ಅಪಾಯಕರ ಮನರಂಜನೆ ಕ್ರೀಡೆಗಳಿಗೆ ಕಡಿವಾಣ ಹಾಕಲು ಡಿಸಿಗೆ ಮನವಿ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 1:ಅಪಾಯಕಾರಿ ಮನರಂಜನೆ ಆಟಗಳಿಗೆ ನಗರದ ಶ್ರೀ ಸಿದ್ದೇಶ್ವರ ಜಾತ್ರೆಯಲ್ಲಿ ಪರವಾನಗಿ ನೀಡದಂತೆ ಭೀಮ್ ಸರ್ಕಾರ ಸಂಘಟನೆ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಗುರುವಾರ ಮನವಿ ಮಾಡಿಕೊಂಡಿದೆ.ನಗರದ ಕಳೆದ ವರ್ಷದಲ್ಲಿ ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವದಲ್ಲಿ ಅನಧಿಕೃತ ಅಪಾಯಕರ ಕಾನೂನು ಬಾಹಿರ ಮನೋರಂಜನಾ ಆಟಗಳಿಗೆ ಪರವಾನಿಗೆ ನೀಡಿದ್ದಿರಿ. ಆ ಪ್ರಯುಕ್ತ ಉಲ್ಲೇಖ (೨) ರ ಪ್ರಕಾರ ನಮ್ಮ ಸಂಘಟನೆ ಪರವಾಗಿ ನ್ಯಾಯಾಲಯದ ಮೆಟ್ಟಲೇರಿದ್ದ ತಮಗೂ ತಿಳಿದ ವಿಷಯ. ಅದರಂತೆ ಈ ಮನೋರಂಜನಾ ಆಟಗಳಿಗೆ ಸಂಬಂಧಪಟ್ಟ…

Read More

ನಾಡಗೀತೆ ಕರ್ನಾಟಕದ ಶ್ರೇಷ್ಠತೆ ಗೌರವದ ಸಂಕೇತ – ಎನ್.ಎಂ.ಬಿರಾದಾರ ಅಭಿಮತ

ಸಪ್ತಸಾಗರ ವಾರ್ತೆ, ವಿಜಯಪುರ, ಜ.1: ಕುವೆಂಪು ರಚಿಸಿದ ಕನ್ನಡದ ನಾಡಗೀತೆ ಕನ್ನಡಿಗರ, ಕನ್ನಡ ಸಾಹಿತ್ಯದ ಶ್ರೀಮಂತ ಸಂಸ್ಕೃತಿ ಕರ್ನಾಟಕದ ಸ್ವಾಭಿಮಾನ ಮತ್ತು ಘನತೆ, ಇತಿಹಾಸ, ಭೂಗೋಳ ವೈವಿಧ್ಯತೆಯನ್ನು ಸಾರುವ ನಮ್ಮೆಲ್ಲರ ಹೆಮ್ಮೆಯ ನಾಡಗೀತೆ ಜಯ ಭಾರತ ಜನನಿಯ ತನುಜಾತೆಗೆ ನೂರು ವರುಷಗಳು ಸಂದಿದ್ದು ಕನ್ನಡಿಗರಿಗೆ ಸ್ವಾಭಿಮಾನದ ಸಂಕೇತ ಎಂದು ಚಾಣಕ್ಯ ಕರಿಯರ್ ಅಕಾಡೆಮಿಯ ಸಂಸ್ಥಾಪಕ ಅಧ್ಯಕ್ಷ ಎನ್.ಎಂ. ಬಿರಾದಾರ ಅಭಿಪ್ರಾಯಪಟ್ಟರು.ಬುಧವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಹಿಟ್ಟಿನಹಳ್ಳಿ ಪಿ.ಕೆ.ಪಿ.ಎಸ್ ಸಹಯೋಗದಲ್ಲಿ…

Read More

ಯಾರೊಂದಿಗೂ ಹೋಲಿಸಿಕೊಳ್ಳದೇ ಬದುಕಿದರೆ ಸಂತೋಷ ಪ್ರಾಪ್ತಿ :ಶಿವಯೋಗೀಶ್ವರ ಶ್ರೀ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 1: ಹುಟ್ಟಿದಾಗ ಯಾವ ವ್ಯಕ್ತಿಯೂ ಸಹ ದಡ್ಡನಾಗಿರುವುದಿಲ್ಲ. ಬದಲಿಗೆ ನಮ್ಮನ್ನು ಇನೊಬ್ಬರೊಂದಿಗೆ ಹೋಲಿಸಿಕೊಂಡು ದಡ್ಡ ಎಂದುಕೊಳ್ಳುತ್ತೇವೆ. ಅದರ ಬದಲಿಗೆ ಪ್ರತಿಯೊಬ್ಬ ವಿದ್ಯಾರ್ಥಿಯೂ ನಾನು ಬುದ್ದಿವಂತ ನನ್ನಿಂದ ಎಲ್ಲವೂ ಸಾಧ್ಯ ಎಂದುಕೊಂಡು ಪ್ರತಿದಿನವನ್ನು ಪ್ರಾರಂಭಿಸಿದರೆ ಯಶಸ್ಸು ಎನ್ನುವುದು ಹುಡುಕಿಕೊಂಡು ಬರುತ್ತದೆ ಎಂದು ಕಾಖಂಡಕಿಯ ಗುರುದೇವಾಶ್ರಮದ ಪ.ಪೂ ಶ್ರೀ ಶಿವಯೋಗೀಶ್ವರ ಸ್ವಾಮೀಜಿ ಹೇಳಿದರು.ನಗರದ ಎಕ್ಸಲಂಟ್ ಪ. ಪೂ ವಿಜ್ಞಾನ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿಯವರಿಗೆ ಗುರು ನಮನ ಮಹೋತ್ಸವದ ದಿವ್ಯ ಸಾನ್ನಿಧ್ಯ…

Read More

ನಾಗಠಾಣ: ಆದರ್ಶ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

ಸಪ್ತಸಾಗರ ವಾರ್ತೆ,ವಿಜಯಪುರ, ಜ. 1: ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ದಶಮಾನೋತ್ಸವ ಹಾಗೂ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮದಲ್ಲಿ ಆದರ್ಶ ವಿದ್ಯಾರ್ಥಿ-ವಿದ್ಯಾರ್ಥಿನಿಯಾಗಿ ಆಯ್ಕೆಯಾದ ಶಾಲೆಯ 10 ನೇ ವರ್ಗದ ಕು. ಸಂದೀಪ ಹುಣಶ್ಯಾಳ ಮತ್ತು ಕು. ಸಾನಿಕಾ ಖನಿಮಣಿ ಅವರನ್ನು ಶಾಲೆಯ ವತಿಯಿಂದ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಗೂಳಪ್ಪ ಪೂಜಾರಿ, ಶರಣಬಸು ಪೂಜಾರಿ, ಗ್ರಾಪಂ ಮಾಜಿ ಅಧ್ಯಕ್ಷ ಚಂದ್ರಶೇಖರ ಅರಕೇರಿ, ಸಂಸ್ಥೆಯ ಅಧ್ಯಕ್ಷ ಶಂಕರ ಹುಣಶ್ಯಾಳ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಾರದಾ ಗಿರಿಸಾಗರ,…

Read More

ಇಂದಿರಾಗಾಂಧಿ ಮುಕ್ತ ವಿ.ವಿ. ಕೋರ್ಸ್ ಗಳಿಗೆ ಪ್ರವೇಶ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 1 : ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ (ಇಗ್ನೋ ) ದಿಂದ ಪ್ರಸಕ್ತ ಸಾಲಿನ ಪದವಿ ಸ್ನಾತಕೋತ್ತರ ಮತ್ತು ಸರ್ಟಿಫಿಕೇಟ್ ಕೋರ್ಸ್ ಗಳಿಗೆ ಪ್ರವೇಶ ಆರಂಭವಾಗಿದ್ದು ಜನೆವರಿ 31 ಕೊನೆಯ ದಿನವಾಗಿದೆ. ಪ್ರವೇಶಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ ನಗರದ ರಾಮಮಂದಿರ ರಸ್ತೆಯ ಬಿ.ಎಲ್. ಡಿ.ಇ.ಸಂಸ್ಥೆಯ ಜೆ.ಎಸ್.ಎಸ್.ಶಿಕ್ಷಣ ಮಹಾವಿದ್ಯಾಲಯ ಆವರಣದಲ್ಲಿರುವ ಇಗ್ನೋ ಅಧ್ಯಯನ ಕೇಂದ್ರ 1307 ರಲ್ಲಿ ಸಂಪರ್ಕಿಸಬಹುದು, ಅಲ್ಲದೆ www.ignouadmission.samarth.edu.in ಕ್ಕೆ ಲಾಗಿನ್ ಆಗಿ ಆನ್ಲೈನ್ ಮೂಲಕ ನೊಂದಣಿ ಪಡೆಯಬಹುದಾಗಿದೆ ಹೆಚ್ಚಿನ…

Read More

ಅಮರಶಿಲ್ಪಿ ಜಕಣಾಚಾರಿ ಶಿಲ್ಪಕಲೆಗೆ ನೀಡಿದ ಕೊಡುಗೆ ಅಪಾರ -ಡಾ.ಔದ್ರಾಮ್

ಸಪ್ತಸಾಗರ ವಾರ್ತೆ, ವಿಜಯಪುರ, ಜ.1: ಅಮರ ಶಿಲ್ಪಿ ಜಕಣಚಾರಿ ಅವರ ಶ್ರದ್ಧೆ ಹಾಗೂ ಅವರು ಕಲೆಗೆ ನೀಡಿದ ಕೊಡುಗೆ ಅಪಾರ ಎಂದು ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಅವರು ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಗುರುವಾರ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಿದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಶಿಲ್ಪಕಲೆಯ ಇತಿಹಾಸದಲ್ಲಿ ಅಜರಾಮರಾಗಿರುವ ಅಮರಶಿಲ್ಪಿ ಜಕಣಾಚಾರಿ ಅವರು ಕಲ್ಲಿನಲ್ಲಿ ಜೀವ ತುಂಬಿದ ಮಹಾನ್…

Read More

ಜಿಲ್ಲೆಯಲ್ಲಿ ಅಪಘಾತ ತಡೆಗೆ ಮುನ್ನೆಚ್ಚರಿಕಾ-ಸುರಕ್ಷತಾ ಕ್ರಮ ಕೈಗೊಳ್ಳಿ-ಜಿಲ್ಲಾಧಿಕಾರಿ ಡಾ.ಆನಂದ ಕೆ. ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ.31: ಜಿಲ್ಲೆಯಲ್ಲಿ ಅಪಘಾತ ತಡೆಗೆ ಜಿಲ್ಲೆಯಲ್ಲಿರುವ ಅಪಘಾತ ವಲಯಗಳನ್ನು ಗುರುತಿಸಿ ರಸ್ತೆ ಅಪಘಾತ ತಡೆಯಲು ಸೂಕ್ತ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸೂಚನೆ ನೀಡಿದರು.ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ರಸ್ತೆ ಅಪಘಾತ ತಡೆಗೆ ರಾಷ್ಟ್ರೀಯ ಹೆದ್ದಾರಿ, ಜಿಲ್ಲಾ ಲೋಕೋಪಯೋಗಿ ಇಲಾಖಾ ವ್ಯಾಪ್ತಿಯ ಮುಖ್ಯ ರಸ್ತೆ ಸೇರಿದಂತೆ ಅಪಘಾತ ವಲಯಗಳಲ್ಲಿ ಅಪಘಾತ ಪ್ರಮಾಣ ತಗ್ಗಿಸಲು ಸಂಬಂಧಿಸಿದ…

Read More

ಸಹಾಯ ಧನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ, ವಿಜಯಪುರ,ಡಿ.31:ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2025-26ನೇ ಸಾಲಿನ ಸಾಮಾನ್ಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಯಡಿ ರಾಜ್ಯಾದ್ಯಂತ ಹಾಗೂ ಹೊರರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ-ಸಂಸ್ಥೆಗಳನ್ನುಪ್ರೋತ್ಸಾಹಿಸಲು ಹಾಗೂ ಕಲಾವಿದರಿಗೆ ವಾದ್ಯ ಪರಿಕರ ಮತ್ತು ವೇಷಭೂಷಣಗಳ ಖರೀದಿಗಾಗಿ ಹಾಗೂ ಚಿತ್ರಕಲೆ-ಶಿಲ್ಪ ಕಲಾಕೃತಿಗಳ ಪ್ರದರ್ಶನಕ್ಕೆ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತರು ಅರ್ಜಿಗಳನ್ನು…

Read More

ಕಡಲೆ ಬೆಳೆಗೆ ಕೀಟಬಾಧೆ: ಮುಂಜಾಗ್ರತಾ ಕ್ರಮ ವಹಿಸಲು ಸಲಹೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ.31:ಜಿಲ್ಲೆಯ ಪ್ರಮುಖ ಹಿಂಗಾರು ಬೆಳೆಗಳಲ್ಲಿ ಕಡಲೆ ಬೆಳೆ ಒಂದಾಗಿದೆ. ಪ್ರಸಕ್ತ ವರ್ಷದಲ್ಲಿ ಬೆಳೆದಿರುವ ಕಡಲೆ ಬೆಳೆಯಲ್ಲಿ ಅಲ್ಲಲ್ಲಿ ಕಾಯಿಕೊರಕದ ಕೀಟ ಬಾಧೆ ಕಂಡು ಬಂದಿದ್ದು, ಇಳುವರಿಯ ಮೇಲೆ ಪರಿಣಾಮ ಬೀರುವ ಕಾರಣ, ರೈತರು ಮುಂಜಾಗ್ರತಾ ಕ್ರಮವಾಗಿ, ಬಿತ್ತುವಾಗ ಪ್ರತಿ ಎಕರೆಗೆ 20 ಗ್ರಾಂ ಸೂರ್ಯಕಾಂತಿ ಅಥವಾ 20 ಗ್ರಾಂ ಜೋಳದ ಬೀಜಗಳನ್ನು ಕೂಡಿಸಿ ಬಿತ್ತಬೇಕು. ನಂತರ ಬೆಳೆಯು ಕಾಳು ಕಟ್ಟುವ ಹಂತದಲ್ಲಿದ್ದಾಗ ಪ್ರತಿ ಎಕರೆಗೆ 10 ಸೇರು ಚುರುಮುರಿ ಹೊಲದಲ್ಲಿ ಚೆಲ್ಲುವುದರಿಂದ ಪಕ್ಷಿಗಳಿಗೆ…

Read More

ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮ ಕುರಿತು ವ್ಯಾಪಕ ಜಾಗೃತಿ ಮೂಡಿಸಿ-ಜಿಲ್ಲಾಧಿಕಾರಿ ಡಾ.ಆನಂದ ಕೆ. ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ.31: ಯುವ ಜನಾಂಗ ದುಶ್ಚಟಗಳಿಗೆ ಬಲಿಯಾದಂತೆ ನೋಡಿಕೊಳ್ಳಲು ಮಾದಕ ವ್ಯಸನದಿಂದಾಗುವ ದುಷ್ಪರಿಣಾಮಗಳ ಕುರಿತು ವ್ಯಾಪಕವಾಗಿ ಜಾಗೃತಿ ಮೂಡಿಸಲು ಎಲ್ಲ ಇಲಾಖಾಧಿಕಾರಿಗಳು ಸಮನ್ವಯತೆ ಹಾಗೂ ಸಹಕಾರದಿಂದ ಕಾರ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಸೂಚನೆ ನೀಡಿದರು.ಬುಧವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಮಾದಕ ವಸ್ತು ನಿರ್ಮೂಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಮಾದಕ ವ್ಯಸನಕ್ಕೆ ಒಳಗಾಗಿ ತಮ್ಮ ಸುಂದರ ಬದುಕನ್ನು ಹಾಳು ಮಾಡಿಕೊಳ್ಳದಂತೆ ಮಾದಕ ವಸ್ತು-ದ್ರವ್ಯಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ…

Read More