ರಾಮಲಿಂಗಾರೆಡ್ಡಿ ನಮ್ಮ ಸ್ನೇಹಿತರು, ಎಲ್ಲಾ ಸಮಸ್ಯೆ ಬಗೆಹರಿಸಲಾಗಿದೆ: ಸಿಎಂ ಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ,ಬೆಂಗಳೂರು, ಜೂ. 06: “ರಾಮಲಿಂಗಾರೆಡ್ಡಿ ಅವರು ನನ್ನ ಸ್ನೇಹಿತರು, ಅವರೊಂದಿಗೆ ಮಾತನಾಡಿದ್ದು, ಎಲ್ಲಾ ಸಮಸ್ಯೆ ಬಗೆಹರಿಸಲಾಗಿದೆ. ಯಾವುದೇ ಕಾರಣಕ್ಕೂ ಅವರ ರಾಜಿನಾಮೆ ಅಂಗೀಕರಿಸುವುದಿಲ್ಲ” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದಲ್ಲಿ ಮಾಜಿ ಸಿಎಂ ದೇವರಾಜ ಅರಸು ಅವರ ಪುಣ್ಯಸ್ಮರಣೆ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದರು. ಶುಕ್ರವಾರ ರಾತ್ರಿ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿದ ವಿಚಾರವಾಗಿ ಕೇಳಿದಾಗ, “ಅನಗತ್ಯವಾಗಿ ತಲೆಕೆಡಿಸಿಕೊಂಡು…

Read More

ವಾಹನ ಖರೀದಿಗೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ,ವಿಜಯಪುರ,ಜೂ.6:ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿಯಲ್ಲಿ, 2020-21 ರಿಂದ 2023-24ನೇ ಸಾಲಿನ ಜಿಲ್ಲೆಗೆ ಸಾಮಾನ್ಯ ವರ್ಗದಡಿ ಒಂದು ಇನ್ಸುಲೇಟೆಡ್ ವಾಹನ ಖರೀದಿಗೆ ಸಹಾಯಧನಕ್ಕಾಗಿ ಜಿಲ್ಲೆಯ ಅರ್ಹ ಆಸಕ್ತ ಮೀನುಗಾರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ. 40 ರಷ್ಟು ಸಹಾಯಧನ ದೊರೆಯಲಿದ್ದು, ಉಳಿದ ಶೇ. 60 ರಷ್ಟು ಮೊತ್ತವನ್ನು ಫಲಾನುಭವಿಗಳೇ ಭರಿಸಬೇಕಾಗುತ್ತದೆ. ಅರ್ಹತೆಗಳೇನುಅರ್ಜಿದಾರರು ಕಡ್ಡಾಯವಾಗಿ ವಿಜಯಪುರ ಜಿಲ್ಲೆಯ ಖಾಯಂ ನಿವಾಸಿಯಾಗಿರಬೇಕು.ಮೀನುಗಾರಿಕೆ ಅಥವಾ ಮೀನು ಮಾರಾಟ ವೃತ್ತಿಯಲ್ಲಿ ತೊಡಗಿಸಿಕೊಂಡಿರುವ ಆಸಕ್ತರು ಮೀನುಗಾರರ ಸಹಕಾರ ಸಂಘಗಳ ಸದಸ್ಯರಾಗಿರುವುದು ಕಡ್ಡಾಯವಾಗಿದೆ.ಅರ್ಜಿದಾರರು…

Read More

ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ವಿಶ್ವಪರಿಸರ ದಿನಾಚರಣೆ: ಸಸಿ ನೆಟ್ಟುಪರಿಸರ ಸಂರಕ್ಷಣೆಗೆ ವಿದ್ಯಾರ್ಥಿನಿಯರ ಸಂಕಲ್ಪ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 5:ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಕೋಶದವತಿಯಿಂದ ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ಕಾರ್ಯಕ್ರಮದ ಅಂಗವಾಗಿ ವಿಶ್ವವಿದ್ಯಾನಿಲಯ ಆವರಣದಲ್ಲಿ ಸಸಿ ನೆಡುವ ಅಭಿಯಾನ ಹಮ್ಮಿಕೊಳ್ಳಲಾಯಿತು. ವಿದ್ಯಾರ್ಥಿನಿಯರು ಸ್ವಯಂಪ್ರೇರಿತರಾಗಿಸಸಿಗಳನ್ನು ನೆಡುವ ಮೂಲಕ ಹಸಿರು ಪರಿಸರ ನಿರ್ಮಾಣಕ್ಕೆ ತಮ್ಮಬದ್ಧತೆಯನ್ನು ವ್ಯಕ್ತಪಡಿಸಿದರು.ಇದೇ ವೇಳೆ ಪರಿಸರ ಸಂರಕ್ಷಣೆಯಮಹತ್ವದ ಕುರಿತು ಜಾಗೃತಿ ಮೂಡಿಸಲಾಯಿತು.ಮುಖ್ಯ ಅತಿಥಿಯಾಗಿ ಮಾತನಾಡಿದ ಉದ್ಯಮಿ ಹಾಗೂ ಸಾಮಾಜಿಕ ಚಿಂತಕಬಸಂತಕುಮಾರ ಪಾಟೀಲ, “ಪ್ರತಿಯೊಬ್ಬ ಪ್ರಜೆಯೂ ಒಂದೊಂದುಮರವನ್ನು ನೆಟ್ಟರೆ ನಮ್ಮ ದೇಶ ನಂದನವನದಂತೆ ಕಂಗೋಳಿಸುತ್ತದೆ.ಪರಿಸರ…

Read More

ಹುಬ್ಬಳ್ಳಿ ರೈಲ್ವೆ ವಿಭಾಗದಲ್ಲಿ ವಿಶ್ವ ಪರಿಸರ ದಿನಾಚರಣೆ: ಸಸಿ ನೆಡುವ ಮೂಲಕ ಪರಿಸರ ಸಂರಕ್ಷಣೆಯ ಸಂದೇಶ ಸಾರಿದ ಡಿಆರ್‌ಎಂ ಬೇಲಾ ಮೀನಾ

ಸಪ್ತಸಾಗರ ವಾರ್ತೆ , ಹುಬ್ಬಳ್ಳಿ, ಜೂ. 5: ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಹುಬ್ಬಳ್ಳಿ ರೈಲ್ವೆ ವಿಭಾಗವು ಶುಕ್ರವಾರ ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲು ನಿಲ್ದಾಣ ಮತ್ತು ಆವರಣದಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಶ್ರೀಮತಿ ಬೇಲಾ ಮೀನಾ, ವಿಭಾಗೀಯ ರೈಲ್ವೆ ವ್ಯವಸ್ಥಾಪಕರು (DRM), ನಿಲ್ದಾಣದ ಆವರಣದಲ್ಲಿ ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪರಿಸರ ಸಂರಕ್ಷಣೆ ಕೇವಲ ಘೋಷಣೆ ಅಥವಾ ಆಚರಣೆಗೆ ಸೀಮಿತವಾಗದೆ ಪ್ರತಿಯೊಬ್ಬರ ಜೀವನದಲ್ಲಿ…

Read More

ಗಿಡ-ಮರಗಳ ಲಾಲನೆ ಪೋಷಣೆ ಅಗತ್ಯ: ನ್ಯಾಯಾಧೀಶ ಹರೀಶ ಎ.ಚಾಲನೆ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ.5: ಇತ್ತೀಚಿನ ದಿನಗಳಲ್ಲಿ ಪರಿಸರ ಮಾಲಿನ್ಯ ಮಾನವನ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದ್ದು, ಪರಿಸರ ಸಮತೋಲನ ಕಾಪಾಡಲು ಗಿಡ-ಮರಗಳ ಲಾಲನೆ ಪೋಷಣೆ ಮಾಡುವುದು ತೀರಾ ಅಗತ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹರೀಶ ಎ. ಹೇಳಿದರು.ವಿಶ್ವ ಪರಿಸರ ದಿನದ ಅಂಗವಾಗಿ ಕೂಡಗಿ ಎನ್ ಟಿಪಿಸಿ ವಿದ್ಯುತ್ ಸ್ಥಾವರದ ಆವರಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬೃಹತ್ ಸಸಿ ನೆಡುವ ಅಭಿಯಾನಕ್ಕೆ ಚಾಲನೆ ನೀಡಿ ಅವರು…

Read More

ಎ. ಎಸ್.ಐ ಹಾದಿಮನಿಯವರಿಗೆ ಬೀಳ್ಕೊಡುಗೆ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 5: ಸೇವಾ ನಿವೃತ್ತಿ ಹೊಂದಿದ ಗೋಳ ಗುಮ್ಮಜ್ ಪೊಲೀಸ್ ಠಾಣೆಯ ಎಎಸ್ಐ ಎಂ. ಎ. ಹಾದಿಮನಿ ಅವರಿಗೆ ಆತ್ಮೀಯವಾಗಿ ಬೀಳ್ಕೊಡಲಾಯಿತು.ಠಾಣೆಯ ಮೇಲ್ಚಾವಣಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಹಾದಿಮನಿ ಅವರಿಗೆ ಶಾಲು, ಹೂವಿನ ಹಾರ ಹಾಗೂ ಫಲಪುಷ್ಪ ನೀಡಿ ಸನ್ಮಾನಿಸಿ ಆತ್ಮೀಯವಾಗಿ ಬೀಳ್ಕೊಡಲಾಯಿತು.ಅನೇಕರು ಈ ಸಮಾರಂಭದಲ್ಲಿ ಹಾದಿಮನಿ ಅವರ ಪ್ರಾಮಾಣಿಕತೆ ದಕ್ಷತೆ ಹಾಗೂ ಸೇವಾ ನಿಷ್ಠೆಯನ್ನು ಪ್ರಶಂಶಿಸಿ ಮಾತನಾಡಿದರು.ಗೋಳ ಗುಮ್ಮಜ್ ಪೊಲೀಸ್ ಠಾಣೆಯ ಸಿಪಿಐ ಸಂಜೀವ್ ಕುಮಾರ್ ಬಳೆಗಾರ, ಪಿಎಸ್ಐಗಳಾದ ಮಹ್ಮದ ಘೋರಿ, ಹಸೀನಾ…

Read More

ವಿಜಯಪುರದ ರಂಗಭೂಮಿ ಮತ್ತು ಸಿನಿಮಾ ಕಲಾವಿದೆ ‘ಗೋಹಾರ್ ಬಾಯಿ ಕರ್ನಾಟಕಿ ‘ ಪುಸ್ತಕ ಬೆಂಗಳೂರಲ್ಲಿ ಬಿಡುಗಡೆ

ಸಪ್ತಸಾಗರ ವಾರ್ತೆ, ವಿಜಯಪುರ, ಜೂ. 5:ಕರ್ನಾಟಕ ಸಾಹಿತ್ಯ ಅಕಾಡಮಿಯ ಮಹಿಳಾ ಮುನ್ನಡೆಯ ಪುಸ್ತಕಗಳಲ್ಲಿ ವಿಜಯಪುರದ ಸಾಹಿತಿ ಮೋಹನ ಕಟ್ಟಿಮನಿಯವರು ರಚಿಸಿದ ಹೆಸರಾಂತ ರಂಗಭೂಮಿ ಮತ್ತು ಸಿನಿಮಾ ಅಭಿನೆತ್ರಿ ‘ಗೋಹಾರ್ ಬಾಯಿ ಕರ್ನಾಟಕಿ ‘ ಅವರ ಪುಸ್ತಕವನ್ನು 05-06-2026 ರಂದು ಬೆಂಗಳೂರಿನ ನಯನಸಭಾಂಗಣದಲ್ಲಿ ಬಿಡುಗಡೆ ಮಾಡಲಾಯಿತು.ರಾಷ್ಟ್ರದ ರಂಗಭೂಮಿ ಇತಿಹಾಸದಲ್ಲಿ ದಂತಕತೆಯಾದ ‘ ಗೋಹಾರ್ ಬಾಯಿ ‘ ದುರಂತ ನಾಯಕಿ ರಂಗಭೂಮಿಯ ಮೇಲೆ ಲಕ್ಷಾಂತರ ಜನರ ಹೃದಯದಲ್ಲಿ ಉಳಿದ ಈ ಕಲಾವಿದೆ ಇತಿಹಾಸ ನಿರ್ಮಿಸಿದ್ದರೂ ಇತಿಹಾಸದ ಪುಟಗಳಲ್ಲಿ ಇವರು ಉಳಿದಿರಲಿಲ್ಲ…

Read More

ಜರ್ಮನಿ ನಿಯೋಗದ ಜತೆ ಸಿಎಂ ಡಿ ಕೆ ಶಿವಕುಮಾರ್, ಸಚಿವ ಎಂ ಬಿ ಪಾಟೀಲ ಸಭೆ, ಹೂಡಿಕೆ ಕುರಿತು ಚರ್ಚೆ

ಸಪ್ತಸಾಗರ ವಾರ್ತೆ,ಬೆಂಗಳೂರು, ಜೂ. 05: ಪರಸ್ಪರ ಆರ್ಥಿಕ ಸಹಕಾರ ಬಲವರ್ಧನೆಯ ಉದ್ದೇಶದಿಂದ ಆಗಮಿಸಿರುವ ಜರ್ಮನಿಯ ತುರಿಂಜಿಯಾ ಪ್ರಾಂತ್ಯದ ಮಂತ್ರಿಮಂಡಲದ ಮುಖ್ಯಸ್ಥ (ಮಿನಿಸ್ಟರ್ ಪ್ರೆಸಿಡೆಂಟ್) ಮಾರಿಯೋ ವಾಯ್ಟ್ ನೇತೃತ್ವದ ಉನ್ನತ ಮಟ್ಟದ ನಿಯೋಗದ ಜತೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಶುಕ್ರವಾರ ಇಲ್ಲಿನ ಖಾಸಗಿ ಹೋಟೆಲ್ ನಲ್ಲಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಕೂಡ ಇದ್ದರು.ಈ ಸಂದರ್ಭದಲ್ಲಿ ಮಾತನಾಡಿದ ಶಿವಕುಮಾರ್, ಎರಡೂ ಕಡೆಯವರಿಗೂ ಇರುವ ಅತ್ಯುತ್ತಮ ಅವಕಾಶಗಳನ್ನು ಗುರುತಿಸಲು ನಾವು…

Read More

ಪರಿಸರ ರಕ್ಷಣೆಗಾಗಿ ಪಣ ತೊಡೋಣ-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ,ಇಂಡಿ, ಜೂ. 5: ಪ್ರಕೃತಿ ನಮಗೆ ಬದುಕಲು ಬೇಕಾದ ಗಾಳಿ, ನೀರು, ಆಹಾರ, ನೆರಳನ್ನು ನೀಡಿದೆ. ಪರಿಸರ ಹಾಳಾದರೆ ಮಾನವನ ಅಸ್ತಿತ್ವವೇ ಪ್ರಶ್ನಾರ್ಥಕವಾಗುತ್ತದೆ. “ಇಂದಿನ ಮರ, ನಾಳಿನ ಜೀವ” ಎಂಬ ಧ್ಯೇಯವಾಕ್ಯದೊಂದಿಗೆ ನಾವೆಲ್ಲರೂ ಪರಿಸರ ರಕ್ಷಣೆಗಾಗಿ ಪಣ ತೊಡೋಣ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ಶುಕ್ರವಾರ ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಸಸಿ ನೆಟ್ಟು ಅವರು ಮಾತನಾಡಿದರು.ಇಂದಿನ ಮಕ್ಕಳಿಗೆ ಪ್ರಕೃತಿಯ ಮಹತ್ವ ತಿಳಿಸಿಕೊಟ್ಟು, ಸ್ವಚ್ಛತೆಯ ಅಭ್ಯಾಸ ಕಲಿಸುವುದು…

Read More

ಹಿಜಾಬ್ ಅನುಮತಿ ಹಿಂಪಡೆಯುವರೆಗೆ ಹೋರಾಟ ನಿಲ್ಲದು: ಶಾಸಕ ಯತ್ನಾಳ ಎಚ್ಚರಿಕೆ

ಸಪ್ತಸಾಗರ ವಾರ್ತೆ ವಿಜಯಪುರ, ಜೂ. 5:ಹಿಜಾಬ್ ಅನುಮತಿ ಹಿಂಪಡೆಯುವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ. ಅಗತ್ಯಬಿದ್ದರೆ ಜೈಲಿಗೆ ಹೋಗಲು ಸಿದ್ದ. ನಮ್ಮ ಹಿಂದೂ ವಿದ್ಯಾರ್ಥಿಗಳು ಸ್ವಯಂ ಪ್ರೇರಿತರಾಗಿ ಕೇಸರಿ ಶಾಲುಗಳನ್ನು ಹಾಕಿಕೊಂಡೆ ಹೋಗುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.ವಿಜಯಪುರ ನಗರದ ದರಬಾರ ಕಾಲೇಜು ಹತ್ತಿರ ಶುಕ್ರವಾರ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ದರಿಸಲು ಅವಕಾಶ ನೀಡಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ, ಪರ್ಯಾಯವಾಗಿ ವಿದ್ಯಾರ್ಥಿಗಳಿಗೆ ಕೇಸರಿ ಶಾಲು ವಿತರಿಸುವ ವೇಳೆ ಪೊಲೀಸರು ಬಂಧಿಸಿ, ಬಿಡುಗಡೆಗೊಳಿಸಿದ ನಂತರ ಮಾತನಾಡಿದ…

Read More