ವಿಜಯಪುರದಲ್ಲಿ ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಏ. 25:ನಗರದ ಜಿಲ್ಲಾ ಪಂಚಾಯತ್ ಕಾರ್ಯಾಲಯದಲ್ಲಿ ಪಂಚಾಯತ್ ರಾಜ್ ದಿನಾಚರಣೆ ಅಂಗವಾಗಿ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ ವಿವಿಧ ವಿಭಾಗಗಳಲ್ಲಿ ವಾರ್ಷಿಕ ಪ್ರಗತಿಯಲ್ಲಿ ಉತ್ತಮ ಸಾಧನೆ ಮಾಡಿದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಪ್ರಶಸ್ತಿ ಪ್ರದಾನ ಸಮಾರಂಭ ನೆರವೇರಿಸಲಾಯಿತು. ಇದರಲ್ಲಿ ಜಿಲ್ಲೆಯಲ್ಲಿ ವಾರ್ಷಿಕ ಕರ ವಸೂಲಾತಿಯಲ್ಲಿ ಶೇ.100ರಷ್ಟು ಸಾಧನೆಗೈದ ವಿಭಾಗದಲ್ಲಿ ತೃತೀಯ ಸ್ಥಾನದಲ್ಲಿ ಹೊನಗನಹಳ್ಳಿ ಗ್ರಾಮ ಪಂಚಾಯಿತಿಗೆ ಪ್ರಶಸ್ತಿ ಲಭಿಸಿದ್ದು, ಜಿ. ಪಂ ಸಿಇಒ ರಿಷಿ ಆನಂದ ಅವರಿಂದ ಪಿಡಿಒ ಜಯಶ್ರೀ…

Read More

ವಿಜಯಪುರ ಪೊಲೀಸರ ಭರ್ಜರಿ ಬೇಟೆ: 1.60 ಕೋಟಿ ರೂ. ಮೌಲ್ಯದ ಸ್ವತ್ತು ಜಪ್ತಿ- ಎಸ್ಪಿ ನಿಂಬರಗಿ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 24 :ನಗರ ವ್ಯಾಪ್ತಿಯಲ್ಲಿ ನಡೆದ ವಿವಿಧ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಳೆದ ಎರಡು ವರ್ಷಗಳ ಅವಧಿಯಲ್ಲಿ ಹಲವಾರು ಪ್ರಕರಣಗಳನ್ನು ಬೇಧಿಸಿ 28 ಆರೋಪಿಗಳನ್ನು ಬಂಧಿಸಿ 1,60,32,000 ಕೋಟಿ ರೂ. ಮೌಲ್ಯದ ವಸ್ತುಗಳನ್ನು ಜಪ್ತು ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವರ್ಷ 17 ಪ್ರಕರಣಗಳಿಗೆ ಸಂಬಂಧಿಸಿದಂತೆ 28 ಆರೋಪಿಗಳನ್ನು ಹಾಗೂ ಪ್ರಸಕ್ತ ವರ್ಷ 13 ಪ್ರಕರಣಗಳಿಗೆ ಸಂಬಂಧಿಸಿದಂತೆ 15 ಜನ ಆರೋಪಿಗಳನ್ನು ಬಂಧಿಸಿ…

Read More

ದೊಡ್ಡ ಗುರಿಯೊಂದಿಗೆ ಪಿಯುಸಿಯಲ್ಲಿ ಅತ್ಯುತ್ತಮ ಸಾಧನೆ ಮಾಡಿ- ಸುನಿಲ್ ಗೌಡ ಪಾಟೀಲ್ ಕರೆ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 24:10ನೇ ತರಗತಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿರುವ ವಿದ್ಯಾರ್ಥಿಗಳು ದೊಡ್ಡ ಗುರಿಯೊಂದಿಗೆ ಪಿಯುಸಿ ಪರೀಕ್ಷೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಬೇಕು ಎಂದು ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಕರೆ ನೀಡಿದ್ದಾರೆ. ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ವಿಜಯಪುರ ಗ್ರಾಮೀಣ ವಲಯಕ್ಕೆ ಪ್ರಥಮ ಮತ್ತು ರಾಜ್ಯಕ್ಕೆ 7ನೇ ಸ್ಥಾನ ಪಡೆದ ಮೂರು ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅವರು ಮಾತನಾಡಿದರು. ಎಸ್.ಎಲ್.ಎಲ್.ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಸಾಧನೆಯ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದೀರಿ. ಮುಂಬರುವ ದ್ವಿತೀಯ…

Read More

ಡಾ.ರಾಜಕುಮಾರ್ ಕನ್ನಡದ ಶ್ರೇಷ್ಠ ರತ್ನ-ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಅಭಿಮತ

ಸಪ್ತಸಾಗರ ವಾರ್ತೆ,ವಿಜಯಪುರ, ಏ.24:ನಟನೆಯ ಮೂಲಕ ಜೀವನ ಮೌಲ್ಯಗಳನ್ನು ಬೋಧಿಸಿದ ವರನಟ ಡಾ.ರಾಜಕುಮಾರ್ ಕನ್ನಡದ ಶ್ರೇಷ್ಠ ರತ್ನ ಎಂದು ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಹೇಳಿದರು.ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಡೆದ ಡಾ.ರಾಜ್ ಕುಮಾರ ಜನ್ಮದಿನೋತ್ಸವ ಹಾಗೂ ಅವರ ಗೀತೆಗಳ ಗಾಯನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಡಾ.ರಾಜಕುಮಾರ್ ಅವರು ತಮ್ಮ ಚಿತ್ರದ ಮೂಲಕ ಸಾಮಾಜಿಕ ಜಾಗೃತಿ ಸಂದೇಶ ಸಾರಿದರು,…

Read More

ಪುಸ್ತಕ ವ್ಯಕ್ತಿತ್ವವನ್ನು ಶ್ರೇಷ್ಠ ಮಟ್ಟಕ್ಕೆ ಒಯ್ಯುವ ಜೀವ ಸೆಲೆ- ಸಂತೋಷ ಬಂಡೆ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 24:ಪುಸ್ತಕವು ಹಸನಾದ ಬದುಕನ್ನು ಸೃಷ್ಟಿಸುವ ಶಕ್ತಿಶಾಲಿ ದ್ರವ್ಯ. ಆ ದ್ರವ್ಯ ಎಲ್ಲರಿಗೂ ತಲುಪಿದರೆ ಅರಿವಿನ ಕೀಲಿಕೈ ಸಿಕ್ಕಂತೆಯೇ ಸರಿ. ಪುಸ್ತಕ ಕೇವಲ ನಿರ್ಜೀವ ವಸ್ತು ಅಲ್ಲ, ಬದಲಾಗಿ ವ್ಯಕ್ತಿಯ ವ್ಯಕ್ತಿತ್ವವನ್ನು ಶ್ರೇಷ್ಠ ಮಟ್ಟಕ್ಕೆ ಒಯ್ಯುವ ಜೀವ ಸೆಲೆ ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.ಗುರುವಾರ ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ವಿಶ್ವ ಪುಸ್ತಕ ದಿನದ ನಿಮಿತ್ತ ಹಮ್ಮಿಕೊಂಡ ‘ಪುಸ್ತಕ ವ್ಯಕ್ತಿತ್ವ ನಿರ್ಮಾಪಕ’ ಕುರಿತು…

Read More

ಶಂಕರಾಚಾರ್ಯರು ಜ್ಞಾನ, ಕರ್ಮ, ಭಕ್ತಿಯ ಸಂಗಮ-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ, ವಿಜಯಪುರ, ಏ. 21:ಶಂಕರರ ಜೀವನ-ಸಾಧನೆ ನಿಜಕ್ಕೂ ಅದ್ವಿತೀಯ. ಅವರು ಜ್ಞಾನ, ಕರ್ಮ, ಭಕ್ತಿಯ ಸುಂದರ ಸಂಗಮ. 21 ನೇ ಶತಮಾನದ ಅಶಾಂತ ಜಗತ್ತಿಗೆ, ಅವರ ಶಾಂತಿಯುತ ಮತ್ತು ಸಮಗ್ರ ಜೀವನ ವಿಧಾನವೇ ನಿಜವಾದ ದಾರಿದೀಪ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ಮಂಗಳವಾರ ಇಂಡಿ ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ ಶಂಕರಾಚಾರ್ಯರ ಜಯಂತಿ ಆಚರಣೆ ಉದ್ಧೇಶಿಸಿ ಅವರು ಮಾತನಾಡಿದರು.ಭೌತಿಕ ವಸ್ತುಗಿಂತ ಆಧ್ಯಾತ್ಮಿಕ ಸಾಧನೆಗೆ ಆದ್ಯತೆ ನೀಡಬೇಕು. ಭಿನ್ನಾಭಿಪ್ರಾಯ ಮರೆತು, ಸಾಮರಸ್ಯದಿಂದ ಬದುಕುವ ಮಾರ್ಗವನ್ನು…

Read More

ದಲಿತ ಸಾಹಿತ್ಯ ಪರಿಷತ್ತು ಬೆಳಗಾವಿ ವಿಭಾಗದ ಸಂಯೋಜಕರಾಗಿ ಮೋಹನ ಕಟ್ಟಿಮನಿ ನೇಮಕ

ಸಪ್ತಸಾಗರ ವಾರ್ತೆ, ವಿಜಯಪುರ, ಏ. 21:ನಗರದ ಮೋಹನ ಕಟ್ಟಿಮನಿ ಅವರನ್ನು ರಾಜ್ಯ ದ.ಸಾ.ಪ ಬೆಳಗಾವಿ ವಿಭಾಗೀಯಸಂಯೋಜಕರನ್ನಾಗಿ ನೇಮಕ ಮಾಡಲಾಗಿದೆ.ಮೋಹನ ಕಟ್ಟಿಮನಿ ಅವರು ವಿಜಯಪುರದ ದಲಿತ ಸಾಹಿತ್ಯ, ಶರಣ ಸಾಹಿತ್ಯ, ಸಾಂಸ್ಕೃತಿಕ ಚಿಂತನೆ ಹಾಗೂ ಸಾಮಾಜಿಕ ಸೇವೆಯಲ್ಲಿ ಸಕ್ರಿಯವಾಗಿ ಉತ್ತಮ ಸಂಘಟಕರಾಗಿ, ಭಾವ ಲಹರಿ, ಜೀವಂತ ಶವಗಳು ನಕ್ಕಾಗ, ಬರದ ನಾಡಿನಲ್ಲಿ ಬಂಗಾರ ಬೆಳೆದವರು, ಚಾಣಕ್ಯ ಬಿರಾದಾರ ಬದುಕಿನ ಚಿತ್ರಣ, ವಿಸ್ಮಯದ ಬೆನ್ನೆರಿ, ವಚನ ಫಕೀರ ಮತ್ತು ಹರ್ಡೇಕರ ಮಂಜಪ್ಪ ನಾಟಕ, ಪದ್ಮಭೂಷಣ ಜನರಲ್ ಜಿ. ಜಿ. ಬೇವೂರ…

Read More

ಕಸಾಪ ಅಧ್ಯಕ್ಷ ಹಾಸಿಂಪೀರ ವಾಲಿಕಾರಗೆ ಕನಾ೯ಟಕ ಕಾಯಕಯೋಗಿ ಪ್ರಶಸ್ತಿ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 21:ಇತ್ತೀಚೆಗೆ ಗ್ಯಾರಂಟಿ ಸುದ್ದಿ ವಾಹಿನಿಯಿಂದ ಹುಬ್ಬಳ್ಳಿ ಕ್ಯೂಬೆಕ್ಸ ಹೋಟೇಲ್ ದಲ್ಲಿ ವಿಜಯಪುರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಇವರಿಗೆ 2026 ರ ಕನಾ೯ಟಕ ಕಾಯಕಯೋಗಿ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.ಕಾಯ೯ಕ್ರಮದ ಸಾನ್ನಿಧ್ಯ ಮ.ನಿ.ಪ್ರ ಜಗದ್ಗುರು ಫಕೀರ ದಿಂಗಾಲೇಶ್ವರ ಸ್ವಾಮೀಜಿ ಭಾವೈಕ್ಯತಾ ಸಂಸ್ಥಾನಮಠ ಶಿರಹಟ್ಟಿ ಅವರು ಪ್ರಶಸ್ತಿ ಪ್ರದಾನ ನೆರವೇರಿಸಿದರು.ಶಾಸಕ ವಿಜಯಾನಂದ ಕಾಶಪ್ಪನವರ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಹುಬ್ಬಳ್ಳಿ ಶಾಸಕ ಮಹೇಶ ಟೆಂಗಿನಕಾಯಿ, ಡಾ. ಚಿಗುರುಪಾಟಿ ಪ್ರಸಾದ, ವಿ.ಆರ್.ಎಲ್ ಗ್ರುಪ್ ನಿದೇ೯ಶಕ…

Read More

ಶಿಕ್ಷಣವು ಕೇವಲ ಪದವಿ ಪಡೆಯುವುದಕ್ಕೆ ಮಾತ್ರ ಸೀಮಿತವಲ್ಲ:ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

ಸಪ್ತಸಾಗರ ವಾರ್ತೆ, ವಿಜಯಪುರ, ಏ. 21:ಮಹಿಳಾ ಸಬಲೀಕರಣಕ್ಕೆ ಶಿಕ್ಷಣವೇ ಮುಖ್ಯ ಅಸ್ತ್ರ. ಶಿಕ್ಷಣವು ಕೇವಲ ಪದವಿ ಪಡೆಯುವುದಕ್ಕೆ ಮಾತ್ರ ಸೀಮಿತವಲ್ಲ, ಅದು ವ್ಯಕ್ತಿತ್ವ ವಿಕಾಸ, ಆತ್ಮವಿಶ್ವಾಸ ಮತ್ತು ಸಮಾಜ ಸೇವೆಗೆ ದಾರಿ ದೀಪವಾಗುತ್ತದೆ ಎಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟರು.ಇಲ್ಲಿಯ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ 17ನೇ ವಾರ್ಷಿಕ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಕ್ಕ ಮಹಾದೇವಿಯವರ ಆದರ್ಶಗಳನ್ನು ಸ್ಮರಿಸಿ, ಇಂದಿನ ಯುವತಿಯರು ಜ್ಞಾನ ಮತ್ತು ಕೌಶಲ್ಯಗಳೊಂದಿಗೆ ನೈತಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ…

Read More

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಡಿಸಿಗೆ ಮನವಿ ಸಲ್ಲಿಕೆ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 21:ಹಣಕಾಸು ಮಸೂದೆ (ಮೌಲ್ಯಮಾಪನ ಕಾಯ್ದೆ) 2025 ಅನ್ನು ರದ್ದುಗೊಳಿಸಬೇಕು. ಹೊಸ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಬೇಕು ಮತ್ತು ಎಲ್ಲಾ ಉದ್ಯೋಗಿಗಳಿಗೆ ಹಳೆಯ ಪಿಂಚಣಿ ವ್ಯವಸ್ಥೆಯನ್ನು ಪುನಃಸ್ಥಾಪಿಸಬೇಕು. 8ನೇ ಕೇಂದ್ರ ವೇತನ ಆಯೋಗದ ಪ್ರಯೋಜನಗಳನ್ನು ಡಿಸೆಂಬರ್ 31, 2025 ಕ್ಕಿಂತ ಮೊದಲು ನಿವೃತ್ತರಾದ ಎಲ್ಲರಿಗೂ ವಿಸ್ತರಿಸಬೇಕು ಇವೇ ಮುಂತಾದ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಅಖಿಲ ಭಾರತ ನಿವೃತ್ತ ನೌಕರರ ಒಕ್ಕೂಟದ ಕರೆಯ ಮೇರೆಗೆ ವಿಜಯಪುರ ಜಿಲ್ಲಾ ನಿವೃತ್ತ ನೌಕರರ ಒಕ್ಕೂಟದ ಪದಾಧಿಕಾರಿಗಳು ವಿಜಯಪುರ ಜಿಲ್ಲಾಧಿಕಾರಿಗಳ…

Read More