ಸಾಹಿತಿ,ಪ್ರೊ ಎ ಎಚ್ ಕೊಳಮಲಿಯವರಿಗೆ ಆದರ್ಶ ಶಿಕ್ಷಕ ಪ್ರಶಸ್ತಿ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 24:ನಗರದ ಚೇತನಾ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ಹಾಗೂ ಚೇತನಾ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ, ಎ.ಎಚ್. ಕೊಳಮಲಿಯವರಿಗೆ ಕರುನಾಡು ಕಲ್ಪವೃಕ್ಷ ಫೌಂಡೇಶನ್ ಚಿತ್ರದುರ್ಗ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಬಾಗಲಕೋಟೆ ಮತ್ತು ಬಾಗಲಕೋಟೆ ಜಿಲ್ಲೆಯ ಚಿಕ್ಕಮಾಗೇರಿ, ಹಿರೇಮ್ಯಾಗೇರಿಯ ತರುಣ ಸಂಘದ ವತಿಯಿಂದ ಕೊಡಮಾಡುವ ‘ಆದರ್ಶ ಶಿಕ್ಷಕ’ ಪ್ರಶಸ್ತಿಯು ಲಭಿಸಿದೆ.ನಾಡಿನ ಉದಯೋನ್ಮುಖ ಸಾಹಿತಿ ಕೊಳಮಲಿಯವರು ಖ್ಯಾತ ವಾಗ್ಮಿಯೂ ಕೂಡಾ ಆಗಿದ್ದಾರೆ. ಜಾನಪದ ವಿದ್ವಾಂಸರಾದ ಇವರ ಬಹುಮುಖ ಪ್ರತಿಭೆಗೆ ಈ ಮುಂಚಿತವಾಗಿ…

Read More

ಪುಸ್ತಕಗಳು ಮಾನವನ ಜ್ಞಾನ, ಸಂಸ್ಕೃತಿ ಮತ್ತು ವ್ಯಕ್ತಿತ್ವ ವಿಕಾಸದ ಅಡಿಪಾಯ: ಎನ್. ಎಂ ಬಿರಾದಾರ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 24 :ಪುಸ್ತಕಗಳು ಮಾನವನ ಜ್ಞಾನ ಸಂಸ್ಕೃತಿ ಮತ್ತು ವ್ಯಕ್ತಿತ್ವ ವಿಕಾಸದ ಅಡಿಪಾಯವಾಗಿದ್ದು, ಓದು ಅಂತಃಪ್ರಜ್ಞೆಯ ಗ್ರಹಿಕೆಯಾಗಿದೆ ಎಂದು ನಗರದ ಚಾಣಕ್ಯ ಕರಿಯರ್ ಅಕಾಡೆಮಿ ಅಧ್ಯಕ್ಷ ಎನ್.ಎಂ.ಬಿರಾದಾರ ಹೇಳಿದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆˌ ಕನ್ನಡ ಪುಸ್ತಕ ಪ್ರಾಧಿಕಾರ ಹಾಗೂ ಜಿಲ್ಲಾ ಜಾಗೃತ ಸಮಿತಿ ಸಂಯುಕ್ತಾಶ್ರಯದಲ್ಲಿ ಸ್ಥಳೀಯ ರಾಜಾಜಿನಗರದಲ್ಲಿರುವ ಸಾಹಿತಿ ಮುರುಗೇಶ ಸಂಗಮ ಅವರ ನಿವಾಸದಲ್ಲಿ ಶನಿವಾರ ಸಂಜೆ 4 ಗಂಟೆಗೆ ಜರುಗಿದ ಮನೆಗೊಂದು ಗ್ರಂಥಾಲಯ ಅನುಷ್ಠಾನ ಕಾರ್ಯಕ್ರಮದ ಅಡಿಯಲ್ಲಿ ಗ್ರಂಥಾವಲೋಕನˌ ಕವಿಗೋಷ್ಠಿ ಹಾಗೂ ಸನ್ಮಾನ…

Read More

ಭಾರತ ಭೀಮ್ ಸೇನೆ ಸಂಘಟನಾ ಕಾರ್ಯದರ್ಶಿಯಾಗಿ ಬಿರಾದಾರ ನೇಮಕ

ಸಪ್ತಸಾಗರ ವಾರ್ತೆ,ಆಲಮೇಲ, ಮೇ. 24:ಭಾರತ ಭೀಮ್ ಸೇನೆಯ ರಾಜ್ಯ ಸಮಿತಿಯ ರಾಜ್ಯ ಸಂಘಟನಾ ಕಾರ್ಯದರ್ಶಿಯನ್ನಾಗಿ ಆಲಮೇಲ ತಾಲ್ಲೂಕಿನ ಗುಡ್ಡಳ್ಳಿ ಗ್ರಾಮ ಪುಂಡಲೀಕ ಬಿರಾದಾರ ಅವರನ್ನು ನೇಮಕ ಮಾಡಲಾಗಿದೆ.ಭಾರತ ಭೀಮ್ ಸೇನೆಯ ರಾಷ್ಟ್ರೀಯ ಉಪಾಧ್ಯಕ್ಷರಾದ ಪ್ರವೀಣ ಸುಲ್ಪಿ ಅವರ ಶಿಫಾರಸ್ಸಿನ ಮೇರೆಗೆ ಈ ನೇಮಕಾತಿ ಆದೇಶವನ್ನು ಹೊರಡಿಸಲಾಗಿದೆ.ಸಂಸ್ಥಾಪಕ ರಾಜ್ಯಧ್ಯಕ್ಷ ದಿನೇಶ್ ಅವರ ನೇತೃತ್ವದ ರಾಜ್ಯ ಸಮಿತಿಯು ಈ ನೇಮಕಾತಿ ಪತ್ರವನ್ನು ಅಧಿಕೃತವಾಗಿ ನೀಡಿದೆ.

Read More

ಬಿರುಗಾಳಿ ಸಹಿತ ಮಳೆಗೆ ನೆಲಕ್ಕೆ ಬಿದ್ದ ಬಾಳೆ:15 ಲಕ್ಷಕ್ಕೂ ಅಧಿಕ ಹಾನಿ

ಸಪ್ತಸಾಗರ ವಾರ್ತೆ,ತಾಳಿಕೋಟೆ, ಮೇ. 23 :ಕಳೆದ ಎರಡು ದಿನಗಳ ಹಿಂದಷ್ಟೇ ಭೀಕರ ಬಿರುಗಾಳಿ ಸಹಿತ ಮಳೆಗೆ ತಾಲೂಕಿನ ಹೊಸಳ್ಳಿ ಗ್ರಾಮದ ರೈತ ಶಾಂತಗೌಡ ಬಿರಾದಾರ ಎಂಬವರ ಸರ್ವೆ ನಂ. 33ರ ಜಮೀನಿನಲ್ಲಿ ಬೆಳೆದಿದ್ದ 5 ಏಕರೆ ಪ್ರದೇಶದಲ್ಲಿಯ ಸಾವಿರಾರು ಬಾಳೆ ಗಿಡಗಳು, ಮುರಿದು ನೆಲಕ್ಕೆ ಬಿದ್ದ ಘಟನೆ ನಡೆದಿದೆ.ಇನ್ನೇನು ವಾರ ಕಳೆಯುವಷ್ಟರಲ್ಲಿ ಬಾಳೆ ಗೊನೆಗಳನ್ನು ಕಟಾವಿಗೆ ಬಂದಿದ್ದವು. ಒಟ್ಟು 5 ಎಕರೆ ಪ್ರದೇಶದಲ್ಲಿ ಸುಮಾರು 1200 ಕ್ಕೂ ಅಧಿಕ ಬಾಳೆಗಿಡಗಳನ್ನು ಬೆಳೆದಿದ್ದರು. ಆದರೆ ಬಿರುಗಾಳಿ ಸಹಿತ ಸುರಿದ…

Read More

ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಕ್ಕೆ ಗುಮ್ಮಟನಗರಿಯಲ್ಲಿ ವಿದ್ಯುಕ್ತ ತೆರೆ

ಸಪ್ತಸಾಗರ ವಾರ್ತೆ,ವಿಜಯಪುರ ಮೇ 23:ಐತಿಹಾಸಿಕ ಗುಮ್ಮಟ ನಗರಿಯಲ್ಲಿ ಮೇ 17 ರಿಂದ 7 ದಿನಗಳ ಕಾಲ ನಡೆದ ಕರ್ನಾಟಕ ರಾಜ್ಯ ಸಬ್ ಜೂನಿಯರ್ ರ‍್ಯಾಂಕಿಂಗ್ ಬ್ಯಾಡ್ಮಿಂಟನ್ ಟೂರ್ನಮೆಂಟ್ 2026 ಪಂದ್ಯಾವಳಿಗೆ ಶನಿವಾರ ವಿದ್ಯುಕ್ತವಾಗಿ ತೆರೆಬಿತ್ತು.‌ಇದೇ ಮೊದಲ ಬಾರಿಗೆ ನಡೆದ ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಕ್ರೀಡಾಕೂಟ ಗುಮ್ಮಟ ನಗರಿಯ ಜನತೆಯನ್ನು ಕಳೆದ 7 ದಿನಗಳಿಂದ ಬ್ಯಾಡ್ಮಿಂಟನ್ ಲೋಕದಲ್ಲಿ ಮಿಂದೇಳಿಸಿತು.‌ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಶನ್ ನ ಅಧಿಕೃತ ಮಾನ್ಯತೆಯೊಂದಿಗೆ ಯೊನೆಕ್ಸ್ ಸನ್ ರೈಸ್ ಪ್ರಾಯೋಕತ್ವದಡಿ ನಗರದ ಬಿಎಲ್ ಡಿ ಸಂಸ್ಥೆ ಹಾಗೂ…

Read More

ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ. ಸಮಗ್ರ ಅಭಿವೃದ್ಧಿಗೆ ಆದ್ಯತೆ : ಸಿ.ಎಂ ಸಿದ್ದರಾಮಯ್ಯ

ಸಪ್ತಸಾಗರ ವಾರ್ತೆ,ಬೆಂಗಳೂರು ಮೇ23: ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಈ ಭಾಗದ ಸಮಗ್ರ ಅಭಿವೃದ್ಧಿಗೆ ನಾವು ಮುಂದಡಿ ಇಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ‌ ಅವರು ನುಡಿದರು.ವಸತಿ ಇಲಾಖೆ, ಕರ್ನಾಟಕ ಗೃಹ ಮಂಡಳಿ ಜಂಟಿಯಾಗಿ ಸೂರ್ಯಗ್ರಾಮದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಶಂಕುಸ್ಥಾಪನೆ, ಮುಖ್ಯಮಂತ್ರಿಗಳ “ನಮ್ಮ ಮನೆ” ಯೋಜನೆಗೆ ಚಾಲನೆ, ಸೂರ್ಯಶೈನ್, ಸೂರ್ಯ ಡಿವೈನ್ ವಸತಿ ಸಮುಚ್ಚಯ ಕಾಮಗಾರಿಗಳ ಶಂಕುಸ್ಥಾಪನೆ, ವಸತಿ…

Read More

ಆಳಂದ ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಕೇಸ್ ವಾಪಸ್ ನಿರ್ಧಾರ :ಯತ್ನಾಳ ವಿರೋಧ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 22:ಗುರುವಾರ (ಮೇ 21) ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕಾಂಗ್ರೆಸ್ ಸರ್ಕಾರ ಆಳಂದ ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಕೇಸ್ ವಾಪಸ್ ಪಡೆದಿದೆ. 2022 ರಲ್ಲಿ ಸದರಿ ದರ್ಗಾದಲ್ಲಿ ದೊಡ್ಡ ಮಟ್ಟದ ಗಲಾಟೆಯಾಗಿ, ತಿಳಿಗೇಡಿಗಳು ಶಿವಲಿಂಗದ ಮೇಲೆ ಮಲ ಮೂತ್ರ ವಿಸರ್ಜನೆ ಮಾಡಿದ್ದರು.ಆರೋಪಿತರು ‘ಅಮಾಯಕರು’ ಎಂದು ಬಿಂಬಿಸುತ್ತಿರುವ ಸರ್ಕಾರದ ಈ ನಡೆ ಸಂವಿಧಾನ ವಿರೋಧಿಯಾಗಿದೆ. ಸರ್ಕಾರ ತನ್ನ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಉದ್ದೇಶಪೂರ್ವಕವಾಗಿ ದೊಂಬಿ, ಹಿಂಸಾಚಾರ, ಕೋಮು ಗಲಭೆ, ವಿಗ್ರಹ…

Read More

ಮುಂಬೈ, ಬೆಂಗಳೂರುಗಳಿಗೆ ಹೆಚ್ಚುವರಿ ರೈಲು ಸೇವೆಗೆ ಸಂಸದ ಜಿಗಜಿಣಗಿ ಶ್ರಮಿಸಲಿ: ಸುನೀಲಗೌಡ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 22:)ಪೆಟ್ರೋಲ್ ಮತ್ತು ಡೀಸೆಲ್ ದರ ಹೊರೆಯಾಗುತ್ತಿರುವ ಈ ದಿನಗಳಲ್ಲಿ ವಿಜಯಪುರದಿಂದ ಬೆಂಗಳೂರು ಮತ್ತು ಮುಂಬೈಗೆ ಹೆಚ್ಚುವರಿ ರೈಲು ಸೇವೆಗಳನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳುವ ಮೂಲಕ ಸಂಸದ ರಮೇಶ ಜಿಗಜಿಣಗಿ ತಮ್ಮ ಶಕ್ತಿ ತೋರಿಸಬೇಕು ಎಂದು ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಹೇಳಿದ್ದಾರೆ.ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ರಾಜ್ಯದ ಪಂಚ ಗ್ಯಾರಂಟಿ ಯೋಜನೆಗಳು ಜಗತ್ತಿಗೆ ಮಾದರಿಯಾಗಿದ್ದು, ಅವುಗಳನ್ನು ಬಿಜೆಪಿ ಆಡಳಿತದಲ್ಲಿರುವ ಸರಕಾರಗಳೂ ನಕಲು ಮಾಡುತ್ತಿವೆ. ಇಂಥ ಸಂದರ್ಭದಲ್ಲಿ ಸಂಸದರು,…

Read More

ಸ್ಥಳೀಯ ಪತ್ರಿಕೆಗಳು ಮುಖ್ಯಮಂತ್ರಿಗಳ ಮೊದಲ ಆದ್ಯತೆಯಾಗಿದೆ: ಕೆವಿಪಿ

ಸಪ್ತಸಾಗರ ವಾರ್ತೆ,ಬೆಂಗಳೂರು ಮೇ 22:ಮಾಧ್ಯಮ‌ ಸಲಹೆಗಾರ ಹೊಣೆಗಾರಿಕೆ ಸವಾಲಿನದ್ದು. ಸದಾ ಎಚ್ಚರದ ಸ್ಥಿತಿಯಲ್ಲಿ ಗಮನಿಸಬೇಕಾಗುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು ಅಭಿಪ್ರಾಯಪಟ್ಟರು.ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಬಳಿಕ “ಮಾಧ್ಯಮ ಸಂವಾದ”ದಲ್ಲಿ ಮಾತನಾಡಿದರು.ಮಾಧ್ಯಮ ಸಲಹೆಗಾರ ಹುದ್ದೆ ಪ್ರತೀ ದಿನ ಸವಾಲಿನದ್ದು. ಬೆಳಗ್ಗೆ ಎದ್ದು ಪತ್ರಿಕೆಗಳನ್ನು ತಿರುವಿ ಹಾಕುವವರೆಗೂ ನನಗೆ ದುಗುಡ ಇದ್ದೇ ಇರುತ್ತದೆ. ಈ ಸವಾಲುಗಳನ್ನು ಪ್ರತೀ ದಿನ ನಿರ್ವಹಿಸುತ್ತಿದ್ದೇನೆ…

Read More

ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಆನ್ ಲೈನ್ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ ವಿಜಯಪುರ, ಮೇ 22:2026-27 ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಆನ್ ಲೈನ್ ಅರ್ಜಿ ಆಹ್ವಾನಿಸಲಾಗಿದೆ.ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗಗಳ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಹೀಗಿರಬೇಕು. ಪ್ರವರ್ಗ-1, ಎಸ್.ಸಿ & ಎಸ್.ಟಿ ವಿದ್ಯಾರ್ಥಿಗಳ ಪೋಷಕರ…

Read More