16ನೇ ರಾಷ್ಟ್ರೀಯ ಮತದಾರರ ದಿನಾಚಾರಣೆ ಸಿದ್ಧತೆಗೆ ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ, ಜ.19:ನನ್ನ ಭಾರತ ನನ್ನ ಮತ-ಭಾರತೀಯ ಪ್ರಜಾಪ್ರಭುತ್ವದ ಹೃದಯದಲ್ಲಿ ಭಾರತೀಯ ನಾಗರಿಕೆ ಎಂಬ ಘೋಷ ವಾಕ್ಯದಡಿ ಮತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಜನವರಿ 25 ರಂದು ಆಚರಿಸಲಾಗುವ ರಾಷ್ಟ್ರೀಯ ಮತದಾರರ ದಿನಾಚಾರಣೆ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ 16ನೇ ರಾಷ್ಟ್ರೀಯ ಮತದಾರರ ದಿನಾಚಾರಣೆ ಹಿನ್ನಲೆಯಲ್ಲಿ ನಡೆದ ಪೂರ್ವ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಯುವಕರಲ್ಲಿ…

Read More

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ-ಮುಖ್ಯಮಂತ್ರಿ ಸಿದ್ದರಾಮಯ್ಯ

ಸಪ್ತಸಾಗರ ವಾರ್ತೆ ಬೆಂಗಳೂರು, ಜ. 16 :ಬೆಂಗಳೂರಿನಲ್ಲಿ ಅನೇಕ ಭಾಷೆ, ಧರ್ಮಗಳಿದ್ದು, ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಶುಕ್ರವಾರ ಕನ್ನಡ ಸಂಸ್ಕೃತಿ ಇಲಾಖೆ ಮತ್ತು ಕೈಗಾರಿಕೆ ವಲಯ ಮತ್ತು ವಿವಿಧ ಖಾಸಗಿ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಆಯೋಜಿಸಲಾಗಿದ್ದ ಬೆಂಗಳೂರು ಹಬ್ಬ -2026 ಉದ್ಘಾಟನೆ ಹಾಗೂ ಜಾನಪದ ಕಲಾ ತಂಡಗಳ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದರು.ಬೆಂಗಳೂರು ಹಬ್ಬದಲ್ಲಿ 30 ಕ್ಕೂ ಹೆಚ್ಚು ಪ್ರದೇಶಗಳಲ್ಲಿ 350 ಕ್ಕೂ ಹೆಚ್ಚು ಕಾರ್ಯಕ್ರಮಗಳು ನಡೆಯಲಿದ್ದು, ಬೆಂಗಳೂರಿನ…

Read More

ಶ್ರೀ ಸಿದ್ಧರಾಮಾನಂದ ಮಹಾಸ್ವಾಮಿಗಳಿಗೆ ಕಸಾಪದಲ್ಲಿ ನುಡಿನಮನ

ಸಪ್ತಸಾಗರ ವಾರ್ತೆ ವಿಜಯಪುರ, ಜ. 16: ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ತಿಂಥಣಿಯ ಕಾಗಿನೆಲೆ ಗುರುಪೀಠದ ಶ್ರೀ ಸಿದ್ಧರಾಮಾನಂದ ಪುರಿ ಮಹಾಸ್ವಾಮಿಗಳ ಅಕಾಲಿಕ ನಿಧನ ನಾಡಿನ ಲಕ್ಷಾಂತರ ಭಕ್ತರಿಗೆ ಬರಸಿಡಿಲು ಬಡಿದಂತಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಸಿಂಪೀರ ವಾಲೀಕಾರ ಅಭಿಪ್ರಾಯಪಟ್ಟರು.ಶುಕ್ರವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಜರುಗಿದ ಶ್ರೀಗಳ ನುಡಿನಮನ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಅಪಾರ ಭಕ್ತ ಸಮೂಹವನ್ನು ಹೊಂದಿದ ಕಾಗಿನೆಲೆ ಗುರುಪೀಠ ಮಹಾಸಂಸ್ಥಾನ ಕಲಬುರ್ಗಿ…

Read More

ಕೃಷಿಯಲ್ಲಿ ಸಂವಹನ ಕಲೆ ಕ್ರಾಂತಿಯಾಗಲಿ

ಸಪ್ತಸಾಗರ ವಾರ್ತೆ, ವಿಜಯಪುರ ಜ. 16 :ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಮಾಹಿತಿ ರೈತರ ಮನೆ ಬಾಗಿಲಿಗೆ ತಲುಪಲು ಡಿಜಿಟಲ್ ಮಾಧ್ಯಮ ಕ್ಷೇತ್ರ ಅತ್ಯಂತ ಸಹಕಾರಿಯಾಗಲಿದೆ ಎಂದು ನಿವೃತ್ತ ಸಹ ವಿಸ್ತರಣಾ ನಿರ್ದೇಶಕ ಡಾ. ರವೀಂದ್ರ ಬೆಳ್ಳಿ ಹೇಳಿದರು.ವಿಜಯಪುರ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಕೃಷಿ ಇಲಾಖೆ ಹಾಗೂ ಆತ್ಮ ಯೋಜನೆಯ ಅಧಿಕಾರಿಗಳಿಗೆ ಶುಕ್ರವಾರ ಹಮ್ಮಿಕೊಂಡ ತರಬೇತಿ ಕಾರ್ಯಕ್ರಮ ಸಮಾರೋಪ ಸಮಾರಂಭದಲ್ಲಿ ಪ್ರಮಾಣಪತ್ರ ವಿತರಿಸಿ ಮಾತನಾಡಿದರು. ಇಂದು ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳಲ್ಲಿ ಅನೇಕ ಆವಿಷ್ಕಾರಗಳಾಗುತ್ತಿವೆ. ಅವುಗಳನ್ನು…

Read More

ಜ.17ರಂದು 15 ಗ್ರಾಮಗಳಲ್ಲಿ ಹೋಬಳಿ ಮಟ್ಟದ ಪಿಂಚಣಿ ಅದಾಲತ್

ಸಪ್ತಸಾಗರ ವಾರ್ತೆ ವಿಜಯಪುರ, ಜ.16: ವಿವಿಧ ಸಾಮಾಜಿಕ ಭದ್ರತೆ ಯೋಜನೆಗಳನ್ನು ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲೆಯ ಹೋಬಳಿ ಮಟ್ಟದಲ್ಲಿ ಪಿಂಚಣಿ ಅದಾಲತ್ ಜ.17ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲೆಯ ವಿವಿಧ 15 ಗ್ರಾಮಗಳಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ತಿಳಿಸಿದ್ದಾರೆ.ವಿಜಯಪುರ ಉಪ ವಿಭಾಗಾಧಿಕಾರಿಗಳು ಬಬಲೇಶ್ವರ ತಾಲೂಕಿನ ದೇವರಗೆಣ್ಣೂರ ಗ್ರಾಮದ ಗ್ರಾಮ ಪಂಚಾಯತ ಸಭಾ ಭವನದಲ್ಲಿ,ಇಂಡಿ ಉಪವಿಭಾಗಾಧಿಕಾರಿಗಳು ಇಂಡಿ ತಾಲೂಕಿನ ಬಳ್ಳೊಳ್ಳಿ ಹೋಬಳಿಯ ಅರ್ಜನಾಳ ಗ್ರಾಮದ ಶ್ರೀ ಸಿದ್ದೇಶ್ವರ ದೇವಸ್ಥಾನದಲ್ಲಿ, ವಿಜಯಪುರ ಗ್ರೇಡ್-2 ತಹಶೀಲ್ದಾರ ಅವರು ಗುಣಕಿ ಹಾಗೂ…

Read More

ನಿಗದಿತ ಅವಧಿಯಲ್ಲಿ ಗುರಿ ಸಾಧಿಸಿ- ಡಾ. ಔದ್ರಾಮ ಅಧಿಕಾರಿಗಳಿಗೆ ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ.ಡಿ.16:ಎಸ್ ಸಿಪಿ-ಟಿಎಸ್‌ಪಿಯಡಿ ನಿಗದಿಪಡಿಸಿದ ಆರ್ಥಿಕ ಮತ್ತು ಭೌತಿಕ ಗುರಿ ಸಾಧಿಸಿ, ನಿಗದಿತ ಅವಧಿಯಲ್ಲಿ ಕಾಮಗಾರಿ ಅನುಷ್ಠಾನಗೊಳಿಸಿ,ಮಾರ್ಚ್ ಅಂತ್ಯದವರೆಗೆ ನಿಗದಿಪಡಿಸಿದ ಪ್ರಗತಿ ಸಾಧಿಸುವಂತೆ ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ತಿಳಿಸಿದರು.ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ 2025-2026ನೇ ಸಾಲಿನ ವಿಶೇಷ ಘಟಕ ಯೋಜನೆಯ ಹಾಗೂ ಗಿರಿಜನ ಉಪಯೋಜನೆಯ ಕೇಂದ್ರ, ರಾಜ್ಯ ಹಾಗೂ ಜಿಲ್ಲಾ ವಲಯ ಯೋಜನೆಯ ಇಲಾಖಾವಾರು ಡಿಸೆಂಬರ್-2025ರ ಮಾಹೆಯದ ಅಂತ್ಯಕ್ಕೆ ಸಾಧಿಸಿದ ಪ್ರಗತಿ ವರದಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಎಸ್ ಸಿಪಿ-ಟಿಎಸ್‌ಪಿ ಕಾಯ್ದೆಯಡಿ ನಿಗದಿತ…

Read More

ಕಬ್ಬಿನ ಪಡಕ್ಕೆ ಬೆಂಕಿ:ಓರ್ವ ವ್ಯಕ್ತಿ ಸಜೀವ ದಹನ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 16:ಕಬ್ಬಿನ ಗದ್ದೆಗೆ ಬಿದ್ದ ಬೆಂಕಿ ನಂದಿಸಲು ಹೋದ ವ್ಯಕ್ತಿಯೊಬ್ಬ ಸಜೀವ ದಹನಗೊಂಡಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ಬನಹಟ್ಟಿ ಪಿಎ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.ಇಲ್ಲಿನ ಮಲ್ಲನಗೌಡ ಬಿರಾದಾರ ಉರ್ಫ್ ಮೇಲಿನಮನಿ ಸಜೀವ ದಹನಗೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ.ಮಲ್ಲನಗೌಡ ಬಿರಾದಾರ ಅವರಿಗೆ ಸೇರಿದ ಹೊಲದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಬೆಂಕಿಯ ಕೆನ್ನಾಲಿಗೆ ಇಡೀ ಕಬ್ಬಿನ ಪಡಕ್ಕೆ ವ್ಯಾಪಿಸಿದೆ. ಆಗ ಇದನ್ನು ಕಂಡ ಮಲ್ಲನಗೌಡ ಅವರು ಬೆಂಕಿ ನಂದಿಸಲು ಹೋದ ವೇಳೆ…

Read More

ಅರ್ಥಪೂರ್ಣ ಗಣರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ-ಡಿಸಿ

ಸಪ್ತಸಾಗರ ವಾರ್ತೆ, ವಿಜಯಪುರ, ಜ.16:ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜನವರಿ 26 ರಂದು ಗಣರಾಜ್ಯೋತ್ಸವ ಆಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ದತೆಗೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಾದ ಡಾ.ಆನಂದ.ಕೆ ಅವರು ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಗಣರಾಜ್ಯೋತ್ಸವ ಆಚರಣೆಯ ಕುರಿತು ನಡೆದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದ ಅವರು, ಯಾವುದೇ ಗೊಂದಲಕ್ಕೆ ಆಸ್ಪದ ಕೊಡದೇ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಿರ್ವಹಿಸಲು ಸೂಚಿಸಿದರು.ಅಧಿಕಾರಿಗಳು ತಮಗೆ ವಹಿಸಿದ ಎಲ್ಲ ಕಾರ್ಯಗಳನ್ನು‌ ಜವಾಬ್ದಾರಿಯಿಂದ ನಿರ್ವಹಿಸಿ,ವಿವಿಧ ಸಮಿತಿಗಳ‌ನ್ನು ರಚಿಸಿದ್ದು, ಸಮಿತಿಯಲ್ಲಿ ವಿವಿಧ…

Read More

ಶ್ರೀ ಸಿದ್ದರಾಮಾನಂದ ಸ್ವಾಮೀಜಿ ನಿಧನಕ್ಕೆ ಮಾಜಿ ಸಚಿವ ಆರ್.ಕೃಷ್ಣಪ್ಪ ತೀವ್ರ ಸಂತಾಪ

ಸಪ್ತಸಾಗರ ವಾರ್ತೆ, ಬೆಂಗಳೂರು, ಜ. 15: ತಿಂಥಣಿ ಬ್ರಿಜ್ಡ್ ನ ಶ್ರೀ ಕಾಗಿನೆಲೆ ಕನಕ ಗುರು ಪೀಠದ ಶ್ರೀ ಶ್ರೀ ಶ್ರೀ ಸಿದ್ಧರಾಮಾನಂದ ಮಹಾಸ್ವಾಮಿಗಳು ನಮ್ಮನ್ನು ಅಗಲಿದ ಸುದ್ದಿ ಆಘಾತಕಾರಿಯಾದದ್ದು.ಸ್ವಾಮೀಜಿ ಅವರ ಅಗಲಿಕೆ ಸಮಾಜಕ್ಕಾದ ಬಹುದೊಡ್ಡ ನಷ್ಟ ಎಂದು ಮಾಜಿ ಸಚಿವ ಆರ್.ಕೃಷ್ಣಪ್ಪ ಕಂಬನಿ ಮಿಡಿದಿದ್ದಾರೆ.ಮಹಾನ್ ಆಧ್ಯಾತ್ಮಿಕ ಗುರುಗಳಾಗಿದ್ದ ಸ್ವಾಮೀಜಿ ಸಮಾಜ ಸುಧಾರಣೆಯ ಭಾಗವಾಗಿ ಉಚಿತ ಶಿಕ್ಷಣದ ಜೊತೆಗೆ ದಾಸೋಹ, ಸಾಮೂಹಿಕ ವಿವಾಹ, ಆರೋಗ್ಯ ಶಿಬಿರ,ರಕ್ತದಾನ ಶಿಬಿರ ಸೇರಿದಂತೆ ಅನೇಕ ಜನೋಪಕಾರಿ ಕಾರ್ಯಗಳ ಮೂಲಕ ಮಾರ್ಗದರ್ಶಿಗಳಾಗಿದ್ದರು. ಅವರ…

Read More

ನರೇಗಾ ಯೋಜನೆ ಹೆಸರು ಬದಲಾವಣೆ ಕುರಿತು ವಿಶೇಷ ಅಧಿವೇಶನ: ಕಾರಜೋಳ ವಿರೋಧ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 15 :ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ.ಅದಕ್ಕಿಂತಲೂ ಪ್ರಮುಖವಾದ ಒಳ ಮೀಸಲಾತಿ ಲೋಪದೋಷ ಸರಿಪಡಿಸಲು, ಖಾಲಿ ಇರುವ ಹುದ್ದೆ ಭರ್ತಿ ಮೊದಲಾದ ಮಹತ್ವದ ವಿಷಯಗಳ ಬಗ್ಗೆ ಚರ್ಚೆ ಮಾಡಲು ವಿಶೇಷ ಅಧಿವೇಶನ ಕರೆಯಿರಿ ಅದನ್ನು ಬಿಟ್ಟು ರಾಜಕೀಯ ಉದ್ದೇಶ ಇರಿಸಿಕೊಂಡು ವಿಶೇಷ ಅಧಿವೇಶನ ಕರೆಯುತ್ತಿರುವುದು ಯಾವ ಕಾರಣಕ್ಕೂ ಸರಿಯಲ್ಲ ಎಂದು ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಹೇಳಿದ್ದಾರೆ.ಈ ಕುರಿತು…

Read More