ಪುಸ್ತಕ ವ್ಯಕ್ತಿತ್ವವನ್ನು ಶ್ರೇಷ್ಠ ಮಟ್ಟಕ್ಕೆ ಒಯ್ಯುವ ಜೀವ ಸೆಲೆ- ಸಂತೋಷ ಬಂಡೆ
ಸಪ್ತಸಾಗರ ವಾರ್ತೆ,ವಿಜಯಪುರ, ಏ. 24:ಪುಸ್ತಕವು ಹಸನಾದ ಬದುಕನ್ನು ಸೃಷ್ಟಿಸುವ ಶಕ್ತಿಶಾಲಿ ದ್ರವ್ಯ. ಆ ದ್ರವ್ಯ ಎಲ್ಲರಿಗೂ ತಲುಪಿದರೆ ಅರಿವಿನ ಕೀಲಿಕೈ ಸಿಕ್ಕಂತೆಯೇ ಸರಿ. ಪುಸ್ತಕ ಕೇವಲ ನಿರ್ಜೀವ ವಸ್ತು ಅಲ್ಲ, ಬದಲಾಗಿ ವ್ಯಕ್ತಿಯ ವ್ಯಕ್ತಿತ್ವವನ್ನು ಶ್ರೇಷ್ಠ ಮಟ್ಟಕ್ಕೆ ಒಯ್ಯುವ ಜೀವ ಸೆಲೆ ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.ಗುರುವಾರ ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ವಿಶ್ವ ಪುಸ್ತಕ ದಿನದ ನಿಮಿತ್ತ ಹಮ್ಮಿಕೊಂಡ ‘ಪುಸ್ತಕ ವ್ಯಕ್ತಿತ್ವ ನಿರ್ಮಾಪಕ’ ಕುರಿತು…


