ಮಹಿಳೆಯರಿಗೆ ಶೂನ್ಯ ಸ್ಥಾನ, ವಿಜಯಪುರಕ್ಕೂ ನಿರಾಸೆ: ಸಚಿವ ಸಂಪುಟ ವಿಸ್ತರಣೆ ವಿರುದ್ಧ ಆಪ್ ವಾಗ್ದಾಳಿ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 4: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಮಹಿಳೆಯರಿಗೆ ಒಂದೇ ಒಂದು ಸಚಿವ ಸ್ಥಾನವನ್ನೂ ನೀಡದಿರುವುದು, ಭ್ರಷ್ಟಾಚಾರದ ಆರೋಪ ಎದುರಿಸಿದ್ದ ನಾಯಕರಿಗೆ ಮತ್ತೆ ಅವಕಾಶ ಕಲ್ಪಿಸಿರುವುದು ಹಾಗೂ ವಿಜಯಪುರ ಜಿಲ್ಲೆಗೆ ಹೆಚ್ಚುವರಿ ಪ್ರಾತಿನಿಧ್ಯ ನೀಡದಿರುವುದು ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯವನ್ನು ಬಯಲಿಗೆಳೆದಿದೆ ಎಂದು ಆಮ್ ಆದ್ಮಿ ಪಕ್ಷದ ವಿಜಯಪುರ ಜಿಲ್ಲಾಧ್ಯಕ್ಷ ಭೋಗೇಶ್ ಸೋಲಾಪುರ್ ಆರೋಪಿಸಿದರು.ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳಾ ಸಬಲೀಕರಣದ ಬಗ್ಗೆ ವೇದಿಕೆಗಳಲ್ಲಿ ಮಾತನಾಡುವ ಕಾಂಗ್ರೆಸ್, ಅಧಿಕಾರ ಹಂಚಿಕೆಯ ಸಂದರ್ಭದಲ್ಲಿ ಮಹಿಳೆಯರನ್ನು ಸಂಪೂರ್ಣವಾಗಿ…

Read More

ಕೆಎಸ್‌ಸಿಎ ಅಂಡರ್-19 ಇಂಟರ್ ಝೋನಲ್ ಟಿ-20ಗೆ ವಿಜಯಪುರದ ತನೂಶ್ರೀ ಇಜೇರಿ ಆಯ್ಕೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 4:ವಿಜಯಪುರದ ಪ್ರತಿಭಾವಂತ ಯುವ ಕ್ರಿಕೆಟಿಗರಾದ ತನೂಶ್ರೀ ಇಜೇರಿ ಅವರು 2026–27ನೇ ಸಾಲಿನ ಕೆಎಸ್‌ಸಿಎ ಅಂಡರ್-19 ಮಹಿಳಾ ಇಂಟರ್ ಝೋನಲ್ ಟಿ-20 ಪಂದ್ಯಾವಳಿಯ ಕಂಬೈನ್ಡ್ ಮೊಫಸ್ಸಿಲ್ XI ತಂಡಕ್ಕೆ ಆಯ್ಕೆಯಾಗಿದ್ದಾರೆ. ಪಂದ್ಯಾವಳಿಯು ಆಗಸ್ಟ್ 6ರಿಂದ 12ರವರೆಗೆ ಬೆಂಗಳೂರಿನಲ್ಲಿ ನಡೆಯಲಿದೆ.ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕೆಎಸ್‌ಸಿಎ ಮಹಿಳಾ ಇಂಟರ್ ಮೊಫಸ್ಸಿಲ್ ಪಂದ್ಯಾವಳಿಯಲ್ಲಿ ರಾಯಚೂರು ವಲಯ ಮಹಿಳಾ ತಂಡವನ್ನು ಪ್ರತಿನಿಧಿಸಿದ ತನೂಶ್ರೀ ಅವರು ಆಲ್‌ರೌಂಡ್ ಪ್ರದರ್ಶನ ನೀಡಿ ಆಯ್ಕೆ ಸಮಿತಿಯ ಗಮನ ಸೆಳೆದಿದ್ದಾರೆ.ಎಡಗೈ ಆರಂಭಿಕ ಬ್ಯಾಟರ್ ಹಾಗೂ ಎಡಗೈ…

Read More

ಆಕಾಂಕ್ಷಿಗಳಿಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಎಂ.ಬಿ. ಪಾಟೀಲರನ್ನು ದೂಷಿಸುವುದು ಸರಿಯಲ್ಲ: ಡಾ. ಗಂಗಾಧರ ಸಂಬಣ್ಣಿ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 4:ನೂತನ ಸಚಿವ ಸಂಪುಟ ವಿಸ್ತರಣೆಯಲ್ಲಿ ಜಿಲ್ಲೆಯ ಕಾಂಗ್ರೆಸ್ ಆಕಾಂಕ್ಷಿಗಳಿಗೆ ಸಚಿವ ಸ್ಥಾನ ಸಿಗದಿರುವುದಕ್ಕೆ ಸಚಿವ ಎಂ.ಬಿ. ಪಾಟೀಲರನ್ನು ಹೊಣೆಗಾರರನ್ನಾಗಿ ಮಾಡುವುದು ಸಂಪೂರ್ಣ ಅಸಮರ್ಥನೀಯ ಎಂದು ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಗಂಗಾಧರ ಸಂಬಣ್ಣಿ ತಿಳಿಸಿದ್ದಾರೆ.ಜಿಲ್ಲೆಯ ಕಾಂಗ್ರೆಸ್‌ನ ಆರೂ ಶಾಸಕರು ಸಚಿವ ಸ್ಥಾನಕ್ಕೆ ಅರ್ಹರಾಗಿದ್ದು, ಈ ಬಾರಿ ಜಿಲ್ಲೆಗೆ ಮತ್ತೊಂದು ಸಚಿವ ಸ್ಥಾನ ದೊರೆಯುವ ನಿರೀಕ್ಷೆ ಇತ್ತು. ಈ ಸಂಬಂಧ ಎಂ.ಬಿ. ಪಾಟೀಲರೂ ಪ್ರಾಮಾಣಿಕ ಪ್ರಯತ್ನ ನಡೆಸಿದ್ದರು. ಆದರೆ ಅದು ಸಾಧ್ಯವಾಗಲಿಲ್ಲ. ಮುಂದಿನ…

Read More

ಸಚಿವ ಸ್ಥಾನ ಅತೃಪ್ತಿ: ರಾಜೀನಾಮೆ ಕೊಟ್ಟರೆ ಕ್ಷಣದಲ್ಲೇ ಅಂಗೀಕಾರ – ಸಿಎಂ ಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ,ಬೆಂಗಳೂರು, ಆ. 4: ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡು ರಾಜೀನಾಮೆ ನೀಡಲು ಮುಂದಾಗಿರುವ ಶಾಸಕರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಸಂದೇಶ ನೀಡಿದ್ದಾರೆ. “ರಾಜೀನಾಮೆ ಕೊಡುವವರನ್ನು ಯಾರೂ ತಡೆಯಲು ಸಾಧ್ಯವಿಲ್ಲ. ಯಾರಾದರೂ ರಾಜೀನಾಮೆ ನೀಡಿದರೆ ಕ್ಷಣದಲ್ಲೇ ಅಂಗೀಕರಿಸುತ್ತೇನೆ. ರಾಜಕೀಯದಲ್ಲಿ ತಾಳ್ಮೆ ಅತ್ಯಂತ ಮುಖ್ಯ, ಪಕ್ಷವೇ ಮೊದಲ ಆದ್ಯತೆ” ಎಂದು ಹೇಳಿದರು.ಸದಾಶಿವನಗರ ನಿವಾಸದ ಬಳಿ ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಈ ಹಿಂದೆ ನನಗೂ, ಪರಮೇಶ್ವರ್ ಅವರಿಗೂ ಧರಂಸಿಂಗ್ ಹಾಗೂ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಸಚಿವ…

Read More

ಬಸವ ಜನ್ಮಸ್ಥಳ ಇಂಗಳೇಶ್ವರದಿಂದ ಕೂಡಲ ಸಂಗಮದವರೆಗೆ ಹೊಸ ರೈಲು ಮಾರ್ಗಕ್ಕೆ ಆಗ್ರಹ

ಸಪ್ತಸಾಗರ ವಾರ್ತೆ,ವಿಜಯಪುರ, ಆ.2: ವಿಶ್ವಗುರು ಬಸವಣ್ಣ ಅವರ ಜನ್ಮಸ್ಥಳ ಇಂಗಳೇಶ್ವರದಿಂದ ಬಸವಕಲ್ಯಾಣ ಮಾರ್ಗವಾಗಿ ಐಕ್ಯಸ್ಥಳ ಕೂಡಲ ಸಂಗಮದವರೆಗೆ ಹೊಸ ರೈಲು ಮಾರ್ಗ ನಿರ್ಮಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಲಾಗಿದೆ.ಇಂಗಳೇಶ್ವರ ಗ್ರಾಮದ ಅಗ್ಗಳ ಕವಿ ಪ್ರತಿಷ್ಠಾನ ಹಾಗೂ ಗ್ರಾಮಸ್ಥರ ಪರವಾಗಿ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಅಪರ ಜಿಲ್ಲಾಧಿಕಾರಿ ಈದ್ರಾಮ್ ಅವರ ಮೂಲಕ ಶನಿವಾರ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಅಗ್ಗಳ ಕವಿ ಪ್ರತಿಷ್ಠಾನದ ಸಂಸ್ಥಾಪಕ ಅಧ್ಯಕ್ಷ ನಾಗಪ್ಪ ಚಿಗರಿ ಮಾತನಾಡಿ, ಇಂಗಳೇಶ್ವರದಿಂದ ಆರಂಭವಾಗುವ ರೈಲು…

Read More

ಓಎಂಆರ್ ಶೀಟ್–ಪ್ರಶ್ನೆ ಪತ್ರಿಕೆ ವ್ಯತ್ಯಾಸ, ಪರೀಕ್ಷೆ ವಿಳಂಬದಿಂದ ಅಭ್ಯರ್ಥಿಗಳ ಭವಿಷ್ಯಕ್ಕೆ ಧಕ್ಕೆ; ಕೇಶವ್ ಪ್ರಸಾದ

ಸಪ್ತಸಾಗರ ವಾರ್ತೆ,ವಿಜಯಪುರ, ಆ.2: ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಯಲ್ಲಿ ಓಎಂಆರ್ ಶೀಟ್ ಮತ್ತು ಪ್ರಶ್ನೆ ಪತ್ರಿಕೆಯಲ್ಲಿನ ವ್ಯತ್ಯಾಸ, ಓಎಂಆರ್ ಶೀಟ್ ವಿತರಣೆಯಲ್ಲಿನ ಅವ್ಯವಸ್ಥೆ ಹಾಗೂ ಪರೀಕ್ಷೆ ವಿಳಂಬವಾಗಿ ಆರಂಭವಾದ ಘಟನೆಗಳು ಅಭ್ಯರ್ಥಿಗಳಲ್ಲಿ ತೀವ್ರ ಆತಂಕ ಮತ್ತು ಅನುಮಾನಕ್ಕೆ ಕಾರಣವಾಗಿವೆ ಎಂದು ವಿಧಾನ ಪರಿಷತ್ ಸದಸ್ಯ ಕೇಶವ ಪ್ರಸಾದ್ ಆರೋಪಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಪ್ರತಿನಿಧಿಸುವ ಕ್ಷೇತ್ರದಲ್ಲಿಯೇ ಇಂತಹ ಗಂಭೀರ ಗೊಂದಲ ಉಂಟಾಗಿರುವುದರಿಂದ ಅವರು ನೈತಿಕ…

Read More

ಪೊಲೀಸ್ ನೇಮಕಾತಿ ಪರೀಕ್ಷೆ ಗೊಂದಲಕ್ಕೆ ಸರ್ಕಾರವೇ ಹೊಣೆ: ಉಸ್ತುವಾರಿ ಸಚಿವರ ರಾಜೀನಾಮೆಗೆ ಬಿಜೆಪಿ ಆಗ್ರಹ

ಸಪ್ತಸಾಗರ ವಾರ್ತೆ,ವಿಜಯಪುರ, ಆ.2: ತಿಕೋಟಾದಲ್ಲಿ ನಡೆದ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಪರೀಕ್ಷೆಯ ಅವ್ಯವಸ್ಥೆ ಹಾಗೂ ಪ್ರತಿಭಟನಾ ನಿರತ ಅಭ್ಯರ್ಥಿಗಳ ಮೇಲೆ ನಡೆದಿರುವುದಾಗಿ ಆರೋಪಿಸಲಾದ ಲಾಠಿ ಪ್ರಹಾರ ಪ್ರಕರಣ ರಾಜ್ಯ ಸರ್ಕಾರದ ಆಡಳಿತ ವೈಫಲ್ಯದ ಪ್ರತೀಕವಾಗಿದೆ ಎಂದು ಬಿಜೆಪಿ ಮುಖಂಡರು ಆರೋಪಿಸಿದರು. ಈ ಘಟನೆಗೆ ನೈತಿಕ ಹೊಣೆ ಹೊತ್ತು ಜಿಲ್ಲಾ ಉಸ್ತುವಾರಿ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಾವಯವ ಬೀಜ ಪ್ರಮಾಣನ ಸಂಸ್ಥೆಯ ಮಾಜಿ ಅಧ್ಯಕ್ಷ ವಿಜುಗೌಡ ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವರು…

Read More

ತಿಕೋಟ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆ ಗೊಂದಲ:ಪರೀಕ್ಷಾ ಮಂಡಳಿಗೆ ವರದಿ ಸಲ್ಲಿಕೆ-ಡಿಸಿ ಆನಂದ ಕೆ.

ಸಪ್ತಸಾಗರ ವಾರ್ತೆ,ವಿಜಯಪುರ, ಆ.2:ವಿಜಯಪುರ ಜಿಲ್ಲೆಯ ತಿಕೋಟ ಪಟ್ಟಣದ ಶಾರದಾಂಬಾ ಶಿಕ್ಷಣ ಸಂಸ್ಥೆಯಲ್ಲಿದ್ದ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಲಿಖಿತ ಪರೀಕ್ಷಾ ಕೇಂದ್ರದಲ್ಲಿ ಭಾನುವಾರ ಕೆಲಕಾಲ ಗೊಂದಲ ಉಂಟಾಯಿತು. ಪ್ರಶ್ನೆ ಪತ್ರಿಕೆ ಹಾಗೂ ಒಎಂಆರ್ ಶೀಟ್‌ನ ಕ್ರಮಸಂಖ್ಯೆ ಹೊಂದಿಕೆಯಾಗಿಲ್ಲ ಎಂದು ಆರೋಪಿಸಿ ಕೆಲ ಪರೀಕ್ಷಾರ್ಥಿಗಳು ಪರೀಕ್ಷೆಯನ್ನು ಬಹಿಷ್ಕರಿಸಿ ಒಎಂಆರ್ ಶೀಟ್ ಮತ್ತು ಪ್ರಶ್ನೆ ಪತ್ರಿಕೆಗಳೊಂದಿಗೆ ಕೇಂದ್ರದ ಹೊರಗೆ ಬಂದು ಪ್ರತಿಭಟನೆ ನಡೆಸಿದರು.ಘಟನೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಸ್ಪಷ್ಟನೆ ನೀಡಿ, ಪ್ರಶ್ನೆ ಪತ್ರಿಕೆ ಹಾಗೂ ಒಎಂಆರ್ ಶೀಟ್‌ಗಳನ್ನು ನಿಗದಿತ…

Read More

ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿ ಅವ್ಯವಸ್ಥೆ: ತಿಕೋಟದಲ್ಲಿ ಪರೀಕ್ಷಾರ್ಥಿಗಳ ಆಕ್ರೋಶ, ಮರು ಪರೀಕ್ಷೆಗೆ ಒತ್ತಾಯ

ಸಪ್ತಸಾಗರ ವಾರ್ತೆ,ವಿಜಯಪುರ, ಆ.2: ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪ್ರವೇಶ ಪರೀಕ್ಷೆ ವೇಳೆ ವಿಜಯಪುರ ಜಿಲ್ಲೆಯ ತಿಕೋಟ ಪಟ್ಟಣದ ಪರೀಕ್ಷಾ ಕೇಂದ್ರದಲ್ಲಿ ಭಾರೀ ಗೊಂದಲ ಉಂಟಾಗಿ, ನೂರಾರು ಪರೀಕ್ಷಾರ್ಥಿಗಳು ಪರೀಕ್ಷೆಗೆ ಬಹಿಷ್ಕಾರ ಹಾಕಿ ಪ್ರತಿಭಟನೆ ನಡೆಸಿದ ಘಟನೆ ಭಾನುವಾರ ನಡೆದಿದೆ.ತಿಕೋಟದ ಕೋಟ್ಯಾಳ ರಸ್ತೆಯಲ್ಲಿರುವ ಶಾರದಾಂಬಾ ಶಿಕ್ಷಣ ಸಂಸ್ಥೆಯ ಪರೀಕ್ಷಾ ಕೇಂದ್ರದಲ್ಲಿ ಬೆಳಿಗ್ಗೆ 10.30ಕ್ಕೆ ಆರಂಭವಾಗಬೇಕಿದ್ದ ಪರೀಕ್ಷೆಗೆ ಪ್ರಶ್ನೆಪತ್ರಿಕೆ ಅರ್ಧ ಗಂಟೆ ತಡವಾಗಿ, ಸುಮಾರು 11 ಗಂಟೆಗೆ ವಿತರಿಸಲಾಗಿದೆ ಎಂದು ಪರೀಕ್ಷಾರ್ಥಿಗಳು ಆರೋಪಿಸಿದರು.ಇದರ ಜೊತೆಗೆ ಪ್ರಶ್ನೆಪತ್ರಿಕೆ ಮತ್ತು ಓಎಂಆರ್ ಶೀಟ್‌ಗಳ…

Read More

ವಿಮಾನ ನಿಲ್ದಾಣದ ಶ್ರೇಯಸ್ಸು ಬಿಎಸ್‌ವೈಗೆ ಸಲ್ಲಬೇಕು: ಗುರುಲಿಂಗಪ್ಪ ಅಂಗಡಿ

ಎಂ.ಬಿ. ಪಾಟೀಲರು ಶ್ರೇಯಸ್ಸು ಪಡೆದುಕೊಳ್ಳುವುದು ಸರಿಯಲ್ಲ ಸಪ್ತಸಾಗರ ವಾರ್ತೆ,ವಿಜಯಪುರ, ಆ.2: ವಿಜಯಪುರ ವಿಮಾನ ನಿಲ್ದಾಣ ನಿರ್ಮಾಣದ ಹಿಂದೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಭಗೀರಥ ಪ್ರಯತ್ನವಿದ್ದು, ಸಚಿವ ಡಾ. ಎಂ.ಬಿ. ಪಾಟೀಲರ ಪಾತ್ರ ಅಷ್ಟಾಗಿ ಇಲ್ಲ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಗುರುಲಿಂಗಪ್ಪ ಅಂಗಡಿ ಆರೋಪಿಸಿದರು.ನಗರದಲ್ಲಿ ಭಾನುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2009ರಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲೇ ವಿಮಾನ ನಿಲ್ದಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಗಿದ್ದು, 723 ಎಕರೆ ಭೂಸ್ವಾಧೀನ ಸೇರಿದಂತೆ ಯೋಜನೆಗೆ ಅಗತ್ಯವಾದ…

Read More