ನಿಮ್ಮ ಜತೆ ಸರ್ಕಾರವಿದೆ, ನೀವು ಸರ್ಕಾರದ ಜತೆ ನಿಲ್ಲಿ- ಸಿಎಂ ಡಿಕೆಶಿ

ಸಪ್ತಸಾಗರ ವಾರ್ತೆ,ಬೆಂಗಳೂರು, ಆ.6: “ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಕಚೇರಿಗೆ ಜಾಗ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ. ವಿಧಾನಸೌಧ ಸುತ್ತಮುತ್ತ ಜಾಗ ಹುಡುಕಬೇಕು, ಹೊರ ಭಾಗದಲ್ಲಾದರೆ ದೊಡ್ಡ ಜಾಗ ನೀಡಲು ಸಿದ್ಧ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಭರವಸೆ ನೀಡಿದರು.ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಪದಾಧಿಕಾರಿಗಳು ಸಿಎಂ ಡಿ ಕೆ ಶಿವಕುಮಾರ್ ಅವರನ್ನು ಗೃಹಕಚೇರಿ ಕೃಷ್ಣಾದಲ್ಲಿ ಗುರುವಾರ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಈ ವೇಳೆ ಶಿವಕುಮಾರ್ ಅವರು…

Read More

ಬಸರಕೋಡ ಬಸವೇಶ್ವರ ದೇವಸ್ಥಾನ ಕಳ್ಳತನ ಪ್ರಕರಣ ಭೇದಿಸಿದ ವಿಜಯಪುರ ಪೊಲೀಸರು

₹52.70 ಲಕ್ಷ ಮೌಲ್ಯದ ಬೆಳ್ಳಿ ಮೂರ್ತಿ ಹಾಗೂ ವಸ್ತುಗಳ ವಶ – ಗುಜರಾತ್, ರಾಜಸ್ಥಾನದ ಮೂವರು ಆರೋಪಿಗಳ ಬಂಧನ ಸಪ್ತಸಾಗರ ವಾರ್ತೆ,ವಿಜಯಪುರ, ಆ.6: ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಸರಕೋಡ ಗ್ರಾಮದ ಶ್ರೀ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದಿದ್ದ ಬಹುಚರ್ಚಿತ ಬೆಳ್ಳಿ ಮೂರ್ತಿ ಕಳ್ಳತನ ಪ್ರಕರಣವನ್ನು ವಿಜಯಪುರ ಜಿಲ್ಲಾ ಪೊಲೀಸರು ಭೇದಿಸಿದ್ದು, ಮೂವರು ಆರೋಪಿಗಳನ್ನು ಬಂಧಿಸಿ ₹52.70 ಲಕ್ಷ ಮೌಲ್ಯದ ಕಳುವಾದ ಮೂರ್ತಿ ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಬೆಳಗಾವಿ ಉತ್ತರ ವಲಯ ಐಜಿಪಿ ಸಂದೀಪ ಪಾಟೀಲ…

Read More

ಸಚಿವ ಸ್ಥಾನ ಕೈತಪ್ಪಿದ ಬೇಸರ; ಜನರ ಒತ್ತಾಯಕ್ಕೆ ಮಣಿದು ರಾಜೀನಾಮೆ ವಾಪಸ್: ಯಶವಂತರಾಯಗೌಡ ಪಾಟೀಲ್

ಸಪ್ತಸಾಗರ ವಾರ್ತೆ,ವಿಜಯಪುರ, ಆ.6: ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಇಂಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್, ಬೆಂಬಲಿಗರು, ಹಿತೈಷಿಗಳು ಹಾಗೂ ಕ್ಷೇತ್ರದ ಜನರ ಒತ್ತಾಯದ ಮೇರೆಗೆ ತಮ್ಮ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿರುವುದಾಗಿ ಸ್ಪಷ್ಟಪಡಿಸಿದರು.ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “2023ರ ಚುನಾವಣೆಯಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್‌ಗೆ ಜನರು ಬಹುಮತ ನೀಡಿದ್ದರು. ಕಳೆದ ಮೂರು ವರ್ಷಗಳಲ್ಲಿ ಸರ್ಕಾರ ಉತ್ತಮ ಆಡಳಿತ ನೀಡಿದೆ. ಆದರೆ ಸಚಿವ ಸಂಪುಟ ವಿಸ್ತರಣೆಯ…

Read More

ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಕ್ರಮ: ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ.5: ಜಿಲ್ಲೆಯ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಸಂಪೂರ್ಣ ಪಾರದರ್ಶಕವಾಗಿ ನಡೆಸಿ, ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಹಾಗೂ ಅನರ್ಹರು ಸೇರ್ಪಡೆಯಾಗದಂತೆ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಸೂಚಿಸಿದರು.ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಡೆದ ವಿಡಿಯೊ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಆಗಸ್ಟ್ 4ರವರೆಗೆ ಜಿಲ್ಲೆಯಲ್ಲಿ 16,79,495 ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿದ್ದು, ಆನ್‌ಲೈನ್ ಮೂಲಕ 4,069 ಮತದಾರರು…

Read More

ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ; ರಾಜೀನಾಮೆ ಪತ್ರ ವಾಪಸ್

ಸಪ್ತಸಾಗರ ವಾರ್ತೆ,ವಿಜಯಪುರ, ಆ. 5: ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಇಂಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ ಅವರು ಇದೀಗ ತಮ್ಮ ರಾಜೀನಾಮೆ ಪತ್ರವನ್ನು ಹಿಂಪಡೆದಿದ್ದಾರೆ.ಆಗಸ್ಟ್ 3ರಂದು ಸಚಿವ ಸ್ಥಾನ ಸಿಗದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿ, ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದ ಅವರು, ವಿಧಾನಸಭಾಧ್ಯಕ್ಷರಿಗೆ ರಾಜೀನಾಮೆ ಪತ್ರ ನೀಡಿದ್ದರು. ಈ ನಡೆ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು.ಆದರೆ, ಯಾವುದೇ ಅಧಿಕೃತ ಕಾರಣವನ್ನು ಬಹಿರಂಗಪಡಿಸದೇ ಯಶವಂತರಾಯಗೌಡ ಪಾಟೀಲ…

Read More

ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸುವುದು ಪ್ರತಿಯೊಬ್ಬರ ಕರ್ತವ್ಯ: ಪ್ರೊ. ದೊಡ್ಡಣ್ಣ ಬಜಂತ್ರಿ

ಸಪ್ತಸಾಗರ ವಾರ್ತೆ,ತಿಕೋಟಾ, ಆ.5: ರಾಷ್ಟ್ರಧ್ವಜವು ಭಾರತದ ಸ್ವಾತಂತ್ರ್ಯ, ತ್ಯಾಗ, ಶಾಂತಿ, ಸತ್ಯ ಹಾಗೂ ಸಮೃದ್ಧಿಯ ಪ್ರತೀಕವಾಗಿದ್ದು, ಅದಕ್ಕೆ ಗೌರವ ಸಲ್ಲಿಸುವುದೇ ನಿಜವಾದ ದೇಶಸೇವೆ ಎಂದು ಪ್ರೊ. ದೊಡ್ಡಣ್ಣ ಬಜಂತ್ರಿ ಹೇಳಿದರು.ಪಟ್ಟಣದ ಬಿ.ಎಲ್.ಡಿ.ಇ. ನ್ಯೂ ಆರ್ಟ್ಸ್ ಕಾಲೇಜಿನಲ್ಲಿ ದಲಿತ ಸಾಹಿತ್ಯ ಪರಿಷತ್ ಜಿಲ್ಲಾ ಘಟಕ ವಿಜಯಪುರದ ಅಧ್ಯಕ್ಷ ರವಿ ಕಿತ್ತೂರ ಹಾಗೂ ವಿಭಾಗೀಯ ಸಂಯೋಜಕ ಮೋಹನ ಕಟ್ಟಿಮನಿ ಅವರ ಆಯೋಜನೆಯಲ್ಲಿ, ಮಹಾವಿದ್ಯಾಲಯದ ಐಕ್ಯೂಎಸಿ, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಭಾರತ ಸೇವಾದಳ ವಿಜಯಪುರ ಇವರ ಸಹಯೋಗದಲ್ಲಿ ರಾಷ್ಟ್ರಧ್ವಜ…

Read More

ಅಂತರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಬಸವರಾಜ ಬಾಗೇವಾಡಿ ಭಾಜನ

ಸಪ್ತಸಾಗರ ವಾರ್ತೆ,ವಿಜಯಪುರ, ಆ.5: ವಿಜಯಪುರ ಜಿಲ್ಲೆಯ ಉತ್ನಾಳ ಗ್ರಾಮದ ಬಸವರಾಜ ಬಾಗೇವಾಡಿ ಅವರಿಗೆ ಅಂತರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ–2026 ನೀಡಿ ಗೌರವಿಸಲಾಗಿದೆ.ಆಗಸ್ಟ್ 1 ಮತ್ತು 2ರಂದು ಹೈದರಾಬಾದ್‌ನ ಚಂಪಾಪೇಟೆಯ ಲಕ್ಷ್ಮೀ ಕಲ್ಯಾಣ ಮಂಟಪದಲ್ಲಿ ನಡೆದ 2ನೇ ಅಂತರಾಷ್ಟ್ರೀಯ ಕರಾಟೆ ಕ್ರೀಡಾಕೂಟದ ಅಂಗವಾಗಿ ವಿವಿಧ ರಾಜ್ಯಗಳಿಂದ ಆಗಮಿಸಿದ್ದ ಮಾರ್ಷಲ್ ಆರ್ಟ್ಸ್ ಶಿಕ್ಷಕರು, ತರಬೇತುದಾರರು ಹಾಗೂ ತೀರ್ಪುಗಾರರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.ಮಾರ್ಷಲ್ ಆರ್ಟ್ಸ್ ಹಾಗೂ ವಿವಿಧ ಕ್ರೀಡಾ ಕ್ಷೇತ್ರಗಳಲ್ಲಿ ಸಲ್ಲಿಸಿರುವ ಗಮನಾರ್ಹ ಸೇವೆ ಮತ್ತು ಸಾಧನೆಯನ್ನು ಪರಿಗಣಿಸಿ, ಉತ್ನಾಳ…

Read More

ಜಿಲ್ಲೆಯ ಸಮಗ್ರ ನೀರಾವರಿಗೆ ಆಗ್ರಹಿಸಿ ರೈತರ ಬೃಹತ್ ಪ್ರತಿಭಟನೆ

ಸಿಎಂಗೆ ಮನವಿ ಸಲ್ಲಿಕೆ – ಬಾಕಿ ನೀರಾವರಿ ಯೋಜನೆಗಳನ್ನು ತ್ವರಿತ ಪೂರ್ಣಗೊಳಿಸಲು ಒತ್ತಾಯ ಸಪ್ತಸಾಗರ ವಾರ್ತೆ,ವಿಜಯಪುರ, ಆ. 4:ಜಿಲ್ಲೆಯ ಸಮಗ್ರ ನೀರಾವರಿ ಅಭಿವೃದ್ಧಿಗೆ ಒತ್ತಾಯಿಸಿ ಭಾರತೀಯ ಕಿಸಾನ್ ಸಂಘದ ಕರ್ನಾಟಕ ಉತ್ತರ ಪ್ರಾಂತ ಹಾಗೂ ವಿಜಯಪುರ ಜಿಲ್ಲಾ ಘಟಕದ ನೇತೃತ್ವದಲ್ಲಿ ಮಂಗಳವಾರ ವಿಜಯಪುರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.ಶ್ರೀ ಸಿದ್ಧರಾಮೇಶ್ವರ ದೇವಸ್ಥಾನದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಮಹಾತ್ಮ ಗಾಂಧಿ ವೃತ್ತ, ಬಸವೇಶ್ವರ ವೃತ್ತ, ಡಾ. ಬಿ.ಆರ್. ಅಂಬೇಡ್ಕರ್ ವೃತ್ತ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿಗೆ ತಲುಪಿತು.ಬಳಿಕ ರೈತರು ಒಂದು…

Read More

‘ಗೂಂಡಾ ಸರ್ಕಾರ’ ಎಂದು ಕಾಂಗ್ರೆಸ್‌ಗೆ ಯತ್ನಾಳ ಟಾಂಗ್, : ಸಚಿವ ಸಂಪುಟ ವಿಸ್ತರಣೆ ವಿರುದ್ಧ ತೀವ್ರ ವಾಗ್ದಾಳಿ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 4: ರಾಜ್ಯ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ತೀವ್ರ ವಾಗ್ದಾಳಿ ನಡೆಸಿದ್ದು, ಹೊಸ ಸಚಿವರ ಪಟ್ಟಿಯನ್ನು “ಗೂಂಡಾ ಸರ್ಕಾರದ ಸಂಪುಟ” ಎಂದು ಬಣ್ಣಿಸಿದ್ದಾರೆ. ಕಾಂಗ್ರೆಸ್ ವಿರುದ್ಧ ಕೆಲಸ ಮಾಡಿದವರು, ಗೂಂಡಾಗಿರಿ ಪ್ರವೃತ್ತಿಯವರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದು ಆರೋಪಿಸಿರುವ ಅವರು, ನಿಷ್ಠಾವಂತ ಕಾಂಗ್ರೆಸ್ ನಾಯಕರನ್ನು ಉದ್ದೇಶಪೂರ್ವಕವಾಗಿ ಕಡೆಗಣಿಸಲಾಗಿದೆ ಎಂದು ಕಿಡಿಕಾರಿದರು.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ…

Read More

ವಿಜಯಪುರ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಆಗ್ರಹ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 4:ವಿಜಯಪುರ ಜಿಲ್ಲೆಯನ್ನು ತಕ್ಷಣವೇ ಬರಪೀಡಿತ ಜಿಲ್ಲೆ ಎಂದು ಘೋಷಿಸಿ, ಸಂಕಷ್ಟದಲ್ಲಿರುವ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಹಾಗೂ ಕೃಷಿ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು ಎಂದು ಅಖಿಲ ಕರ್ನಾಟಕ ರೈತ ಸಂಘ (ರಿ) ರಾಜ್ಯ ಘಟಕ ಆಗ್ರಹಿಸಿದೆ.ಮಂಗಳವಾರ ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ್ ಅವರ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ಜಿಲ್ಲೆಯಲ್ಲಿ ಸಮರ್ಪಕ ಮಳೆಯಾಗದ ಕಾರಣ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು,…

Read More