ಜ.5ರಂದು ಫೋನ್-ಇನ್ ಕಾರ್ಯಕ್ರಮ
ಸಪ್ತಸಾಗರ ವಾರ್ತೆ, ವಿಜಯಪುರ ಜ.3:ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಮೂಲಕ ಪ್ರಯಾಣಿಕರ ಅನುಕೂಲಕ್ಕಾಗಿ ಅಹವಾಲು ಮತ್ತು ಕುಂದುಕೊರತೆಗಳನ್ನು ಆಲಿಸಲು ಜ.5ರ ಸೋಮವಾರ ಮಧ್ಯಾಹ್ನ 3.30 ರಿಂದ 4.30ರವರೆಗೆ ಫೋನ್-ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಮೊ. 6366423887 ಸಂಖ್ಯೆಗೆ ಸಾರ್ವಜನಿಕರು ಕರೆ ಮಾಡಿ, ತಮ್ಮ ಕುಂದುಕೊರತೆಗಳನ್ನು ಪರಿಹರಿಸಿಕೊಳ್ಳಬಹುದಾಗಿದ್ದು, ಆದ್ದರಿಂದ ಸಾರ್ವಜನಿಕರು ಫೋನ್-ಇನ್ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


