ಬೆಂಗಳೂರಿನಲ್ಲಿ ಜ. 29ರಿಂದ ಫೆ. 1ರ ವರೆಗೆ ವೀರಶೈವ ಲಿಂಗಾಯತ ಗ್ಲೋಬಲ್ ಬಿಸಿನೆಸ್ ಕಾನಕ್ಲೇವ್- 2026

ಸಪ್ತಸಾಗರ ವಾರ್ತೆ, ವಿಜಯಪುರ, ಜ. 27:ಅಂತಾರಾಷ್ಟ್ರೀಯ ಲಿಂಗಾಯತ ಯುವ ವೇದಿಕೆ(iLYF) ವತಿಯಿಂದ ವೀರಶೈವ ಲಿಂಗಾಯತ ಗ್ಲೋಬಲ್ ಬಿಸಿನೆಸ್ ಕಾನಕ್ಲೇವ್- 2026 ಜನೇವರಿ 29 ರಿಂದ ಫೆಬ್ರವರಿ 1ರ ವರೆಗೆ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ವಿಜಯಪುರ ಜಿಲ್ಲಾ ಸಣ್ಣ ಕೈಗಾರಿಕೆ ಉದ್ದಿಮೆದಾರರ ಸಂಘದ ಅಧ್ಯಕ್ಷ ಡಾ. ಗಂಗಾಧರ ಸಂಬಣ್ಣಿ ಮತ್ತು ಉದ್ಯಮಿ‌ ಶಾಂತೇಶ ಕಳಸಗೊಂಡ ತಿಳಿಸಿದ್ದಾರೆ.ಈ ಕುರಿತು ಜಂಟಿ ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ ನಲ್ಲಿರುವ ವೈಟ್ ಪೆಟೆಲ್ಸ್ ನಲ್ಲಿ…

Read More

ವೀರರಾಣಿ ಅಬ್ಬಕ್ಕ, ರಾಣಿ ಚೆನ್ನಮ್ಮ ಪ್ರದರ್ಶಿನಿ ಉದ್ಘಾಟನೆ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 25:ವಿದ್ಯಾರ್ಥಿಗಳಿಗೆ ಸಮಸ್ಯೆ ಬಂದಾಗ ಹಲವಾರು ಕಡೆ ಎಬಿವಿಪಿ ಹೋರಾಟಗಳನ್ನು ನಿರ್ಮಿಸಿ ಪರಿಹಾರ ಹುಡುಕಿಕೊಟ್ಟಿದೆ ಎಂದು ಸಿದ್ದೇಶ್ವರ ಆಶ್ರಮದ ಪರಮಪೂಜ್ಯ ಬಸವಲಿಂಗ ಮಹಾಸ್ವಾಮೀಜಿಗಳು ಪ್ರಶಂಸಿಸಿದರು.ಎಬಿವಿಪಿಯ 45 ನೇ ಪ್ರಾಂತ ಸಮ್ಮೇಳನದ ವೀರರಾಣಿ ಅಬ್ಬಕ್ಕ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ಪ್ರದರ್ಶಿನಿಯನ್ನು ಸಿದ್ದೇಶ್ವರ ಆಶ್ರಮದ ಪರಮಪೂಜ್ಯ ಬಸವಲಿಂಗ ಮಹಾಸ್ವಾಮೀಜಿಗಳು ಉದ್ಘಾಟಿಸಿ ಮಾತನಾಡಿದರು.ವಿದ್ಯಾರ್ಥಿಗಳಿಗೆ ಸಮಸ್ಯೆ ಬಂದಾಗ ಹಲವಾರು ಕಡೆ ಎಬಿವಿಪಿ ಹೋರಾಟಗಳನ್ನು ನಿರ್ಮಿಸಿ ಪರಿಹಾರ ಹುಡುಕಿಕೊಟ್ಟ ನಿದರ್ಶನಗಳನ್ನು ನಾನು ಸ್ವತ ಕೇಳಿದ್ದೇನೆ. ಅಂತಹ ಉತ್ತಮ ಕಾರ್ಯವನ್ನು…

Read More

ಗ್ರಾಮೀಣ ಸಮಸ್ಯೆಗಳು ಇನ್ನೂ ಮುಖ್ಯವಾಹಿಣಿಗೆ ಬಂದಿಲ್ಲ: ದಿನೇಶ ಅಮೀನಮಟ್ಟು ಆತಂಕ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 25:ಗ್ರಾಮೀಣ ಪ್ರದೇಶಗಳ ಅನೇಕ ಮೂಲಭೂತ ಸಮಸ್ಯೆಗಳನ್ನು ಗುರುತಿಸಿ, ಸಮಾಜದ ಸುವ್ಯವಸ್ಥೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿರುವ ವ್ಯಕ್ತಿಗಳಲ್ಲಿ ರಫೀ ಭಂಡಾರಿ ಕೂಡ ಒಬ್ಬರಾಗಿದ್ದಾರೆ ಎಂದು ಬೆಂಗಳೂರಿನ ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಹೇಳಿದರು.ಇಲ್ಲಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಷ್ಕೃತ ಪತ್ರಕರ್ತ ರಫೀ ಭಂಡಾರಿ ಅಭಿನಂದಾನ ಸಮಿತಿ ವಿಜಯಪುರ ಇವರ ಸಹಯೋಗದಲ್ಲಿ ರವಿವಾರ ಆಯೋಜಿಸಿದ್ದ “ರಫೀ ಭಂಡಾರಿ ಅವರ ವ್ಯಕ್ತಿತ್ವ ಮತ್ತು ಪತ್ರಿಕಾ ಸಾಧನೆ” ಅಭಿನಂದನಾ ಕೃತಿ ಬಿಡುಗಡೆ-ಸನ್ಮಾನ ಮತ್ತು ಮಹಿಳಾ ವಿಶ್ವವಿದ್ಯಾನಿಲಯದ…

Read More

ರಾಜ್ಯಪಾಲರು ಬಿಜೆಪಿ ಎಜೆಂಟ್: ಸಚಿವ ಎಂ. ಬಿ. ಪಾಟೀಲ ಆರೋಪ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 25 :ಕರ್ನಾಟಕ ರಾಜ್ಯಪಾಲರು ಕೇಂದ್ರ ಸರ್ಕಾರದ ಎಜೆಂಟ್ ರಂತೆ ವರ್ತಿಸುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಆರೋಪಿಸಿದ್ದಾರೆ.ಭಾನುವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ರಾಜ್ಯಪಾಲರು ಸರ್ಕಾರದ ಧ್ವನಿ, ಸರ್ಕಾರ ಏನು ಕೊಡುತ್ತದೆ. ಅದನ್ನು ಓದುತ್ತಾರೆ. ಇದೇ ರಾಜ್ಯಪಾಲರು ಹಿಂದೆ ಓದಿಲ್ಲವಾ? ಎಂದು ಸಚಿವ ಎಂ. ಬಿ. ಪಾಟೀಲ ಅವರು ರಾಜ್ಯಪಾಲರ ನಡೆಯನ್ನು ಪ್ರಶ್ನೆ ಮಾಡಿದ್ದಾರೆ.ವಿಧಾನಸೌಧದಲ್ಲಿ ನಡೆಯುತ್ತಿರುವ ವಿಶೇಷ ಸದನ ನಡೆಯುವ ವೇಳೆ ಕೇಂದ್ರ ಸರ್ಕಾರದ ವಿರುದ್ದ ಟೀಕೆ…

Read More

ಅರ್ಹ ಮತದಾರರು ಕಡ್ಡಾಯವಾಗಿ ಮತದಾನದ ಹಕ್ಕು ಚಲಾಯಿಸಲು ನ್ಯಾಯಾಧೀಶ ಹರೀಶ ಎ. ಕರೆ

ಸಪ್ತಸಾಗರ ವಾರ್ತೆ, ವಿಜಯಪುರ, ಜ.25:ದೇಶದ ಅಭ್ಯುದಯಕ್ಕೆ ಮತದಾನದಿಂದ ಯಾರೂ ಹೊರಗುಳಿಯದೇ ಎಲ್ಲ ಅರ್ಹ ಮತದಾರರು ಸಂವಿಧಾನ ಕೊಡಮಾಡಿದ ಪವಿತ್ರವಾದ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡು, ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಹರೀಶ ಎ ಅವರು ಕರೆ ನೀಡಿದರು.ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಸ್ವೀಪ್ ಸಮಿತಿ, ಜಿಲ್ಲಾ ನ್ಯಾಯಾಂಗ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ಇವರ ಸಹಯೋಗದಲ್ಲಿ ಭಾನುವಾರ…

Read More

ಹೊರ್ತಿ ಗ್ರಾಮದ ಶಿವ ದೇವಾಲಯಕ್ಕೆಸ್ವಚ್ಚತೆಯ ಸ್ಪರ್ಶ

ಸಪ್ತಸಾಗರ ವಾರ್ತೆ, ವಿಜಯಪುರ 25. ಶತಮಾನಗಳ ಪರಂಪರೆಯ ಹೊರ್ತಿ ಗ್ರಾಮದ ಶಿವ ದೇವಾಲಯಕ್ಕೆಸ್ವಚ್ಚತೆಯ ಸ್ಪರ್ಶ ನೀಡಿದ ಗಾನಯೋಗಿ ಸಂಘದ ಸದಸ್ಯರು ಮತ್ತು ಸ್ಥಳೀಯರ ಕಾರ್ಯಕ್ಕೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹೊರ್ತಿ ಗ್ರಾಮದಲ್ಲಿರುವ ಕ್ರಿ. ಶ. 11ನೇ ಶತಮಾನದ ಚಾಲುಕ್ಯರ ಕಾಲದ ಅಪರೂಪದ ಪ್ರಾಚೀನ ಶಿವ ದೇವಾಲಯವನ್ನು ಗಾನಯೋಗಿ ಸಂಘದ ಸದಸ್ಯರು, ಪದಾಧಿಕಾರಿಗಳು ಹಾಗೂ ಸ್ಥಳೀಯ ಗ್ರಾಮಸ್ಥರು ಶುಕ್ರವಾರ ಸ್ವಚ್ಛಗೊಳಿಸಿದ್ದರು. ಎಲ್ಲರೂ…

Read More

ಜಿಲ್ಲಾ ಕ್ರೀಡಾಂಗಣಕ್ಕೆ ಜಿಲ್ಲಾಧಿಕಾರಿಗಳ ಭೇಟಿ; ಗಣರಾಜ್ಯೋತ್ಸವ ಸಿದ್ಧತೆ ಪರಿಶೀಲನೆ

ಸಪ್ತಸಾಗರ ವಾರ್ತೆ, ವಿಜಯಪುರ,ಜ.25: ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಭಾನುವಾರ ಸಂಜೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣಕ್ಕೆ ಭೇಟಿ ನೀಡಿ, ಗಣರಾಜ್ಯೋತ್ಸವ ಸಮಾರಂಭದ ಸಿದ್ಧತೆಗಳನ್ನು ಪರಿಶೀಲಿಸಿ,ಸಂಬಂಧಿಸಿದ ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆ‌ ನೀಡಿದರು.ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ,ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ,ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮನಗೌಡ ಹಟ್ಟಿ, ವಿಜಯಪುರ ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ,ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಡಿವೈಎಸ್ಪಿ ಎಂ.ಎ.ಉಪಾಸೆ, ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ,ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ವೀರಯ್ಯ ಸಾಲಿಮಠ,ಆಹಾರ…

Read More

ಕಗ್ಗೋಡದಲ್ಲಿ ವಿಶ್ವ ಹಿಂದೂ ಪರಿಷತ್ ಕರ್ನಾಟಕ ಉತ್ತರ ಪ್ರಾಂತ ಸತ್ಸಂಗ

ಸಪ್ತಸಾಗರ ವಾರ್ತೆ, ವಿಜಯಪುರ, ಜ 25:ವಿಶ್ವ ಹಿಂದೂ ಪರಿಷತ್ ಕರ್ನಾಟಕ ಉತ್ತರ ಪ್ರಾಂತ ವತಿಯಿಂದ ಬೆಳಗಾವಿ ಹಾಗೂ ಕಲಬುರ್ಗಿ ವಿಭಾಗದಿಂದ ಎರಡು ದಿನದ ಸತ್ಸಂಗ ವರ್ಗವನ್ನು ಕಗ್ಗೋಡ ಗ್ರಾಮದ ರಾಮನಗೌಡ ಪಾಟೀಲ್ ಯತ್ನಾಳವರ ಗೋಶಾಲೆಯಲ್ಲಿ ನಡೆದಿದ್ದು, ಸುಮಾರು 120 ಜನರ ಶಿಕ್ಷ ವರ್ಗವನ್ನು ನಡೆಯಿತು.ಇವತ್ತು ಬೆಳಗ್ಗೆ 7:30ಕ್ಕೆ ಕಗ್ಗೋಡ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಸಂಕೀರ್ತಿನ ಭಜನೆವನ್ನು ಮಾಡುತ್ತಾ ಹಿಂದೂ ಧರ್ಮದ ಜನ ಜಾಗೃತಿ ಮಾಡಲಾಯಿತು.ಅನೇಕ ಮಹಾಪುರುಷರ ಭಜನೆ ಹಾಡುಗಳನ್ನು ಹೇಳಲಾಯಿತು. ಇದರಲ್ಲಿ ಕ್ಷೇತ್ರಿಯ ಸತ್ಸಂಗ ಪ್ರಮುಖರಾದ ಮಹಾಬಲೇಶ್ವರ…

Read More

ಉತ್ತರ ಕರ್ನಾಟಕದ ಪ್ರಮುಖ ಪ್ರವಾಸಿ ತಾಣ ಆಲಮಟ್ಟಿಯಲ್ಲಿದೋಣಿ ವಿಹಾರಕ್ಕೆ ಸಚಿವ ಶಿವಾನಂದ ಪಾಟೀಲ ಚಾಲನೆ

ಸಪ್ತಸಾಗರ ವಾರ್ತೆ, ವಿಜಯಪುರ, ಜ.24: ರಾಜ್ಯದ ಕೆಆರ್‍ಎಸ್ ನಂತರದ ಉತ್ತರ ಕರ್ನಾಟಕದ ಪ್ರಮುಖ ಪ್ರೇಕ್ಷಣೀಯ ಪ್ರವಾಸಿ ತಾಣವಾದ ಆಲಮಟ್ಟಿ ಸಿಲ್ವರ ಲೇಕ್‍ನಲ್ಲಿ ಆರಂಭಿಸಲಾದ ದೋಣಿ ವಿಹಾರಕ್ಕೆ ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ಶನಿವಾರ ಚಾಲನೆ ನೀಡಿದರು.ಜಲಸಂಪನ್ಮೂಲ ಇಲಾಖೆ, ಕೃಷ್ಣಾ ಭಾಗ್ಯ ಜಲನಿಗಮದ ವತಿಯಿಂದ ಆಲಮಟ್ಟಿ ರಾಕ್ ಉದ್ಯಾನವನದಲ್ಲಿರುವ ಸಿಲ್ವರ್ ಲೇಕ್‍ನಲ್ಲಿ ಆರಂಭಿಸಲಾದ ದೋಣಿ ವಿಹಾರಕ್ಕೆ ಚಾಲನೆ ನೀಡಿದ ಅವರು, ಆಲಮಟ್ಟಿ ಪ್ರವಾಸ ತಾಣ ಬಹಳಷ್ಟು ಪ್ರವಾಸಿಗರಿಗೆ ಪ್ರೇಕ್ಷಣಿಯ…

Read More

ನೈಋತ್ಯ ರೈಲ್ವೆಯ 70ನೇ ರೈಲ್ವೆ ಸಪ್ತಾಹ ಆಚರಣೆ: ಸಾಧಕ ನೌಕರರು ಮತ್ತು ಘಟಕಗಳಿಗೆ ಪ್ರಶಸ್ತಿ ಪ್ರದಾನ

ಸಪ್ತಸಾಗರ ವಾರ್ತೆ, ಹುಬ್ಬಳ್ಳಿ, ಜ. 24:ನೈಋತ್ಯ ರೈಲ್ವೆಯು ತನ್ನ 70ನೇ ರೈಲ್ವೆ ಸಪ್ತಾಹವನ್ನು ನಗರದ ಗದಗ ರಸ್ತೆಯಲ್ಲಿರುವ ಚಾಲುಕ್ಯ ರೈಲ್ವೆ ಸಂಸ್ಥೆಯಲ್ಲಿ ಇಂದು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಸೇವೆಯಲ್ಲಿ ಗಮನಾರ್ಹ ಸಾಧನೆ ಮಾಡಿದ ನೌಕರರು ಹಾಗೂ ಅತ್ಯುತ್ತಮ ಪ್ರದರ್ಶನ ನೀಡಿದ ವಿವಿಧ ವಿಭಾಗಗಳಿಗೆ ಈ ಸಂದರ್ಭದಲ್ಲಿ ಗೌರವ ಸಲ್ಲಿಸಲಾಯಿತು.ಕಾರ್ಮಿಕ ಅಧಿಕಾರಿ ಸೂರ್ಯ ಪ್ರಕಾಶ್ ಅವರು ಕಾರ್ಯಕ್ರಮದ ಸ್ವಾಗತ ಭಾಷಣ ಕೋರಿದರು. ನೈಋತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕ ಮುಕುಲ್ ಸರನ್ ಮಾಥುರ್ ಅವರು ಸಮಾರಂಭದ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು,…

Read More