ಬಿಎಲ್ ಡಿಇ ಸಿದ್ದೇಶ್ವರ ಶಿಕ್ಷಣ ಕಾಲೇಜಿನಲ್ಲಿ ಪಾಲಕರ ಸಭೆ
ಸಪ್ತಸಾಗರ ವಾರ್ತೆ,ವಿಜಯಪುರ, ಏ. 1 : ನಗರದ ಬಿ. ಎಲ್.ಡಿ.ಇ.ಸಂಸ್ಥೆಯ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ” ಪಾಲಕ-ಶಿಕ್ಷಕರ ಸಭೆ”ಯನ್ನು ಅತ್ಯಂತ ಅರ್ಥಪೂರ್ಣವಾಗಿ ನಡೆಯಿತು. ಅತಿಹೆಚ್ಚಿನ ಸಂಖ್ಯೆಯಲ್ಲಿ ಪಾಲಕರು ಆಗಮಿಸಿದ್ದು, ವಿದ್ಯಾರ್ಥಿಗಳ ಪ್ರಗತಿಯ ಕುರಿತು ಚರ್ಚಿಸಲಾಯಿತು. ಸಹ ಪ್ರಾಧ್ಯಾಪಕ ಡಾ.ಎಂ.ಎಸ್. ಹಿರೇಮಠ ಮಹಾವಿದ್ಯಾಲಯ ಬೆಳೆದು ಬಂದ ಬಗೆಯನ್ನು ತಿಳಿಸಿದರು. ಸಹ ಪ್ರಾಧ್ಯಾಪಕ ಡಾ.ಎಂ.ಬಿ. ಕೋರಿ ಮಹಾವಿದ್ಯಾಲಯದ ಸೌಲಭ್ಯಗಳ ಕುರಿತು ತಿಳಿಸಿದರು. ಸಹಾಯಕ ಪ್ರಾಧ್ಯಾಪಕಿ ಡಾ.ಜೆ.ಎಸ್. ಪಟ್ಟಣಶೆಟ್ಟಿ ಮಹಾವಿದ್ಯಾಲಯವು ಹೊಂದಿರುವ ವಿವಿಧ ಘಟಕಗಳ ಕುರಿತು ಮಾತನಾಡಿದರು.ಸಹಾಯಕ…


