ಜಿಲ್ಲೆಯ ಜನತೆ ಪರವಾಗಿ ಸಿ.ಎಂ. ಸಿದ್ದುಗೆ ಕೃತಜ್ಞತೆ- ಸಚಿವ ಶಿವಾನಂದ ಪಾಟೀಲ
ಸಪ್ತಸಾಗರ ವಾರ್ತೆ, ವಿಜಯಪುರ, ಜ. 8 : ರಾಜ್ಯದ ಸುದೀರ್ಘ ಆಡಳಿತ ನಡೆಸಿದ ಮುಖ್ಯಮಂತ್ರಿ ಎಂಬ ದಾಖಲೆ ಮಾಡಿದ ಬಳಿಕ ಜಿಲ್ಲೆಗೆ ವೈದ್ಯಕೀಯ ಕಾಲೇಜಿನ ಕೊಡುಗೆ ನೀಡಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಹೀಗಾಗಿ ಮುಖ್ಯಮಂತ್ರಿಗಳನ್ನು ಜಿಲ್ಲೆಯ ಜನತೆಯ ಪರವಾಗಿ ಹೃತ್ಪೂರ್ವಕ ಸ್ವಾಗಿತಿಸಿ, ಕೃತಜ್ಞತೆ ಸಲ್ಲಿಸುವುದಾಗಿ ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಹೇಳಿದರು.ಗುರುವಾರ ನಗರದ ವಿಡಿಸಿಸಿ ಬ್ಯಾಂಕ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸುದೀರ್ಘ ಕಾಲದವರೆಗೆ…


