ಮೇ. 4ರಿಂದ 9ರ ವರೆಗೆಹಿರಿಯ ನಾಗರಿಕರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ
ಸಪ್ತಸಾಗರ ವಾರ್ತೆ,ವಿಜಯಪುರ, ಏ. 30:ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದ ಕಾಯಚಿಕಿತ್ಸೆ ವಿಭಾಗದ ವತಿಯಿಂದ ಮೇ 4 ರಿಂದ ಮೇ 9ರ ವರೆಗೆ ಹಿರಿಯ ನಾಗರಿಕರಲ್ಲಿ ಕಂಡುಬರುವ ವಯೋಸಹಜವಾದ ನೆನಪಿನ ಶಕ್ತಿ ಸಮಸ್ಯೆ ಕುರಿತು ಉಚಿತ ತಪಾಸಣೆ ಮತ್ತು ಚಿಕಿತ್ಸೆ ಶಿಬಿರ ನಡೆಯಲಿದೆ.ಈ ಶಿಬಿರದಲ್ಲಿ ನೆನೆಪಿನ ಶಕ್ತಿ ಕ್ಷೀಣಿಸುವಿಕೆ, ಆಲೋಚನೆ ಮತ್ತು ನಿರ್ಧಾರದ ಸಮಸ್ಯೆ, ಸ್ಥಳ ಮತ್ತು ಸಮಯದ ಅರಿವು ಕಡಿಮೆಯಾಗುವುದು, ವರ್ತನೆ ಮತ್ತು ಮನಸ್ಥಿತಿಯಲ್ಲಿನ ಬದಲಾವಣೆ ಸಮಸ್ಯೆ ಎದುರಿಸುತ್ತಿರುವ…


