ರೈಲುಪ್ರಯಾಣದರಹೆಚ್ಚಳ : ಬಿಜೆಪಿನಾಯಕರುಮೌನ-ಸಿಎಂಸಿದ್ದರಾಮಯ್ಯ

ಸಪ್ತಸಾಗರ ವಾರ್ತೆ, ದಾವಣಗೆರೆ, ಡಿ. 26: ಕೇಂದ್ರ ಸರ್ಕಾರ ರೈಲ್ವೆ ಪ್ರಯಾಣ ದರ ಏರಿಕೆ ಮಾಡಿದೆ. ಜನಸಾಮಾನ್ಯರ ಮೇಲೆ ದರ ಏರಿಕೆ ಹೊರೆಯಾಗುತ್ತಿರುವ ಬಗ್ಗೆ ರಾಜ್ಯದ ಬಿಜೆಪಿ ನಾಯಕರು ಪ್ರಶ್ನಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಕೇಂದ್ರ ಸರ್ಕಾರ ರೈಲು ಪ್ರಯಾಣ ದರ ಏರಿಕೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದರು. ಹಿರಿಯೂರು ಬಸ್ ಅಪಘಾತ: ತನಿಖೆ ನಡೆಸಲಾಗುವುದು ಚಿತ್ರದುರ್ಗದ ಹಿರಿಯೂರು ಬಳಿ ನಡೆದ ಬಸ್ ಮತ್ತು ಟ್ರಕ್ ಅಪಘಾತದ ಬಗ್ಗೆ ಪತ್ರಕರ್ತರ…

Read More

ಶಾಮನೂರ ನುಡಿನಮನ ಕಾರ್ಯಕ್ರಮದಲ್ಲಿ ಸಿಎಂ ಭಾಗಿ

ಸಪ್ತಸಾಗರ ವಾರ್ತೆ, ದಾವಣಗೆರೆ, ಡಿ. 26: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಸಚಿವ ದಿ. ಶಾಮನೂರು ಶಿವಶಂಕರಪ್ಪ ಅವರ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಲು ದಾವಣಗೆರೆಗೆ ಆಗಮಿಸಿ ಜಿಲ್ಲಾಡಳಿತದಿಂದ ಗೌರವ ವಂದನೆ ಸ್ವೀಕರಿಸಿ, ಸಾರ್ವಜನಿಕರ ಅಹವಾಲು ಪಡೆದರು.ಬಳಿಕ ಶಾಮನೂರು ಶಿವಶಂಕರಪ್ಪ ಅವರ ಸಮಾದಿಗೆ ಪುಷ್ಪನಮನ ಸಲ್ಲಿಸಿ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್, ಈಶ್ವರ್ ಖಂಡ್ರೆ ಸೇರಿ ಹಲವು ಮಂದಿ ಸಚಿವರು, ಶಾಸಕರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Read More

ಸಂಗಮನಾಥ ಸಕ್ಕರೆ ಕಾರ್ಖಾನೆ:ತೂಕದಲ್ಲಿ 560 ಕೆ.ಜಿ ಮೋಸ ಬಯಲು

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 26:ಸಿಂದಗಿ ತಾಲೂಕಿನ ಮನ್ನಾಪುರದ ಸಂಗಮನಾಥ ಸಕ್ಕರೆ ಕಾರ್ಖಾನೆಯಲ್ಲಿ ಅಧಿಕಾರಿಗಳ ತಪಾಸಣೆ ವೇಳೆಯಲ್ಲಿ ತೂಕದಲ್ಲಿ ಮೋಸ ನಡೆದಿರುವುದು ಪತ್ತೆಯಾಗಿದೆ.ಬುಧವಾರ ಒಬ್ಬ ರೈತ ಸಂಶಯದಿಂದ ಹೊರಗಡೆ ತೂಕ ಮಾಡಿಕೊಂಡು ಬಂದಾಗ ಕಬ್ಬಿನ ತೂಕದಲ್ಲಿ 1000 ಕೆ,ಜಿ ತೂಕದಲ್ಲಿ ಮೋಸ ಆಗಿರುವುದು ಕಂಡು ಬಂದಿರುವ ಹಿನ್ನಲೆಯಲ್ಲಿ ಕಾರ್ಖಾನೆ ಸಿಬ್ಬಂದಿಯವರಿಗೂ ಹಾಗೂ ರೈತರ ನಡುವೆ ವಾಗ್ವಾದ ಉಂಟಾಯಿತು. ಈ ವೇಳೆ ಸ್ಥಳಕ್ಕೆ ಸಿಂದಗಿ ತಹಶಿಲ್ದಾರರು ಹಾಗೂ ಅಳತೆ ಮತ್ತು ತೂಕದ ಅಧಿಕಾರಿಗಳು ಬಂದಾಗ ಸರಿಯಾದ ತೂಕ ತೋರಿಸಿ…

Read More

ದೇಶದಲ್ಲಿನ ಬಾಂಗ್ಲಾ ವಲಸಿಗರನ್ನು ಹೊರ ಹಾಕಬೇಕು-ಶಾಸಕ ಯತ್ನಾಳ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 25:ಬಾಂಗ್ಲಾ ವಲಸಿಗರಿಂದ ದೇಶಕ್ಕೆ ಅಪಾಯ. ಹೀಗಾಗಿ ಬಾಂಗ್ಲಾ ಒಲಸಿಗರು ಹಾಗೂ ಅವರಿಗೆ ಸಾಥ್ ನೀಡುವವರನ್ನು ದೇಶದಿಂದ ಹೊರ ಹಾಕಬೇಕು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒತ್ತಾಯಿಸಿದ್ದಾರೆ.ಗುರುವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಬಾಂಗ್ಲಾ ದೇಶದಲ್ಲಿ ಮುಗ್ಧ ಹಿಂದೂ ಯುವಕನ ಸಜೀವ ದಹನ ಅತ್ಯಂತ ನೋವಿನ ಸಂಗತಿ ಎಂದರು.ಕಾಂಗ್ರೆಸ್ ಹಾಗೂ ಅಲ್ಪಸಂಖ್ಯಾತರ ಪಕ್ಷಗಳು ಬಾಂಗ್ಲಾ ವಲಸಿಗರನ್ನು ಓಟ ಬ್ಯಾಂಕ್ ಮಾಡಿಕೊಂಡಿದ್ದಾರೆ. ಅದಕ್ಕಾಗಿ ಅಕ್ರಮ ಬಾಂಗ್ಲಾ ವಲಸಿಗರಿಗೆ ಅಂತಿಮ ಗಡುವು ನೀಡಬೇಕು…

Read More

ಬಸ್- ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿ: ಇಬ್ಬರು ಬೈಕ್ ಸವಾರರ ಸಾವು

ಸಪ್ತಸಾಗರ ವಾರ್ತೆ,ವಿಜಯಪುರ, ಡಿ. 25:ಸಾರಿಗೆ ಬಸ್ ಹಾಗೂ ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟ ದಾರುಣ ಘಟನೆಜಿಲ್ಲೆಯ ನಿಡಗುಂದಿ ತಾಲೂಕಿನ ಮುದ್ದಾಪುರ ಕ್ರಾಸ್ ಬಳಿ ಗುರುವಾರ ಸಂಭವಿಸಿದೆ.ಮುದ್ದೇಬಿಹಾಳ ತಾಲೂಕಿನ ಕೊಪ್ಪ ತಾಂಡಾದ ಶಿವಪ್ಪ ರಾಮಪ್ಪ ಲಮಾಣಿ (60) ಹಾಗೂ ಬಸರಕೋಡ ಗ್ರಾಮದ ಬಸಪ್ಪ ಸಂಗಪ್ಪ ಸೂಳಿಬಾವಿ (67) ಎಂದು ಮೃತಪಟ್ಟ ದುರ್ದೈವಿಗಳು.ಮುದ್ದೇಬಿಹಾಳದಿಂದ ಬಾಗಲಕೋಟೆ ಕಡೆಗೆ ವೇಗವಾಗಿ ಚಲಿಸುತ್ತಿದ್ದ ಕೆಎಸ್‌ಆರ್ಟಿಸಿ ಬಸ್ ಹಾಗೂ ನಿಡಗುಂದಿಯಿಂದ ಬರುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಬೈಕ್…

Read More

ರಾಜಧಾನಿಯಿಂದ ವಿಜಯಪುರಕ್ಕೆ ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ಪ್ರಪ್ರಥಮ ವಿಶೇಷ ರೈಲು

ಸಪ್ತಸಾಗರ ವಾರ್ತೆ ಬೆಂಗಳೂರು, ಡಿ. 25: ಕ್ರಿಸ್ಮಸ್ ಮತ್ತು ವರ್ಷಾಂತ್ಯದ ರಜೆ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ತಗ್ಗಿಸಲು ನೈರುತ್ಯ ರೈಲ್ವೆಯು ಇದೇ ಮೊದಲ ಬಾರಿಗೆ ಬೆಂಗಳೂರಿನಿಂದ ಹುಬ್ಬಳ್ಳಿ ಮತ್ತು ಗದಗ ಬೈಪಾಸ್ ಮೂಲಕ ವಿಜಯಪುರಕ್ಕೆ ವಿಶೇಷ ರೈಲನ್ನು ಓಡಿಸಿರುವುದು ಸ್ವಾಗತಾರ್ಹವಾಗಿದೆ. ಮುಂದಿನ ದಿನಗಳಲ್ಲಿ ಇದನ್ನು ಖಾಯಂ ರೈಲು ಸೇವೆಯಾಗಿ ಪರಿವರ್ತಿಸಬೇಕು ಎಂದು ಮೂಲಸೌಕರ್ಯ ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಆಗ್ರಹಿಸಿದ್ದಾರೆ.ಈ ಬಗ್ಗೆ ಗುರುವಾರ ಮಾತನಾಡಿರುವ ಅವರು, ಬೆಂಗಳೂರಿನಿಂದ ವಿಜಯಪುರಕ್ಕೆ ಈ ಎರಡೂ…

Read More

ಯಾವುದೇ ವಸ್ತು ಖರೀದಿಸುವಾಗ ಜಾಹೀರಾತುಗಳಿಗೆ ಮರುಳಾಗದೇ ಗುಣಮಟ್ಟ, ಮೌಲ್ಯ ಅರಿತು ಖರೀದಿಸಿ-ನ್ಯಾಯಾಧೀಶ ಅರವಿಂದ ಹಾಗರಗಿ

ಸಪ್ತಸಾಗರ ವಾರ್ತೆ, ವಿಜಯಪುರ,ಡಿ. 25: ಗ್ರಾಹಕರು ಯಾವುದೇ ವಸ್ತುವನ್ನು ಖರೀದಿಸುವಾಗ ಜಾಹೀರಾತುಗಳಿಗೆ ಮರುಳಾಗದೇ ವಸ್ತುವಿನ ಗುಣಮಟ್ಟ ಮೌಲ್ಯವನ್ನು ಅರಿತು ಎಚ್ಚರಿಕೆಯಿಂದ ಖರೀದಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹಿರಿಯ ಸಿವ್ಹಿಲ್ ನ್ಯಾಯಾಧೀಶ ಅರವಿಂದ ಹಾಗರಗಿ ಅವರು ಕಿವಿಮಾತು ಹೇಳಿದರು.ವಿಜಯಪುರದ ಸಿಕ್ಯಾಬ್ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯದಲ್ಲಿ ಬುಧವಾರ ಆಯೋಜಿಸಿದ ರಾಷ್ಟ್ರೀಯ ಗ್ರಾಹಕರ ದಿನಾಚರಣೆ-2025 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ, ಮಾರುಕಟ್ಟೆಯಲ್ಲಿ ಯಾವುದೇ ವಸ್ತು ಖರೀದಿಸುವಾಗ ವಸ್ತುವಿನ ನೈಜತೆ, ಗುಣಮಟ್ಟ ಪರೀಕ್ಷಿಸಿದ ನಂತರವೇ ಖರೀದಿಸಲು…

Read More

ಶುದ್ಧ ಸಚ್ಚಾರಿತ್ರ್ಯದ ರಾಜಕಾರಣಿ ವಾಜಪೇಯಿ: ಯತ್ನಾಳ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 25: ಪರಮಾಣು ಶಕ್ತಿಯಲ್ಲಿ ಭಾರತ ಮತ್ತೊಂದು ಹಂತಕ್ಕೆ ಹೋಗಲು ವಾಜಪೇಯಿ ಅವರ ದೂರದರ್ಶಿತ್ವ ಮತ್ತು ದೇಶಪ್ರೇಮವೇ ಕಾರಣ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಹೇಳಿದರು.ನಗರದ ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ವೃತ್ತದಲ್ಲಿ ಗುರುವಾರ ವಾಜಪೇಯಿ ಅವರ 101ನೇ ಜನ್ಮ ದಿನದ ಅಂಗವಾಗಿ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದ ನಂತರ ಮಾತನಾಡಿದ ಅವರು, ವಾಜಪೇಯಿ ಅವರು ಶುದ್ಧ ಸಚ್ಚಾರಿತ್ರ್ಯದ ರಾಜಕಾರಣಿ, ಅಜಾತಶತ್ರುರಾಗಿದ್ದ ಅವರು ರಾಷ್ಟ್ರ…

Read More

ಇರ್ಫಾನ್ ಬೀಳಗಿ ಅವರಿಗೆ ರಾಷ್ಟ್ರೀಯ ಮಾಧ್ಯಮ ಸೇವಾ ರತ್ನ ಪ್ರಶಸ್ತಿ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 25:ನಗರದ ಇರ್ಫಾನ್ ಬೀಳಗಿ ಅವರಿಗೆ ರಾಷ್ಟ್ರೀಯ ಮಾಧ್ಯಮ ಸೇವಾ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಎಲೆಕ್ಟ್ರಾನಿಕ್ ಮಾಧ್ಯಮ ಹಾಗೂ ಪತ್ರಿಕೆ ಮಾಧ್ಯಮ ಕ್ಷೇತ್ರದಲ್ಲಿ ಗಣನೀಯವಾಗಿ ಸೇವೆ ಸಲ್ಲಿಸುತ್ತಿರುವ ಬೀಳಗಿ ಅವರಿಗೆ ಡಿ. 27 ರಂದು ಬೆಳಗ್ಗೆ 10:30ಕ್ಕೆ ದಾವಣಗೆರೆಯ ವಿದ್ಯಾನಗರ ಬಡಾವಣೆಯಲ್ಲಿ ಇರುವ ಜಿಲ್ಲಾ ಕನ್ನಡ ಪರಿಷತ್ ಕುವೆಂಪು ಕನ್ನಡ ಭವನದಲ್ಲಿ ನಡೆಯುವ ವಿಶ್ವ ದರ್ಶನ ಕನ್ನಡ ದಿನಪತ್ರಿಕೆ ಹಾಗೂ 6ನೇ ರಾಜ್ಯ ಭಾವೈಕ್ಯತೆ ಸಮ್ಮೇಳನದಲ್ಲಿ ಬೀಳಗಿ ಅವರಿಗೆ ರಾಷ್ಟ್ರೀಯ ಮಾಧ್ಯಮ ಸೇವಾ ರತ್ನ…

Read More

ಮಾಜಿ ಪ್ರಧಾನಿ ವಾಜಪೇಯಿ ಜನ್ಮದಿನ ಆಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 25 :ವಿಜಯಪುರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಭಾರತ ರತ್ನ, ಮಾಜಿ ಪ್ರಧಾನಮಂತ್ರಿ, ಮಹಾನ್ ರಾಷ್ಟ್ರನಾಯಕ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನವನ್ನು ಸುಶಾಸನ ದಿನವನ್ನಾಗಿ ಅತ್ಯಂತ ಶ್ರದ್ಧೆ ಹಾಗೂ ಗೌರವದಿಂದ ಆಚರಿಸಲಾಯಿತು.ದಿ.ಅಟಲ್ ಬಿಹಾರಿ ವಾಜಪೇಯಿ ಅವರ ಭಾವಚಿತ್ರಕ್ಕೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಸಲ್ಲಿಸಿದರು.ಸಂಸದ ರಮೇಶ ಜಿಗಜಿಣಗಿ ಮಾತನಾಡಿ, ದಿ.ಅಟಲ್ ಬಿಹಾರಿ ವಾಜಪೇಯಿ ಸಮೃದ್ಧ ಭಾರತ ನಿರ್ಮಾಣದ ದಿವ್ಯ ಕನಸು ಹೊಂದಿದ್ದ ಶ್ರೇಷ್ಠ ನಾಯಕ,…

Read More