ಬಕ್ರೀದ್ ಹಿನ್ನೆಲೆ ಜಿಲ್ಲಾದ್ಯಂತ ಕಟ್ಟೆಚ್ಚರಕ್ಕೆ ರಾಮನಗೌಡ ಹಟ್ಟಿ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 25:ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳಲ್ಲಿ ಅನಧಿಕೃತವಾಗಿ ಜಾನುವಾರುಗಳ ಸಾಗಣೆಯಾಗದಂತೆ ಅಧಿಕಾರಿಗಳು ತೀವ್ರ ನಿಗಾ ವಹಿಸಬೇಕು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮಗೌಡ ಹಟ್ಟಿ ಹೇಳಿದರು.ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಸಹಯೋಗದಲ್ಲಿ ಸೋಮವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ದಾಖಲೆಗಳಿಲ್ಲದೆ ಜಾನುವಾರುಗಳ ಸಾಗಣೆ ಮಾಡುವುದು ಕಾನೂನಿನ ವಿರುದ್ಧವಾಗಿದೆ. ಹಾಗಾಗಿ ಅಕ್ರಮವಾಗಿ ಜಾನುವಾರುಗಳ ಸಾಗಣೆಯಾಗದಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು…

Read More

ಯುವಕರಿಗೆ ಸದಾ ಬೆನ್ನೆಲುಬು:ಎಂಎಲ್ಸಿ ಸುನೀಲಗೌಡ ಅಭಯ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 25:ದೇಶದ ಬೆನ್ನೆಲುಬಾಗಿರುವ ಯುವಕರಿಗೆ ನಾವು ಸದಾ ಬೆಂಬಲವಾಗಿ ನಿಂತಿದ್ದೇವೆ ಎಂದು ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಹೇಳಿದ್ದಾರೆ.ರವಿವಾರ ಮುಸ್ಸಂಜೆ ತಿಕೋಟಾ ಪಟ್ಟಣದಲ್ಲಿ ನಡೆದ ಯುವ ಶಕ್ತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಇಂದಿನ ಕಾರ್ಯಕ್ರಮ ಯುವಕರ ಶಕ್ತಿ ಪ್ರದರ್ಶನ ಮಾತ್ರವಲ್ಲ. ಯುವಕರ ಬೃಹತ್ ಜಾತ್ರೆಯಾಗಿದೆ. ತಮ್ಮೆಲ್ಲರ ಪ್ರೀತಿ, ವಿಶ್ವಾಸ, ಅಭಿಮಾನ ಕಂಡು ಮಂತ್ರಮುಗ್ದನಾಗಿದ್ದೇನೆ. ತಾವು ನಮ್ಮ ಮೇಲೆ ಇಟ್ಟಿರುವ ಪ್ರೀತಿಗೆ ಋಣಿಯಾಗಿದ್ದೇನೆ. ಈ ಕಾರ್ಯಕ್ರಮ ವಿರೋಧಿಗಳಿಗೆ ನಿದ್ದೆಗೆಡಿಸಲಿದೆ. ತಮ್ಮೆಲ್ಲರ ಒಳಿತಿಗಾಗಿ ನಾವು ಸದಾ…

Read More

ರೈಲು ಹಳಿಗೆ ಬಿದ್ದು ಯುವಕ ಆತ್ಮಹತ್ಯೆ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 25:ಯುವಕನೋರ್ವ ರೈಲು ಹಳಿಯಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂಡಿ ನಗರದ ರೈಲು ನಿಲ್ದಾಣ ಹತ್ತಿರ ಶನಿವಾರ ರಾತ್ರಿ ನಡೆದಿದೆ.ಮೃತ ಯುವಕನನ್ನು ಇಂಡಿ ತಾಲೂಕಿನ ಸಾತಲಗಾಂವ ಪಿ ಐ ಗ್ರಾಮದ ವಿಜಯ ಮಲ್ಲಿಕಾರ್ಜುನ ಮಡಗೊಂಡ (24) ಎಂದು ಗುರುತಿಸಲಾಗಿದೆ.ಶನಿವಾರ ರಾತ್ರಿ 2 ಗಂಟೆಗೆ ಸೊಲ್ಲಾಪುರ ಹುಬ್ಬಳ್ಳಿ ರೈಲು (56903 ) ಸಂಚರಿಸುವಾಗ ಎರಡೂ ಹಳಿಗಳ ನಡುವೆ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.ರೈಲ್ವೆ ಪೊಲೀಸರ ಮಾಹಿತಿಯ…

Read More

ನಗರದಲ್ಲಿ ಮತ್ತೊಂದು ಹೊಸ ಆಧಾರ್‌ ಸೇವಾ ಕೇಂದ್ರ ಆರಂಭ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ 25:ನಗರ ನಿವಾಸಿ-ಕೇಂದ್ರಿತ ಆಧಾರ್ ಸೇವೆಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದ ಬೆಂಗಳೂರು ಪ್ರಾದೇಶಿಕ ಕಚೇರಿ ಮತ್ತೊಂದು ಮಹತ್ವದ ಹೆಜ್ಜೆಯನ್ನಿರಿಸಿದ್ದು, ನಗರದ ಆಶ್ರಮ ರಸ್ತೆಯಲ್ಲಿರುವ ಬಿಎಲ್‌ ಡಿಇ 2ನೇ ಗೇಟ್‌ ಎದುರಿಗಿರುವ ಬಜಾಜ್‌ ಶೋರೂಂ ಮೇಲಿನ ಕಟ್ಟಡದಲ್ಲಿ ಹೊಸ ಆಧಾರ್‌ ಸೇವಾ ಸೇವಾ ಕೇಂದ್ರವನ್ನು ಕಾರ್ಯಾರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. ತಡೆರಹಿತ ಆಧಾರ್‌ ಸೇವೆ:ವಿಜಯಪುರ ಆಧಾರ್ ಸೇವಾ ಕೇಂದ್ರಗಳ ಪೈಕಿ ಇದು ‘ಮಾಡೆಲ್-ಬಿ’ ಕೇಂದ್ರವಾಗಿದ್ದು,ನಿವಾಸಿಗಳಿಗೆ ತಡೆರಹಿತ ಆಧಾರ್…

Read More

ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 25:2025-26ನೇ ಸಾಲಿನ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಮತ್ತು ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿಸಲ್ಲಿಸಿದ ಹಡಪದ ವಿದ್ಯಾರ್ಥಿಗಳು, ಪಾಲಕರು, ಪೋಷಕರುಗಮನಕ್ಕೆ ತರಬಯಸುವದೇನೆಂದರೆ ಜೂ. 7ರಂದು ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ಮಕ್ಕಳಿಗೆ ಪ್ರತಿಭಾಪುರಸ್ಕಾರ ಕಾರ್ಯಕ್ರಮವನ್ನು ವೇದ ಅಕಾಡೆಮಿಯಸಭಾಭವನ ಇಟ್ಟಂಗಿಹಾಳ ರಸ್ತೆ ವಿಜಯಪುರ ಇಲ್ಲಿ ಬೆಳಿಗ್ಗೆ 10ಗಂಟೆಗೆ ಆಯೋಜಿಸಲಾಗಿದೆ.ಇಲ್ಲಿಗೆ ಮಕ್ಕಳು ಮತ್ತು ಪಾಲಕರು ಹಾಜರಿರಲುಪ್ರಕಟಣೆಯಲ್ಲಿ ತಿಳಿಸಲಾಗಿದೆ.ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನಮೊ.ನಂ. 9986091374 ಮತ್ತು 9900643943 ಇಲ್ಲಿಗೆ ಸಂಪರ್ಕಿಸಲುಹಡಪದ ನೌಕರರ ಸಂಘಧ ಜಿಲ್ಲಾ ಅಧ್ಯಕ್ಷ ದಶರಥ…

Read More

ಮದುವೆಗೆ ಹೆಣ್ಣು ಬೇಕೆಂದು ಟವರ್ ಏರಿ ಕುಳಿತ ಭೂಪ !

ಸಪ್ತಸಾಗರ ವಾರ್ತೆ ವಿಜಯಪುರ, ಮೇ. 25:ಮದುವೆಗೆ ಹೆಣ್ಣು ಸಿಗದ್ದಕ್ಕೆ ಓರ್ವ ಯುವಕ ಮನ ನೊಂದು ಮೊಬೈಲ್ ಟವರ್ ಏರಿ ಕುಳಿತ ಹೈಡ್ರಾಮಾ ಮಾಡಿದ ಘಟನೆ ತಿಕೋಟಾ ತಾಲೂಕಿನ ಕೋಟ್ಯಾಳ ಗ್ರಾಮದಲ್ಲಿ ಸೋಮವಾರ ನಡೆದಿದೆ.ಕೋಟ್ಯಾಳ ಗ್ರಾಮದ ಯುವಕ ಶ್ರೀಶೈಲ ನಾಗಪ್ಪ ರಾಮತೀರ್ಥ ಟವರ್ ಏರಿ ಕುಳಿತು ಎಲ್ಲರ ಗಮನ ಸೆಳೆದ.ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಶ್ರೀಶೈಲನ ಮನವೊಲಿಸಿ ಮೊಬೈಲ್ ಟವರ್ ನಿಂದ ಕೆಳಗಿಳಿಸುವಲ್ಲಿ ಯಶಸ್ವಿಯಾಗಿದ್ದಾರೆ.ಈ ಯುವಕ ಟವರ್ ಏರಿ ಕುಳಿತಿದ್ದು ಹೊಸದೇನಲ್ಲ. ಈ‌ ಹಿಂದೆ ಮದ್ಯ ಹಾಗೂ ಗುಟಕಾ…

Read More

ಸಮಯ ವ್ಯರ್ಥ ಮಾಡದೆ, ಜ್ಞಾನ ಸಂಪಾದಿಸಿ-ಅಶೋಕ ಬಿರಾದಾರ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 25:ನಿಶ್ಚಿತಗುರಿ, ಅಚಲ ಶೃದ್ಧೆ, ಅವಿರತ ಪ್ರಯತ್ನ, ಸರಳ ಆಲೋಚನೆಗಳಿಂದ ಇಂದಿನ ಮಕ್ಕಳು ಸೃಜನಶೀಲ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕು ಎಂದು ಸಂಸ್ಥೆಯ ಅಧ್ಯಕ್ಷ ಅಶೋಕ ಬಿರಾದಾರ ಹೇಳಿದರು.ರವಿವಾರ ನಗರದ ಷಣ್ಮುಖಾರೂಢ ಮಠದಲ್ಲಿ ಅಭಿನವಶ್ರೀ ಕೋಚಿಂಗ್ ಕ್ಲಾಸ್ ನ ಬೇಸಿಗೆ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಎಸ್ ಎಸ್ ಎಲ್ ಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ನೆರವೇರಿಸಿ ಅವರು ಮಾತನಾಡಿದರು.ತಾಯಿ, ತಂದೆ, ಗುರುಗಳನ್ನು ಪ್ರೀತಿಯಿಂದ ಕಾಣುತ್ತಾ, ಅವರ ಮಾರ್ಗದರ್ಶನದಲ್ಲಿ ದೇಶದ ಶ್ರೇಷ್ಠ ವ್ಯಕ್ತಿಗಳಾಗಿ ರೂಪುಗೊಳ್ಳಬೇಕು. ಸಮಯ ವ್ಯರ್ಥ ಮಾಡದೆ,…

Read More

ಮಳೆ, ಗಾಳಿಗೆ ಅಪಾರ ಬಾಳೆ ಗಿಡ ನಾಶ

ಸಪ್ತಸಾಗರ ವಾರ್ತೆ, ಇಂಡಿ, ಮೇ24: ತಾಲೂಕಿನ ಸಾಲೋಟಗಿ ಗ್ರಾಮದಲ್ಲಿ ಶನಿವಾರ ರಾತ್ರಿ ಸುರಿದ ಮಳೆಗಾಳಿಗೆ ಸುಮಾರು ನಾಲ್ಕು ಸಾವಿರಕ್ಕೂ ಅಧಿಕ ಬಾಳೆ ಗಿಡಗಳು ಸಂಪೂರ್ಣ ನೆಲಕ್ಕುರುಳಿ ಲಕ್ಷಾಂತರ ರೂ. ಹಾನಿಯಾಗಿದೆ.ಗ್ರಾಮದ ರೈತ ಧರ್ಮರಾಯ ನರಳೆ ಅವರ 2055 ಬಾಳೆಗಿಡ ಹಾಗೂ ಧರೆಪ್ಪ ನರಳೆ ಅವರಿಗೆ ಸೇರಿದ 1950 ಬಾಳೆ ಗಿಡಗಳು ಮಳೆ ಹಾಗೂ ಗಾಳಿಗೆ ಸಂಪೂರ್ಣ ನೆಲಕ್ಕುರುಳಿ ಹಾಳಾಗಿವೆ. ಅಂದಾಜು 35ಲಕ್ಷದ ಫಸಲು ಹಾಳಾಗಿದೆ‌ ಎಂದು ಅಂದಾಜಿಸಲಾಗಿದೆ.ಜೆಡಿಎಸ್ ಮುಖಂಡ ಬಿ.ಡಿ. ಪಾಟೀಲ ಹಂಜಗಿ ಅವರು ಭೇಟಿ ನೀಡಿ…

Read More

ಸಾಹಿತಿ,ಪ್ರೊ ಎ ಎಚ್ ಕೊಳಮಲಿಯವರಿಗೆ ಆದರ್ಶ ಶಿಕ್ಷಕ ಪ್ರಶಸ್ತಿ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 24:ನಗರದ ಚೇತನಾ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ಹಾಗೂ ಚೇತನಾ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ, ಎ.ಎಚ್. ಕೊಳಮಲಿಯವರಿಗೆ ಕರುನಾಡು ಕಲ್ಪವೃಕ್ಷ ಫೌಂಡೇಶನ್ ಚಿತ್ರದುರ್ಗ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಬಾಗಲಕೋಟೆ ಮತ್ತು ಬಾಗಲಕೋಟೆ ಜಿಲ್ಲೆಯ ಚಿಕ್ಕಮಾಗೇರಿ, ಹಿರೇಮ್ಯಾಗೇರಿಯ ತರುಣ ಸಂಘದ ವತಿಯಿಂದ ಕೊಡಮಾಡುವ ‘ಆದರ್ಶ ಶಿಕ್ಷಕ’ ಪ್ರಶಸ್ತಿಯು ಲಭಿಸಿದೆ.ನಾಡಿನ ಉದಯೋನ್ಮುಖ ಸಾಹಿತಿ ಕೊಳಮಲಿಯವರು ಖ್ಯಾತ ವಾಗ್ಮಿಯೂ ಕೂಡಾ ಆಗಿದ್ದಾರೆ. ಜಾನಪದ ವಿದ್ವಾಂಸರಾದ ಇವರ ಬಹುಮುಖ ಪ್ರತಿಭೆಗೆ ಈ ಮುಂಚಿತವಾಗಿ…

Read More

ಪುಸ್ತಕಗಳು ಮಾನವನ ಜ್ಞಾನ, ಸಂಸ್ಕೃತಿ ಮತ್ತು ವ್ಯಕ್ತಿತ್ವ ವಿಕಾಸದ ಅಡಿಪಾಯ: ಎನ್. ಎಂ ಬಿರಾದಾರ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 24 :ಪುಸ್ತಕಗಳು ಮಾನವನ ಜ್ಞಾನ ಸಂಸ್ಕೃತಿ ಮತ್ತು ವ್ಯಕ್ತಿತ್ವ ವಿಕಾಸದ ಅಡಿಪಾಯವಾಗಿದ್ದು, ಓದು ಅಂತಃಪ್ರಜ್ಞೆಯ ಗ್ರಹಿಕೆಯಾಗಿದೆ ಎಂದು ನಗರದ ಚಾಣಕ್ಯ ಕರಿಯರ್ ಅಕಾಡೆಮಿ ಅಧ್ಯಕ್ಷ ಎನ್.ಎಂ.ಬಿರಾದಾರ ಹೇಳಿದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆˌ ಕನ್ನಡ ಪುಸ್ತಕ ಪ್ರಾಧಿಕಾರ ಹಾಗೂ ಜಿಲ್ಲಾ ಜಾಗೃತ ಸಮಿತಿ ಸಂಯುಕ್ತಾಶ್ರಯದಲ್ಲಿ ಸ್ಥಳೀಯ ರಾಜಾಜಿನಗರದಲ್ಲಿರುವ ಸಾಹಿತಿ ಮುರುಗೇಶ ಸಂಗಮ ಅವರ ನಿವಾಸದಲ್ಲಿ ಶನಿವಾರ ಸಂಜೆ 4 ಗಂಟೆಗೆ ಜರುಗಿದ ಮನೆಗೊಂದು ಗ್ರಂಥಾಲಯ ಅನುಷ್ಠಾನ ಕಾರ್ಯಕ್ರಮದ ಅಡಿಯಲ್ಲಿ ಗ್ರಂಥಾವಲೋಕನˌ ಕವಿಗೋಷ್ಠಿ ಹಾಗೂ ಸನ್ಮಾನ…

Read More