ನಮ್ಮೂರ ಜಾತ್ರೆ: ಗೋಮಾತೆ ಪೂಜೆಯೊಂದಿಗೆ ಆರಂಭ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 11: ಶ್ರೀ ಸಿದ್ಧೇಶ್ವರ ಸಂಕ್ರಮಣದ ಜಾತ್ರಾ ಮಹೋತ್ಸವದ ಅಂಗವಾಗಿ ಶ್ರೀ ಸಿದ್ಧೇಶ್ವರ ದೇವಾಲಯದಲ್ಲಿ ನಮ್ಮೂರ ಜಾತ್ರೆಯ ಗೋ ಪೂಜೆಯೊಂದಿಗೆ ನಂದಿಕೊಲ ಪೂಜೆಗಳನ್ನು ಶ್ರೀ ಸಿದ್ಧೇಶ್ವರ ಸಂಸ್ಥೆಯ ಅಧ್ಯಕ್ಷ, ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ(ಯತ್ನಾಳ) ನೆರವೇರಿಸಿದರು.ನಂದಿಕೋಲಗಳನ್ನು ಹಿಡಿಯುವ ಪಟುಗಳು ನೀಲುವ ಅಂಗಿ, ಧೋತ್ರ, ಪಟ್ಟವಡಿ, ಹಾಕಿಕೊಂಡು ಭಕ್ತಿ ಶ್ರದ್ದೆಯಿಂದ ನಂದಿಕೋಲಗಳನ್ನು ಹಿಡಿದರು. ಅಟಲ್ ಬಿಹಾರಿ ವಾಜಪೇಯಿ ರಸ್ತೆಯಲ್ಲಿರುವ ಚತುರ್ಮುಖ ಗಣೇಶನಿಗೆ ವಿಶೇಷ ಪೂಜೆ ಮಾಡಲಾಯಿತು.ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಉಪಾಧ್ಯಕ್ಷ ಸಂಗು ಸಜ್ಜನ,…

Read More

ಬಸವಣ್ಣನ ನಾಡು ಬೀದರ್ ನಲ್ಲಿ40ನೇ ರಾಜ್ಯ ಪತ್ರಕರ್ತರ ಸಮ್ಮೇಳನ

ಸಪ್ತಸಾಗರ ವಾರ್ತೆ, ಬೀದರ್, ಜ. 11:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಆಯೋಜಿಸುವ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಬೀದರ್ ನಲ್ಲಿ ನಡೆಸಲು ಬೀದರ್ ಪತ್ರಕರ್ತರ ಭವನದಲ್ಲಿ ರಾಜ್ಯ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆಯಲ್ಲಿ ಭಾನುವಾರನಡೆದ ಜಿಲ್ಲಾ ಕಾರ್ಯನಿರತ ಸಂಘದ ಸರ್ವಸದಸ್ಯರ ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯಿಸಲಾಗಿದೆ.ರಾಜ್ಯ ಸಮ್ಮೇಳನದ ಜವಾಬ್ದಾರಿ ಹೊತ್ತ ಬೀದರ್ ಜಿಲ್ಲಾ ಸಂಘಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲ್ಯೂಜೆ) ಅಭಿನಂದನೆಗಳನ್ನು ಸಲ್ಲಿಸಿದೆ.ಫೆಬ್ರವರಿ ಅಥವಾ ಮಾರ್ಚ್ ಮೊದಲ ವಾರದಲ್ಲಿ ಸಮ್ಮೇಳನ ಆಯೋಜನೆ ಮಾಡಲಾಗುವುದು ಎಂದು ಬೀದರ್ ಜಿಲ್ಲಾ…

Read More

ಗಂಗಾ ಕಲ್ಯಾಣ ಯೋಜನೆ ಕೈ ಬಿಡುವ ಹುನ್ನಾರ ನಡೆದಿದ್ಯಾ?: ಸಂಸದ ಜಿಗಜಿಣಗಿ ಹೇಳಿದ್ದೇನು ಗೊತ್ತಾ?

ಸಪ್ತಸಾಗರ ವಾರ್ತೆ ವಿಜಯಪುರ, ಜ. 11:ಗಂಗಾ ಕಲ್ಯಾಣ ಯೋಜನೆಯನ್ನು ಬಂದ್ ಮಾಡುವ ಹುನ್ನಾರ ಸಿದ್ದರಾಮಯ್ಯ ಸರ್ಕಾರ ಮಾಡುತ್ತಿದೆ ಎಂದು ಸಂಸದ ರಮೇಶ ಜಿಗಜಿಣಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಆರ್ಥಿಕವಾಗಿ ಹಿಂದುಳಿದ ಬಡವರಿಗೆ ಅನುಕೂಲಕರವಾಗಿರುವ ಗಂಗಾ ಕಲ್ಯಾಣ ಯೋಜನೆಗೆ ಎಳ್ಳು ನೀರು ಬಿಡುವ ಸುಳಿವು ಜಿಗಜಿಣಗಿ ಅವರಿಗೆ ಗೊತ್ತಾಗಿದೆ. ಜಿಗಜಿಣಗಿ ಅವರು ಕರ್ನಾಟಕ ರಾಜ್ಯದ ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿದ್ದ ವೇಳೆ ಜಾರಿಗೆ ಬಂದ ಈ ಗಂಗಾ ಕಲ್ಯಾಣ ಯೋಜನೆಯ ಅನುದಾನವನ್ನು ಪಂಚ ಗ್ಯಾರಂಟಿ ಯೋಜನೆಗೆ ಬಳಸಿಕೊಳ್ಳುವ ಮೂಲಕ ರಾಜ್ಯ ಸರ್ಕಾರ…

Read More

ಎಂಟನೇ ವಿಜಯಪುರ ತಾಲೂಕ ಕನ್ನಡ ಸಾಹಿತ್ಯ ಸಮ್ಮೇಳನ: ಸವಾ೯ಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ

ಸಪ್ತಸಾಗರ ವಾರ್ತೆ,ವಿಜಯಪುರ, ಜ11: ಜನೇವರಿ 20,21ರಂದು ವಿಜಯಪುರ ತಾಲೂಕ ಎಂಟನೇ ಕನ್ನಡ ಸಾಹಿತ್ಯ ಸಮ್ಮೇಳನ ಹಿಟ್ಟಿನಹಳ್ಳಿಯಲ್ಲಿ ಜರುಗಲಿದ್ದು, ಸಮ್ಮೇಳನದ ಸವಾ೯ಧ್ಯಕ್ಷರಾಗಿ ಸಾಹಿತಿ ಸೋಮಲಿಂಗ ಗೆಣ್ಣೂರ ಸವಾ೯ನುಮತದಿಂದ ಆಯ್ಕೆಯಾಗಿದ್ದಾರೆ.ಭಾನುವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ಕಾಯ೯ಕಾರಿ ಸಮಿತಿ ಪದಾಧಿಕಾರಿಗಳು ಚಚಿ೯ಸಿ ಸವಾ೯ನುಮತದಿಂದ ಸಾಹಿತಿ ಸೋಮಲಿಂಗ ಗೆಣ್ಣೂರ ಅವರನ್ನು ಸವಾ೯ಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.ಸೋಮಲಿಂಗ ಗೆಣ್ಣೂರ ಚಿಂತಕರು. ವಾಗ್ಮಿಗಳು. ಲೇಖಕರು ಹಾಗೂ ವಿಮರ್ಶಕರಾಗಿದ್ದು ದೇವರಗೆಣ್ಣೂರ ಎಂಬ ಆತ್ಮಕಥನ, ನಮ್ಮ ಸಂವಿಧಾನ…

Read More

ಸಂತ ಶ್ರೀ ಸೇವಾಲಾಲ ಮಹಾರಾಜರ ಜಯಂತಿ : ಮಾಲಾಧಾರಿ ಅಭಿಯಾನದ ಪೂರ್ವಭಾವಿ ಸಭೆ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 11: ಸಂತ ಶ್ರೀ ಸೇವಾಲಾಲ ಮಹಾರಾಜರ ಜಯಂತಿ ಪ್ರಯುಕ್ತ ಹಮ್ಮಿಕೊಳ್ಳಲಾಗಿರುವ ಮಾಲಾಧಾರಿ ಅಭಿಯಾನದ ಪೂರ್ವಭಾವಿ ಸಭೆಯನ್ನು ಭಾನುವಾರ ಜಿಲ್ಲೆಯ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಲಾಯಿತು.ಸಭೆಯ ದಿವ್ಯ ಸಾನ್ನಿಧ್ಯವನ್ನು ಶ್ರೀ ಸಂಜು ಮಹಾರಾಜ ಆಹೇರಿ ಅವರು ವಹಿಸಿದ್ದರು. ಮಾಲಾಧಾರಿ ಅಭಿಯಾನದ ಮುಖಂಡ ಡಾ. ಬಾಬುರಾಜೇಂದ್ರ ನಾಯಕ ಅವರ ನೇತೃತ್ವದಲ್ಲಿ ಸಭೆ ಜರುಗಿತು.ಈ ಸಂದರ್ಭದಲ್ಲಿ ಮಾತನಾಡಿದ ಡಾ. ಬಾಬುರಾಜೇಂದ್ರ ನಾಯಿಕ ಅವರು ಮಾಲಾಧಾರಣೆಯ ಮಹತ್ವ, ಅದರ ಉದ್ದೇಶ ಹಾಗೂ ಸಮಾಜದಲ್ಲಿ ಅದರ ಪಾತ್ರದ ಕುರಿತು ವಿವರವಾಗಿ…

Read More

ದಾಸ ಸಾಹಿತ್ಯದಲ್ಲಿ ಶ್ರೇಷ್ಠ ಜೀವನ ಮೌಲ್ಯಗಳಿವೆ-ಸಾಹಿತಿ ಪ್ರೊ. ಎ. ಎಚ್. ಕೊಳಮಲಿ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 11: ಕನ್ನಡ ಸಾಹಿತ್ಯದ ಪ್ರಮುಖ ಘಟ್ಟವಾಗಿರುವ ದಾಸ ಸಾಹಿತ್ಯ ಹಲವಾರು ಶ್ರೇಷ್ಠವಾದ ಜೀವನ ಮೌಲ್ಯಗಳನ್ನು ಹೊಂದಿ ಮಾರ್ಗದರ್ಶನ ಮಾಡುತ್ತಾ ಹೋಗುತ್ತದೆ. ಕನಕದಾಸರು ಪುರಂದರದಾಸರು ಈ ಸಾಹಿತ್ಯದ ಶ್ರೇಷ್ಠರಾಗಿದ್ದು ಅವರ ಕೀರ್ತನೆಗಳು ಬದುಕಿನ ದಾರಿಗೆ ದೀಪಗಳಾಗಿವೆ ಎಂದು ಚೇತನಾ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಸಾಹಿತಿ ಪ್ರೊ. ಎ. ಎಚ್. ಕೊಳಮಲಿ ಇಂದಿಲ್ಲಿ ಅಭಿಪ್ರಾಯಪಟ್ಟರು. ನಗರದ ಆಶ್ರಮ ರಸ್ತೆಯ ಐಶ್ವರ್ಯ ಬಡಾವಣೆಯ ವರದಾಂಜನೇಯ ದೇವಸ್ಥಾನದಲ್ಲಿ ಭಾನುವಾರ ಹಮ್ಮಿಕೊಂಡ 550 ನೇ ಮಹಾ ಸತ್ಸಂಗ…

Read More

ಕೇರಳ, ಗೋವಾ ಮಾದರಿಯಲ್ಲಿ ಸಿಆರ್ ಜಡ್ ಕಾನೂನು ಸರಳೀಕರಣ; ಕೇಂದ್ರ ‌ಪ್ರವಾಸೋದ್ಯಮ, ಪರಿಸರ ಸಚಿವರ ಭೇಟಿಗೆ ನಿಯೋಗ: ಡಿಸಿಎಂ ಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ, ಮಂಗಳೂರು, ಜ.10: “ಕೇರಳ ಹಾಗೂ ಗೋವಾ ಮಾದರಿಯಲ್ಲಿ ಕರಾವಳಿ ನಿಯಂತ್ರಣ ವಲಯ (ಸಿಆರ್ ಜೆಡ್) ಕಾನೂನು ಸರಳೀಕರಣ ಮಾಡಲಾಗುವುದು. ಇದರ ಬಗ್ಗೆ ಕೇಂದ್ರ ಪ್ರವಾಸೋದ್ಯಮ, ಪರಿಸರ ಸಚಿವರ ಬಳಿ ನಿಯೋಗ ತೆರಳಿ ಚರ್ಚೆ ನಡೆಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ಮಂಗಳೂರಿನಲ್ಲಿ ಶನಿವಾರ ನಡೆದ ‘ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶ 2026’ ರಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು.“ಮುಖ್ಯಮಂತ್ರಿಯವರ ಸಮ್ಮುಖದಲ್ಲಿ ಮೀನುಗಾರಿಕೆ, ಪ್ರವಾಸೋದ್ಯಮ ಹಾಗೂ ಇತರೇ ಸಂಬಂಧಪಟ್ಟವರ ಜೊತೆ ಸಿಆರ್ ಜಡ್…

Read More

ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ ಸಾಧ್ಯ-ಸಿದ್ದರಾಮಯ್ಯ

ಸಪ್ತಸಾಗರ ವಾರ್ತೆ, ಬೆಂಗಳೂರು, ಜ. 10 :ಅಸಮಾನತೆಯಿರುವ ಸಮಾಜದಲ್ಲಿ ಬಡವ, ಬಲ್ಲಿದ ಎನ್ನದೇ ಎಲ್ಲರನ್ನೂ ಸಮಾನವಾಗಿ ಕಾಣಬೇಕು . ಸಮಾನತೆ, ನ್ಯಾಯ ಒದಗಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಅಭಿಯೋಜನಾಧಿಕಾರಿಗಳ ಸಂಘದ ವತಿಯಿಂದ KEB ಇಂಜಿನಿಯರ್ ಅಸೋಸಿಯೇಷನ್ ರಜತ ಮಹೋತ್ಸವ ದಲ್ಲಿ ಆಯೋಜಿಸಲಾಗಿದ್ದ ತರಬೇತಿ ಕಾರ್ಯಾಗಾರ ಹಾಗೂ 17 ನೇ ರಾಜ್ಯ ಮಟ್ಟದ ಸಮ್ಮೇಳನ ಕಾರ್ಯಕ್ರಮ ದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು…

Read More

ಜ. 11ರಿಂದ ಮೈಸೂರು ಸ್ಯಾಂಡಲ್ ಸೋಪು ಹಾಗೂ ವಿವಿಧ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ `ಮೇಳ

ಸಪ್ತಸಾಗರ ವಾರ್ತೆ ವಿಜಯಪುರ, ಜ. 10 : ವಿಜಯಪುರದಲ್ಲಿ ಶ್ರೀ ಸಿದ್ದೇಶ್ವರ ಸಂಸ್ಥೆಯ ಶಿವಾನುಭವ ಮಂಟಪದಲ್ಲಿ ಇದೇ ದಿನಾಂಕ 11 ರಿಂದ 10 ದಿನಗಳ ಕಾಲ ಮೈಸೂರು ಸ್ಯಾಂಡಲ್ ಸೋಪು ಹಾಗೂ ವಿವಿಧ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಮೇಳ ನಡೆಯಲಿದ್ದು, ಈ ಮೇಳಕ್ಕೆ ಪೂರಕ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಮೈಸೂರ ಸ್ಯಾಂಡಲ್ ಸೋಪು ಉತ್ಪಾದನಾ ಘಟಕದ ಮಾರುಕಟ್ಟೆ ಪ್ರಧಾನ ವ್ಯವಸ್ಥಾಪಕ ಕೆ.ಎಸ್. ಗಂಗಪ್ಪ ಹೇಳಿದರು.ಪತ್ರಿಕಾಗೋಷ್ಠಿ ಈ ಕುರಿತು ವಿವರಣೆ ನೀಡಿದ ಅವರು, ಮೈಸೂರು ಸ್ಯಾಂಡಲ್ ಸೋಪು…

Read More

ನಾಳೆಯಿಂದ ವೈಭವದ ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 10: ಉತ್ತರ ಕರ್ನಾಟಕದ ಸುಪ್ರಸಿದ್ದ ಶ್ರೀ ಸಿದ್ದೇಶ್ವರ ಸಂಕ್ರಮಣ ಜಾತ್ರಾ ಮಹೋತ್ಸವ ಜನವರಿ 11ರಿಂದ 7 ದಿನಗಳ ಕಾಲ ವೈಭವದಿಂದ ನಡೆಯಲಿದ್ದು, ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ಧತೆ ಪೂರ್ಣಗೊಳಿಸಲಾಗಿದೆ ಎಂದರು.ಜಾತ್ರಾ ಮಹೋತ್ಸವ ಅಂಗವಾಗಿ ನಡೆಯುವ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಸಾಂಸ್ಕೃತಿಕ ಕಾರ್ಯಕ್ರಮಗಳ ಕುರಿತು ನಗರ ಶಾಸಕ ಹಾಗೂ ಶ್ರೀ ಸಿದ್ದೇಶ್ವರ ಸಂಸ್ಥೆಯ ಅಧ್ಯಕ್ಷ ಬಸನಗೌಡ ಪಾಟೀಲ ಯತ್ನಾಳ ಹಾಗೂ ಶ್ರೀ ಸಿದ್ದೇಶ್ವರ ಸಂಸ್ಥೆಯ ಸರ್ವ ನಿರ್ದೇಶಕರ ಸಮ್ಮುಖದಲ್ಲಿ ಚೇರಮನ್ ಬಸಯ್ಯ ಹಿರೇಮಠ…

Read More