ಕ್ರೀಡೆಯಲ್ಲಿ ಗೆಲುವಿಗಿಂತ ಭಾಗವಹಿಸುವ ಮನೋಭಾವವೇ ಮುಖ್ಯ:ಶೇಖರಗೌಡ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 28: ಕ್ರೀಡೆಯಲ್ಲಿ ಗೆಲುವಿಗಿಂತ ಭಾಗವಹಿಸುವ ಮನೋಭಾವವೇ ಮುಖ್ಯ. ನಿರಂತರ ಪ್ರಯತ್ನಗಳ ನಡುವೆ ಎದುರಾಗುವ ವಿಫಲತೆಗಳೇ ಕೊನೆಗೆ ಯಶಸ್ಸಿನ ಮೆಟ್ಟಿಲಾಗುತ್ತವೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ರಮತ್ನಾಳ್ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಹಾಗೂ ಚಿಲ್ಡ್ರನ್ ಆಫ್ ಇಂಡಿಯಾ ಫೌಂಡೇಶನ್ ಇವರ ಸಹಯೋಗದಲ್ಲಿ ರವಿವಾರ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಕಿಶೋರಿ ಮತ್ತು ಕಿಶೋರ ನಾಯಕರ ಕ್ರೀಡಾ ಕೂಟ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಸರ್ಕಾರ…

Read More

ಬಬಲೇಶ್ವರದಲ್ಲಿ ನಡೆಯಲಿರುವ ಬಸವಾದಿ ಶರಣರ ಹಿಂದೂ ಸಮಾವೇಶ ಕೈಬಿಡಿ: ಶ್ರೀಗಳ ಮನವಿ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 28:ಬಸವ ಸಂಸ್ಕೃತಿ ಅಭಿಯಾನದ ವಿರುದ್ಧ, ಸ್ವಾಮೀಜಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂಧಿಸಿದ್ದ ಕನ್ಹೇರಿ ಶ್ರೀಗಳ ಬೆಂಬಲವಾಗಿ ನಿಂತು ಯಾವ ಸ್ವಾಮೀಜಿಯವರ ಬೆಂಬಲವಿಲ್ಲದೇ ಬಬಲೇಶ್ವರದಲ್ಲಿ ಸಮಾವೇಶ ಮಾಡಲು ಹೊರಟವರಿಗೆ ಏನೆಂದು ಕರೆಯಬೇಕು? ಎಂದು ಸಮಾವೇಶ ಆಯೋಜಿಸಿದರನ್ನು ಮಮದಾಪುರ ವಿರಕ್ತಮಠದ ಅಭಿನವ ಮುರುಘೇಂದ್ರ ಸ್ವಾಮೀಜಿಗಳು ಪ್ರಶ್ನಿಸಿದ್ದಾರೆ.ವಿಜಯಪುರದಲ್ಲಿ ಭಾನುವಾರ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಸ್ವಾಮೀಜಿ ಅವರು, ಯಾವ ಧರ್ಮದಲ್ಲೂ ದ್ವೇಷ ಮಾಡುವಂತದನ್ನು ಹೇಳಿಲ್ಲ. ಪ್ರೀತಿ, ವಾತ್ಸಲ್ಯ, ಸಹಬಾಳ್ವೆ ಕುರಿತು ಎಲ್ಲ ಪರಂಪರೆಗಳು ತಿಳಿಸುತ್ತವೆ. ಆದರೆ, ಸನ್ಮಾರ್ಗ ತೋರುವ…

Read More

ಇತಿಹಾಸದಿಂದ ಗಾಂಧೀಜಿ ಹೆಸರು ಅಳಿಸಲು ಯಾರಿಗೂ ಸಾಧ್ಯವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ ಬೆಂಗಳೂರು, ಡಿ.28:“ಮಹಾತ್ಮ ಗಾಂಧೀಜಿ ಅವರ ಹೆಸರನ್ನು ಈ ದೇಶದ ಇತಿಹಾಸದಿಂದ ಅಳಿಸಿಹಾಕಲು ಯಾರಿಗೂ ಸಾಧ್ಯವಿಲ್ಲ. ಬಿಜೆಪಿ ಹಾಗೂ ಅವರ ಅಧಿಕಾರ ಯಾವುದೂ ಶಾಶ್ವತವಲ್ಲ. ಆ ಪಕ್ಷ ಇನ್ನೆಷ್ಟು ದಿನ ಇರುತ್ತದೆ? ಎಲ್ಲದಕ್ಕೂ ಕೊನೇ ಎಂಬುದು ಇರಲೇ ಬೇಕಲ್ಲವೇ?” ಎಂದು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.ಕೆಪಿಸಿಸಿ ಕಚೇರಿಯ ಭಾರತ ಜೋಡೋ ಭವನದಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು.“ಎಂತೆಂಥಹ ಚಕ್ರವರ್ತಿಗಳೇ ಮೂಲೆಗುಂಪಾಗಿ ಹೋಗಿದ್ದಾರೆ. ಅಲೆಗ್ಸಾಂಡರ್ ದಿ…

Read More

ಹಿಟ್ನಳ್ಳಿ ಫಾರ್ಮ್ ದಲ್ಲಿ ಜ. 4 ರಿಂದ 6ರವರೆಗೆ ಕೃಷಿ ಮೇಳ ಹಾಗೂ ವಸ್ತು ಪ್ರದರ್ಶನ

ಸಪ್ತಸಾಗರ ವಾರ್ತೆ ವಿಜಯಪುರ, ಡಿ.28:ನಗರ ಹೊರ ವಲಯದ ಹಿಟ್ನಳ್ಳಿ ಫಾರ್ಮ್ ನಲ್ಲಿ ಜನೆವರಿ ನಾಲ್ಕರಿಂದ ಆರರವರೆಗೆ ಕೃಷಿ ಮೇಳ ಹಾಗೂ ವಸ್ತು ಪ್ರದರ್ಶನ ಆಯೋಜಿಸಲಾಗಿದೆ.ಧಾರವಾಡ ಕೃಷಿ ವಿಶ್ವವಿದ್ಯಾಲಯ, ಹಿಟ್ನಳ್ಳಿ ಫಾರ್ಮ್ ಆವರಣಲ್ಲಿ ಕೃಷಿ ಇಲಾಖೆ, ಜಿಲ್ಲಾ ಪಂಚಾಯತ್, ಆತ್ಮಾ ಯೋಜನೆ ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆಯುವ ಕೃಷಿ ಮೇಳದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸುವ ರೈತರು ವಿವಿಧ ಬೆಳೆಗಳು ಮತ್ತು ಅಭಿವೃದ್ಧಿಪಡಿಸಿದ ತಂತ್ರಜ್ಞಾನಗಳುಳ್ಳ ಪ್ರಾಯೋಗಿಕ ತಾಕುಗಳನ್ನು ಪ್ರದರ್ಶನಕ್ಕೆ ಇಡಲಿದ್ದಾರೆ.ಈ ಸಂದರ್ಭದಲ್ಲಿ ರೈತರಿಗೆ ವಿವಿಧ ವಿಷಯಗಳಾದ ಒಣ ಬೇಸಾಯ…

Read More

ಕಾಂಗ್ರೆಸ್ ಕೊಡುಗೆ ಜನಸಾಮಾನ್ಯರಿಗೆ ತಿಳಿಸಿ: ಲೋಣಿ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 28:ಸಂವಿಧಾನದ ಆಶಯಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ಕಾಂಗ್ರೆಸ್ ಪಕ್ಷ ಯಶಸ್ವಿಯಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಹೇಳಿದ್ದಾರೆ.ಭಾನುವಾರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಅವರು ಮಾತನಾಡಿ, ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಸಾಮಾಜಿಕ ನ್ಯಾಯವನ್ನು ನೀಡಿದ್ದಾರೆ. ಅದನ್ನು ಯಥವತ್ತಾಗಿ ಕಾರ್ಯರೂಪಕ್ಕೆ ತರುವಲ್ಲಿ ಕಾಂಗ್ರೆಸ್ ಪಕ್ಷ ಯಶಸ್ವಿಯಾಗಿದೆ. ಕಾಂಗ್ರೆಸ್ ಪಕ್ಷವು ಸುಮಾರು ೧೪೦ ವರ್ಷಗಳ ಇತಿಹಾಸವಿದ್ದು ಈ ದೇಶಕ್ಕಾಗಿ ಕಾಂಗ್ರೆಸ್ ಪಕ್ಷದ ನಾಯಕರು ಜೀವ ಬಲಿದಾನವನ್ನು ಮಾಡಿ ದೇಶವನ್ನು…

Read More

ಕಾಖಂಡಕಿ ಶ್ರೀ ಗುರುದೇವಾಶ್ರಮದಲ್ಲಿ ಮೂರು ದಿನಗಳ ಆಧ್ಯಾತ್ಮಿಕ ಶಿಬಿರ ಯಶಸ್ವಿ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 28:ಕಾಖಂಡಕಿ ಗ್ರಾಮದ ಶ್ರೀ ಗುರುದೇವಾಶ್ರಮದಲ್ಲಿ ಪೂಜ್ಯ ಶ್ರೀ ಶಿವಯೋಗೀಶ್ವರ ಸ್ವಾಮೀಜಿಗಳ ದಿವ್ಯ ಮಾರ್ಗದರ್ಶನದಲ್ಲಿ ವಿವಿಧ ಕ್ಷೇತ್ರಗಳಿಂದ ಆಗಮಿಸಿದ ೨೦ ಶಿಬಿರಾರ್ಥಿಗಳಿಗೆ ಮೂರು ದಿನಗಳ ಆಧ್ಯಾತ್ಮಿಕ ಶಿಬಿರ ಯಶಸ್ವಿಯಾಗಿ ನೆರವೇರಿತು.ಈ ಶಿಬಿರವು ಆಧ್ಯಾತ್ಮಿಕ ಜ್ಞಾನ ಮತ್ತು ಸಾಮಾಜಿಕ-ಪರಿಸರ ಜಾಗೃತಿಯನ್ನು ಒಟ್ಟುಗೂಡಿಸುವ ಉದ್ದೇಶದಿಂದ ನಡೆಯಿತು.ಶಿಬಿರದ ಅವಧಿಯಲ್ಲಿ ಪೂಜ್ಯ ಶ್ರೀ ಶಿವಯೋಗೀಶ್ವರ ಸ್ವಾಮೀಜಿಗಳು ಪತಂಜಲಿ ಯೋಗ ಸೂತ್ರಗಳು ಕುರಿತು ಆಳವಾದ ಮಾರ್ಗದರ್ಶನ ನೀಡಿದರು. ಮನಸ್ಸಿನ ಶಿಸ್ತು, ಆತ್ಮಜ್ಞಾನ ಮತ್ತು ಆಂತರಿಕ ಶಾಂತಿಗೆ ದಾರಿ ಎಂಬ ವಿಷಯಗಳನ್ನು…

Read More

ಸುಪ್ರಿಯಾಗೆ ಪಿಎಚ್ ಡಿ ಪ್ರದಾನ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 28:ಸುಪ್ರಿಯಾ ಭೋಸಲೆ ಅವರಿಗೆ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಿಂದ ಪಿ.ಎಚ್.ಡಿ(ಡಾಕ್ಟರೇಟ್) ಲಭಿಸಿದೆ.ಡೀಮ್ಡ್ ವಿವಿಯ ಶ್ರೀ ಬಿ. ಎಂ. ಪಾಟೀಲ ಮೆಡಿಕಲ್ ಕಾಲೇಜಿನ ಬಯೊಟೆಕ್ನಾಲಜಿ ವಿಭಾಗದಲ್ಲಿ ಅಸಿಸ್ಟಂಟ್ ಪ್ರೊಫೆಸರ್ ಆಗಿರುವ ಸುಪ್ರಿಯಾ ಭೋಸಲೆ ಅವರು ಅಲೈಡ್ ಹೆಲ್ತ್ ಸಾಯಿನ್ಸ್ ನ ಬಯೊಟೆಕ್ನಾಲಜಿ ವಿಭಾಗದಲ್ಲಿ ಡಬ್ಲ್ಯೂಎನಟಿ‌ ಬಿ- ಕೆಟೆನಿನ್ ಸಿಗ್ನಲಿಂಗ್ ಇನಗ ಹಿಪೊಕ್ಸಿಯಾ- ಇಂಡ್ಯೂಸ್ಡ್ ಪಲ್ಮನರಿ ಆರ್ಟಿಲರಿ ಸ್ಮೂಥ್ ಮಸಲ್ ಸೆಲ್ ಪ್ರಾಲಿಫಿರೇಶನ್- ರೋಲ್ ಆಫ್ ಎ ಬಯೊಆ್ಯಕ್ಟಿವ್ ಮಾಲಿಕ್ಯೂಲ್ ಆಫ್ ಮ್ಯುಕ್ಯೂನಾ ಪ್ರೂರಿಯನ್ಸ್ ವಿಷಯದಲ್ಲಿ‌…

Read More

ನಾನು ಶಾಸಕನಾದ ಬಳಿಕ ಮುಳವಾಡ ಏತ ನೀರಾವರಿ ಯೋಜನೆಗೆ ಚಾಲನೆ-ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ, ನಿಡಗುಂದಿ/ಆಲಮಟ್ಟಿ :ಅಖಂಡ ವಿಜಯಪುರ ಜಿಲ್ಲೆಯ ಜನರು ಭೂಮಿ, ಮನೆ, ಬದುಕು ಕಳೆಕೊಂಡರೂ ಕುಡಿಯಲು ನೀರಿಗೂ ಪರದಾಟ ನಡೆಸಿದ್ದೆವು. ಆದರೆ 2004 ರಲ್ಲಿ ನಾನು ಬಸವನಬಾಗೇವಾಡಿ ಕ್ಷೇತ್ರದಿಂದ ಶಾಸಕನಾದ ಬಳಿಕವೇ ಮುಳವಾಡ ಏತ ನೀರಾವರಿ ಯೋಜನೆಗೆ ಚಾಲನೆ ದೊರಕಿದ್ದು ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಹೇಳಿದರು.ಶನಿವಾರ ನಿಡಗುಂದಿ ತಾಲೂಕಿನ ವಂದಾಲ ಗ್ರಾಮದಲ್ಲಿ ರೈಲ್ವೇ ಸ್ಟೇಷನ್ ವರೆಗಿನ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು,…

Read More

101 ನೇ ದಿನಕ್ಕೆ ಕಾಲಿಟ್ಟ ಅನಿರ್ದಿಷ್ಟ ಧರಣಿ

ಸಪ್ತಸಾಗರ ವಾರ್ತೆ ವಿಜಯಪುರ,ಡಿ. 27:ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಹೋರಾಟ ಸಮಿತಿ ಕೈಗೊಂಡ ಅನಿರ್ದಿಷ್ಟ ಧರಣಿ ಸತ್ಯಾಗ್ರಹ 101ನೇ ದಿನಕ್ಕೆ ಕಾಲಿಟ್ಟಿದೆ.ವಿಜಯಪುರದ ಮೂಲ ನಿವಾಸಿ ಅಶೋಕ ಲೋಣಿ (ಕನ್ನಡಪರ ಹೋರಾಟಗಾರರು) ಕೆಜಿಎಫ್ ದಿಂದ ಆಗಮಿಸಿ, ಇಂದು ಇಡೀ ದಿನ ಧರಣಿಯಲ್ಲಿ ಭಾಗವಹಿಸಿ ಬೆಂಬಲ ವ್ಯಕ್ತ ಪಡಿಸಿ ಮಾತನಾಡಿ,ಸರ್ಕಾರ ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಮಾತ್ರ ಸ್ಥಾಪಿಸಬೇಕು. ಯಾರ ಹಿತಕ್ಕಾಗಿ ಈ ಪಿಪಿಪಿ ಅನ್ನುವ ಮಾದರಿ ವಿಜಯಪುರ ಜಿಲ್ಲೆಯ ಜನರ ಮೇಲೆ ಹೇರುತ್ತಿದ್ದಾರೆ.ವಿಜಯಪುರ…

Read More

ಜಿಲ್ಲೆಯ ವಿವಿಧ ಅಭಿವೃದ್ದಿ ಕಾರ್ಯಗಳಿಗೆ ಜ.9ರಂದು ಮುಖ್ಯಮಂತ್ರಿಗಳಿಂದ ಉದ್ಘಾಟನೆ:ಡಿಸಿ ಡಾ. ಆನಂದ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ.27: ಜನವರಿ 9ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜಿಲ್ಲೆಗೆ ಆಗಮಿಸುತ್ತಿದ್ದು, ವೀರರಾಣಿ ಕಿತ್ತೂರ ರಾಣಿ ಚೆನ್ನಮ್ಮ ಪ್ರತಿಮೆ ಅನಾವರಣ, ಬಸ್ ನಿಲ್ದಾಣಕ್ಕೆ ಕಿತ್ತೂರ ರಾಣಿ ಚೆನ್ನಮ್ಮ ನಾಮಕರಣ,ನಗರದಲ್ಲಿ ವೆಲೋಡ್ರೊಮ ಉದ್ಘಾಟನಾ ವಿವಿಧ ಅಭಿವೃದ್ಧಿ ಶಿಲನ್ಯಾಸ ಕಾಮಗಾರಿಯ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆನಂದ ಕೆ ಅವರು ಸೂಚಿಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಜಿಲ್ಲೆಗೆ ಆಗಮನದ ಹಿನ್ನೆಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮದ…

Read More