ಹೇಮರೆಡ್ಡಿ ಮಲ್ಲಮ್ಮಳ ಬದುಕು ಮನುಕುಲಕ್ಕೆ ಆದರ್ಶ-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ,ಇಂಡಿ, ಮೇ. 10: ಸುಖ-ದುಃಖ, ಅಂಬಲಿ-ಅಮೃತ, ಶತ್ರು-ಮಿತ್ರ, ಸ್ತುತಿ-ನಿಂದನೆ ಎಲ್ಲವನ್ನು ಸಮಚಿತ್ತದಿಂದ ಸ್ವೀಕರಿಸಿದ ಹೇಮರೆಡ್ಡಿ ಮಲ್ಲಮ್ಮಳ ಬದುಕು ಇಂದಿಗೂ ಅನುಕರಣೀಯ ಹಾಗೂ ಮನುಕುಲಕ್ಕೆ ಆದರ್ಶ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ರವಿವಾರ ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮಳ ಜಯಂತಿ ಆಚರಣೆಯನ್ನು ಉದ್ಧೇಶಿಸಿ ಅವರು ಮಾತನಾಡಿದರು.ಶಿವಶರಣೆ ಮಲ್ಲಮ್ಮಳ ಜೀವನದ ಮೌಲ್ಯಗಳು ಸ್ತ್ರೀಕುಲಕ್ಕೆ ಅಮೂಲ್ಯ ಕಾಣಿಕೆಯಾಗಿವೆ. ಸಮಾಜದ ಪ್ರತಿಯೊಬ್ಬರೂ ಮಹಾಸಾದ್ವಿ ಮಲ್ಲಮ್ಮಳ ಆದರ್ಶ ಅರಿತು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಅವಳ ದೈವಭಕ್ತಿ, ತಪಸ್ಸು,…

Read More

ಜಿಲ್ಲಾಡಳಿತದಿಂದ ಶಿವಶರಣೆ ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ.10:ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿಶಿವಶರಣೆ ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿ ಆಚರಿಸಲಾಯಿತು.ಜಯಂತಿ ಕಾರ್ಯಕ್ರಮದ ಅಂಗವಾಗಿ ಶಿವಶರಣೆ ಮಹಾ ಸಾಧ್ವಿ ಹೇಮರೆಡ್ಡಿ ಮಲ್ಲಮ್ಮ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಾಜಶೇಖರ್ ಡಂಬಳ, ನಿರ್ಮಿತಿ ಕೇಂದ್ರದ ಯೋಜನೆ ನಿರ್ದೇಶಕ ಆಕಾಶ ತಿಮಶೆಟ್ಟಿ,ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ…

Read More

ಜೀವನದ ಕಷ್ಟಗಳಿಗೆ ಬೆನ್ನೆಲುಬಾದ ತಾಯಿ ಅಕ್ಷಯ ಪಾತ್ರೆ ಇದ್ದಂತೆ-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 10:ತಾಯಿ ಮಕ್ಕಳಿಗೆ ಒಂದು ನೈತಿಕ ಶಕ್ತಿ. ಇಂದಿನ ಆಧುನಿಕ ಯುಗದಲ್ಲಿ ಮಕ್ಕಳು ದಾರಿ ತಪ್ಪದಂತೆ, ಸಂಸ್ಕೃತಿ ಮತ್ತು ಆಧುನಿಕತೆಯ ನಡುವೆ ಸಮತೋಲನ ಕಾಪಾಡಲು ತಾಯಿ ಪಾತ್ರ ಅನನ್ಯವಾಗಿದ್ದು, ಅವಳು ಜೀವನದ ಕಷ್ಟಗಳಲ್ಲಿ ಬೆನ್ನೆಲುಬಾಗಿ ನಿಲ್ಲುವ ಅಕ್ಷಯ ಪಾತ್ರೆ ಇದ್ದಂತೆ ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.ರವಿವಾರ ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡ ವಿಶ್ವ ತಾಯಂದಿರ ದಿನದ ಕಾರ್ಯಕ್ರಮದಲ್ಲಿ ‘ಆಧುನಿಕ ಜಗತ್ತಿನಲ್ಲಿ…

Read More

ಓದುವ ಸಂಸ್ಕೃತಿ ಬೆಳೆಸಿಕೊಳ್ಳಬೇಕು: ಕುಶಾಲ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 10 :ಪುಸ್ತಕಗಳಿಂದ ಮನೆ ಶೃಂಗಾರಗೊಂಡರೆˌ ಮಕ್ಕಳ ಮನಸ್ಸು ಜ್ಞಾನದಿಂದ ಶೃಂಗಾರವಾಗುತ್ತದೆ ಎಂದು ಕನ್ನಡ ಪುಸ್ತಕಪ್ರಾಧಿಕಾರದ ಜಿಲ್ಲಾ ಜಾಗೃತ ಸಮಿತಿ ಸದಸ್ಯ ಡಾ. ಕುಶಾಲ ಬರಗೂರ ಹೇಳಿದರು.ನಗರದ ಸ್ವಾತಂತ್ರ‍್ಯಯೋಧರ ಕಾಲನಿಯ ಸಾಹಿತಿ ಸಂಗಮೇಶ ಬದಾಮಿ ಅವರನಿವಾಸದಲ್ಲಿ ಹಮ್ಮಿಕೊಂಡ ಮನೆಗೊಂದು ಗ್ರಂಥಾಲಯ ಅನುಷ್ಠಾನ ಕಾರ್ಯಕ್ರಮಉದ್ಘಾಟಿಸಿ ಅವರು ಮಾತನಾಡಿದರು.ದೇವರ ಮನೆಯಲ್ಲಿ ದೇವರು ಕಾಣುವ ಹಾಗೆ ಮನೆ ಪ್ರವೇಶಿಸಿದೊಡನೆ ಗ್ರಂಥಗಳು ಕಾಣಬೇಕು. ಅಂದಾಗ ಓದುವ ಸಂಸ್ಕೃತಿ ಬೆಳೆಯುತ್ತದೆ. ಮೊಬೈಲ್ ಗೀಳುಕಡಿಮೆಯಾಗಿˌ ಓದುವ ಆಸಕ್ತಿ ಹೆಚ್ಚುತ್ತದೆ ಎಂದರು.ಅತಿಥಿ ಶಂಕರ ಬೈಚಬಾಳ…

Read More

ಭುವನೇಶ್ವರದ ಆರ್ಟ್ ಆಫ್ ಗಿವಿಂಗ್ ಸಂಚಾಲಕಿಯಾಗಿ ಶಿಫಾ ಜಮಾದಾರ ನೇಮಕ

ಸಪ್ತಸಾಗರ ವಾರ್ತೆ ವಿಜಯಪುರ, ಮೇ. 10:ಸಮಾಜ ಸೇವೆ, ಯುವ ಸಬಲೀಕರಣ, ನೊಂದವರಿಗೆ ಸೇವೆ ಮಾಡುವ ದಿವ್ಯ ಧ್ಯೇಯೋದ್ದೇಶಗಳನ್ನು ಹೊಂದಿರುವ ದೇಶದ ಪ್ರತಿಷ್ಠಿತ ಭುವನೇಶ್ವರದ ಆರ್ಟ್ ಆಫ್ ಗಿವಿಂಗ್ ಕರ್ನಾಟಕ ಸಂಚಾಲಕರಾಗಿ ವಿಜಯಪುರದ ಕುಮಾರಿಶಿಫಾ ಜಮಾದಾರ ಅವರನ್ನು ನೇಮಕ ಮಾಡಿ ಮಹತ್ವದ ಜವಾಬ್ದಾರಿ ನೀಡಲಾಗಿದೆ.ಇಂಜನಿಯರಿಂಗ್ ಪದವಿಯನ್ನು ವ್ಯಾಸಾಂಗ ಮಾಡುತ್ತಿರುವ ಶಿಫಾ ವಿದ್ಯಾರ್ಥಿ ದೆಸೆಯಲ್ಲಿಯೇಯುವಜನರ ಶ್ರೇಯೋಭಿವೃದ್ಧಿ, ಯುವತಿಯರಿಗೆ ಆರೋಗ್ಯ ಜಾಗೃತಿಮೂಡಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.ಇತ್ತೀಚಿಗೆ ರಷ್ಯಾದಲ್ಲಿ ನಡೆದ ಯುವ ಶೃಂಗ ಸಭೆಯಲ್ಲಿ ಭಾರತ ದೇಶವನ್ನುಪ್ರತಿನಿಧಿಸಿದ್ದರು. ರಷ್ಯಾ ಅಧ್ಯಕ್ಷ ವಾಡ್ಲೀಮಿರ್ ಪುಟೀನ್ ಚಾಲನೆ…

Read More

ನೈಋತ್ಯ ರೈಲ್ವೆಯಿಂದ ರೈಲುಗಳಿಗೆ ಹೆಚ್ಚುವರಿ ಬೋಗಿಗಳ ಸೇರ್ಪಡೆ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 10:ಪ್ರಯಾಣಿಕರ ಸಾಮರ್ಥ್ಯ ಮತ್ತು ಅನುಕೂಲತೆಯನ್ನು ಹೆಚ್ಚಿಸಲು, ನೈಋತ್ಯ ರೈಲ್ವೆಯು ಈ ಕೆಳಗಿನ ರೈಲುಗಳಿಗೆ ಶಾಶ್ವತವಾಗಿ ಬೋಗಿಗಳನ್ನು ಹೆಚ್ಚಿಸಲು ನಿರ್ಧರಿಸಿದೆ. ಪ್ರತಿ ರೈಲಿಗೂ ತಲಾ ಒಂದು ಎಸಿ 3-ಟೈರ್ ಬೋಗಿ, ಮೂರು ಸ್ಲೀಪರ್ ಕ್ಲಾಸ್ ಬೋಗಿಗಳು ಮತ್ತು ಒಂದು ಸಾಮಾನ್ಯ ದರ್ಜೆಯ ಬೋಗಿಗಳನ್ನು ಸೇರಿಸಲಾಗುವುದು.ರೈಲು ಸಂಖ್ಯೆ 16547/16548 ಯಶವಂತಪುರ–ವಿಜಯಪುರ–ಯಶವಂತಪುರ ದೈನಂದಿನ ಎಕ್ಸ್’ಪ್ರೆಸ್ ರೈಲುಗಳಿಗೆ ಐದು ಹೆಚ್ಚುವರಿ ಬೋಗಿಗಳನ್ನು ಸೇರ್ಪಡೆಗೊಳಿಸಲಾಗುತ್ತಿದ್ದು, ಇದರೊಂದಿಗೆ ರೈಲಿನ ಒಟ್ಟು ಬೋಗಿಗಳ ಸಂಖ್ಯೆ 13ರಿಂದ 18ಕ್ಕೆ ಏರಿಕೆಯಾಗಲಿದೆ. ಪರಿಷ್ಕೃತ ಸಂಯೋಜನೆಯಲ್ಲಿ…

Read More

ಗುಮ್ಮಟ ನಗರಿಗೆ ಬಂದ ವಿಶ್ವ ದಾಖಲೆ ಬರೆದ ಅತೀ ಚಿಕ್ಕ ಗಾತ್ರದ ಕುಬ್ಜ ಮಹಿಳೆ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 10 :ಕೇವಲ 62.8 ಸೆಂಟಿಮೀಟರ್ ಉದ್ದವಿರುವ ಜಗತ್ತಿನ ಅತ್ಯಂತ ಕುಬ್ಜ ಮಹಿಳೆ ಎಂಬ ಕೀರ್ತಿಗೆ ಪಾತ್ರವಾಗಿರುವ ಜ್ಯೋತಿ ಆಮಗೆ ವಿಜಯಪುರಕ್ಕೆ ಭೇಟಿ ನೀಡಿದ್ದಾರೆ.2011ರಲ್ಲಿ ಗಿನ್ನಿಸ್ ಸಂಸ್ಥೆ ಈ ವಿಶ್ವ ದಾಖಲೆಯನ್ನು ದಾಖಲಿಸಿ ಪ್ರಕಟಿಸಿತ್ತು. ಅವರು ಮಹಾರಾಷ್ಟ್ರದನಾಗ್ಪುರದಲ್ಲಿ ಜನಿಸಿದರು ಮತ್ತು ಅವರು ನಟಿಯಾಗಿಯೂ ಕೆಲಸ ಮಾಡುತ್ತಿದ್ದು,ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಪೊಲೀಸರಿಗೆ ಸಾಥ್ ನೀಡಿ ಮತ್ತು ಜನರಿಗೆಜಾಗೃತಿ ಮೂಡಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು.ಈ ಎಲ್ಲ ಅಪೂರ್ವ ಸಾಧನೆ ಮಾಡಿರುವ ಅವರು ವಿಜಯಪುರಕ್ಕೆ ಪ್ರಪ್ರಥಮ ಭೇಟಿನೀಡಿದರು.ಈ ವೇಳೆ…

Read More

ದುಷ್ಟ ಶಕ್ತಿಗಳಿಂದ ರಕ್ಷಣೆ ಸಿಗಲಿ; ದೇಶ, ರಾಜ್ಯಕ್ಕೆ ಒಳಿತಾಗಲಿ: ಡಿಸಿಎಂ ಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ ತಿರುನಲ್ಲಾರ್ (ತಮಿಳುನಾಡು): ಮೇ 09“ದುಷ್ಟ ಶಕ್ತಿಗಳಿಂದ ರಕ್ಷಣೆ ಸಿಗಲಿ ಎಂದು ಪ್ರಾರ್ಥಿಸಲು ಬಂದಿದ್ದೇನೆ. ದೇವರಲ್ಲಿ ಪ್ರಾರ್ಥನೆಗೆ ಇದು ಸೂಕ್ತ ಸಮಯ ಎಂದು ಬಂದಿರುವೆ. ದೇಶ ಹಾಗೂ ರಾಜ್ಯಕ್ಕೆ ಒಳಿತಾಗಲಿ ಎಂದು ಬೇಡಿಕೊಂಡಿರುವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.ತಮಿಳುನಾಡಿನ ಕಾರೈಕಲ್ ಜಿಲ್ಲೆಯ ತಿರುನಲ್ಲಾರ್ ಶನೇಶ್ವರ ಸ್ವಾಮಿ ದೇಗುಲದ ಭೇಟಿ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದಾಗ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶನಿವಾರ ಈ ರೀತಿ ಪ್ರತಿಕ್ರಿಯೆ ನೀಡಿದರು.ಟಿವಿಕೆ ಜೊತೆಗಿನ ಮೈತ್ರಿ ಬಗ್ಗೆ ಕೇಳಿದಾಗ, “ಜಾತ್ಯಾತೀತ,…

Read More

ರೇಲ್ವೆ ಕೆಳಸೇತುವೆ ನಿರ್ಮಾಣ ವೇಳೆ ಅಗತ್ಯವಾಗಿರುವ ಸೌಕರ್ಯಗಳ‌ ಸ್ಥಳಾಂತರ ಕೇಂದ್ರದ ಜವಾಬ್ದಾರಿ: ಎಂಬಿಪಿ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 9:ರೇಲ್ವೆ ಕೆಳಸೇತುವೆ ನಿರ್ಮಾಣ ವೇಳೆ ಅಗತ್ಯವಾಗಿರುವ ಸೌಕರ್ಯಗಳ‌ ಸ್ಥಳಾಂತರ(Utility Shifting) ಜವಾಬ್ದಾರಿ ರೇಲ್ವೆ ಇಲಾಖೆಗೆ ಸೇರಿದ್ದು, ಇದರಲ್ಲಿ ರಾಜ್ಯ ಸರಕಾರದ ಪಾತ್ರ ಇರುವುದಿಲ್ಲ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.‌ ಬಿ. ಪಾಟೀಲ ತಿಳಿಸಿದ್ದಾರೆ.ರೇಲ್ವೆ ಇಲಾಖೆ ಕೈಗೊಳ್ಳುವ ಕೆಳಸೇತುವೆ ನಿರ್ಮಾಣ ಸಂದರ್ಭದಲ್ಲಿ ಅಗತ್ಯ ವಿರುವ ವಿದ್ಯುತ್ ಮಾರ್ಗಗಳು, ಒಳಚರಂಡಿ ವ್ಯವಸ್ಥೆ ಹಾಗೂ ಇತರ ಭೂಗತ ಸೌಲಭ್ಯಗಳ ಸ್ಥಳಾಂತರ ಕೆಲಸ ರೇಲ್ವೆ ಇಲಾಖೆ ಕಾಮಗಾರಿಯ ವ್ಯಾಪ್ತಿಯಲ್ಲಿಯೇ ಬರುತ್ತದೆ. ‌ದೇಶಾದ್ಯಂತ…

Read More

ನರೇಗಾ ಕಾಮಗಾರಿ ಸ್ಥಳಕ್ಕೆ ಪ್ರಕಾಶ ವಡ್ಡರ ಭೇಟಿ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 8 :ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಅರಳದಿನ್ನಿ ಗ್ರಾಮದ ಸಮೀಪ ಬಸಿಗಾಲುವೆ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ್ ಅವರು ಭೇಟಿ ನೀಡಿ ಪರಿಶೀಲಿಸಿದರು.ಇದೇ ಸಂದರ್ಭದಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕರ ಮಸ್ಟರ್ ರೂಲ್ ಹಾಗೂ ಫೋಟೊ ಆಧಾರಿತ ಹಾಜರಾತಿ ಪರಿಶೀಲಿಸಿದರು.ಕೂಲಿಕಾರರೊಂದಿಗೆ ಸಂವಾದ ನಡೆಸಿದ ಅವರು, ಈ ಯೋಜನೆಯಡಿ ದೊರೆಯುವ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದುಕೊಂಡರು.ಹೂಳೆತ್ತುವ ಕಾಯಕದಲ್ಲಿ ಮಗ್ನರಾಗಿದ್ದ ಕೂಲಿಕಾರರು ತಮ್ಮ ಕೆಲಸದ…

Read More