೆ 80ಕ್ಕೂ ಹೆಚ್ಚು ಐತಿಹಾಸಿಕ ಸ್ಮಾರಕಗಳಿವೆ. ಆದರೆ ಪರಂಪರೆಯ ಪ್ರತೀಕಗಳಾಗಿರಬೇಕಾದ ಹಲವು ಐತಿಹಾಸಿಕ ಕಟ್ಟಡಗಳು ಇಂದು ಸರ್ಕಾರಿ ಕಚೇರಿಗಳಾಗಿ ಬಳಕೆಯಾಗುತ್ತಿರುವುದು ಪರಂಪರೆ ಸಂರಕ್ಷಣೆ ಮತ್ತು ಪ್ರವಾಸೋದ್ಯಮ ಅಭಿವೃದ್ಧಿ ಕುರಿತು ಗಂಭೀರ ಚರ್ಚೆಗೆ ಕಾರಣವಾಗಿದೆ.ವಿಜಯಪುರದ ಬಹುತೇಕ ಐತಿಹಾಸಿಕ ಪಾರಂಪರಿಕ ಕಟ್ಟಡಗಳಲ್ಲಿ ಜಿಲ್ಲಾಧಿಕಾರಿ ಕಚೇರಿ, ಜಿಲ್ಲಾ ಖಜಾನೆ ಕಚೇರಿ, ಭೂದಾಖಲೆ (ಸರ್ವೇ/ಭೂಮಾಪನ) ಇಲಾಖೆ,…

Read More

ಮಸೀದಿಯಲ್ಲಿ ಬಿಎಲ್‌ಒ ಸಭೆ: ಕಾಂಗ್ರೆಸ್ ಮುಖಂಡರ ವಿರುದ್ಧ ಕ್ರಮಕ್ಕೆ ಯತ್ನಾಳ್ ಆಗ್ರಹ

ಸಪ್ತಸಾಗರ ವಾರ್ತೆ,ವಿಜಯಪುರ, ಜು.12: ಚುನಾವಣಾ ಆಯೋಗದ ನಿಯಮಗಳನ್ನು ಉಲ್ಲಂಘಿಸಿ ಸಾಂವಿಧಾನಿಕ ಹುದ್ದೆಯಲ್ಲದ ಕಾಂಗ್ರೆಸ್ ಮುಖಂಡ ಅಬ್ದುಲ್ ರಜಾಕ್ ಹೊರ್ತಿ ನೇತೃತ್ವದಲ್ಲಿ ನಗರದ ಬಬಲೇಶ್ವರ ನಾಕಾ ಸಮೀಪದ ಅಲಿಖಾನ್ ಮಸೀದಿಯಲ್ಲಿ ಬೂತ್ ಮಟ್ಟದ ಅಧಿಕಾರಿಗಳ (ಬಿಎಲ್‌ಒ) ಸಭೆ ನಡೆಸಲಾಗಿದೆ ಎಂದು ಆರೋಪಿಸಿರುವ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ಸಂಬಂಧಪಟ್ಟವರ ವಿರುದ್ಧ ತಕ್ಷಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.ಶನಿವಾರ ಸಂಜೆ ನಡೆದ ಈ ಸಭೆಯಲ್ಲಿ ವಾರ್ಡ್ 32, 33 ಮತ್ತು 34ರ ಬಿಎಲ್‌ಒಗಳನ್ನು ಭಾಗವಹಿಸಲು ಶಿಕ್ಷಣ ಇಲಾಖೆಯ ಸಿಬ್ಬಂದಿ…

Read More

ಗಾನ ಕೋಗಿಲೆ ಎಸ್. ಜಾನಕಿ ನಿಧನ: ಕರ್ನಾಟಕ ಕಲಾ ಸಂಘದ ಸಂತಾಪ

ಸಪ್ತಸಾಗರ ವಾರ್ತೆ,ವಿಜಯಪುರ, ಜು.12: ಭಾರತೀಯ ಚಿತ್ರರಂಗದ ಅಪ್ರತಿಮ ಹಿನ್ನೆಲೆ ಗಾಯಕಿ, ಗಾನ ಕೋಗಿಲೆ ಎಸ್. ಜಾನಕಿ ಅವರ ನಿಧನಕ್ಕೆ ಕರ್ನಾಟಕ ಕಲಾ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ.ಸಂಘದ ಅಧ್ಯಕ್ಷ ಬಾಬುರಾವ ಕುಲಕರ್ಣಿ ಅವರು ಸಂತಾಪ ಸಂದೇಶದಲ್ಲಿ, ಸಂಗೀತದ ಔಪಚಾರಿಕ ಶಿಕ್ಷಣವಿಲ್ಲದಿದ್ದರೂ ಅಪಾರ ಪ್ರತಿಭೆ, ಸಂಗೀತದ ಮೇಲಿನ ಅಪಾರ ಪ್ರೀತಿ ಹಾಗೂ ನಿರಂತರ ಪರಿಶ್ರಮದಿಂದ ಸುಮಾರು ಆರು ದಶಕಗಳ ಕಾಲ ಭಾರತೀಯ ಚಿತ್ರರಂಗದಲ್ಲಿ ಅಮೋಘ ಸಾಧನೆ ಮಾಡಿದ ಎಸ್. ಜಾನಕಿ ಅವರು ಸುಮಾರು 48 ಸಾವಿರಕ್ಕೂ ಅಧಿಕ ಹಾಡುಗಳನ್ನು…

Read More

‘ನಾನು-ನನ್ನದು’ ಮನೋಭಾವದಿಂದ ದೇಶ-ಸಮಾಜದ ಚಿಂತನೆ ಕ್ಷೀಣಿಸಿದೆ: ಡಾ. ದೇಸಾಯಿ ಯಡಹಳ್ಳಿ ಕಳವಳ

ಸಪ್ತಸಾಗರ ವಾರ್ತೆ,ವಿಜಯಪುರ, ಜು.12: ಸಮಾಜದಲ್ಲಿ ಹೆಚ್ಚುತ್ತಿರುವ ಅನಗತ್ಯ ಆಡಂಬರ, ದುಂದು ವೆಚ್ಚ ಮತ್ತು ಪ್ರದರ್ಶನದ ಮನೋಭಾವಕ್ಕೆ ಕಡಿವಾಣ ಹಾಕುವ ಅಗತ್ಯವಿದ್ದು, ದೇಶ ಹಾಗೂ ಸಮಾಜದ ಬಗ್ಗೆ ಕಾಳಜಿ ಹೊಂದಿದ ಜೀವನಶೈಲಿ ರೂಢಿಸಿಕೊಳ್ಳಬೇಕೆಂದು ಹಿರಿಯ ಸಹಕಾರಿ ಧುರೀಣ ಹಾಗೂ ಪರಿಸರ ತಜ್ಞ ಡಾ. ಎಂ.ಆರ್. ದೇಸಾಯಿ ಯಡಹಳ್ಳಿ ಕರೆ ನೀಡಿದರು.ಬಾಗಲಕೋಟೆ ಜಿಲ್ಲೆಯ ಬೀಳಗಿ ಸಮೀಪದ ಯಡಹಳ್ಳಿಯಲ್ಲಿ ಆಯೋಜಿಸಿದ್ದ ಅನಗತ್ಯ ಆಡಂಬರದ ಆಚರಣೆಗಳ ಕುರಿತ ಚಿಂತನ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇತ್ತೀಚಿನ ದಶಕಗಳಲ್ಲಿ “ನಾನು-ನನ್ನದು” ಎಂಬ ಸ್ವಾರ್ಥದ…

Read More

ಸ್ವಂತ ಅಕ್ಕನ ಕೈಯಲ್ಲಿ ತಮ್ಮನ ಅಂತ್ಯ!

ಸಪ್ತಸಾಗರ ವಾರ್ತೆ,ಚಡಚಣ, ಜು. 11: ಕುಟುಂಬದೊಳಗಿನ ಕಲಹವೇ ರಕ್ತಸಿಕ್ತ ದುರಂತಕ್ಕೆ ಕಾರಣವಾದ ಬೆಚ್ಚಿಬೀಳಿಸುವ ಘಟನೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಹಲಸಂಗಿ ಕ್ರಾಸ್ ರಾಷ್ಟ್ರೀಯ ಹೆದ್ದಾರಿ ಸಮೀಪ ಶನಿವಾರ ಸಂಜೆ ನಡೆದಿದೆ.ಗಂಡ–ಹೆಂಡತಿ ನಡುವಿನ ದೀರ್ಘಕಾಲದ ವೈಮನಸ್ಸಿನ ನಡುವೆ, ಸ್ವಂತ ಅಕ್ಕನೇ ತನ್ನ ತಮ್ಮನ ಹತ್ಯೆ ನಡೆಸಿದ ಆರೋಪ ಕೇಳಿಬಂದಿದ್ದು, ಇಡೀ ಪ್ರದೇಶವನ್ನು ಬೆಚ್ಚಿಬೀಳಿಸಿದೆ. ಹಲಸಂಗಿ ಗ್ರಾಮದ ಬಾಬುಸಾ ಮಹಾದೇವ ಜಮಾದಾರ (35) ಕೊಲೆಯಾದ ದುರ್ದೈವಿ. ಘಟನೆಯಲ್ಲಿ ಅಪ್ಪಾಸಾಹೇಬ ಮುಂಕಾಸೆ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗೆ…

Read More

ಸ್ಥಳಾಂತರಗೊಂಡ ಮತದಾರರ ಪತ್ತೆಗೆ ಪಾಲಿಕೆಯ ವಿಶೇಷ ಕಾರ್ಯಾಚರಣೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು.11: ವಿಜಯಪುರ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಯಾವುದೇ ನೈಜ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಹಾಗೂ ಅನರ್ಹರು ಪಟ್ಟಿಗೆ ಸೇರ್ಪಡೆಯಾಗದಂತೆ ತಡೆಯಲು ಮಹಾನಗರ ಪಾಲಿಕೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ.ಮಹಾನಗರ ಪಾಲಿಕೆ ಆಯುಕ್ತರು ಹಾಗೂ ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿಗಳು ಈ ಕುರಿತು ಮಾಹಿತಿ ನೀಡಿ, ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಅಂಗವಾಗಿ ಜೂನ್ 30ರಿಂದ ಮನೆ-ಮನೆಗೆ ತೆರಳಿ ಗಣತಿ ನಮೂನೆಗಳನ್ನು ವಿತರಿಸುವ ಕಾರ್ಯ ನಡೆಯುತ್ತಿದ್ದು, ಇದುವರೆಗೆ 2,18,163 ಮತದಾರರಿಗೆ ಯಶಸ್ವಿಯಾಗಿ…

Read More

ಅಕ್ರಮ ವಲಸಿಗರಿಗೆ ಪಿಆರ್‌ಸಿ ನೀಡದಂತೆ ಸ್ವಾಮಿ ವಿವೇಕಾನಂದ ಸೇನೆ ಆಗ್ರಹ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ

ಸಪ್ತಸಾಗರ ವಾರ್ತೆ,ವಿಜಯಪುರ, ಜು.11: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿರುವ ಹಿನ್ನೆಲೆಯಲ್ಲಿ, ಖಾಯಂ ನಿವಾಸಿ ಪ್ರಮಾಣ ಪತ್ರ (ಪಿಆರ್‌ಸಿ) ವಿತರಣೆಯಲ್ಲಿ ಸರ್ಕಾರ ಅತ್ಯಂತ ಎಚ್ಚರಿಕೆ ವಹಿಸಬೇಕು ಎಂದು ಸ್ವಾಮಿ ವಿವೇಕಾನಂದ ಸೇನೆ ರಾಜ್ಯಾಧ್ಯಕ್ಷ ರಾಘವ ಅಣ್ಣಿಗೇರಿ ಆಗ್ರಹಿಸಿದ್ದಾರೆ.ಅವರು ಪತ್ರಿಕಾ ಪ್ರಕಟಣೆಯಲ್ಲಿ, ಪಿಆರ್‌ಸಿ ಪಡೆಯಲು ಅರ್ಜಿ ಸಲ್ಲಿಸುವವರನ್ನು ಕರ್ನಾಟಕ ಅಥವಾ ಭಾರತದ ಕಾನೂನುಬದ್ಧ ನಿವಾಸಿಗಳೇ ಅಥವಾ ಅಕ್ರಮ ವಲಸಿಗರೇ ಎಂಬುದನ್ನು ಸಂಬಂಧಪಟ್ಟ ಅಧಿಕಾರಿಗಳು ಸಮಗ್ರವಾಗಿ ಪರಿಶೀಲಿಸಿ ಮಾತ್ರ ಪ್ರಮಾಣ ಪತ್ರ ನೀಡಬೇಕು ಎಂದು…

Read More

ಪಕ್ಷ ಸಂಘಟನೆಗೆ ಸುನೀಲಗೌಡ ಕರೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 11: ಸಕ್ರಿಯವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳಬೇಕು‌ ಎಂದು ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಹೇಳಿದ್ದಾರೆ.ಶನಿವಾರ ನಗರದಲ್ಲಿ ಕಾತ್ರಾಳ ಗ್ರಾಮದ ಬಿಜೆಪಿ‌ ಮುಖಂಡರು ಮತ್ತು ಕಾರ್ಯಕರ್ತರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಕಾಂಗ್ರೆಸ್ ಸರ್ವಜನರ ಏಳಿಗೆಗಾಗಿ ಕೆಲಸ ಮಾಡುತ್ತಿದೆ. ಹೊಸ ಕಾರ್ಯಕರ್ತರ ಸೇರ್ಪಡೆಯಿಂದ ಪಕ್ಷಕ್ಕೆ ಮತ್ತಷ್ಟು ಬಲ ಬರಲಿದೆ. ಹಳಬರು, ಹೊಸಬರು ಒಗ್ಗಟ್ಟಿನಿಂದ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿ‌ ಮಾತನಾಡಿದ ಮುಖಂಡರು ಕೈಗಾರಿಕೆ,…

Read More

ಪ್ರತಿಭಾವಂತ ವಿದ್ಯಾರ್ಥಿ ಹಾದಿಮನಿಗೆ ಪ್ರತಿಭಾ ಪುರಸ್ಕಾರ

ಸಪ್ತಸಾಗರ ವಾರ್ತೆ, ಬಾಗಲಕೋಟೆ, ಜು. 11:ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 7ನೇ ರ್ಯಾಂಕ್ ಪಡೆದ ಪ್ರತಿಭಾವಂತ ವಿದ್ಯಾರ್ಥಿ ಸುಮಿತ ಶಿವಪುತ್ರ ಹಾದಿಮನಿ ಅವರಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಬೀಳಗಿಯಲ್ಲಿ ಸನ್ಮಾನಿಸಲಾಯಿತು.ಬೀಳಗಿ ನಗರದ ಗಾಂಧಿ ನಗರ ಬಡಾವಣೆಯ ವಿದ್ಯಾರ್ಥಿ ಹಾದಿಮನಿ ಅವರು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ.99.04ರಷ್ಟು ಅಂಕ ಪಡೆದು ಕೀರ್ತಿ ತಂದಿದ್ದಾರೆ.ಈ ಪ್ರತಿಭಾವಂತ ವಿದ್ಯಾರ್ಥಿಯನ್ನು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಶ್ರೀಶೈಲ ಚಲವಾದಿ ಅವರ…

Read More