ರಾಜ್ಯ ಸರ್ಕಾರದ ವಿಶೇಷಾಧಿಕಾರಿ ಡಾ. ರಾಜಶೇಖರ ದ್ಯಾಬೇರಿ ಜಿಲ್ಲಾ ಆಸ್ಪತ್ರೆಗೆ ಭೇಟಿ, ಪರಿಶೀಲನೆ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 13:ಜಿಲ್ಲೆಯ ಜನರ ಬಹುಕಾಲದ ಕನಸಾಗಿರುವ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ರಾಜ್ಯ ಸರ್ಕಾರದ ವಿಶೇಷಾಧಿಕಾರಿ ಡಾ. ರಾಜಶೇಖರ್ ದ್ಯಾಬೇರಿ ಅವರು ವಿಜಯಪುರ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಅಗತ್ಯವಿರುವ ಮೂಲ ಸೌಕರ್ಯ, ಆಸ್ಪತ್ರೆಯ ಸೌಲಭ್ಯಗಳು ಹಾಗೂ ಲಭ್ಯವಿರುವ ಸಂಪನ್ಮೂಲಗಳ ಕುರಿತು ಸಮಗ್ರ ಪರಿಶೀಲನೆ ನಡೆಸಿದರು.ಪರಿಶೀಲನೆ ವೇಳೆ ವಿಜಯಪುರ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನಾ ಹೋರಾಟ ಸಮಿತಿಯ ಸದಸ್ಯರು ವಿಶೇಷಾಧಿಕಾರಿಗಳನ್ನು ಭೇಟಿ ಮಾಡಿ ಜಿಲ್ಲೆಯ…

Read More

ಹೈಮಾಸ್ಟ್ ಅಳವಡಿಕೆ ಕಾಮಗಾರಿಗೆ ರೂ.1 ಕೋಟಿ ಮಂಜೂರು

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 13: ನಗರ ಮತಕ್ಷೇತ್ರದಲ್ಲಿ ಬರುವ ತೊರವಿ ಗ್ರಾಮ ಪಂಚಾಯಿತಿಯಲ್ಲಿ ಅತೀ ಹೆಚ್ಚು ಪರಿಶಿಷ್ಟ ಜಾತಿ ಜನಾಂಗದವರು ವಾಸಿಸುವ ಕಾಲೊನಿಗಳಲ್ಲಿ ಹೈಮಾಸ್ಟ್ ಅಳವಡಿಸುವ ಕಾಮಗಾರಿಗೆ 2026-27ನೇ ಸಾಲಿನ ಕಾಲೊನಿ ಅಭಿವೃದ್ಧಿ/ಪ್ರಗತಿ ಕಾಲೊನಿ ಯೋಜನೆಯಡಿ ರೂ.1 ಕೋಟಿ ಅನುದಾನ ಮಂಜೂರಾಗಿದ್ದು, ಶೀಘ್ರದಲ್ಲೇ ಕಾಮಗಾರಿ ಕೈಗೊಳ್ಳಲಾಗುವುದು.ತೊರವಿ ಗ್ರಾಮದ ಅತಾಲಟ್ಟಿ ರಸ್ತೆಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನದ ಹತ್ತಿರ, ಎಸ್.ಸಿ ಕಾಲೊನಿಯ ಹನುಮಾನ ದೇವಸ್ಥಾನ ಹತ್ತಿರ, ಇಂದಿರಾ ನಗರದ ಝೆಂಡಾ ಕಟ್ಟಿ ಹತ್ತಿರ, ಪರಿಶಿಷ್ಟ ಜಾತಿಯ ಸ್ಮಶಾನದಲ್ಲಿ, ಹರಳಯ್ಯ ಸಮಾಜದ ಮರಗಮ್ಮ…

Read More

ಜೂ. 16,17 ಅಪ್ರೆಂಟಿಸ್ ತರಬೇತಿ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 13:ನಗರದ ಬಿ.ಎಲ್.ಡಿ.ಇ ಕೈಗಾರಿಕೆ ತರಬೇತಿ ಸಂಸ್ಥೆಯಲ್ಲಿ ಜೂನ್ 16 ಮತ್ತು 17 ರಂದು ಅಪ್ರೆಂಟಿಸ್ ತರಬೇತಿಗಾಗಿ ಕ್ಯಾಂಪಸ್ ಸಂದರ್ಶನ ನಡೆಯಲಿದೆ.ಧಾರವಾಡದಲ್ಲಿರುಬ ನಿಡೆಕ್ ಇಂಡಿಯಾ ಪ್ರೈ. ಲಿ.‌ ಕಂಪನಿ ತರಬೇತುದಾರ(Production Trainee) ಮತ್ತು ಅಪ್ರಂಟಿಸ್ ತರಬೇತಿಗಾಗಿ ಈ‌ ಕ್ಯಾಂಪಸ್ ಸಂದರ್ಶನ ನಡೆಸಲಿದೆ.ಐಟಿಐನ‌ ನಾನಾ ಟ್ರೇಡುಗಳಲ್ಲಿ ಪಾಸಾದ ಮತ್ತು ದ್ವಿತೀಯ ವರ್ಷದಲ್ಲಿ ತರಬೇತಿ ಪಡೆಯುತ್ತಿರುವ 18 ರಿಂದ 25 ವರ್ಷದೊಳಗಿನ ತರಬೇತುದಾರರಿಗೆ ಲಿಖಿತ ಪರೀಕ್ಷೆ ಹಾಗೂ ಮೌಖಿಕ ಸಂದರ್ಶನ ನಡೆಸಲಾಗುತ್ತದೆ. ಜಿಲ್ಲೆಯ ನಾನಾ ಐಟಿಐ ಕಾಲೇಜಿನ…

Read More

ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಕೇಂದ್ರ ಜಲಶಕ್ತಿ ಸಚಿವರೊಂದಿಗೆ ಚರ್ಚೆ: ಸಿಎಂ ಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ ನವದೆಹಲಿ, ಜೂ.12: “ರಾಜ್ಯದ ನೀರಾವರಿ ಯೋಜನೆಗಳ ಜಾರಿಗೆ ಸಂಬಂಧಿಸಿದಂತೆ ನಾನು, ರಾಮಲಿಂಗಾ ರೆಡ್ಡಿ ಹಾಗೂ ಟಿ.ಬಿ ಜಯಚಂದ್ರ ಅವರು ಕೇಂದ್ರ ಜಲಶಕ್ತಿ ಸಚಿವರಾದ ಸಿ.ಆರ್ ಪಾಟೀಲ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೇವೆ” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ನವದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು.ಕೇಂದ್ರ ಜಲಶಕ್ತಿ ಸಚಿವರ ಭೇಟಿ ಬಗ್ಗೆ ಕೇಳಿದಾಗ, “ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು, ಕೃಷ್ಣಾ ನೀರು ವಿವಾದ ನ್ಯಾಯಾಧೀಕರಣ ತೀರ್ಪಿನ…

Read More

ಪಡಿತರ ಚೀಟಿದಾರರಿಗೆ ಜೂನ್ 25 ರವರೆಗೆ ಐರಿಸ್ ಮೂಲಕ ಇ-ಕೆವೈಸಿ ಮಾಡಿಸಲು ವಿಶೇಷ ಅವಕಾಶ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ.12:ನಗರ ಪ್ರದೇಶದಲ್ಲಿ ತಾಂತ್ರಿಕ ಕಾರಣಗಳಿಂದ ಇ-ಕೆವೈಸಿ ಮಾಡಿಸಲು ಬಾಕಿ ಇರುವ ಪಡಿತರ ಚೀಟಿದಾರರಿಗೆ ಐರಿಸ್ ಸಾಧನದ ಮೂಲಕ ಇ-ಕೆವೈಸಿ ಮಾಡಿಸಿಕೊಳ್ಳಲು ಆಹಾರ ಇಲಾಖೆಯು ಜೂನ್ 25 ರವರೆಗೆ ವಿಶೇಷ ಅವಕಾಶ ಕಲ್ಪಿಸಿದೆ.ವಿಜಯಪುರ ನಗರ ಪ್ರದೇಶದಲ್ಲಿ ಇನ್ನೂ ಸುಮಾರು 697 ಪಡಿತರ ಚೀಟಿದಾರರ ಇ-ಕೆವೈಸಿ ಬಾಕಿ ಇರುವುದು ಕಂಡು ಬಂದಿದೆ. ಬಯೋಮೆಟ್ರಿಕ್ (ಬೆರಳು ಗುರುತು) ಸರಿಯಾಗಿ ಮೂಡದ ಕಾರಣ ಇ-ಕೆವೈಸಿ ಪ್ರಕ್ರಿಯೆ ನೂರಕ್ಕೆ ನೂರರಷ್ಟು ಪೂರ್ಣಗೊಂಡಿಲ್ಲದೇ ಇರುವುದರಿಂದ ಇಲಾಖೆಯ ವತಿಯಿಂದಲೇ ವಿಶೇಷ ಇ-ಕೆವೈಸಿ ಮಾಡಿಸಲು ಅವಕಾಶ…

Read More

ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕೈಜೋಡಿಸಿ-ನ್ಯಾಯಾಧೀಶ ಹರೀಶ

ಸಪ್ತಸಾಗರ ವಾರ್ತೆ, ವಿಜಯಪುರ,ಜೂ.12:ಸಮಾಜದಲ್ಲಿನ ಅನಿಷ್ಠ ಪಿಡುಗಾಗಿರುವ ಬಾಲ ಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಸಾರ್ವಜನಿಕರು ಕೈಜೋಡಿಸಿ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹರೀಶ ಎ. ಅವರು ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಇವರ ಸಹಯೋಗದಲ್ಲಿ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಆಚರಿಸಲಾದ ವಿಶ್ವ…

Read More

ಪ್ರತಿಯೊಬ್ಬರು ಸಸಿಯನ್ನು ನೆಟ್ಟು ಪರಿಸರ ಸಂರಕ್ಷಿಸಿ- ಡಾ. ರವೀಂದ್ರ ಬೆಳ್ಳಿ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 12:ಪರಿಸರ ರಕ್ಷಣೆ ಜವಾಬ್ದಾರಿ ಪ್ರತಿಯೊಬ್ಬರ ಹೊಣೆಯಾಗಿದ್ದು, ಪ್ರತಿಯೊಬ್ಬರು ಸಸಿಯನ್ನು ನೆಟ್ಟು, ಪೋಷಣೆ ಮಾಡಿ, ಪರಿಸರ ಸಂರಕ್ಷಣೆ ಮಾಡಬೇಕೆಂದು ಕೃಷಿ ಮಹಾವಿದ್ಯಾಲಯ ನಿವೃತ್ತ ಸಹ ವಿಸ್ತರಣಾ ನಿರ್ದೇಶಕ ಡಾ. ರವೀಂದ್ರ ಬೆಳ್ಳಿ ಹೇಳಿದರು.ನಗರದ ಸುಲ್ತಾನ ಡೈಮಂಡ್ಸ್ ಅಂಡ್ ಗೋಲ್ಡ್ ಶೋರೂಮ್ ವತಿಯಿಂದ ಹಮ್ಮಿಕೊಂಡ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.ಪರಿಸರ ಸಂರಕ್ಷಣೆ ಮತ್ತು ವಿನಾಶ ಮನುಕುಲದಿಂದ ಮಾತ್ರ ಸಾಧ್ಯ. ಇಂದು ಗಿಡ ಮರಗಳ ಕಟಾವಿನಿಂದ ಪರಿಸರ ಹಾಳಾಗುತ್ತಿದೆ. ಇದರ ಪರಿಣಾಮವಾಗಿ ಬಿರುಬಿಸಿಲು, ಬಿರುಗಾಳಿ,…

Read More

ಮೇಕೆದಾಟು, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ, ಮಹದಾಯಿ ಯೋಜನೆಗಳಿಗೆ ಅನುಮತಿ, ಅನುದಾನ ನೀಡಿ: ಸಿಎಂ ಡಿ.ಕೆ. ಶಿವಕುಮಾರ್ ಮನವಿ

ಸಪ್ತಸಾಗರ ವಾರ್ತೆ,ನವದೆಹಲಿ, ಜೂ.12:ಕರ್ನಾಟಕ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಾದ ಮೇಕೆದಾಟು, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ, ಮಹದಾಯಿ ಯೋಜನೆಗಳಿಗೆ ಅನುಮತಿ, ಅನುದಾನ ನೀಡಬೇಕು ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಜಲಶಕ್ತಿ ಸಚಿವರಿಗೆ ಮನವಿ ಮಾಡಿದ್ದಾರೆ.ರಾಜ್ಯದ ನಿರಾವರಿ ಯೋಜನೆಗಳಿಗೆ ಹೆಚ್ಚಿನ ಕಾಳಜಿ ವಹಿಸಿರುವ ಮುಖ್ಯಮಂತ್ರಿಗಳು ಗುರುವಾರ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದ ಶಿವಕುಮಾರ್ ಅವರು ಶುಕ್ರವಾರ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ…

Read More

ಬಿ ಎಲ್ ಡಿ ಇ ಡೀಮ್ಡ್ ವಿವಿಯಲ್ಲಿ ಕೃತಿ ಬಿಡುಗಡೆ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 12:ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಜೆರಿಯಾಟ್ರಿಕ್ಸ್ ವಿಭಾಗ ಮತ್ತು ಶ್ರೀ ಸಂಗನಬಸವ ಮಹಾಸ್ವಾಮೀಜಿ ಕಾಲೇಜ್ ಆಫ್ ಫಾರ್ಮಸಿ ಅಂಡ್ ರಿಸರ್ಚ್ ಸೆಂಟರ್‌ನ ಫಾರ್ಮ್-ಡಿ ವಿಭಾಗದ ಪ್ರಕಟಿಸಿದ ಅಡ್ವಾನ್ಸ್ ಕೇರ್ ಪ್ಲ್ಯಾನಿಂಗ್ ಫಾರ್ ಅಲಝೈಮರ್ಸ್ ಡಿಸೀಸ್ ಆ್ಯಂಡ್ ಡೆಮೆನ್ಶಿಯಾ (Advance Care Planning for Alzheimer’s Disease and Dementia) ಕೃತಿಯನ್ನು ಬಿ.ಎಲ್.ಡಿ.ಇ ಡೀಮ್ಡ್ ವಿವಿ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ್ ಗುರುವಾರ ಬಿಡುಗಡೆ ಮಾಡಿದರು.ವಿವಿಯಲ್ಲಿ ನಡೆದ ಶೈಕ್ಷಣಿಕ ಕಾರ್ಯಕ್ರಮದಲ್ಲಿ ಈ ಕೃತಿ…

Read More

ಕಳೆದ 10 ವರ್ಷದ ನನ್ನ ಸಾಧನೆ: ಜಿಗಜಿಣಗಿ ವಿವರಣೆ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 12:ಕಳೆದ 10 ವರ್ಷಗಳಲ್ಲಿ ವಿಜಯಪುರ ಲೋಕಸಭಾ ಕ್ಷೇತ್ರದಲ್ಲಿ ರಾಷ್ಟ್ರೀಯ ಹೆದ್ದಾರಿ, ರೈಲ್ವೆ ಮೇಲ್ಸೇತುವೆ ಸೇರಿ ವಿವಿಧ 3516.67 ಕೋಟಿ ರೂ.ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಮೂಲಕ ಸರ್ವತೋಮುಖ ಅಭಿವೃದ್ಧಿಗೆ ನಾಂದಿ ಹಾಡಲಾಗಿದೆ ಎಂದು ಸಂಸದ ರಮೇಶ ಜಿಗಜಿಣಗಿ ತಿಳಿಸಿದ್ದಾರೆ.ವಿಜಯಪುರದ ರಾಷ್ಟ್ರೀಯ ಹೆದ್ದಾರಿ ವಿಭಾಗದ ವ್ಯಾಪ್ತಿಯಡಿ 4 ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲಾಗಿದೆ. ಅಂದಾಜು 1668.88 ಕೋಟಿ ರೂ.ಅನುದಾನದಡಿ ಒಟ್ಟು 208.04 ಕಿಮೀ ಉದ್ದದಷ್ಟು ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಇದರಲ್ಲಿ ಎರಡು ರೈಲ್ವೆ ಸೇತುವೆ ಸಹ ಒಳಗೊಂಡಿದೆ…

Read More