ಮನೆ-ಮನೆ ಗಣತಿ ಕಾರ್ಯಕ್ಕೆ ಗಣತಿದಾರರು ಸಜ್ಜಾಗಬೇಕು: ಜಿಲ್ಲಾಧಿಕಾರಿ ಡಾ.ಆನಂದ ಕೆ. ಸೂಚನೆ
ಸಪ್ತಸಾಗರ ವಾರ್ತೆ,ವಿಜಯಪುರ, ಏ.7:ಏ.16 ರಿಂದ ಮನೆ-ಮನೆ ಮನೆಪಟ್ಟಿ ಕಾರ್ಯಕ್ಕೆ ಗಣತಿದಾರರು ಕಾರ್ಯ ಪ್ರವೃತ್ತರಾಗಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಹೇಳಿದರು.ಜನಗಣತಿ ಕುರಿತು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಗಣತಿದಾರರು ಈಗಾಗಲೇ ಸರಿಯಾಗಿ ತರಬೇತಿ ಪಡೆದುಕೊಳ್ಳುತ್ತಿದ್ದಾರೆ. ಎಲ್ಲರೂ ತರಬೇತಿಗೆ ಹಾಜರಿರುವಂತೆ ನೋಡಿಕೊಳ್ಳಬೇಕು ಅಧಿಕಾರಿಗಳಿಗೆ ಸಲಹೆ ಮಾಡಿದ ಅವರು, ಸ್ವಯಂ ಗಣತಿ ಕಾರ್ಯಕ್ಕೂ ಒತ್ತು ನೀಡಬೇಕು ಎಂದರು.ಯಾರೂ ನಿರ್ಲಕ್ಷ್ಯವಹಿಸಬಾರದು. ತಾಲೂಕು ಮಟ್ಟದಲ್ಲಿ ತರಬೇತಿ ನೀಡಿ, ಪರಿಪೂರ್ಣ ತರಬೇತಿ ಕೊಡಿಸಬೇಕು ಎಂದರು….


