ಅಕ್ರಮ ವಾಣಿಜ್ಯ ಚಟುವಟಿಕೆ ನಡೆಸಿದರೆ‌ ಪಾಲಿಕೆಯಿಂದ‌ ಕಠಿಣ ಕ್ರಮದ ಎಚ್ಚರಿಕೆ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 15:ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಕ್ರಮ ವಾಣಿಜ್ಯ ಚಟುವಟಿಕೆ ನಡೆಸುವ ಮೂಲಕ ಯಾವುದಾದರೂ ಅನಾಹುತ ಸಂಭವಿಸಿದಲ್ಲಿ ಅಂತಹರನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ತಿಳಿಸಿದ್ದಾರೆ.ಮಹಾನಗರ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕ ಜಾಗೆಗಳು, ಕಟ್ಟಡಗಳ ನೆಲ ಮಹಡಿ, ವಾಹನ ನಿಲುಗಡೆಗೆ ಕಾಯ್ದಿರಿಸಿದ ಜಾಗೆಗಳು. ಪಾದಚಾರಿ ಮಾರ್ಗಗಳು ಹಾಗೂ ಇತರೆ ಸ್ಥಳಗಳಲ್ಲಿ ಅಕ್ರಮ ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿವೆ. ಅಕ್ರಮ ಚಟುವಟಿಕೆದಾರರು ಯಾವುದೇ ಪರವಾನಿಗೆ ಪಡೆಯದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದೇ ಅನಧಿಕೃತ ವ್ಯವಹಾರ…

Read More

ನಮ್ಮನ್ನು ಟೀಕೆ ಮಾಡದಿದ್ದರೆ ಕುಮಾರಸ್ವಾಮಿ ರಾಜಕೀಯವಾಗಿ ಬದುಕಲು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ, ಬೆಂಗಳೂರು, ಮೇ 15: “ಕುಮಾರಸ್ವಾಮಿ ಅವರು ನಮ್ಮ ಬಗ್ಗೆ ಟೀಕೆ ಮಾಡಲಿಲ್ಲ ಎಂದರೆ ರಾಜಕೀಯವಾಗಿ ಬದುಕಿರಲು ಆಗುವುದಿಲ್ಲ. ನಾವು ಒಳ್ಳೆಯ ಕೆಲಸ ಮಾಡುತ್ತೇವೆ, ಅವರು ವಿರೋಧ ಮಾಡುತ್ತಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.ಸದಾಶಿವನಗರದ ನಿವಾಸದ ಬಳಿ ಅವರು ಶುಕ್ರವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.ಕುಮಾರಸ್ವಾಮಿ ಅವರು ಬಿಡದಿ ಟೌನ್ ಶಿಪ್ ಯೋಜನೆಯ ಬಗ್ಗೆ ಟೀಕೆ ವ್ಯಕ್ತಪಡಿಸಿರುವ ಬಗ್ಗೆ ಕೇಳಿದಾಗ, “ಅವರು ಮಾಡಿದ ಯೋಜನೆಯನ್ನೇ ನಾವು ಮುಂದುವರೆಸುತ್ತಾ ಇರುವುದು. ನಾನು ರೈತರ ಬಳಿ ಮಾತನಾಡಲು…

Read More

ಮೇಲ್ಚಾವಣಿ ಕುಸಿತ ಪ್ರಕರಣ: ಬದುಕುಳಿದ ಎರಡು ಜೀವ- ಸಚಿವ ಎಂ. ಬಿ. ಪಾಟೀಲ್ ಭೇಟಿ ತಲಾ 5 ಲಕ್ಷ ಪರಿಹಾರ ಘೋಷಣೆ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 15: ಆಲಮೇಲ‌ ತಾಲೂಕಿನ ಮೊರಟಗಿ ಗ್ರಾಮದಲ್ಲಿ ಮನೆಯ ಮೇಲ್ಛಾವಣಿ ಕುಸಿದು ಸಾವಿಗೀಡಾದವರ ನಾಲ್ಕು ಜನರು ಸಾವಿಗೀಡಾದ ಘಟನಾ ಸ್ಥಳಕ್ಕೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ‌ ಅವರು ಇಂದು ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಜಿಲ್ಲಾಧಿಕಾರಿ ಡಾ. ಆನಂದ ಕೆ., ಎಸ್ಪಿ ಲಕ್ಷ್ಮಣ ನಿಂಬರಗಿ ಹಾಗೂ ಜಿ. ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಅವರು ಸಚಿವರಿಗೆ ಘಟನೆಯ ಬಗ್ಗೆ…

Read More

ಮೋರಟಗಿಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ:ಮನೆ ಮೇಲ್ಚಾವಣಿ ಕುಸಿದು ನಾಲ್ವರು ಜೀವಂತ ಸಮಾಧಿ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 15:ಭಾರೀ ಗಾಳಿ ಸಹಿತ‌ ಮಳೆಗೆ ಮನೆಯ ಮೇಲ್ಚಾವಣೆ ಕುಸಿದು ಒಂದೇ ಕುಟುಂಬದ ನಾಲ್ವರು ಜೀವಂತ ಸಮಾಧಿಯಾಗಿರುವ ದುರಂತ ಜಿಲ್ಲೆಯ ಆಲಮೇಲ ತಾಲೂಕಿನ ಮೋರಟಗಿಯಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.ಈ ದುರಂತದಲ್ಲಿ ಪತಿ, ಪತ್ನಿ ಹಾಗೂ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.ಮೋರಟಗಿ ಗ್ರಾಮದ ಗುರುನಾಥ ಬಡಿಗೇರ (35), ಜ್ಯೋತಿ ಬಡಿಗೇರ (28), ಕಾಳಮ್ಮ ಬಡಿಗೇರ (13), ಕೀರ್ತಿ ಬಡಿಗೇರ (9) ಮೃತಪಟ್ಟ ನತದೃಷ್ಟರು.ತಮ್ಮ ಮನೆಯನ್ನು ದುರಸ್ತಿ ಮಾಡುವ ಕಾರಣ ಹಳೆಯ ಮನೆಯಲ್ಲಿ ಈ ಕುಟುಂಬ ಬಾಡಿಗೆಯಿಂದ ವಾಸವಾಗಿತ್ತು.ನಿನ್ನೆ…

Read More

ಜೂ. 1 ರಂದು ಅಂಚೆ‌ ವಿಮೆ ಪ್ರತಿನಿಧಿಗಳ ನೇಮಕಾತಿಗೆ ನೇರ ಸಂದರ್ಶನ

ಸಪ್ತಸಾಗರ ವಾರ್ತೆವಿಜಯಪುರ, ಮೇ 14:ವಿಜಯಪುರ ವಿಭಾಗದಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನ ಮಾರಾಟ ಮಾಡಲು ನೇರ ಪ್ರತಿನಿಧಿಗಳ ನಿಯುಕ್ತಿಗಾಗಿ ನೇರ ಸಂದರ್ಶನ ಜೂ. 1 ರಂದು ಬೆಳಗ್ಗೆ 11 ಗಂಟೆಗೆ ನಗರದ ಸ್ಟೇಶನ್ ರಸ್ತೆಯ ಗೋಲಗುಂಬಜ್ ಬಳಿಯಿರುವ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ನಡೆಯಲಿದೆ.ಆಸಕ್ತ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ಸ್ವವಿವರ, ಶೈಕ್ಷಣಿಕ ಪ್ರಮಾಣಪತ್ರದ ನಕಲುಗಳೊಂದಿಗೆ ಅಂದು‌ ನಡೆಯಲಿರುವ ನೇರ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.ಅರ್ಹತಾ ನಿಯಮಗಳು:ಅಭ್ಯರ್ಥಿಗಳು 10 ನೇ ತರಗತಿ ಉತ್ತೀರ್ಣರಾಗಿದ್ದು, ಕಡ್ಡಾಯವಾಗಿ…

Read More

ಗ್ರಾಮೀಣ ಜನತೆಗೆ ತ್ವರಿತವಾಗಿ ಸ್ಪಂದಿಸಿ:ಜಿಪಂ ಸಿಇಒ ರಿಷಿ ಆನಂದ ಕಿವಿಮಾತು

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 14:ಸಮಸ್ಯೆ ಹೊತ್ತು ಬರುವ ಗ್ರಾಮೀಣ ಜನತೆಗೆ ತ್ವರಿತವಾಗಿ ಪರಿಹಾರ ಕಲ್ಪಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಕಾಧಿರಿ ರಿಷಿ ಆನಂದ ಹೇಳಿದರು.ಜಿಲ್ಲೆಯ ತಿಕೋಟಾ ತಾಲೂಕು ಪಂಚಾಯತಿ ಕಾರ್ಯಾಲಯದ ನವೀಕರಣಗೊಂಡ ಪಿಠೋಪಕರಣ ಉದ್ಘಾಟಿಸಿ ಅವರು ಮಾತನಾಡಿದರು.ಕಾರ್ಯಾಲಯವು ಎಷ್ಟು ನಿಟ್ಟಾಗಿ ಅಚ್ಚುಕಟ್ಟಾಗಿ ಹಾಗೂ ಸ್ವಚ್ಚತೆಯಿಂದ ಇರುತ್ತದೇಯೋ ಅಷ್ಟು ಸಿಬ್ಬಂದಿಗಳಿಗೆ ಕೆಲಸ ನಿರ್ವಹಿಸಲು ಪ್ರೇರಣೆ ಸಿಗುತ್ತದೆ. ಇಂತಹ ಒಂದು ಉತ್ತಮ ಯೋಜನೆಯನ್ನು ಹಾಕಿಕೊಂಡು ಹಳೆಯ ಕಟ್ಟಡದಲ್ಲಿಯೇ ಸಿಬ್ಬಂದಿಗೆ ಅವಶ್ಯಕವಾಗಿ ಬೇಕಾಗಿರುವ ಟೇಬಲ್, ಕುರ್ಚಿ, ಗಣಕಯಂತ್ರ,ಪ್ರಿಂಟರ್ಸ್‌, ಶೌಚಾಲಯ, ಕುಡಿಯುವ…

Read More

ಮೇ. 17ರಿಂದ ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 14:ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಶನ್ ಹಾಗೂ ಜಿಲ್ಲಾಡಳಿತದ ಸಹಯೋಗದಲ್ಲಿ ಇದೇ ಮೊದಲ ಬಾರಿಗೆ ನಗರದ ಐತಿಹಾಸಿಕ ಮಣ್ಣಿನಲ್ಲಿ ಯೋನೆಕ್ಸ್‌ ಸನ್‌ ರೈಸ್‌ (Yonex-Sunrise) ಕರ್ನಾಟಕ ರಾಜ್ಯ ಮಟ್ಟದ (U-15 & U-17) ಬ್ಯಾಡ್ಮಿಂಟನ್ ಪಂದ್ಯಾವಳಿ ಮೇ 17 ರಿಂದ 23ರವರೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಇದಕ್ಕೆಂದೇ ಗುಮ್ಮಟ ನಗರಿ ಸಜ್ಜಾಗುತ್ತಿದೆ.ರಾಜ್ಯದ ವಿವಿಧ ಮೂಲೆಗಳಿಂದ ನೂರಾರು ಉದಯೋನ್ಮುಖ ಕ್ರೀಡಾಪಟುಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ. ಮೇ 17 ರಂದು ಬೆಳಿಗ್ಗೆ…

Read More

ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಿ: ಸ್ಥಳೀಯ ಸಂಸ್ಥೆ ಮುಖ್ಯಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.‌ ಆನಂದ‌ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 14:ಕುಡಿಯುವ ನೀರಿಗೆ ಸಂಬಂಧಿಸಿದಂತೆ ಸ್ಥಳೀಯ ಸಂಸ್ಥೆಗಳಲ್ಲಿ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಸಮಸ್ಯೆ ಉಲ್ಬಣಿಸಿದರೆ ಆಯಾ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಿ ಸಮಸ್ಯೆಯನ್ನು ತಕ್ಷಣ ಇತ್ಯರ್ಥಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ‌ ಕೆ. ಅವರು, ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾಧಿಕಾರಿ‌ ಕಚೇರಿ ಸಭಾಂಗಣದಲ್ಲಿ‌ ಗುರುವಾರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಈ ಸೂಚನೆ ನೀಡಿದರು.ಸಾಲಿಡ್ ವೇಸ್ಟ್ ಮ್ಯಾನೇಜ್ ಮೆಂಟ್ ಏಪ್ರಿಲ್ ಒಂದರಿಂದ ಜಾರಿಗೆ ಬಂದಿದೆ.‌ ಇದರಡಿ ನಾಲ್ಕು…

Read More

NEET ಪರೀಕ್ಷೆಯ ಭ್ರಷ್ಟಾಚಾರ ಮತ್ತು ಕೇಂದ್ರ ಸರ್ಕಾರದ ವೈಫಲ್ಯ ಖಂಡಿಸಿ ದ್ರಾವಿಡ ವಿದ್ಯಾರ್ಥಿ ಪರಿಷತ್ ಆಕ್ರೋಶ: ಬಿಜೆಪಿ ಕಚೇರಿಗೆ ಮುತ್ತಿಗೆ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 14 : ದೇಶದ ಅತ್ಯಂತ ಮಹತ್ವದ ವೈದ್ಯಕೀಯ ಪ್ರವೇಶ ಪರೀಕ್ಷೆಯಾಗಿರುವ NEET ಪರೀಕ್ಷೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ಪ್ರಶ್ನೆ ಪತ್ರಿಕೆ ಸೋರಿಕೆ, ಅಕ್ರಮಗಳು, OMR ತಿದ್ದುಪಡಿ ಹಾಗೂ ಭ್ರಷ್ಟಾಚಾರ ಪ್ರಕರಣಗಳು ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲೆಗೆ ತಳ್ಳಿವೆ ಎಂದು ದ್ರಾವಿಡ ವಿದ್ಯಾರ್ಥಿ ಪರಿಷತ್ ತೀವ್ರ ಆಕ್ರೋಶ ವ್ಯಕ್ತಪಡಿಸಿ ವಿಜಯಪುರ ಬಿಜೆಪಿ ಕಚೇರಿ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಲಾಗಿದೆ.ದ್ರಾವಿಡ ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಅಕ್ಷಯ್ ಕುಮಾರ್ ಅಜಮನಿ ಪ್ರತಿಭಟನೆ ಉದ್ದೇಶಿಸಿ ಮಾತನಾಡಿ, National Testing Agency (NTA)…

Read More

ಸಿಲಿಂಡರ್ ಸ್ಪೋಟ: ಇಬ್ಬರಿಗೆ ಗಾಯ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 14:ನಗರದ ಜ್ಯುವೆಲರಿ ಶಾಪ್ ನಲ್ಲಿ ಗ್ಯಾಸ್ ಸಿಲೆಂಡರ್ ಬ್ಲಾಸ್ಟ್ ಆಗಿ ಇಬ್ಬರು ಗಾಯಗೊಂಡಿರುವ ಘಟನೆಸರಾಫ ಬಜಾರ್ ನಲ್ಲಿ ನಡೆದಿದೆ.ಬಂಗಾಲಿ ಮೂಲದ ಇಬ್ಬರು ಅಕ್ಕಸಾಲಿಗರಾದ ಬೀಜು (38), ನಾನಾ ಹಕ್ಕಿಂ (40) ಗಾಯಗೊಂಡಿದ್ದಾರೆ.ಬೆಳಿಗ್ಗೆ ಚಿನ್ನದ ಕುಲುಮೆ ಕೆಲಸ ಮಾಡುವಾಗ ಬ್ಲಾಸ್ಟ್ ಆಗಿದೆ. ಈ ವೇಳೆಇಬ್ಬರು ಅಕ್ಕಸಾಲಿಗರಿಗೆ ಸುಟ್ಟ ಗಾಯಗಳಾಗಿವೆ. ಆಟೋ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳುಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.ಗ್ಯಾಸ್ ಸೋರಿಕೆ ಸಿಲಿಂಡರ್ ಸ್ಫೋಟಕ್ಕೆ ಕಾರಣ ಇರಬಹುದು ಎಂದು…

Read More